ಮೈಸೂರು: ಜಿಲ್ಲೆಯ ಟಿ.ನರಸೀಪುರದ ವಲಯ ಅರಣ್ಯಾಧಿಕಾರಿಯಾಗಿದ್ದಂತ ಕಾಂತರಾಜ್ ಚೌಹಾಣ್ ಅವರು ಶವವಾಗಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದಾರೆ.
ಮೈಸೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಟಿ.ನರಸೀಪುರ ವಲಯ ಅರಣ್ಯಾಧಿಕಾರಿ(RFO) ಕಾಂತರಾಜ್ ಚೌಹಾಣ್ ಅವರು ಶವವಾಗಿ ಪತ್ತೆಯಾಗಿದ್ದಾರೆ. ಮೈಸೂರು ಕೇಂದ್ರ ಬಸ್ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್ ನಲ್ಲಿ ಅವರ ಶವಪತ್ತೆಯಾಗಿದೆ.
ನಿನ್ನೆ ಮಧ್ಯಾಹ್ನ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ರೂಮ್ ಬುಕ್ ಮಾಡಿಕೊಂಡು ಆರ್ ಎಫ್ ಓ ಕಾಂತರಾಜ್ ಶವ ಪತ್ತೆಯಾಗಿದೆ. ಸ್ನೇಹಿತ ಮಲ್ಲನಗೌಡ ಜೊತೆಗೆ ರೂಮ್ ಬುಕ್ ಮಾಡಿಕೊಂಡಿದ್ದರು.
15 ದಿನಗಳ ಹಿಂದಷ್ಟೇ ನರಸೀಪುರಕ್ಕೆ ಆರ್ ಎಫ್ ಓ ಆಗಿ ಕಾಂತರಾಜ್ ವರ್ಗಾವಣೆಗೊಂಡಿದ್ದರು. ಈ ಬೆನ್ನಲ್ಲೇ ಅವರು ಖಾಸಗಿ ಹೋಟೆಲ್ ನಲ್ಲಿ ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








