ಮೈಸೂರು : ಅರಮನೆ ನಗರಿ ಮೈಸೂರು ಅರಮನೆಯಲ್ಲಿ ( Mysore Dasara 2022 ) ಇಂದಿನಿಂದ ದಸರಾ ವೈಭವ ಆರಂಭವಾಗಿದೆ. ಅರಮನೆಯಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಿದ್ದಾರೆ.

ಬೆಳಗ್ಗೆ 11:15 ರಿಂದ ಆರಂಭವಾದ ಖಾಸಗಿ ದರ್ಬಾರ್ ಸುಮಾರು 45 ನಿಮಿಷಗಳ ಕಾಲ ನಡೆದಿದೆ. ರತ್ನ ಖಚಿತ ಸಿಂಹಾಸನವೇರಿ ರಾಜಮನೆತನದ ಕತ್ತಿಯೊಂದಿಗೆ ಸಾಂಪ್ರದಾಯಿಕ ರಾಜ ಪೋಷಾಕಿನಲ್ಲಿ ನವರಾತ್ರಿ ದರ್ಬಾರ್ ನಡೆಸಿದರು.  ಹಾಗೂ ಹೊರಾಂಗಣದಲ್ಲಿರುವ ದೇವಾಲಯಕ್ಕೆ ಪೂಜೆ ಸಲ್ಲಿಸಿ ದರ್ಬಾರ್ ಮುಕ್ತಾಯಗೊಳಿಸಿದರು.

ಇನ್ನೂ,  ಮೈಸೂರು  ದಸರಾ ಮಹೋತ್ಸವ ( Mysore Dasara 2022 ) ಉದ್ಘಾಟಿಸಿದ ಪ್ರಪ್ರಥಮ ರಾಷ್ಟ್ರಪತಿ ಎಂಬ ಗೌರವಕ್ಕೆ ಪಾತ್ರರಾದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ( President of India Droupadi Murmu ) ಅವರು ಮೈಸೂರಿನಲ್ಲೇ ತಯಾರಾದ ಮೈಸೂರು ರೇಷ್ಮೆ ಸೀರೆ ( mysore silk sarees ) ಧರಿಸಿ, ದಸರಾ ಉದ್ಘಾಟಿಸುವ ಮೂಲಕ ಮೈಸೂರಿಗೆ ವಿಶೇಷ ಗೌರವ ನೀಡಿದ್ದಾರೆ.

ರಾಷ್ಟ್ರಪತಿಯವರಿಗಾಗಿ ವಿಶೇಷವಾಗಿ ನೇಯ್ದ ಮೈಸೂರು ರೇಶ್ಮೆ ಸೀರೆ ಇದು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾಡಳಿತದ ಪರವಾಗಿ ರಾಷ್ಟ್ರಪತಿಯವರನ್ನು ಅಧಿಕೃತವಾಗಿ ಆಹ್ವಾನಿಸುವಾಗ ಗೌರವಸೂಚಕವಾಗಿ ಈ ಮೈಸೂರು ರೇಶ್ಮೆ ಸೀರೆ, ಫಲ ತಾಂಬೂಲ ನೀಡಿ ಗೌರವಿಸಿದ್ದರು.

ಇದೇ ಉಡುಪು ಧರಿಸಿ ರಾಷ್ಟ್ರಪತಿಯವರು ಮೈಸೂರು ದಸರಾ ( Mysuru Dasara ) ಮಹೋತ್ಸವಕ್ಕೆ ಆಗಮಿಸಿದ್ದು ಮೈಸೂರಿಗರಿಗೆ ಸಂತಸ ತಂದಿದೆ. ರಾಷ್ಟ್ರಪತಿಯವರು ಬಿಳಿ ಸೀರೆ ಇಷ್ಟಪಡುತ್ತಾರೆ ಎಂಬುದನ್ನು ಅರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರಿ ಸ್ವಾಮ್ಯದ ಕೆ.ಎಸ್.ಐ.ಸಿ.ಯ ಸರ್ಕಾರಿ ರೇಶ್ಮೆ ಕಾರ್ಖಾನೆಗೆ ಈ ಉಡುಪು ತಯಾರಿಕೆಗೆ ಆದೇಶ ನೀಡಿ, ಸಿದ್ಧಪಡಿಸಿದ್ದರು. ಮೈಸೂರಿನ ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1912ರಲ್ಲಿ ನಿರ್ಮಿಸಿದ ರೇಷ್ಮೆ ಕಾರ್ಖಾನೆ ಎಂಬ ಹೆಮ್ಮೆ ಈ ಕಾರ್ಖಾನೆಗೆ ಇದೆ.

ಅನಗತ್ಯ ಗರ್ಭಧಾರಣೆಯನ್ನು ತಪ್ಪಿಸಲು ಇಲ್ಲಿದೆ ಸುಲಭ ವಿಧಾನಗಳು | unwanted pregnancy Tips

ರಜೆಯ ಖುಷಿ ಕ್ಷಣ ಕಳೆಯಲು ಬಂದ ಮೂವರು ವಿದ್ಯಾರ್ಥಿಗಳ ‘ದುರಂತ ಅಂತ್ಯ’ : ಅಮಾವಾಸ್ಯೆ ದಿನವೇ ಉಡುಪಿಯಲ್ಲಿ ದುರ್ಘಟನೆ

.

 

 

 

Share.
Exit mobile version