ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ: ಮೂವರು ಶಂಕಿತರು ದುಷ್ಕೃತ್ಯವೆಸಗಿರುವ ಶಂಕೆ, ತನಿಖೆ ಚುರುಕು

ಬೆಂಗಳೂರು: ನಗರದ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಉಂಟಾಗಿ, ಮಹಿಳೆ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಈ ಘಟನಾ ಸ್ಥಳದಲ್ಲಿ ಕೆಲವು ಐಡಿ ಕಾರ್ಡ್ ಗಳು ದೊರೆತಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಅಲ್ಲದೇ ಮೂವರು ಶಂಕಿತರು ದುಷ್ಕೃತ್ಯವೆಸಗಿರೋ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಬೆಂಗಳೂರಿನ ಕುಂದಲಹಳ್ಳಿ ಬಳಿಯಲ್ಲಿ ಇರುವಂತ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟವೊಂದು ಸಂಭವಿಸಿದೆ. ಈ ವಿಷಯ ತಿಳಿದು ಸ್ಥಳಕ್ಕೆ ವೈಟ್ ಫೀಲ್ಟ್, ಹೆಚ್ಎಎಲ್ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ. … Continue reading ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ: ಮೂವರು ಶಂಕಿತರು ದುಷ್ಕೃತ್ಯವೆಸಗಿರುವ ಶಂಕೆ, ತನಿಖೆ ಚುರುಕು