ಬೆಂಗಳೂರು : ಸಿಲಿಕಾನ್‌ ಸಿಟಿಯ  ಆರ್‌ ಆರ್‌ ನಗರದಲ್ಲಿ ಮೂರುವರೆ ವರ್ಷದ  ಮಗುವಿನ ಕುತ್ತಿಗೆಗೆ ಶಾಲ್‌ ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. 

HEALTH TIPS: ಆಹಾರದ ಮೂಲಕ ಹಲ್ಲಿನ ಸ್ವಚ್ಛತೆ: ಇಲ್ಲಿದೆ ಸಿಂಪಲ್ ಟಿಪ್ಸ್

ʻನನ್ನ ಸಾವಿಗೆ ಯಾರೂ ಕಾರಣರಲ್ಲʼ , ʻಸ್ವಾರಿ ಅಮ್ಮʼ ಎಂದು  ಡೆತ್‌ ನೋಟ್‌ ಬರೆದಿಟ್ಟುಮಹಿಳೆ ಮೃತಪಟ್ಟಿದ್ದಾರೆ. ಮಗು ರಿಯಾಳನ್ನ ಕೊಂದ ತಾಯಿ ದೀಪಾ (31) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಒಂದು ವಾರದಿಂದ ಜ್ವರ ಮತ್ತು ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

HEALTH TIPS: ಆಹಾರದ ಮೂಲಕ ಹಲ್ಲಿನ ಸ್ವಚ್ಛತೆ: ಇಲ್ಲಿದೆ ಸಿಂಪಲ್ ಟಿಪ್ಸ್

ದೀಪಾ ಅವರು RR ನಗರದ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದರು. ಜ್ವರ ಮತ್ತು ಹೊಟ್ಟೆ ನೋವು ಹಿನ್ನೆಲೆ ಚಿಕಿತ್ಸೆ ಕೂಡಾ ಪಡೆಯುತ್ತಿದ್ದರು. ಡೆತ್ ನೋಟ್ ನಲ್ಲಿ” Nobody is responsible for it i just felt life is full of shits i am sorry mom and divya Love you shona ಎಂದು ದೀಪಾ ಬರೆದಿದ್ದಾರೆ. ಇನ್ನೂ ಸ್ಥಳದಲ್ಲಿ ಆರ್ ಆರ್ ನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

HEALTH TIPS: ಆಹಾರದ ಮೂಲಕ ಹಲ್ಲಿನ ಸ್ವಚ್ಛತೆ: ಇಲ್ಲಿದೆ ಸಿಂಪಲ್ ಟಿಪ್ಸ್

Share.
Exit mobile version