Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Share Market Today : ಸೆನ್ಸೆಕ್ಸ್ 382 ಅಂಕಗಳ ಏರಿಕೆ, ನಿಫ್ಟಿ 25,100 ಕ್ಕೆ ಜಿಗಿತ : ಆಕ್ಸಿಸ್ ಬ್ಯಾಂಕ್ ಗೆ ಶೇ.1ರಷ್ಟು ಲಾಭ

09/06/2025 9:46 AM

ನೀವು ಹಣದ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಪರಿಹಾರ ಮಾಡಿ, ದುಡ್ಡು ಹರಿದು ಬರುತ್ತೆ

09/06/2025 9:38 AM

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು.!

09/06/2025 9:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯವನ್ನು ಮಾದರಿ ಕ್ಷೇತ್ರವನ್ನಾಗಿಸುವುದೇ ನನ್ನ ಗುರಿ- ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ
KARNATAKA

ಮಂಡ್ಯವನ್ನು ಮಾದರಿ ಕ್ಷೇತ್ರವನ್ನಾಗಿಸುವುದೇ ನನ್ನ ಗುರಿ- ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ

By kannadanewsnow0905/04/2024 5:44 PM

ಮದ್ದೂರು: ಮಂಡ್ಯ ಜಿಲ್ಲೆಯಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳು ಇತರೆ ಲೋಕಸಭಾ ಕ್ಷೇತ್ರಗಳಿಗೆ ಮಾದರಿಯಾಗಬೇಕು. ರಾಜಕೀಯವಾಗಿ ಮಾತ್ರವಲ್ಲ ಅಭಿವೃದ್ಧಿ ವಿಚಾರದಲ್ಲಿ ಕೂಡ ಮಂಡ್ಯ ಹೆಸರು ಇಂಡಿಯಾದ್ಯಂತ ಕೇಳಬೇಕು. ಮಂಡ್ಯವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಗುರಿ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಹೇಳಿದರು.

ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಂಡ್ಯ ಜಿಲ್ಲೆ ಪ್ರಾಕೃತಿಕವಾಗಿ, ರಾಜಕೀಯವಾಗಿ ಸಾಕಷ್ಟು ಹೆಸರುವಾಸಿ. ಜಿಲ್ಲೆಯಲ್ಲಿ ಕೃಷಿಯೇ ಜೀವಾಳ. ಈ ಭಾಗದ ರೈತರ ಕಲ್ಯಾಣಕ್ಕೆ ಕಂಕಣಬದ್ಧನಾಗಿದ್ದೇನೆ. ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿತಾಣಗಳಿದ್ದು ಅವುಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಿಕೊಡಬೇಕೆಂಬ ಕನಸು ಹೊಂದಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಬಡವರ ದೀನದಲಿತರ ಪರ. ಎಲ್ಲಾ ವರ್ಗದವರನ್ನು ಒಟ್ಟಿಗೆ ಕೊಂಡೊಯ್ಯುವ ಪಕ್ಷ. ಉದ್ಯೋಗ ಸೃಷ್ಟಿ, ಸಾಮಾಜಿಕ ನ್ಯಾಯ, ಆರೋಗ್ಯ ಸೇವೆ ಸೇರಿದಂತೆ ರಾಷ್ಟ್ರದ ಜನತೆಯ ಕಲ್ಯಾಣ ಬಯಸಿ  25 ಭರವಸೆಗಳನ್ನು ಒಳಗೊಂಡ ಪ್ರಣಾಳಿಕೆಯನ್ನು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದೆ. ಮತದಾರರು ಪ್ರಜ್ಞಾವಂತರಿದ್ದಾರೆ. ಕಾಂಗ್ರೆಸ್ ನ ಜನಪರ ಕಾರ್ಯಕ್ರಮಗಳಿಗೆ ಮನ್ನಣೆ ನೀಡಲಿದ್ದು ನನ್ನನ್ನು ಆಶೀರ್ವದಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮದ್ದೂರು ತಾಲೂಕಿನಲ್ಲಿ ರೋಡ್ ಶೋ

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಮದ್ದೂರು ವಿಧಾನಸಭಾ ಕ್ಷೇತ್ರದಾದ್ಯಂತ ಮತಪ್ರಚಾರ ನಡೆಸಿದರು.

ಗೊಲ್ಲರದೊಡ್ಡಿಯ ಜುಂಜಪ್ಪ ದೇವರಿಗೆ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಿದರು. ಮಲ್ಲನಕುಪ್ಪೆ, ಹೂತಗೆರೆ, ಕೆಸ್ತೂರು, ಆತಗೂರು, ಕದಲೂರು, ಹೆಮ್ಮನಹಳ್ಳಿ, ನಿಡಘಟ್ಟ, ಆಲೂರು, ಹೊನ್ನಲಗೆರೆ, ಬೆಳ್ಳೂರು, ಕೊಳಗೆರೆ, ಗೆಜ್ಜಲಗೆರೆ, ವಳಗೆರಹಳ್ಳಿ, ಹೊಸಕೆರೆ, ನಿಲುವಾಗಿಲು, ಬೆಸಗರಹಳ್ಳಿ, ಚಾಮನಹಳ್ಳಿ ಸೇರಿದಂತೆ ಮದ್ದೂರು ತಾಲೂಕಿನಾದ್ಯಂತ ಮತಯಾಚಿಸಿದರು.

ಮದ್ದೂರು ಶಾಸಕ ಉದಯ್, ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕದಲೂರು ರಾಮಕೃಷ್ಣ, ಶಿವಲಿಂಗೇಗೌಡ ಕೆಪಿಸಿಸಿ ವಕ್ತಾರ ತೈಲೂರು ಸತ್ಯಾನಂದ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಜೊತೆಯಲ್ಲಿದ್ದರು.

ಬಿರುಬಿಸಿಲಿನಲ್ಲೂ ಜನಸ್ತೋಮ

ಹಳ್ಳಿಗಳಲ್ಲಿ ರೋಡ್ ಶೋ ನಡೆಸಿದ ಸಂದರ್ಭದಲ್ಲಿ ಎಲ್ಲೆಡೆ ನೆರೆದಿದ್ದ ಜನಸ್ತೋಮ ಕಂಡು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಹಿಮ್ಮಡಿಗೊಂಡಿತ್ತು. ಕಾರ್ಯಕರ್ತರು ಅಭ್ಯರ್ಥಿ ಮೇಲೆ ಹೂ ಮಳೆಯನ್ನೇ ಸುರಿಸಿದರು. ಸುಡುಬಿಸಲನ್ನು ಲೆಕ್ಕಿಸದೇ ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಜನರು ಅಭ್ಯರ್ಥಿಯನ್ನು ಕಂಡು ಕೈ ಕುಲುಕಿ ಬೆಂಬಲ ಸೂಚಿಸಿದರು.

5 ಗ್ಯಾರೆಂಟಿಗಳ ಜೊತೆ ಅಭ್ಯರ್ಥಿಗಳನ್ನು ಸೋಲಿಸುವ ಗ್ಯಾರೆಂಟಿಯೂ ಸಿದ್ದರಾಮಯ್ಯ ಸರ್ಕಾರದ್ದಾಗಿದೆ- ಬೊಮ್ಮಾಯಿ

ಬೆಂಗಳೂರಲ್ಲಿ ‘ಕಾಲರಾ’ ರೋಗ ಪತ್ತೆ : ಹೋಟೆಲ್, ರೆಸ್ಟೋರೆಂಟ್, ಕೆಫೆ ಮಾಲೀಕರಿಗೆ ‘BBMP’ ಮಹತ್ವದ ಆದೇಶ

ಮಂಡ್ಯವನ್ನು ಮಾದರಿ ಕ್ಷೇತ್ರವನ್ನಾಗಿಸುವುದೇ ನನ್ನ ಗುರಿ- ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ My aim is to make Mandya a model constituency: Congress candidate VenkataramaneGowda
Share. Facebook Twitter LinkedIn WhatsApp Email

Related Posts

ನೀವು ಹಣದ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಪರಿಹಾರ ಮಾಡಿ, ದುಡ್ಡು ಹರಿದು ಬರುತ್ತೆ

09/06/2025 9:38 AM3 Mins Read

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು.!

09/06/2025 9:37 AM1 Min Read

BREAKING : ಜಗಳೂರು ಪಟ್ಟಣದಲ್ಲಿ `ಸ್ಪೋಟಕ ವಸ್ತು’ ಬಳಕೆ ಕೇಸ್ : ಇಬ್ಬರು ಗುತ್ತಿಗೆದಾರರ ವಿರುದ್ಧ `FIR’ ದಾಖಲು

09/06/2025 9:10 AM1 Min Read
Recent News

Share Market Today : ಸೆನ್ಸೆಕ್ಸ್ 382 ಅಂಕಗಳ ಏರಿಕೆ, ನಿಫ್ಟಿ 25,100 ಕ್ಕೆ ಜಿಗಿತ : ಆಕ್ಸಿಸ್ ಬ್ಯಾಂಕ್ ಗೆ ಶೇ.1ರಷ್ಟು ಲಾಭ

09/06/2025 9:46 AM

ನೀವು ಹಣದ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಪರಿಹಾರ ಮಾಡಿ, ದುಡ್ಡು ಹರಿದು ಬರುತ್ತೆ

09/06/2025 9:38 AM

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು.!

09/06/2025 9:37 AM

‘ಪ್ರತಿ ಮನೆಗೂ ತಲುಪಬೇಕು, ಹಿಂದೂಗಳನ್ನು ಒಗ್ಗೂಡಿಸಬೇಕು’: RSS ಮುಖ್ಯಸ್ಥ

09/06/2025 9:28 AM
State News
KARNATAKA

ನೀವು ಹಣದ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಪರಿಹಾರ ಮಾಡಿ, ದುಡ್ಡು ಹರಿದು ಬರುತ್ತೆ

By kannadanewsnow0909/06/2025 9:38 AM KARNATAKA 3 Mins Read

ತಿಂಗಳ ಕೊನೆಯಲ್ಲಿ ಬಹಳಷ್ಟು ಜನರ ಕೈಯಲ್ಲಿ ನಗದು ಇರುವುದಿಲ್ಲ. ಮುಂದಿನ ತಿಂಗಳು ಸಂಬಳ ಬಂದರೆ ಮಾತ್ರ ಹಣ ಬರುವ ಪರಿಸ್ಥಿತಿ…

BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು.!

09/06/2025 9:37 AM

BREAKING : ಜಗಳೂರು ಪಟ್ಟಣದಲ್ಲಿ `ಸ್ಪೋಟಕ ವಸ್ತು’ ಬಳಕೆ ಕೇಸ್ : ಇಬ್ಬರು ಗುತ್ತಿಗೆದಾರರ ವಿರುದ್ಧ `FIR’ ದಾಖಲು

09/06/2025 9:10 AM

ALERT : `ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಟ್ಟರೆ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು ಎಚ್ಚರ.!

09/06/2025 8:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.