ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಪ್ರೌಢ ಶಾಲೆಯಲ್ಲಿ ತಾಯಂದಿರ ಸಭೆ ಹಾಗೂ ಮಕ್ಕಳ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿರುವಂತ ಕಾರ್ಯಕ್ರಮವ ಯಶಸ್ವಿಯಾಗಿ ನಡೆಸಲಾಯಿತು.
ಇಂದು ಶಿವಮೊಗ್ಗ ಜಿಲ್ಲೆಯ ಸೊರಬದ ಉಳವಿ ಪ್ರೌಢ ಶಾಲೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರೊಂದಿಗೆ ಎಲ್ಲಾ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ 180 ತಾಯಂದಿರು ಭಾಗವಹಿಸಿದ್ದರು. ಮಕ್ಕಳು ಸುರಕ್ಷತೆಯ ಬಗ್ಗೆ ಶಾಲೆಯ ಶಿಕ್ಷಕ ವೆಂಕಟೇಶ್ ಪ್ರಾಸ್ತವಿಕವಾಗಿ ಮಾತನಾಡಿದರು.
ಶಿವಮೊಗ್ಗ ಜಿಲ್ಲಾ ಕಾರ್ಯನಿರ್ವಾಹಣಾಧಿಕಾರಿಗಳವರ ಮಾರ್ಗದರ್ಶನದಲ್ಲಿ ನಡೆದ ಸಭಾ ನಡಾವಳಿಯ ವಿಷಯಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಲಾಯಿತು.
ಈ ವೇಳೆಯಲ್ಲಿ ಉಳವಿ ಪ್ರಾಥಮಿಕ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಗುರುಕಿರಣ್ ಮಾತನಾಡಿ ಮಕ್ಕಳ ಕಾಯಿದೆ ಹಾಗೂ ಮಕ್ಕಳ ಸಹಾಯವಾಣಿ 1098ರ ಬಗ್ಗೆ ಮಕ್ಕಳ ತಾಯಂದಿರಿಗೆ, ವಿದ್ಯಾರ್ಥಿಗಳಿಗೆ ಮಾಹಿತಿ ಹಂಚಿಕೊಂಡರು.
ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಶ್ರುಶೂಷಾಧಿಕಾರಿ ನಿರ್ಮಲ ಅವರು ಮಕ್ಕಳಿಗೆ ವೈಯಕ್ತಿಕ ಸ್ವಚ್ಚತೆ, ಆರೋಗ್ಯ, ಸಮಾಜಿಕ ನಡಾವಳಿಕೆಯ ಬಗ್ಗೆ ತಿಳಿಸಿಕೊಟ್ಟರು.
ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸದಸ್ಯ ಭಾರ್ಗವ ನಾಡಿಗ ಮಾತನಾಡಿ ಮಕ್ಕಳ ಸುರಕ್ಷತೆ ಹಾಗೂ ಪೋಷಕರ ಜವಾಬ್ದಾರಿಗಳ ಬಗೆಗೆ ಪೋಷಕರೊಂದಿಗೆ ಸಂವಾದ ನಡೆಸಿದರು. ಅಲ್ಲದೇ ಶಾಲಾ ಶಿಕ್ಷಕರು, ಕಾಲೇಜು ಪ್ರಾಂಶುಪಾಲರು, ಪೋಷಕರ ಜವಾಬ್ದಾರಿಯ ಬಗ್ಗೆ ವಿವರವಾದಂತ ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯ ವಿರೂಪಾಕ್ಷಪ್ಪ ಮಾತನಾಡಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದರಿಂದ ಆಗುವಂತ ಅನುಕೂಲಗಳ ಬಗ್ಗೆ ವಿವರಿಸಿದರು. ಅಲ್ಲದೇ ಈ ಬಾರಿ ಉಳವಿ ಪ್ರೌಢಶಾಲೆ ಶೇ.92ರಷ್ಟು ಫಲಿತಾಂಶ ಬಂದಿದ್ದು ಸರ್ಕಾರಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬರುತ್ತಿದೆ. ಆದ್ದರಿಂದ ಮಕ್ಕಳ ಪೋಷಕರು ಸರ್ಕಾರಿ ಶಾಲಾ ಸೌಲತ್ತುಗಳನ್ನು ಪಡೆದುಕೊಳ್ಳುವಂತೆ ವಿನಂತಿಸಿದರು.
ಈ ಸಭೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಮಂಜುನಾಥ್ ಕಾನಳ್ಳಿ, ಸದಸ್ಯರಾದ ಅಲ್ತಾಪ್, ಪುಷ್ಪ, ಶಕುಂತಲಾ ಹಾಜರಿದ್ದರು.
ಮಕ್ಕಳ ಹಿರಕ್ಷಣೆಯ ಪ್ರತಿಜ್ಞಾ ವಿಧಿಯನ್ನು ಉಳವಿ ಪ್ರೌಢ ಶಾಲೆಯ ಶಿಕಾಂತ್ ಬೋಧಿಸಿದೇ, ಶಿಕ್ಷಕಿ ಅನಿತ ಸ್ವಾಗತಿಸಿದರೇ, ಗೀತಾನಾಯ್ಕ ವಂದಿಸಿದರು.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’..! | Power Cut
BREAKING : ಯುವ ನಟನಿಗೆ ವಂಚನೆ, ಬೆದರಿಕೆ : ಖ್ಯಾತ ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ