Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ‘ಸರ್ಕಾರಿ ಅಧಿಕಾರಿ’ಯನ್ನು ಕೆಸರಲ್ಲಿ ನಡೆಸಿದ ‘ಸಚಿವ’ನಿಗೆ ಒಂದು ತಿಂಗಳ ಜೈಲು ಶಿಕ್ಷೆವಿಧಿಸಿದ ಕೋರ್ಟ್

28/04/2026 4:41 PM

ಶಿವಮೊಗ್ಗದಲ್ಲಿ ಬಿರುಗಾಳಿ ಸಹಿತ ಮಳೆಯಿಂದ ಹಾನಿಗೊಂಡ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ

28/04/2026 4:29 PM

ರಾಜ್ಯದ SSLC ಅನುತ್ತೀರ್ಣ ವಿದ್ಯಾರ್ಥಿಗಳ ಗಮನಕ್ಕೆ; ಪರೀಕ್ಷೆ-2ಕ್ಕೆ ‘ಉಚಿತ ನೋಂದಣಿ’ಗೆ ಅವಕಾಶ, ಏ.30 ಲಾಸ್ಟ್ ಡೇಟ್

28/04/2026 4:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇರುವಷ್ಟು ದಿನ ಕ್ಷೇತ್ರದ ಅಭಿವೃದ್ದಿಯೇ ನನ್ನ ಧ್ಯೇಯ: ಮದ್ದೂರು ಶಾಸಕ ಕೆ.ಎಂ.ಉದಯ್
KARNATAKA

ಇರುವಷ್ಟು ದಿನ ಕ್ಷೇತ್ರದ ಅಭಿವೃದ್ದಿಯೇ ನನ್ನ ಧ್ಯೇಯ: ಮದ್ದೂರು ಶಾಸಕ ಕೆ.ಎಂ.ಉದಯ್

By kannadanewsnow0904/04/2026 5:03 PM

ಮಂಡ್ಯ : ಗ್ರಾಮಗಳ ಅಭಿವೃದ್ಧಿಗೋಸ್ಕರ 4 ಗ್ರಾಮ ಪಂಚಾಯಿತಿಗಳನ್ನು ಮದ್ದೂರು ನಗರಸಭೆಗೆ ಸೇರಿಸಲಾಗಿದೆಯೇ ಹೊರತು ಇದರಲ್ಲಿ ನನ್ನ ವೈಯಕ್ತಿಕ ಹಿತಾಸಕ್ತಿ ಏನೂ ಇಲ್ಲ ಎಂಬುವುದನ್ನು ಸ್ಥಳಿಯ ಗ್ರಾಮಸ್ಥರುಗಳು ಅರ್ಥಮಾಡಿಕೊಳ್ಳಬೇಕು ಎಂದು ಶಾಸಕ ಕೆ.ಎಂ.ಉದಯ್ ಸ್ಪಷ್ಟಪಡಿಸಿದರು.

ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದಲ್ಲಿ ಶನಿವಾರ 8.15 ಕೋಟಿ ರೂ ವೆಚ್ಚದಲ್ಲಿ ಬಿ.ಎಂ.ರಸ್ತೆಯಿಂದ ಮರಕಾಡುದೊಡ್ಡಿ, ಗೊರವನಹಳ್ಳಿ ಮುಖಾಂತರ ಮದ್ದೂರು ಕ್ರೀಡಾಂಗಣ ಬಳಿ ಪೇಟೆ ಬೀದಿ ಸೇರಿರುವ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗೆಜ್ಜಲಗೆರೆ, ಗೊರವನಹಳ್ಳಿ ಸೇರಿದಂತೆ ನಾಲ್ಕು ಗ್ರಾಮ ಪಂಚಾಯಿತಿಗಳ ಕೆಲವು ಗ್ರಾಮಗಳು ನಗರ ಸಭೆಗೆ ಸೇರ್ಪಡೆಯಾಗಿರುವುದರಿಂದ ಹೆಚ್ಚಿನ ಸೌಕರ್ಯಗಳು ಸಿಗಲಿದೆ. ಗ್ರಾಮಗಳ ಅಭಿವೃದ್ಧಿಗೋಸ್ಕರ 4 ಗ್ರಾಮ ಪಂಚಾಯಿತಿಗಳನ್ನು ನಗರಸಭೆಗೆ ಸೇರಿಸಲಾಗಿದೇ ಹೊರತು ಇದರಲ್ಲಿ ನನ್ನ ವೈಯಕ್ತಿಕ ಹಿತಾಸಕ್ತಿ ಏನೂ ಇಲ್ಲ ಎಂಬುವುದನ್ನು ಸ್ಥಳಿಯ ಗ್ರಾಮಸ್ಥರುಗಳು ಅರ್ಥಮಾಡಿಕೊಳ್ಳಬೇಕು ಎಂದರು.

ಕೆಲ ರಾಜಕೀಯ ಪಕ್ಷಗಳ ಮುಖಂಡರು ಮಾಡುತ್ತಿರುವ ರಾಜಕೀಯ ದುರುದ್ದೇಶಗಳಿಂದ ಕೆಲವು ಮುಗ್ದ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಅಂತವರ ಮಾತುಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದರು.

ಬೇರೆ ದೇಶಗಳಿಗೆ ಹೋಲಿಕೆ ಮಾಡಿ ನೋಡಿದರೆ ನಾವು 25 ವರ್ಷ ಹಿಂದೆ ಉಳಿದಿದ್ದೇವೆ ಎಂಬುವುದು ಅರ್ಥವಾಗುತ್ತದೆ ಹಾಗೆ ನೋಡಿದರೆ ಜನರ ಮನಸ್ಥಿತಿಗಳು ಹಾಗೆ ಇರುವುದು ಕಾರಣ ಎಂದೆನಿಸುತ್ತದೆ. ಬೇರೆ ಮುಂದುವರೆದ ದೇಶಗಳಿಗೆ ಹೋಲಿಸಿ ನೋಡಿದರೆ ಶೇ.10 ರಷ್ಟು ಕೂಡ ಅಭಿವೃದ್ಧಿಯಾಗಿಲ್ಲ ಎಂಬುವುದನ್ನು ನಗರಸಭೆಗೆ ವಿರೋಧ ಮಾಡುವವರು ಅರ್ಥ ಮಾಡಿಕೊಳ್ಳಬೇಕಾಗಿದೆ. 8 ರಿಂದ 10 ಬಾರಿ ಶಾಸಕರಾಗಿರುವವರ ಕ್ಷೇತ್ರಗಳಿಗೂ ರಾಜ್ಯ ಸರ್ಕಾರ ಇಷ್ಟೊಂದು ಅನುದಾನ ನೀಡಿಲ್ಲ. ಆದರೆ, ಮದ್ದೂರು ಕ್ಷೇತ್ರದ ಅಭಿವೃದ್ಧಿಗಾಗಿ ನನ್ನ ಮನವಿ ಹಾಗೂ ಸತತ ಪರಿಶ್ರಮದಿಂದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಅವರ ಕ್ಷೇತ್ರಗಳಿಗೆ ನೀಡಿದ್ದಂತೆ ಹೆಚ್ಚಿನ ಅನುದಾನಗಳನ್ನು ನೀಡುತ್ತಿರುವುದರಿಂದ ಕೇವಲ ಮೂರೇ ವರ್ಷಗಳಲ್ಲಿ 1900 ಕೋಟಿ ರೂ ಹೆಚ್ಚು ಅನುದಾನವನ್ನು ತಂದು ಅಭಿವೃದ್ಧಿ ಮಾಡಲು ಸಾಧ್ಯವಾಗಿದೆ ಎಂದರು.

ನನಗೆ ಅಧಿಕಾರ ಮುಖ್ಯವಲ್ಲ. ನನ್ನ ಕ್ಷೇತ್ರವನ್ನು ಅಭಿವೃದ್ದಿ ಮಾಡುವುದಷ್ಟೆ ನನ್ನ ಗುರಿಯಾಗಿದ್ದು, ಇರುವಷ್ಟು ದಿನ ಒಳ್ಳೆಯ ಕೆಲಸಗಳನ್ನು ಮಾಡುತ್ತೇನೆ ಎಂದ ಅವರು, ಗೊರವನಹಳ್ಳಿ ನಗರಸಭೆಗೆ ಸೇರ್ಪಡೆಯಾಗಿರುವುದರಿಂದ ಗ್ರಾಮದ ಹಾಲಿನ ಡೈರಿಯಾಗಲಿ, ರೈತರ ಸೊಸೈಟಿಯಾಗಲಿ ಗ್ರಾಮದಿಂದ ಬೇರೆ ಎಲ್ಲಿಗೂ ಸ್ಥಳಾಂತರವಾಗುವುದಿಲ್ಲ. ಮುಂದಿನ ದಿನಗಳಲ್ಲಿ ಗೊರವನಹಳ್ಳಿಯ ಅಭಿವೃದ್ದಿಗೆ ಮತ್ತಷ್ಟು ಯೋಜನೆಗಳನ್ನು ರೂಪಿಸಲಾಗುವುದು. ಅಷ್ಟೇ ಅಲ್ಲದೆ ನಗರಸಭೆಯಲ್ಲಿ ಗ್ರಾಮಸ್ಥರು ತಮ್ಮ ಅಸ್ತಿ ಬಗೆಗಿನ ಇ-ಖಾತಾ ಸೌಕರ್ಯವನ್ನು ಪಡೆದುಕೊಳ್ಳಬಹುದಾಗಿದೆ. ಈ ಹಿಂದೆ ಗ್ರಾಮಸ್ಥರು ಕಟ್ಟುತ್ತಿದ್ದ ಆಸ್ತಿ ಕಂದಾಯವನ್ನಷ್ಟೆ ಕಟ್ಟ ಬೇಕೆ ಹೊರತು ಅದಕ್ಕೂ ಹೆಚ್ಚಿನ ಕಂದಾಯ ಕಟ್ಟುವಂತಿಲ್ಲ ಎಂದು ತಿಳಿಸಿದರು.

ನಗರಸಭೆ ವಿರೋಧಿಸಿ ಗೊರವನಹಳ್ಳಿ ಗ್ರಾಮಸ್ಥರಿಂದ ಪ್ರತಿಭಟನೆ

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಶನಿವಾರ ಶಾಸಕ ಕೆ.ಎಂ.ಉದಯ್ ಗೊರವನಹಳ್ಳಿಗೆ ಭೂಮಿ ಪೂಜೆ ನೆರವೇರಿಸಲು ಬಂದ ವೇಳೆಯೇ ಗ್ರಾಮದ ಕೆಲವು ಗ್ರಾಮಸ್ಥರು ಮದ್ದೂರು ನಗರಸಭೆಗೆ ಗೊರವನಹಳ್ಳಿಯನ್ನು ಸೇರ್ಪಡೆಗೊಳಿಸಿರುವುದರ ವಿರುದ್ಧ ಬೇಡವೇ ಬೇಡ ನಗರಸಭೆ ಬೇಡ ಎಂದು ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.

ಈ ವೇಳೆ ಒಂದೆ ಸ್ಥಳದಲ್ಲಿ ರಸ್ತೆ ಅಭಿವೃದ್ದಿಗೆ ಚಾಲನೆ ಹಾಗೂ ನಗರಸಭೆ ಸೇರ್ಪಡೆಗೆ ವಿರೋಧಿಸಿ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಠಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿಪಿಐಗಳಾದ ನವೀನ್ ಕುಮಾರ್ ಹಾಗೂ ನಾರಾಯಣಿ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಅನ್ನು ನಿಯೋಜಿಸಲಾಗಿತ್ತು.

ಗೊರವನಹಳ್ಳಿ ಪ್ರಸನ್ನ ಮಾತನಾಡಿ, ಗೊರವನಹಳ್ಳಿ ಗ್ರಾಮವನ್ನು ನಗರಸಭೆಗೆ ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಗ್ರಾಪಂ ಆವರಣದಲ್ಲಿ 86 ದಿನಗಳಿಂದ ಪ್ರತಿಭಟನೆ ಮಾಡಲಾಗುತ್ತಿದೆ ಹಾಗೂ ಕೆಲ ದಿನಗಳ ಹಿಂದೆ ಅಧಿಕಾರಿಗಳು ಹಾಗೂ ಪೊಲೀಸರು ಕಡತಗಳನ್ನು ಗ್ರಾಪಂ ಕಚೇರಿಯಿಂದ ಬಲವಂತವಾಗಿ ತೆಗೆದುಕೊಂಡು ಹೋಗುವ ಸಂದರ್ಭದಲ್ಲಿ ಪೋಲಿಸರು ಗ್ರಾಮದ ಮಹಿಳೆಯರ ಮೇಲೆ ಗ್ರಾಮಸ್ಥರ ಮೇಲೆ ದೌರ್ಜನ್ಯ ನಡೆಸಿದಾಗ ಕೆಲವರು ಗಾಯಗೊಂಡಿದ್ದರು. ಸೌಜನ್ಯಕ್ಕಾದರೂ ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರು ಮಾಡುತ್ತಿರುವ ಅಭಿವೃದ್ದಿ ಕಾರ್ಯಗಳಿಗೆ ನಮ್ಮ ವಿರೋಧವಿಲ್ಲ. ನಗರಸಭೆಗೆ ಗೊರವನಹಳ್ಳಿ ಗ್ರಾಮ ಪಂಚಾಯಿತಿಯನ್ನು ಸೇರ್ಪಡೆ ಮಾಡಿರುವುದಕ್ಕೆ ನಮ್ಮ ವಿರೋಧವಿದೆ. ನಗರಸಭೆಯಿಂದ ಗೊರವನಹಳ್ಳಿ ಗ್ರಾಮ ಪಂಚಾಯಿತಿಯನ್ನು ಕೈ ಬಿಡುವವರೆಗೂ ನಮ್ಮ ಅನಿರ್ಧಿಷ್ಟಾವಧಿ ಮುಷ್ಕರ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಲುವರಾಜು, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಶಂಕರೇಗೌಡ, ನಗರಸಭೆ ಪೌರಾಯುಕ್ತೆ ರಾಧಿಕಾ, ಡಿಸಿಸಿ ಬ್ಯಾಂಕ್ ನಿರ್ದೆಶಕ ಪಿ.ಸಂದರ್ಶ, ಮನ್ಮುಲ್ ನಿರ್ದೆಶಕ ಹರೀಶ್ ಬಾಬು ಮುಖಂಡರಾದ ಅಜ್ಜಹಳ್ಳಿ ರಾಮಕೃಷ್ಣ, ಎಂ.ಡಿ.ಮಹಾಲಿಂಗಯ್ಯ, ಮೋಹನ್ ಕುಮಾರ್, ರಾಘವ್, ಮಧು, ಶಿವರಾಮು, ಪುಟ್ಟಸ್ವಾಮಿ, ಬೋರೇಗೌಡ, ಶಿವರಾಮು, ಜವರೇಗೌಡ, ಶಿವಪ್ಪ ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

SC, ST ಜನಾಂಗದ ಸಮಸ್ಯೆಗಳಿಗೆ ತಾಲೂಕು ಹಂತದಲ್ಲೇ ಪರಿಹಾರಕ್ಕೆ ಕ್ರಮ: ಆಯೋಗದ ಅಧ್ಯಕ್ಷ ಡಾ.ಎಲ್.ಮೂರ್ತಿ

BIG Alert: ‘ಆನ್‌ಲೈನ್‌’ನಲ್ಲಿ ‘IPL ಟಿಕೆಟ್’ ಖರೀದಿಗಾಗಿ ಹುಡುಕುತ್ತಿದ್ದೀರಾ? ಅದಕ್ಕೂ ಮುನ್ನ ಈ ಸುದ್ದಿ ಓದಿ.!

Share. Facebook Twitter LinkedIn WhatsApp Email

Related Posts

ಶಿವಮೊಗ್ಗದಲ್ಲಿ ಬಿರುಗಾಳಿ ಸಹಿತ ಮಳೆಯಿಂದ ಹಾನಿಗೊಂಡ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ

28/04/2026 4:29 PM2 Mins Read

ರಾಜ್ಯದ SSLC ಅನುತ್ತೀರ್ಣ ವಿದ್ಯಾರ್ಥಿಗಳ ಗಮನಕ್ಕೆ; ಪರೀಕ್ಷೆ-2ಕ್ಕೆ ‘ಉಚಿತ ನೋಂದಣಿ’ಗೆ ಅವಕಾಶ, ಏ.30 ಲಾಸ್ಟ್ ಡೇಟ್

28/04/2026 4:22 PM1 Min Read

BREAKING : 15 ದಿನಗಳ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ : ಸಂಸದ ಗೋವಿಂದ ಕಾರಜೋಳ ಹೊಸ ಬಾಂಬ್!

28/04/2026 4:19 PM1 Min Read
Recent News

BIG NEWS: ‘ಸರ್ಕಾರಿ ಅಧಿಕಾರಿ’ಯನ್ನು ಕೆಸರಲ್ಲಿ ನಡೆಸಿದ ‘ಸಚಿವ’ನಿಗೆ ಒಂದು ತಿಂಗಳ ಜೈಲು ಶಿಕ್ಷೆವಿಧಿಸಿದ ಕೋರ್ಟ್

28/04/2026 4:41 PM

ಶಿವಮೊಗ್ಗದಲ್ಲಿ ಬಿರುಗಾಳಿ ಸಹಿತ ಮಳೆಯಿಂದ ಹಾನಿಗೊಂಡ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ

28/04/2026 4:29 PM

ರಾಜ್ಯದ SSLC ಅನುತ್ತೀರ್ಣ ವಿದ್ಯಾರ್ಥಿಗಳ ಗಮನಕ್ಕೆ; ಪರೀಕ್ಷೆ-2ಕ್ಕೆ ‘ಉಚಿತ ನೋಂದಣಿ’ಗೆ ಅವಕಾಶ, ಏ.30 ಲಾಸ್ಟ್ ಡೇಟ್

28/04/2026 4:22 PM

BREAKING : 15 ದಿನಗಳ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ : ಸಂಸದ ಗೋವಿಂದ ಕಾರಜೋಳ ಹೊಸ ಬಾಂಬ್!

28/04/2026 4:19 PM
State News
KARNATAKA

ಶಿವಮೊಗ್ಗದಲ್ಲಿ ಬಿರುಗಾಳಿ ಸಹಿತ ಮಳೆಯಿಂದ ಹಾನಿಗೊಂಡ ಪ್ರದೇಶಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ

By kannadanewsnow0928/04/2026 4:29 PM KARNATAKA 2 Mins Read

ಶಿವಮೊಗ್ಗ : ಬಿರುಗಾಳಿ ಮತ್ತು‌ ಮಳೆಯಿಂದ ಹಾನಿಗೊಳಗಾದ ಅಡಿಕೆ, ತೆಂಗು ತೋಟ ಸೇರಿದಂತೆ ಬೆಳೆ ಹಾನಿಯಾದ ರೈತರಿಗೆ ಮತ್ತು ಮನೆ…

ರಾಜ್ಯದ SSLC ಅನುತ್ತೀರ್ಣ ವಿದ್ಯಾರ್ಥಿಗಳ ಗಮನಕ್ಕೆ; ಪರೀಕ್ಷೆ-2ಕ್ಕೆ ‘ಉಚಿತ ನೋಂದಣಿ’ಗೆ ಅವಕಾಶ, ಏ.30 ಲಾಸ್ಟ್ ಡೇಟ್

28/04/2026 4:22 PM

BREAKING : 15 ದಿನಗಳ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ : ಸಂಸದ ಗೋವಿಂದ ಕಾರಜೋಳ ಹೊಸ ಬಾಂಬ್!

28/04/2026 4:19 PM

ಚಿಕ್ಕಬಳ್ಳಾಪುರ : ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಶವ ಪತ್ತೆ : ಸಾವಿನ ಸುತ್ತ ಅನುಮಾನದ ಹುತ್ತ!

28/04/2026 4:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.