ಮೈಸೂರು: ದಸರಾ ನಮ್ಮ ನಾಡಿನ ಅತಿದೊಡ್ಡ ಸಾಂಸ್ಕೃತಿಕ ಸಂಭ್ರಮ. ಎಲ್ಲ ಧರ್ಮದವರು ಪಾಲ್ಗೊಳ್ಳಬಹುದು, ಆದರೆ ಮೂಲತಃ ಅದು ಹಿಂದೂ ಹಬ್ಬ. ಅದರ ದಿನಾಂಕವನ್ನು ನಿಗದಿಪಡಿಸುವುದು ಹಿಂದೂ ಪಂಚಾಂಗ. ಯಾರದೋ ಇಚ್ಛೆ-ಮನೋಭಾವಕ್ಕೆ ಅನುಗುಣವಾಗಿ ಬದಲಾಯಿಸುವ ಹಬ್ಬವಲ್ಲ ಎಂಬುದಾಗಿ ಸಂಸದ ಯದುವೀರ್ ಒಡೆಯರ್ ಹೇಳುವ ಮೂಲಕ, ಡಿಸಿಎಂ ಡಿ.ಕೆ ಶಿವಕುಮಾರ್ ಗೆ ತಿರುಗೇಟು ನೀಡಿದ್ದಾರೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಚಾಮುಂಡಿ ಬೆಟ್ಟ ಎಲ್ಲ ಧರ್ಮ–ಸಮುದಾಯದವರಿಗೂ ಮುಕ್ತವಾಗಿ ತೆರೆದಿದೆ. ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ-ಧರ್ಮಗಳಲ್ಲಿದ್ದಾರೆ ಎಂದಿದ್ದಾರೆ.
ಆದರೆ, ಚಾಮುಂಡಿ ಬೆಟ್ಟ ಒಂದು ಶಕ್ತಿಪೀಠ. ತಾಯಿ ಚಾಮುಂಡೇಶ್ವರಿ ಹಿಂದೂ ದೇವಿ – ಆಕೆಯ ಉಲ್ಲೇಖ ಹಿಂದೂ ಗ್ರಂಥವಾದ ಮಾರ್ಕಂಡೇಯ ಪುರಾಣದ ದೇವಿ ಮಹಾತ್ಮ್ಯದಲ್ಲಿದೆ; ಬೇರೆ ಧರ್ಮಗಳ ಗ್ರಂಥಗಳಲ್ಲಿ ಇಲ್ಲ. ಪ್ರತಿದಿನವೂ ಹಿಂದೂ ಶಾಸ್ತ್ರಾನುಸಾರವೇ ಪೂಜೆ–ಪರಂಪರೆ ನಡೆಯುತ್ತಿವೆ. ಇಲ್ಲಿಗೆ ಬರುವ ಎಲ್ಲರೂ ಆಕೆಯನ್ನು ಹಿಂದೂ ದೇವಿಯಾಗಿಯೇ ಆರಾಧಿಸುತ್ತಾರೆ ತಿಳಿಸಿದ್ದಾರೆ.
ದಸರಾ ನಮ್ಮ ನಾಡಿನ ಅತಿದೊಡ್ಡ ಸಾಂಸ್ಕೃತಿಕ ಸಂಭ್ರಮ. ಎಲ್ಲ ಧರ್ಮದವರು ಪಾಲ್ಗೊಳ್ಳಬಹುದು, ಆದರೆ ಮೂಲತಃ ಅದು ಹಿಂದೂ ಹಬ್ಬ. ಅದರ ದಿನಾಂಕವನ್ನು ನಿಗದಿಪಡಿಸುವುದು ಹಿಂದೂ ಪಂಚಾಂಗ. ಯಾರದೋ ಇಚ್ಛೆ-ಮನೋಭಾವಕ್ಕೆ ಅನುಗುಣವಾಗಿ ಬದಲಾಯಿಸುವ ಹಬ್ಬವಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
ನೀವು ಒಂದು ಕುಟುಂಬವನ್ನೇ ನಿಮ್ಮ ದೇವರನ್ನಾಗಿ ಮಾಡಿಕೊಂಡಿದ್ದೀರಿ. ಹೀಗಿರುವಾಗ, ದೇವಿಯ ಹಿಂದೂ ಸ್ವರೂಪವನ್ನೂ, ದಸರೆಯ ಧಾರ್ಮಿಕ ಪರಂಪರೆಯನ್ನೂ ನಿರಾಕರಿಸುವ ದುಸ್ಸಾಹಸ ಮಾಡಬೇಡಿ. ನಾವು ರಾಜಕೀಯ ಮಾಡುತ್ತಿಲ್ಲ. ನೀವು ಓಲೈಕೆ ರಾಜಕೀಯಕ್ಕಾಗಿ ನಮ್ಮ ಧರ್ಮದ ಮೇಲೆ ದಾಳಿ ಮಾಡಿದಾಗ, ಅದನ್ನು ರಕ್ಷಿಸಲು ನಾವು ಎದ್ದು ನಿಂತಿದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಗುಡುಗಿದ್ದಾರೆ.
ಚಾಮುಂಡಿ ಬೆಟ್ಟ ಎಲ್ಲ ಧರ್ಮ–ಸಮುದಾಯದವರಿಗೂ ಮುಕ್ತವಾಗಿ ತೆರೆದಿದೆ. ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ-ಧರ್ಮಗಳಲ್ಲಿದ್ದಾರೆ.
ಆದರೆ, ಚಾಮುಂಡಿ ಬೆಟ್ಟ ಒಂದು ಶಕ್ತಿಪೀಠ. ತಾಯಿ ಚಾಮುಂಡೇಶ್ವರಿ ಹಿಂದೂ ದೇವಿ – ಆಕೆಯ ಉಲ್ಲೇಖ ಹಿಂದೂ ಗ್ರಂಥವಾದ ಮಾರ್ಕಂಡೇಯ ಪುರಾಣದ ದೇವಿ ಮಹಾತ್ಮ್ಯದಲ್ಲಿದೆ; ಬೇರೆ ಧರ್ಮಗಳ… https://t.co/303zPivqnJ
— Yaduveer Wadiyar (@yaduveerwadiyar) August 27, 2025
SHOCKING: ಸಾಲ ಬಾಧೆಯಿಂದ ಬೇಸತ್ತು 4 ತಿಂಗಳ ಮಗುವಿಗೆ ವಿಶವಿಕ್ಕಿ, ತಾವು ಆತ್ಮಹತ್ಯೆಗೆ ಶರಣಾದ ದಂಪತಿ