ನವದೆಹಲಿ: ನನ್ನ ಖಾಸಗಿ ಅಂಗದ ಮೇಲೆ ಹಲ್ಲೆ ಮಾಡಲಾಗಿದೆ, ಮತ್ತೊಂದು ಜೈಲಿಗೆ ಸ್ಥಳಾಂತರಿಸುವಂತೆ ಕಾನ್ ಮ್ಯಾನ್ ಸುಕೇಶ್ ಚಂದ್ರಶೇಖರ್ ದೆಹಲಿ ರಾಜ್ಯಪಾಲರಿಗೆ ಮನವಿ ಮಾಡಿಕೊಂಡು ಪತ್ರವನ್ನು ಬರೆದು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇದೇ ವೇಳೇ ಎಎಪಿ ನಾಯಕರ ವಿರುದ್ಧದ ದೂರನ್ನು ಹಿಂಪಡೆಯಲು ನಿರಂತರ ಬೆದರಿಕೆ ಮತ್ತು ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿ ಸುಕೇಶ್ ಚಂದ್ರಶೇಖರ್ ದೆಹಲಿ ಎಲ್ಜಿಗೆ ಪತ್ರ ಬರೆದಿದ್ದಾರೆ. ಲೆಫ್ಟಿನೆಂಟ್ ಗವರ್ನರ್ಗೆ ಪತ್ರ ಬರೆದಿರುವ ಸುಕೇಶ್, ಜೈಲಿನೊಳಗೆ ಸಿಆರ್ಪಿಎಫ್ ಸಿಬ್ಬಂದಿ ತನಗೆ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಸುಕೇಶ್ ತನ್ನ ವಕೀಲರ ಮೂಲಕ ಬರೆದ ಪತ್ರದಲ್ಲಿ, ತಾನು ಪ್ರಸ್ತುತ ಮಂಡೋಲಿ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದೇನೆ ಎಂದು ಹೇಳಿದ್ದಾರೆ. . ಸತ್ಯೇಂದ್ರ ಜೈನ್, ಅರವಿಂದ್ ಕೇಜ್ರಿವಾಲ್ ಮತ್ತು ಕೈಲಾಶ್ ಗೆಹ್ಲೋಟ್ ಅವರಂತಹ ಆಮ್ ಆದ್ಮಿ ಪಕ್ಷದ ದೊಡ್ಡ ನಾಯಕರ ವಿರುದ್ಧ ನಾನು ದೂರು ನೀಡಿದಾಗಿನಿಂದ ನನಗೆ ನಿರಂತರ ಬೆದರಿಕೆಗಳು ಬರುತ್ತಿವೆ ಎಂದು ಸುಕೇಶ್ ಚಂದ್ರಶೇಖರ್ ಹೇಳಿದ್ದಾರೆ. ಆರ್ಥಿಕ ಅಪರಾಧಗಳ ವಿಭಾಗ ಮತ್ತು ಜಾರಿ ನಿರ್ದೇಶನಾಲಯಕ್ಕೆ ನಾನು ಸಲ್ಲಿಸಿರುವ ದೂರನ್ನು ಹಿಂಪಡೆಯಲು ಒತ್ತಡ ಹೇರಲಾಗುತ್ತಿದೆ ಅಂತ ತಿಳಿಸಿದ್ದಾರೆ.