BREAKING: ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಚಾಮರಾಜನಗರ: ಜಿಲ್ಲೆಯಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ, ತಾನು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಧಾರುಣ ಘಟನೆ ನಡೆದಿದೆ. ಚಾಮರಾಜನಗರದ ಹನೂರು ತಾಲ್ಲೂಕಿನ ಕಾಡುಹೊಲದಲ್ಲಿ ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಸುಶೀಲಾ(30) ಎಂಬುವರು ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ, ಆ ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ತಾಯಿ ಸುಶೀಲಾ(30), ಮಕ್ಕಳಾದಂತ ಪುತ್ರಿ ದಿವ್ಯಾ(11) ಹಾಗೂ ಪುತ್ರ ಚಂದ್ರು(8) ಎಂಬುದಾಗಿ ಗುರುತಿಸಲಾಗಿದೆ. ಈ ಸಂಬಂಧ ಮಲೆಮಹದೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Continue reading BREAKING: ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ