ಬೆಂಗಳೂರು : ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20ರ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆ / ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ ಬಾಕಿ ಇರುವ ಡಿ.ಎಸ್.ಎ (ಇಲಾಖಾ ಶಾಸನ) ಪ್ರಕರಣಗಳ ದಂಡದ ಮೊತ್ತದಲ್ಲಿ 50% (ಶೇ.ಐವತ್ತರಷ್ಟು ಮಾತ್ರ) ರಷ್ಟು ರಿಯಾಯಿತಿ ನೀಡಿ ನವೆಂಬರ್ 21,2025 ರಿಂದ ಡಿಸೆಂಬರ್ 12, 2025ರ ವರೆಗೆ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಕಲಾವಕಾಶ ನೀಡಲಾಗಿದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ತಿಳಿಸಿದ್ದಾರೆ.
ವಾಹನದ ಮಾಲೀಕರು ಈ ಅವಧಿಯಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳೊಂದಿಗೆ ದಂಡದ ಶೇ. 50ರಷ್ಟು ಮೊತ್ತವನ್ನು ಹತ್ತಿರದ ಹಿರಿಯ ಪ್ರಾದೇಶಿಕ ಸಾರಿಗೆ / ಪ್ರಾದೇಶಿಕ ಸಾರಿಗೆ / ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಪಾವತಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಿಯಾಯಿತಿಯೊಂದಿಗೆ ಪಾವತಿ ಮಾಡುವ ವಿಧಾನ:
1.ಈ ಕೆಳಗಿನ ಮೊಬೈಲ್ ಆಪ್ಗಳನ್ನು ಬಳಸಿ (ಪ್ಲೇ ಸ್ಟೋರ್ ಮತ್ತು ಅಪಲ್ ಸ್ಟೋರ್ನಲ್ಲಿ ಲಭ್ಯ):
ಕರ್ನಾಟಕ ರಾಜ್ಯ ಪೊಲೀಸ್ ಆಪ್
ಕರ್ನಾಟಕ ಒನ್ ಆಪ್
ಆಸ್ಟಮ್ (BTP/ಟ್ರಾಫಿಕ್ ಉಲ್ಲಂಘನೆ ವ್ಯವಸ್ಥೆ)
1.ನಿಮ್ಮ ವಾಹನದ ಸಂಖ್ಯೆಯನ್ನು ನಮೂದಿಸಿ.
2.ನಿಮ್ಮ ವಾಹನದ ಫೋಟೋ/ವಿವರಗಳನ್ನು ಪರಿಶೀಲಿಸಿ.
3. ರಿಯಾಯಿತಿಯೊಂದಿಗೆ ದಂಡವನ್ನು ಪಾವತಿಸಿ.
2.ಯಾವುದೇ ಸಂಚಾರ ಪೊಲೀಸ್ ಠಾಣೆಗೆ ಭೇಟಿ ನೀಡಿ ಮುಖೇನ ಪಾವತಿಸುವಿಕೆ.
3. ಸಂಚಾರ ನಿರ್ವಹಣಾ ಕೇಂದ್ರ (TMC)ಗೆ ಭೇಟಿ ನೀಡಿ:
ಮೊದಲನೇ ಮಹಡಿ, ಇನ್ಸಾಂಟ್ರಿ ರಸ್ತೆ, ಇಂಡಿಯನ್ ಎಕ್ಸ್ಪ್ರೆಸ್ ಹತ್ತಿರ, ಬೆಂಗಳೂರು
ಅರ್ಧ ದಂಡ, ಪೂರ್ಣ ಪರಿಹಾರ!
Half the fine, full the relief!#TrafficFineDiscount #ClearYourDues #50PercentChallan #RoadSafety #DriveSafe #BCPCares #KarnatakaPolice@DgpKarnataka @KarnatakaCops @CPBlr @Jointcptraffic @BlrCityPolice pic.twitter.com/FeNDOtOhtc
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) November 20, 2025








