Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೆಹಲಿ ಕಾರು ಸ್ಪೋಟಕ್ಕೂ ಮುನ್ನ ರಸ್ತೆಯಲ್ಲಿ ನಡೆದುಕೊಂಡು ಹೋದ ಉಗ್ರ `ಉಮರ್ ಅಸಫ್ ಅಲಿ’ | WATCH VIDEO

13/11/2025 10:58 AM

BREAKING : ಡಿ.6ಕ್ಕೆ ದೇಶದ ಮಹಾ ನಗರಗಳಲ್ಲಿ ನಡೆದಿತ್ತು ಸ್ಫೋಟಕ್ಕೆ ಸಂಚು : ತನಿಖೆಯಲ್ಲಿ ಬಯಲಾಯ್ತು ಉಗ್ರರ ಪ್ಲಾನ್!

13/11/2025 10:55 AM

Breaking: ದೆಹಲಿ ಬಾಂಬ್ ಸ್ಫೋಟ: ಎಲ್ ಎನ್ ಜೆಪಿ ಆಸ್ಪತ್ರೆಯಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಸಾವು | Delhi blast

13/11/2025 10:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್‌ಶಿಪ್‌ನ 3ನೇ ಸುತ್ತು ಗೆದ್ದ ಮುಂಬೈನ ಕಿಯಾನ್ ಶಾ: ಬೆಂಗಳೂರಿನ ರಿಷಿಕ್‌ ರೆಡ್ಡಿಗೆ 2ನೇ ಸ್ಥಾನ
SPORTS

ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್‌ಶಿಪ್‌ನ 3ನೇ ಸುತ್ತು ಗೆದ್ದ ಮುಂಬೈನ ಕಿಯಾನ್ ಶಾ: ಬೆಂಗಳೂರಿನ ರಿಷಿಕ್‌ ರೆಡ್ಡಿಗೆ 2ನೇ ಸ್ಥಾನ

By kannadanewsnow0901/09/2025 7:09 PM

ಚೆನ್ನೈ : ಮುಂಬೈನ 14 ವರ್ಷದ ಕಿಯಾನ್ ಶಾ ಅವರು ಮೆಕೊ FMSCI ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್‌ಶಿಪ್‌ನ ಮೂರನೇ ಸುತ್ತಿನಲ್ಲಿ ಜಯಗಳಿಸಿದ್ದಾರೆ. ಇದು ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಅವರ ಮೊದಲ ಗೆಲುವು. ಮದ್ರಾಸ್ ಇಂಟರ್ನ್ಯಾಷನಲ್ ಕಾರ್ಟಿಂಗ್ ಅರೆನಾ (MIKA)ದಲ್ಲಿ ನಡೆದ ಸ್ಪರ್ಧೆಯಲ್ಲಿ ಟೀಮ್ ರಾಯೊ ರೇಸಿಂಗ್‌ನ ಪರ ಸ್ಪರ್ಧಿಸಿದ ಕಿಯಾನ್ ಅವರು ರೇಸ್‌ನುದ್ದಕ್ಕೂ ಪ್ರಾಬಲ್ಯ ಮೆರೆದು ಜೂನಿಯರ್‌ ರೊಟಾಕ್ಸ್‌ ವಿಭಾಗದ ಫೈನಲ್‌ನಲ್ಲಿ ಗೆಲುವು ಸಾಧಿಸಿದರು.

ಕಿಯಾನ್‌ ರೇಸ್‌ ವಾರವನ್ನು ಉತ್ತಮವಾಗಿ ಆರಂಭಿಸಿದರು. ಅವರು ಎರಡೂ ಅಧಿಕೃತ ಅಭ್ಯಾಸ ಅವಧಿಗಳಲ್ಲಿ ಅಗ್ರಸ್ಥಾನ ಪಡೆದಿದ್ದಲ್ಲೇ, ಅತಿವೇಗದ ರೇಸರ್ ಆಗಿ ಹೊರಹೊಮ್ಮಿ ಪೋಲ್‌ ಪೊಸಿಷನ್‌ ಸಹ ಗಳಿಸಿದರು. ಅರ್ಹತಾ ಲ್ಯಾಪ್‌ ಅನ್ನು 50.530 ಸೆಕೆಂಡ್‌ಗಳಲ್ಲಿ ಮುಕ್ತಾಯಗೊಳಿಸಿದರು. 18 ರೇಸರ್‌ಗಳ ಪೈಕಿ 8 ಮಂದಿಯನ್ನು ಕಿಯಾನ್‌ ಕೇವಲ ಅರ್ಧ ಸೆಕೆಂಡ್‌ ಕಡಿಮೆ ಸಮಯದಲ್ಲಿ ಹಿಂದಿಕ್ಕಿದರು.

ಕಿಯಾನ್‌ಗೆ ಭಾರೀ ಪೈಪೋಟಿ ನೀಡಿದ ಚೆನ್ನೈನ ಶಿವಾನ್‌ ಕಾರ್ತಿಕ್‌ (50.672 ಸಕೆಂಡ್‌) ಹಾಗೂ ಎಶಾಂತ್‌ ವೆಂಕಟೇಶನ್‌ (50.731 ಸೆಕೆಂಡ್‌) ಕ್ರಮವಾಗಿ 2 ಹಾಗೂ 3ನೇ ಸ್ಥಾನ ಪಡೆದರು.

ರೇಸ್‌, ಇಲ್ಲಿನ 1.2 ಕಿ.ಮೀ. ಉದ್ದದ ಎಫ್‌ಐಎ ಗ್ರೇಡ್‌ 1 ಅಂತಾರಾಷ್ಟ್ರೀಯ ಕಾರ್ಟಿಂಗ್‌ ಸರ್ಕ್ಯೂಟ್‌ನಲ್ಲಿ ನಡೆಯಿತು.

‘ನಾನು ಈ ರೇಸ್‌ಗೆ ಸಾಕಷ್ಟು ಸಿದ್ಧತೆ ನಡೆಸಿದ್ದೆ. ನನ್ನ ಸಂಪೂರ್ಣ ಗಮನ ಗೆಲ್ಲುವುದರ ಮೇಲೆಯೇ ಇತ್ತು. ನನಗೆ ಅತ್ಯುತ್ತಮ ಗುಣಮಟ್ಟದ ಕಾರ್ಟ್‌ ಸಿದ್ಧಪಡಿಸಿ ಕೊಟ್ಟ ನನ್ನ ತಂಡಕ್ಕೆ ಧನ್ಯವಾದ ಹೇಳಲು ಇಚ್ಛಿಸುತ್ತೇನೆ. ನನ್ನ ಪೋಷಕರೇ ನನ್ನ ಅತಿದೊಡ್ಡ ಶಕ್ತಿ. ಅವರ ಬೆಂಬಲವಿಲ್ಲದೆ, ನನಗೆ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ. ಅವರಿಗೂ ನಾನು ಧನ್ಯವಾದ ಹೇಳುತ್ತೇನೆ’ ಎಂದು ಗೆಲುವಿನ ಬಳಿಕ ಕಿಯಾನ್‌ ನುಡಿದರು.

8 ಬಾರಿ ರಾಷ್ಟ್ರೀಯ ಚಾಂಪಿಯನ್‌ ಹಾಗೂ ರಾಯೋ ರೇಸಿಂಗ್‌ನ ಸ್ಥಾಪನ ರಾಯೋ ‘ನಾನು ನೋಡಿದ ಕೆಲವು ಉತ್ತಮ ರೇಸ್‌ಕ್ರಾಫ್ಟ್ ಕಿಯಾನ್‌ನಲ್ಲಿದೆ. ಈ ಗೆಲುವು ಹಲವು ದಿನಗಳಿಂದ ಬಾಕಿ ಇತ್ತು. ಆತನಲ್ಲಿ ವೇಗವಿದೆ ಮತ್ತು ಸಾಕಷ್ಟು ಪರಿಶ್ರಮ ವಹಿಸುತ್ತಿದ್ದಾನೆ. ಇದು ಬಹಳ ಅರ್ಹವಾದ ಗೆಲುವು ಮತ್ತು ಇದು ಕೇವಲ ಪ್ರಾರಂಭವಷ್ಟೇ ಎಂದು ನಾನು ವಿಶ್ವಾಸದಿಂದ ಹೇಳುಬಲ್ಲೆ’ ಎಂದರು.

ಹೀಟ್ 1 ಕಿಯಾನ್ ಪೋಲ್‌ನಿಂದ ಉತ್ತಮ ಆರಂಭ ಮಾಡುವುದರೊಂದಿಗೆ ಪ್ರಾರಂಭವಾಯಿತು. ಅವರು ಬಹಳ ಬೇಗ ಎಲ್ಲರನ್ನು ಹಿಂದಿಕ್ಕಿ ಮುನ್ನುಗ್ಗಿದರು. ಅವರ ಹಿಂದೆ, ಪುಣೆಯ ಕ್ರೆಸ್ಟ್ ಮೋಟರ್‌ಸ್ಪೋರ್ಟ್ಸ್‌ನ ಆರಫಾತ್ ಶೇಖ್ ಮತ್ತು ಸ್ವರ್ಣವ್ ದಾಸ್ ಇಬ್ಬರೂ, ಚೆನ್ನೈನ ರೇಸ್‌ಗಳನ್ನು ಹಿಂದಕ್ಕೆ ಹಾಕಿ ಕಿಯಾನ್‌ ಜೊತೆ ನೇರಾನೇರ ಸ್ಪರ್ಧೆ ನಡೆಸಿದರು. ಆದರೆ, ಕಿಯಾನ್‌ 2.5 ಸೆಕೆಂಡ್ ಅಂತರ ಕಾಯ್ದುಕೊಂಡು ಆರಾಮದಾಯಕ ಗೆಲುವು ಸಾಧಿಸಿದರು.

ಹೀಟ್ 2ನಲ್ಲೂ ಕಿಯಾನ್‌ ಆರಂಭಿಕ ಮುನ್ನಡೆ ಪಡದರು. ಆದರೆ ಶೇಖ್‌ ಅತ್ಯುತ್ತಮ ಚಾಲನೆಯೊಂದಿಗೆ ರೇಸ್‌ ಗೆದ್ದರು. ವೆಂಕಟೇಶನ್ ಮೂರನೇ ಸ್ಥಾನ ಪಡೆದರು.

ಪ್ರಮುಖ ಪ್ರಿ-ಫೈನಲ್‌ನಲ್ಲಿ ಕಿಯಾನ್ ಮತ್ತೊಮ್ಮೆ ಪೋಲ್ ಪೊಸಿಷನ್‌ನಿಂದ ಆರಂಭಿಸಿದರು. ಅವರು ಅದ್ಭುತವಾದ ಆರಂಭ ಮಾಡಿದರು, ಆದರೆ ಲ್ಯಾಪ್ 2 ರಲ್ಲಿ ಅಪಘಾತವಾಯಿತು, ಹೀಗಾಗಿ ರೇಸ್ ಅನ್ನು ಪುನರಾರಂಭಿಸಲಾಯಿತು ಮತ್ತು ಮತ್ತೊಮ್ಮೆ ಕಿಯಾನ್ ಅತ್ಯುತ್ತಮ ಆರಂಭವನ್ನು ಮಾಡಿದರು. ಪ್ರತಿ ಲ್ಯಾಪ್‌ನಲ್ಲೂ ಅಂತರ ಹೆಚ್ಚಿಸಿಕೊಳ್ಳುತ್ತಾ ಸಾಗಿದ ಕಿಯಾನ್‌ 14 ಲ್ಯಾಪ್‌ಗಳ ಪ್ರಿ ಫೈನಲ್‌ ಅನ್ನು ಗೆದದರು.

ಫೈನಲ್‌ನಲ್ಲಿ ಮತ್ತೊಮ್ಮೆ ಪೋಲ್‌ ಪೊಸಿಷನ್‌ನಿಂದ ರೇಸ್‌ ಆರಂಭಿಸಿದ ಕಿಯಾನ್‌, ಆಕರ್ಷಕ ರೇಸ್‌ ಮೂಲಕ ಗೆಲುವು ಸಾಧಿಸಿದರು. ಬೆಂಗಳೂರಿನ ರಿಷಿಕ್‌ ರೆಡ್ಡಿ 2ನೇ ಹಾಗೂ ಚೆನ್ನೈನ ಎಶಾಂತ್‌ ವೆಂಕಟೇಶನ್‌ 3ನೇ ಸ್ಥಾನ ಪಡೆದರು.

ಕಿಯಾನ್ ಎರಡು ವರ್ಷಗಳ ಹಿಂದೆ ರಾಯೊ ರೇಸಿಂಗ್‌ನೊಂದಿಗೆ 2-ಸ್ಟ್ರೋಕ್ ಕಾರ್ಟಿಂಗ್ ಪ್ರಾರಂಭಿಸಿದರು. ಈ ವರ್ಷ ಅವರು ಏಷ್ಯನ್ ರೊಟಾಕ್ಸ್ ಚಾಂಪಿಯನ್‌ಶಿಪ್‌ನಲ್ಲೂ ಪಾಲ್ಗೊಂಡಿರುವ ಅವರು, ಸದ್ಯ ಎರಡು ಪೋಡಿಯಂ ಫಿನಿಶ್‌ಗಳೊಂದಿಗೆ 2ನೇ ಸ್ಥಾನದಲ್ಲಿದ್ದಾರೆ.

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ‘144 ಗ್ರಾಮ ಆಡಳಿತಾಧಿಕಾರಿ’ ವರ್ಗಾವಣೆ | VA Transfer

ಸಾಮಾಜಿಕ ಮಾಧ್ಯಮಗಳ ಸವಾಲು ಎದುರಿಸುತ್ತಿರುವ ಪತ್ರಿಕೋದ್ಯಮ: ಸಿ.ಎಸ್. ಷಡಾಕ್ಷರಿ

Share. Facebook Twitter LinkedIn WhatsApp Email

Related Posts

ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಭಾರತೀಯರ ಪ್ರಾಬಲ್ಯ, 6 ವರ್ಷದಲ್ಲಿ ಮೊದಲ ಬಾರಿಗೆ ‘ಬಾಬರ್ ಅಜಮ್’ ಟಾಪ್ -5ನಿಂದ ಔಟ್!

12/11/2025 7:35 PM2 Mins Read

‘ಶ್ರೇಯಸ್ ಅಯ್ಯರ್’ ಆಮ್ಲಜನಕ ಮಟ್ಟ 50ಕ್ಕೆ ಇಳಿಕೆ, ದಕ್ಷಿಣ ಆಫ್ರಿಕಾ ಏಕದಿನ ಸರಣಿ ಆಡೋದು ಅನುಮಾನ!

11/11/2025 9:31 PM1 Min Read

BREAKING : ಡಿ.15 ಅಥವಾ 16ರಂದು ಅಬುಧಾಬಿಯಲ್ಲಿ 2026ರ ‘IPL ಹರಾಜು’ ನಡೆಯಲಿದೆ : ಮೂಲಗಳು

11/11/2025 6:49 PM1 Min Read
Recent News

BREAKING : ದೆಹಲಿ ಕಾರು ಸ್ಪೋಟಕ್ಕೂ ಮುನ್ನ ರಸ್ತೆಯಲ್ಲಿ ನಡೆದುಕೊಂಡು ಹೋದ ಉಗ್ರ `ಉಮರ್ ಅಸಫ್ ಅಲಿ’ | WATCH VIDEO

13/11/2025 10:58 AM

BREAKING : ಡಿ.6ಕ್ಕೆ ದೇಶದ ಮಹಾ ನಗರಗಳಲ್ಲಿ ನಡೆದಿತ್ತು ಸ್ಫೋಟಕ್ಕೆ ಸಂಚು : ತನಿಖೆಯಲ್ಲಿ ಬಯಲಾಯ್ತು ಉಗ್ರರ ಪ್ಲಾನ್!

13/11/2025 10:55 AM

Breaking: ದೆಹಲಿ ಬಾಂಬ್ ಸ್ಫೋಟ: ಎಲ್ ಎನ್ ಜೆಪಿ ಆಸ್ಪತ್ರೆಯಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಸಾವು | Delhi blast

13/11/2025 10:45 AM

ದೆಹಲಿ ಸ್ಫೋಟ ಪ್ರಕರಣದ ತನಿಖೆಯನ್ನು ಶ್ಲಾಘಿಸಿದ US ಸೆನೆಟರ್ ಮಾರ್ಕೊ ರುಬಿಯೊ |Delhi blast

13/11/2025 10:39 AM
State News
KARNATAKA

ರಾಜ್ಯದ ಗ್ರಾಮ ಪಂಚಾಯತಿಗಳ ಸಮಗ್ರ ಅಭಿವೃದ್ಧಿಗಾಗಿ ‘ಕಾಯಕ ಗ್ರಾಮ’ ಕಾರ್ಯಕ್ರಮ ಜಾರಿ.!

By kannadanewsnow5713/11/2025 10:37 AM KARNATAKA 1 Min Read

ಬೆಂಗಳೂರು : ಗ್ರಾಮ ಪಂಚಾಯತಿಗಳ ಸಮಗ್ರ ಅಭಿವೃದ್ಧಿಗಾಗಿ ‘ಕಾಯಕ ಗ್ರಾಮ’ ಕಾರ್ಯಕ್ರಮ ಜಾರಿಯಾಗಿದ್ದು,ಈ ಕಾರ್ಯಕ್ರಮದಡಿ ಅಧಿಕಾರಿಗಳು ಪಂಚಾಯತಿಗಳನ್ನು ದತ್ತು ಪಡೆದು…

ಮುಂದಿನ ದಿನದಲ್ಲಿ ಯಾವ ಬಾವುಟ ಹಿಡಿಬೇಕು ಎನ್ನುವುದನ್ನು ತೀರ್ಮಾನ ಮಾಡುತ್ತೇನೆ : ಸ್ವಪಕ್ಷದ ವಿರುದ್ಧವೆ ಸಿಡಿದೆದ್ದ ರಾಜಣ್ಣ

13/11/2025 10:35 AM

BIG NEWS : ದೆಹಲಿ ಸ್ಫೋಟಕ್ಕೂ ತುಮಕೂರಿಗೂ ಇದೆಯಾ ನಂಟು? ಶಂಕಿತನ ವಿಚಾರಣೆ ನಡೆಸಿದ ಪೊಲೀಸರು

13/11/2025 10:19 AM

ಉಗ್ರರ ಮೇಲೆ ಪ್ರೀತಿ ಇರೋದಕ್ಕೆ ಕಾಂಗ್ರೆಸ್ ನಾಯಕರು ಅವರ ವಿರುದ್ಧ ಮಾತಾಡಲ್ಲ : ಬಿಜೆಪಿ ಸಂಸದ ಗೋವಿಂದ ಕಾರಜೋಳ

13/11/2025 10:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.