ನವದೆಹಲಿ: ಮೂಲಗಳ ಪ್ರಕಾರ ಗೃಹ ಸಚಿವಾಲಯವು ಕೈಗಾರಿಕೋದ್ಯಮಿ ಮುಕೇಶ್ ಅಂಬಾನಿ ಅವರ ಭದ್ರತೆಯನ್ನು ಹೆಚ್ಚಿಸಿದೆ ಎನ್ನಲಾಗಿದೆ. ಗುಪ್ತಚರ ಸಂಸ್ಥೆಯ ಬೆದರಿಕೆ ಗ್ರಹಿಕೆ ವರದಿಯ ಆಧಾರದ ಮೇಲೆ ಭದ್ರತೆಯನ್ನು ‘ಝಡ್ + ‘ ವರ್ಗಕ್ಕೆ ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಅವರಿಗೆ ಈ ಹಿಂದೆ ‘ಝಡ್ ಕೆಟಗರಿ’ ಭದ್ರತೆಯನ್ನು ನೀಡಲಾಗಿತ್ತು. ಕಳೆದ ವರ್ಷ ಬಿಲಿಯನೇರ್ ಕೈಗಾರಿಕೋದ್ಯಮಿ ಮುಕೇಶ್ ಅಂಬಾನಿ ಅವರ ನಿವಾಸ ಆಂಟಿಲಿಯಾ ಹೊರಗೆ, ಎಂಎಚ್ಎ ಕೈಗಾರಿಕೋದ್ಯಮಿಗಳ ಭದ್ರತೆಯನ್ನು ಬಲಪಡಿಸುವ ಬಗ್ಗೆ ಚರ್ಚಿಸುತ್ತಿತ್ತು ಅದರಂತೆ ಈಗ ಭ್ರದ್ರತೆಯನ್ನು ನೀಡಲು ಮುಂದಾಗಿದೆ ಎನ್ನಲಾಗಿದೆ. ಭಾರತದಲ್ಲಿ, ತಮ್ಮ ಕೆಲಸ ಅಥವಾ ಜನಪ್ರಿಯತೆಯಿಂದಾಗಿ ಜೀವಕ್ಕೆ ಅಪಾಯದಲ್ಲಿರುವ ಮಾನ್ಯತೆ ಪಡೆದ ವ್ಯಕ್ತಿಗಳಿಗೆ ಭದ್ರತೆಯನ್ನು ನೀಡಲಾಗುತ್ತದೆ. ಸಮಾಜಘಾತುಕ ಶಕ್ತಿಗಳಿಂದ ಅವರನ್ನು ರಕ್ಷಿಸುವ ಸಲುವಾಗಿ ಗುಪ್ತಚರ ಸಂಸ್ಥೆ ಒದಗಿಸಿದ ಮಾಹಿತಿಯ ಆಧಾರದ ಮೇಲೆ ವಿವಿಧ ರೀತಿಯ ಭದ್ರತೆಯನ್ನು ಒದಗಿಸಲಾಗುತ್ತದೆ.

Share.
Exit mobile version