ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಸೈಟ್ಗಳನ್ನು ವಾಪಸ್ ಕೊಟ್ಟ ಮಾತ್ರಕ್ಕೆ ಮುಗಿಯುವುದಿಲ್ಲ. ಮುಡಾ ಎಲ್ಲಾ ಸೈಟ್ಗಳನ್ನು ವಾಪಸ್ ಪಡೆಯಬೇಕು ಎಂದು ಕಾಂಗ್ರೆಸ್ಸಿಗರು ಒತ್ತಾಯಿಸುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರು ಕೂಡ ಬೇನಾಮಿ ಹೆಸರಿನಲ್ಲಿ ಸೈಟ್ ಪಡೆದಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ಹೌದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣ ಸಂಬಂಧ ತೀವ್ರ ಮುಜುಗರಕ್ಕೊಳಗಾಗಿರುವ ಕಾಂಗ್ರೆಸ್ ಇದೀಗ ಅದೇ ಅಸ್ತ್ರವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳ ನಾಯಕರಿಗೂ ಬಿಸಿ ಮುಟ್ಟಿಸಲು ಮುಂದಾಗಿದೆ. ಮುಡಾದಿಂದ ಹಂಚಿಕೆಯಾಗಿರುವ 14 ಸೈಟ್ಗಳನ್ನು ಸಿಎಂ ಸಿದ್ದರಾಮಯ್ಯ ಪತ್ನಿ ಪಾವರ್ತಿ ವಾಪಸ್ ನೀಡಿರುವ ಬೆನ್ನಲ್ಲೇ, 50:50 ಅನುಪಾತದಲ್ಲಿ ಮುಡಾ ನೀಡಿದ ಎಲ್ಲಾ ನಿವೇಶನಗಳ ವಾಪಸಾಗಿಗೆ ಕಾಂಗ್ರೆಸ್ ನಾಯಕರು ಪಟ್ಟುಹಿಡಿದಿದ್ದಾರೆ.
ವಿಪಕ್ಷಗಳ ತಂತ್ರಕ್ಕೆ ಸಿಎಂ ರಣತಂತ್ರ
ಮುಡಾ ಹಗರಣ ವಿಚಾರ ಮುಂದಿಟ್ಟುಕೊಂಡು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಭಾರಿ ಪ್ರತಿಭಟನೆ ನಡೆಸಿವೆ. ಪಾದಯಾತ್ರೆಯನ್ನೂ ಮಾಡಿದ್ದವು. ಸದ್ಯ ಪ್ರಕರಣ ಕೋರ್ಟ್ ಮೆಟ್ಟಿಲೇರಿದೆ.ಈ ಕಾರಣದಿಂದ ವಿರೋಧಿಗಳ ಹಣಿಯಲು ಅವರು ಅಣಿಯಾಗಿದ್ದಾರೆ ಎನ್ನಲಾಗುತ್ತಿದೆ.ಮುಡಾ ಕ್ಲೀನ್ ನೆಪದಲ್ಲಿ ವಿರೋಧಿಗಳ ಹಣಿಯಲು ಅವರು ತಂತ್ರ ರೂಪಿಸುತ್ತಿದ್ದಾರೆ. ಅದರ ಅಂಗವಾಗಿಯೇ ಕಾಂಗ್ರೆಸ್ ನಾಯಕರು ಮುಡಾ ಸೈಟ್ಗಳ ವಾಪಸ್ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎನ್ನಲಾಗಿದೆ.