Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ನಿಮ್ಮ ಬಳಿ `ರೇಷನ್ ಕಾರ್ಡ್’ಇದ್ರೆ ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

28/06/2025 6:58 AM

ಮೊಬೈಲ್ ಆಧಾರಿತ ಇ-ಮತದಾನ ಎಂದರೇನು ? ಇಲ್ಲಿದೆ ಮಾಹಿತಿ | Mobile based e-Voting

28/06/2025 6:58 AM

SHOCKING : ಕಾಲೇಜಿನಲ್ಲೇ ಕಾನೂನು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ.!

28/06/2025 6:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಿಸ್ಟರ್‌ ಡಿ.ಕೆ.ಶಿವಕುಮಾರ್‌, ಇವತ್ತು ‘ಜೆಡಿಎಸ್‌-ಬಿಜೆಪಿ ಮೈತ್ರಿ’ಗೆ ನೀವೇ ಕಾರಣ – H.D ಕುಮಾರಸ್ವಾಮಿ ಕಿಡಿ
KARNATAKA

ಮಿಸ್ಟರ್‌ ಡಿ.ಕೆ.ಶಿವಕುಮಾರ್‌, ಇವತ್ತು ‘ಜೆಡಿಎಸ್‌-ಬಿಜೆಪಿ ಮೈತ್ರಿ’ಗೆ ನೀವೇ ಕಾರಣ – H.D ಕುಮಾರಸ್ವಾಮಿ ಕಿಡಿ

By kannadanewsnow0919/03/2024 6:07 PM

ಬೆಂಗಳೂರು: ಮಿಸ್ಟರ್‌ ಡಿ.ಕೆ.ಶಿವಕುಮಾರ್‌, ಇವತ್ತು ಜೆಡಿಎಸ್‌ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಮೂಲ ಕಾರಣವೇ ನೀವು. ನಿಮ್ಮಿಂದಲೇ ಈ ಮೈತ್ರಿ ಆಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಹೊಂದಾಣಿಕೆ ಮಾಡಿಕೊಳ್ಳೊದಕ್ಕೆ ಮೂಲ ಕಾರಣವೂ ನೀವೇ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಹಿಂದೆ ಜೆಡಿಎಸ್‌ ಕಾಂಗ್ರೆಸ್‌ ಮೈತ್ರಿ ಸರಕಾರ ರಚನೆ ಆದಾಗ ಈ ಸರಕಾರ ಐದು ವರ್ಷ ಇರಬೇಕು ಎಂದು ಹೇಳಿದ್ದಿರಿ. ಆದರೆ ಪಕ್ಕದಲ್ಲೇ ಕೂತು ಬಿಲ ಕೊರೆದಿರಿ. ಅಧಿಕಾರವನ್ನೂ, ಆ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ನಮ್ಮ ಪಕ್ಷವನ್ನೇ ರಾಮನಗರದಲ್ಲಿ ಮುಗಿಸಲು ಷಡ್ಯಂತ್ರ ರೂಪಿಸಿದಿರಿ. ಆಗ ಮಂಡ್ಯದಲ್ಲಿ ದೋಖಾ ಮಾಡಿ ನಿಖಿಲ್‌ ಕುಮಾರಸ್ವಾಮಿಯನ್ನು ಸೋಲುವಂತೆ ಮಾಡಿದಿರಿ. ಬೆಂಗಳೂರು ಗ್ರಾಮಾಂತರದಲ್ಲಿ ನಿಮ್ಮ ಸಹೋದರನಿಗೆ ನಮ್ಮ ಕಾರ್ಯಕರ್ತರು ಇದನ್ನೇ ಮಾಡಿದ್ದಿದ್ದರೆ ಆತನೂ ಮನೆಯಲ್ಲಿ ಕೂರಬೇಕಿತ್ತು. ಮೈತ್ರಿಗೆ ನಾವು ಮೋಸ ಮಾಡಲಿಲ್ಲ ಎಂದರು.

ಬಿಜೆಪಿ ಜತೆ 20 ತಿಂಗಳು ಸರಕಾರ ಮಾಡಿದ್ದರಿಂದ ನಾನು ಪಕ್ಷವನ್ನು ಉಳಿಸಿಕೊಂಡಿದ್ದೇನೆ. ಆದರೆ ನಿಮ್ಮ ಜತೆ 14 ತಿಂಗಳ ಮೈತ್ರಿಯಲ್ಲಿ ನಾವು ಸಾಕಷ್ಟು ಕಳೆದುಕೊಂಡಿದ್ದೇನೆ. ರಾಜಕೀಯವಾಗಿ ನೀವು ವಿಷ ಹಾಕಿ ನಮ್ಮನ್ನು ಕೊಂದಿದ್ದೀರಾ. ಹಂತ ಹಂತವಾಗಿ ನಮ್ಮನ್ನು ಕುಗ್ಗಿಸಿದ್ದೀರಾ. 14 ತಿಂಗಳು ನಿಮ್ಮ ಜತೆ ಸರಕಾರ ಮಾಡಿದ್ದು ನಾನು ತೆಗೆದುಕೊಂಡ ಅತ್ಯಂತ ಕೆಟ್ಟ ನಿರ್ಧಾರ. ದೇವೇಗೌಡರ 60 ವರ್ಷಗಳ ಸುಧೀರ್ಘ ರಾಜಕಾರಣಕ್ಕೆ ಕೊಳ್ಳಿ ಇಟ್ಟಿದ್ದೀರಾ. ನನ್ನ ಜತೆ ಇದ್ದವರನ್ನು ಖರೀದಿ ಮಾಡುತ್ತಿದ್ದೀರಾ ಎಂದು ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್‌ವಿರುದ್ಧ ಕಿಡಿಕಾರಿದರು.

ಬಿಜೆಪಿಯಲ್ಲಿ ನನಗೆ ಗೌರವ ಕೊಟ್ಟಿದ್ದಾರೆ. ಅವರು ನಿಮ್ಮ ಹಾಗೆ ನನ್ನ ಕುತ್ತಿಗೆ ಕೋಯ್ದಿಲ್ಲ. ಬೆಂಗಳೂರು ಗ್ರಾಮಾಂತರದಲ್ಲಿ ತೋಳ್ಬಲ, ಧನಬಲ, ಅಧಿಕಾರ ಬಲದಿಂದ ಮೆರೆಯಿತ್ತಿದ್ದೀರಿ. ನನ್ನ ಪಕ್ಷದ ಶಾಸಕರನ್ನು ಸೆಳೆಯೋದಕ್ಕೆ ನೀವು ಏನೆಲ್ಲ ಮಾಡಿದ್ದಿರಿ ಎನ್ನುವುದು ಗೊತ್ತಿದೆ ನನಗೆ. ಇವತ್ತಿಗೂ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಲೇ ಇದ್ದೀರಿ. ನೀವು ನಮ್ಮನ್ನು ಮುಗಿಸಲು ಹಂತ ಹಂತವಾಗಿ ಏನೆಲ್ಲಾ ಮಾಡುತ್ತಿದ್ದೀರಾ ಎನ್ನುವ ಮಾಹಿತಿ ನನಗೆ ಇದೆ. ಜನರೇ ನಿಮಗೆ ತಕ್ಕ ಶಾಸ್ತಿ ಮಾಡುವ ದಿನಗಳು ಹತ್ತಿರಕ್ಕೆ ಬಂದಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆ ನಡೆಸುವುದು ಹೇಗೆ ಎನ್ನುವುದು ನನಗೂ ಗೊತ್ತಿದೆ ಮಿಸ್ಟರ್‌ ಡಿ.ಕೆ.ಶಿವಕುಮಾರ್- HDK ವಾಗ್ದಾಳಿ

‘ಕಾಂಗ್ರೆಸ್‌ ಅಭ್ಯರ್ಥಿ’ಯಿಂದ ಚುನಾವಣಾ ಅಕ್ರಮ: ‘ಕುಕ್ಕರ್‌, ಹಣ ಹಂಚಿಕೆ’ ದಾಖಲೆ ಬಿಡುಗಡೆ ಮಾಡಿದ ‘HDK’

ಮಿಸ್ಟರ್‌ ಡಿ.ಕೆ.ಶಿವಕುಮಾರ್‌ ಇವತ್ತು ಜೆಡಿಎಸ್‌-ಬಿಜೆಪಿ ಮೈತ್ರಿಗೆ ನೀವೇ ಕಾರಣ - H.D ಕುಮಾರಸ್ವಾಮಿ ಕಿಡಿ Mr DK Shivakumar today you are responsible for JD(S)-BJP alliance: HD Kumaraswamy
Share. Facebook Twitter LinkedIn WhatsApp Email

Related Posts

GOOD NEWS : ನಿಮ್ಮ ಬಳಿ `ರೇಷನ್ ಕಾರ್ಡ್’ಇದ್ರೆ ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

28/06/2025 6:58 AM2 Mins Read

ಪಂಢರಪುರ ಕ್ಷೇತ್ರದ ಆಷಾಢ ಏಕಾದಶಿ ಜಾತ್ರೆ : ಭಕ್ತರಿಗಾಗಿ ಜುಲೈ 1 ರಿಂದ ಹೆಚ್ಚುವರಿ 14 ರೈಲುಗಳ ಸಂಚಾರ.!

28/06/2025 6:45 AM2 Mins Read

BIG NEWS : `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಖಾತಾ’ ಅರ್ಜಿಗಳನ್ನು ಕರ್ನಾಟಕ ಇನ್ ಮೂಲಕವೂ ಸಲ್ಲಿಸಬಹುದು.!

28/06/2025 6:33 AM1 Min Read
Recent News

GOOD NEWS : ನಿಮ್ಮ ಬಳಿ `ರೇಷನ್ ಕಾರ್ಡ್’ಇದ್ರೆ ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

28/06/2025 6:58 AM

ಮೊಬೈಲ್ ಆಧಾರಿತ ಇ-ಮತದಾನ ಎಂದರೇನು ? ಇಲ್ಲಿದೆ ಮಾಹಿತಿ | Mobile based e-Voting

28/06/2025 6:58 AM

SHOCKING : ಕಾಲೇಜಿನಲ್ಲೇ ಕಾನೂನು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ.!

28/06/2025 6:54 AM

ಪಂಢರಪುರ ಕ್ಷೇತ್ರದ ಆಷಾಢ ಏಕಾದಶಿ ಜಾತ್ರೆ : ಭಕ್ತರಿಗಾಗಿ ಜುಲೈ 1 ರಿಂದ ಹೆಚ್ಚುವರಿ 14 ರೈಲುಗಳ ಸಂಚಾರ.!

28/06/2025 6:45 AM
State News
KARNATAKA

GOOD NEWS : ನಿಮ್ಮ ಬಳಿ `ರೇಷನ್ ಕಾರ್ಡ್’ಇದ್ರೆ ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

By kannadanewsnow5728/06/2025 6:58 AM KARNATAKA 2 Mins Read

ಬೆಂಗಳೂರು : ಭಾರತ ಸರ್ಕಾರವು ಸಾರ್ವಜನಿಕರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತದೆ, ಪ್ರಮುಖ ಯೋಜನೆಗಳಲ್ಲಿ ಒಂದು ರೇಷನ್ ಕಾರ್ಡ್. ಇಂದಿಗೂ ಸಹ…

ಪಂಢರಪುರ ಕ್ಷೇತ್ರದ ಆಷಾಢ ಏಕಾದಶಿ ಜಾತ್ರೆ : ಭಕ್ತರಿಗಾಗಿ ಜುಲೈ 1 ರಿಂದ ಹೆಚ್ಚುವರಿ 14 ರೈಲುಗಳ ಸಂಚಾರ.!

28/06/2025 6:45 AM

BIG NEWS : `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಖಾತಾ’ ಅರ್ಜಿಗಳನ್ನು ಕರ್ನಾಟಕ ಇನ್ ಮೂಲಕವೂ ಸಲ್ಲಿಸಬಹುದು.!

28/06/2025 6:33 AM

ವಾಹನ ಮಾಲೀಕರೇ ನಿಮ್ಮ ವಾಹನದ ‘RC’ ಕಳೆದು ಹೋಗಿದ್ರೆ ಚಿಂತೆ ಬೇಡ ಜಸ್ಟ್ ಹೀಗೆ ಡೌನ್ಲೋಡ್ ಮಾಡಿ.!

28/06/2025 6:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.