Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸತತ 2ನೇ ಬಾರಿಗೆ ಸೊನ್ನೆಗೆ ಔಟಾದ ‘ಕೊಹ್ಲಿ’, ಅಭಿಮಾನಿಗಳಿಗೆ ನಿವೃತ್ತಿ ಸುಳಿವು.? ಕೊಲಾಹಲ ಸೃಷ್ಟಿಸ್ತಿದೆ ಈ ವಿಡಿಯೋ

23/10/2025 3:44 PM

BREAKING : ರಕ್ಷಿತಾ ಶೆಟ್ಟಿ ಕುರಿತು ‘S’ ಪದ ಬಳಕೆ ಆರೋಪ : ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

23/10/2025 3:32 PM

ಮೊಬೈಲ್ ಗೀಳಿಗೆ ಬಿದ್ದಿರುವ ಯುವ ಪೀಳಿಗೆಗೆ ಮಹನೀಯರ ಇತಿಹಾಸ ತಿಳಿಸುವುದು ಅಗತ್ಯ: ಸಚಿವ ಶಿವರಾಜ್ ತಂಗಡಗಿ

23/10/2025 3:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮುಖ್ಯಮಂತ್ರಿ ಕುರ್ಚಿ’ ಮೇಲೆ ಕಣ್ಣಿಟ್ಟವರಿಂದಲೇ ‘ಮುಡಾ ಹಗರಣ’ ಬಹಿರಂಗ: ‘HDK’ ಗಂಭೀರ ಆರೋಪ
KARNATAKA

‘ಮುಖ್ಯಮಂತ್ರಿ ಕುರ್ಚಿ’ ಮೇಲೆ ಕಣ್ಣಿಟ್ಟವರಿಂದಲೇ ‘ಮುಡಾ ಹಗರಣ’ ಬಹಿರಂಗ: ‘HDK’ ಗಂಭೀರ ಆರೋಪ

By kannadanewsnow0905/07/2024 4:53 PM

ಮೈಸೂರು: ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಬಯಲಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಮೈಸೂರಿನಲ್ಲಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ಮತ್ತು ಹೇಗೆ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರವಿದೆ. ಸೀಡಿ ಫ್ಯಾಕ್ಟರಿ ಬಂದ್ ಆಯಿತು. ಈಗ ಮುಡಾ ಫ್ಯಾಕ್ಟರಿ ಶುರುವಾಗಿದೆ ಎಂದು ಯಾರ ಹೆಸರನ್ನೂ ಹೇಳದೇ ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದರು.

ಬಿಜೆಪಿ ಸ್ನೇಹಿತರು ಈ ಬಗ್ಗೆ ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗೊಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಅವರು ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಕೇಂದ್ರ ಸಚಿವರು ಒತ್ತಾಯ ಮಾಡಿದರು.

62 ಕೋಟಿ ಪರಿಹಾರವನ್ನು ಸರಕಾರ ಕೊಡಬೇಕು ಎನ್ನುತ್ತಿದ್ದಾರೆ ಸಿಎಂ. ಹೀಗೆ ಹೇಳುವ ಸಿದ್ದರಾಮಯ್ಯ ಅವರಿಗೆ ಜನರ ಕಷ್ಟ ಗೊತ್ತಿಲ್ಲವೇ? ರಾಜ್ಯದ ಬಡವರ ನೋವು ಗೊತ್ತಾಗುತ್ತಿಲ್ಲವೇ? ರಾತ್ರೋರಾತ್ರಿ ಭೂಸ್ವಾಧೀನ ಮಾಡಿಕೊಳ್ಳುತ್ತಾರೆ. ಅವರನ್ನು ಬೀದಿಗೆ ನಿಲ್ಲಿಸುತ್ತಾರೆ. ಪರಿಹಾರ ಮಾತ್ರ ಕೊಡುವುದಿಲ್ಲ. ನೀವು ಮಾತ್ರ ದೊಡ್ಡ ಮೊತ್ತದ ಪರಿಹಾರ ಕೇಳುತ್ತಿದ್ದೀರಿ. ಇದು ಯಾವ ನ್ಯಾಯ ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಸರ್ಕಾರದಿಂದ ದ್ವೇಷ ರಾಜಕಾರಣ

ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ನೇರ ಆರೋಪ ಮಾಡಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ನನ್ನ ಜನತಾ ದರ್ಶನದ ಬಗ್ಗೆಯೇ ಸಚಿವ ಸಂಪುಟದ ಸಭೆ ಕರೆದು ಚರ್ಚೆ ಮಾಡಿದ್ದಾರೆ. ಸರ್ಕಾರ ಅಧಿಕಾರಿಗಳನ್ನು ನನ್ನಿಂದ ದೂರ ಇಡಬಹುದು. ಆದರೆ, ಜನರನ್ನು ನನ್ನಿಂದ ದೂರ ಮಾಡಲು ಸಾಧ್ಯವಿಲ್ಲ. ಈ ಹಿಂದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರು ಈ ರೀತಿ ಸಭೆ ಮಾಡಿದ್ದಾಗ ಏನು ನಡೆಯಿತು? ಚುನಾವಣೆಗೆ ಇನ್ನೆರಡು ಮೂರು ತಿಂಗಳು ಇದ್ದಾಗ ಜನ ಸ್ಪಂದನ ಅಂತ ನಡೆಯಿತಲ್ಲ, ಆಗ ಅವರ ಹಿಂದೆ ಅಧಿಕಾರಿಗಳು ಇರಲಿಲ್ಲವೇ? ಎಂದು ಸರ್ಕಾರದ ವಿರುದ್ಧ ಕೇಂದ್ರ ಸಚಿವರು ವಾಗ್ದಾಳಿ ನಡೆಸಿದರು.

ಈಗ ಜನತಾ ದರ್ಶನ ತಪ್ಪಿಸಲು ಸರ್ಕಾರ ಮುಂದಾಗಿದೆ. ಯಾವುದೇ ಕಾರಣಕ್ಕೂ ಜನತಾ ದರ್ಶನ ನಿಲ್ಲಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

HD ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

BREAKING: KPSCಯಿಂದ ‘384 KAS ಹುದ್ದೆ’ಗಳ ನೇಮಕಾತಿಯ ‘ಪೂರ್ವಭಾವಿ ಪರೀಕ್ಷೆ’ಗೆ ಅಂತಿಮ ವೇಳಾಪಟ್ಟಿ ಪ್ರಕಟ | KAS Exam 2024

Share. Facebook Twitter LinkedIn WhatsApp Email

Related Posts

BREAKING : ರಕ್ಷಿತಾ ಶೆಟ್ಟಿ ಕುರಿತು ‘S’ ಪದ ಬಳಕೆ ಆರೋಪ : ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

23/10/2025 3:32 PM1 Min Read

ಮೊಬೈಲ್ ಗೀಳಿಗೆ ಬಿದ್ದಿರುವ ಯುವ ಪೀಳಿಗೆಗೆ ಮಹನೀಯರ ಇತಿಹಾಸ ತಿಳಿಸುವುದು ಅಗತ್ಯ: ಸಚಿವ ಶಿವರಾಜ್ ತಂಗಡಗಿ

23/10/2025 3:31 PM3 Mins Read

‘ಡೇಟಿಂಗ್‌ ಆಪ್‌’ನಲ್ಲಿ ನಕಲಿ ಪ್ರೊಫೈಲ್‌ ತಪ್ಪಿಸಲು ‘ಫೇಸ್‌ ಚೆಕ್‌’ ಲಾಗಿನ್‌ ಪರಿಚಯಿಸಿದ ‘ಟಿಂಡರ್‌’

23/10/2025 3:25 PM2 Mins Read
Recent News

ಸತತ 2ನೇ ಬಾರಿಗೆ ಸೊನ್ನೆಗೆ ಔಟಾದ ‘ಕೊಹ್ಲಿ’, ಅಭಿಮಾನಿಗಳಿಗೆ ನಿವೃತ್ತಿ ಸುಳಿವು.? ಕೊಲಾಹಲ ಸೃಷ್ಟಿಸ್ತಿದೆ ಈ ವಿಡಿಯೋ

23/10/2025 3:44 PM

BREAKING : ರಕ್ಷಿತಾ ಶೆಟ್ಟಿ ಕುರಿತು ‘S’ ಪದ ಬಳಕೆ ಆರೋಪ : ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

23/10/2025 3:32 PM

ಮೊಬೈಲ್ ಗೀಳಿಗೆ ಬಿದ್ದಿರುವ ಯುವ ಪೀಳಿಗೆಗೆ ಮಹನೀಯರ ಇತಿಹಾಸ ತಿಳಿಸುವುದು ಅಗತ್ಯ: ಸಚಿವ ಶಿವರಾಜ್ ತಂಗಡಗಿ

23/10/2025 3:31 PM

‘ಡೇಟಿಂಗ್‌ ಆಪ್‌’ನಲ್ಲಿ ನಕಲಿ ಪ್ರೊಫೈಲ್‌ ತಪ್ಪಿಸಲು ‘ಫೇಸ್‌ ಚೆಕ್‌’ ಲಾಗಿನ್‌ ಪರಿಚಯಿಸಿದ ‘ಟಿಂಡರ್‌’

23/10/2025 3:25 PM
State News
KARNATAKA

BREAKING : ರಕ್ಷಿತಾ ಶೆಟ್ಟಿ ಕುರಿತು ‘S’ ಪದ ಬಳಕೆ ಆರೋಪ : ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

By kannadanewsnow0523/10/2025 3:32 PM KARNATAKA 1 Min Read

ಬೆಂಗಳೂರು : ಬಿಗ್ ಬಾಸ್ ಮನೆಗೆ ಪರಿಸರ ನಿಯಮ ಉಲ್ಲಂಘನೆಯಿಂದ ಬೀಗ ಜಡಿದ ಕೇಸ್ ಮಾಸೋ ಮುನ್ನವೇ, ಇದೀಗ ಸ್ಪರ್ಧಿ…

ಮೊಬೈಲ್ ಗೀಳಿಗೆ ಬಿದ್ದಿರುವ ಯುವ ಪೀಳಿಗೆಗೆ ಮಹನೀಯರ ಇತಿಹಾಸ ತಿಳಿಸುವುದು ಅಗತ್ಯ: ಸಚಿವ ಶಿವರಾಜ್ ತಂಗಡಗಿ

23/10/2025 3:31 PM

‘ಡೇಟಿಂಗ್‌ ಆಪ್‌’ನಲ್ಲಿ ನಕಲಿ ಪ್ರೊಫೈಲ್‌ ತಪ್ಪಿಸಲು ‘ಫೇಸ್‌ ಚೆಕ್‌’ ಲಾಗಿನ್‌ ಪರಿಚಯಿಸಿದ ‘ಟಿಂಡರ್‌’

23/10/2025 3:25 PM

ರಾಜ್ಯದ ಜನತೆ ಗಮನಕ್ಕೆ: ನಾಳೆಯಿಂದ ಎರಡು ದಿನ ಎಸ್ಕಾಂ ಸೇವೆ ಅಲಭ್ಯ, ವಿದ್ಯುತ್ ಬಿಲ್ ಪಾವತಿಯೂ ಬಂದ್

23/10/2025 3:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.