Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಪಾಕಿಸ್ತಾನದಿಂದ ಸೈಬರ್ ದಾಳಿ ಸಾಧ್ಯತೆ : ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರಿಂದ ಎಚ್ಚರಿಕೆ ಸಂದೇಶ| WATCH VIDEO

12/05/2025 8:50 AM

BIG NEWS : `ಆಪರೇಷನ್ ಸಿಂಧೂರ್’ ಮೂಲಕ 72 ಗಂಟೆಗಳಲ್ಲಿ ಪಾಕಿಸ್ತಾನದ 40 ಸೈನಿಕರ ಹತ್ಯೆ, 9 ಉಗ್ರ ನೆಲೆಗಳು ನಾಶ.!

12/05/2025 8:41 AM

ಉದ್ಯೋಗವಾರ್ತೆ : ‘IDBI’ ಬ್ಯಾಂಕ್ ನಲ್ಲಿ 675 ಹುದ್ದೆಗಳಿಗೆ ಅರ್ಜಿ ಆಹ್ವಾನ | IDBI Bank Recruitment 2025

12/05/2025 8:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ನಾಡಪ್ರಭು ಕೆಂಪೇಗೌಡ’ರು ಕನ್ನಡದ ಸ್ವತ್ತು, ಕನ್ನಡಿಗರ ಅಸ್ಮಿತೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
KARNATAKA

‘ನಾಡಪ್ರಭು ಕೆಂಪೇಗೌಡ’ರು ಕನ್ನಡದ ಸ್ವತ್ತು, ಕನ್ನಡಿಗರ ಅಸ್ಮಿತೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

By kannadanewsnow0926/06/2024 4:48 PM

ನವದೆಹಲಿ: ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು. ಕನ್ನಡಿಗರ ಅಸ್ಮಿತೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಆ ಮಹಾಪುರುಷರ ಬಗ್ಗೆ ಕಾಂಗ್ರೆಸ್ ಸರಕಾರಕ್ಕೆ ಹೃದಯದಲ್ಲಿ ಗೌರವ ಎನ್ನುವುದು ಇದ್ದರೆ ಮೊದಲು ಅವರು ಕಟ್ಟಿಸಿರುವ ಕೆರೆಗಳನ್ನು ರಕ್ಷಣೆ ಮಾಡಲಿ ಎಂದು ಅವರು ಒತ್ತಾಯಿಸಿದರು.

ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿಗಳಾದ ದೇವೇಗೌಡರು ಹಾಗೂ ನನ್ನ ಹೆಸರು ಹಾಕಿಲ್ಲ ಎನ್ನುವ ಬಗ್ಗೆ ಬೇಸರ ಇಲ್ಲ. ನಾನು ಇದ್ದಲ್ಲಿಯೇ ನಾಡಪ್ರಭುಗಳನ್ನು ಸ್ಮರಿಸಿ ಗೌರವಿಸುತ್ತೇನೆ ಎಂದರು.

ಕೆಂಪೇಗೌಡರ ಜಯಂತಿಗೆ ನನಗೆ ಆಹ್ವಾನ ಇಲ್ಲ, ಆಹ್ವಾನ ಪತ್ರಿಕೆಯಲ್ಲಿ ಹೆಸರೂ ಹಾಕಿಲ್ಲ ಎಂದು ನೀವು ಕೇಳಿದಿರಿ ಎನ್ನುವ ಕಾರಣಕ್ಕೆ ನಾನು ಮತ್ನಡಬೇಕಾಯಿತು. ನನ್ನ ಹೃದಯದಲ್ಲಿ ನಾಡಪ್ರಭುಗಳು ಇದ್ದಾರೆ. ಅವರು ಕಾರ್ಯಕ್ರಮಕ್ಕೆ ಕರೆಯದಿರುವುದಕ್ಕೆ ನನಗೆ ಬೇಸರವಿಲ್ಲ, ನಾನು ಈ ವಿಚಾರಕ್ಕೆ ಮಹತ್ವ ಕೊಡುವುದಿಲ್ಲ ಎಂದರು ಸಚಿವರು.

ನಾನು ಯಾವಾಗಲೂ ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕಿ ಎಂದು ಹೇಳುವುದಿಲ್ಲ. ಪ್ರೀತಿಯಿಂದ ಕರೆದರೆ ಹೋಗುತ್ತೇನೆ. ನಾನು ಈಗ ದೆಹಲಿಯಲ್ಲಿ ಸಂಸತ್ ಕಲಾಪದಲ್ಲಿ ಭಾಗಿಯಾಗಿದ್ದೇನೆ. ನಾಳೆಯ ದಿನ ರಾಷ್ಟ್ರಪತಿಗಳು ಸಂಸತ್ತಿನ ಜಂಟಿ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅವರು ಕರೆದಿದ್ದರೂ ಹೋಗಲು ಆಗುತ್ತಿರಲಿಲ್ಲ ಎಂದರು.

ನಾನು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆದಾಗಲೂ ಸಹ ಆ ನಗರಕ್ಕೆ ಕೊಡುಗೆ ಕೊಟ್ಟಿದ್ದೇನೆ. ಕೆಂಪೇಗೌಡರ ಹಿರಿಮೆಗೆ ಧಕ್ಕೆ ಆಗದ ರೀತಿಯಲ್ಲಿ ಕೆಲಸ ಮಾಡಿದ್ದೇನೆ. ಕೆಂಪೇಗೌಡರಿಗೆ ಯಾವ ರೀತಿ ಗೌರವ ಸಲ್ಲಿಸಬೇಕೋ ಹಾಗೆ ನಡೆದುಕೊಂಡಿದ್ದೇನೆ ಎಂದರು.

ಕೆಂಪಗೌಡರ ಜಯಂತಿಯನ್ನು ಬೇರೆ ಬೇರೆ ರೀತಿಯಲ್ಲಿ ಜನರು ಆಚರಣೆ ಮಾಡುತ್ತಾರೆ. ಸರಕಾರ ಬೇರೆ ರೀತಿಯಲ್ಲಿ ಆಚರಣೆ ಮಾಡುತ್ತದೆ. ದೇವನಹಳ್ಳಿ ಸೇರಿ ರಾಜ್ಯದ ಅನೇಕ ಭಾಗಗಳಲ್ಲಿ ಮನೆ ಮನೆಯಲ್ಲೂ ನಾಡಪ್ರಭುಗಳ ಭಾವಚಿತ್ರ ಇಟ್ಟು ಪೂಜೆ ಮಾಡಿ ಜಯಂತಿಯನ್ನು ಆಚರಣೆ ಮಾಡುತ್ತಾರೆ. ನಾನು ಸಹ ದೆಹಲಿಯಲ್ಲಿಯೇ ಕೆಂಪೇಗೌಡರನ್ನು ಸ್ಮರಣೆ ಮಾಡುತ್ತೇನೆ ಎಂದರು.

ಕೆಂಪೇಗೌಡರು ಕಟ್ಟಿಸಿದ ಕೆರೆಗಳನ್ನು ರಕ್ಷಿಸಿ

ಬೆಂಗಳೂರು ನಗರದ ಬಗ್ಗೆ ಇವತ್ತು ವಿಶ್ವದಲ್ಲೇ ಚರ್ಚೆ ಆಗುತ್ತಿದೆ. ಅದಕ್ಕೆ ಕಾರಣ ಕೆಂಪೇಗೌಡರು. ಅವರು ಕಟ್ಟಿರುವ ಕೆರೆಗಳನ್ನು ಈಗಿನ ದಿನಗಳಲ್ಲಿ ಸ್ವಾರ್ಥಕ್ಕೆ ಕೆಲವರು ನುಂಗಿದ್ದಾರೆ. ಈಗಲಾದರೂ ಆ ಕೆರೆಗಳನ್ನು ಕಾಪಾಡುವ ಕೆಲಸವನ್ನು ಸರಕಾರ ಮಾಡಬೇಕಿದೆ. ಮೇಕೆದಾಟು ಕಟ್ಟಬೇಕು, ಕುಡಿಯುವ ನೀರು ತರುತ್ತೇವೆ ಎಂದೆಲ್ಲಾ ಹೇಳುತ್ತಾರೆ. ಆದರೆ, ನಗರದ ಜಲಮೂಲಗಳಾಗಿದ್ದ ಕೆರೆಗಳನ್ನು ನುಂಗಿ ನೀರು ಕುಡಿದಿದ್ದಾರೆ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.

ಈಗಲೇ ಕುಡಿಯಲು ನೀರಿಲ್ಲದೆ ಜನರು ಬೆಂಗಳೂರಿನಲ್ಲಿ ಪರದಾಡುವ ಪರಿಸ್ಥಿತಿ ಇದೆ. 15 ವರ್ಷವಾದ ಮೇಲೆ ಬೆಂಗಳೂರಿನ ಸ್ಥಿತಿ ಏನಾಗುತ್ತದೋ ಗೊತ್ತಿಲ್ಲ. ಈ ಸರಕಾರ ನ್ಯಾಯಯುತವಾಗಿ ಕೆಂಪೇಗೌಡರ ಜಯಂತಿ ಆಚರಣೆ ಮಾಡೋದಾದರೆ ಆ ಕೆರೆಗಳನ್ನು ರಕ್ಷಣೆ ಮಾಡುವಂತಹ ಕೆಲಸ ಮಾಡಲಿ. ಮಳೆ ನೀರನ್ನು ಸರಿಯಾಗಿ ಬಳಸಿಕೊಳ್ಳುವತ್ತ ಚಿಂತನೆ ಮಾಡಲಿ. ಇಷ್ಟು ಮಾಡಿದರೆ ನಾನು ಸರಕಾರಕ್ಕೆ ಸಲ್ಯೂಟ್ ಮಾಡುತ್ತೇನೆ ಎಂದು ಕೇಂದ್ರ ಸಚಿವರು ಹೇಳಿದರು.

ಜುಲೈ 2ನೇ ವಾರದಲ್ಲಿ ಬೆಂಗಳೂರಿನ ‘ಯಲಹಂಕದ ಅನಿಲ ವಿದ್ಯುತ್ ಘಟಕ’ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್

ಪ್ರಜ್ವಲ್ ಅಶ್ಲೀಲ ವಿಡಿಯೋ ಹಂಚಿದ್ದು ಯಾರೆಂಬುದು ಮಾಹಿತಿ ಇದೆ : ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ

Share. Facebook Twitter LinkedIn WhatsApp Email

Related Posts

ALERT : ಪಾಕಿಸ್ತಾನದಿಂದ ಸೈಬರ್ ದಾಳಿ ಸಾಧ್ಯತೆ : ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರಿಂದ ಎಚ್ಚರಿಕೆ ಸಂದೇಶ| WATCH VIDEO

12/05/2025 8:50 AM1 Min Read

ALERT : ಪಾಕಿಸ್ತಾನದಿಂದ ಸೈಬರ್ ದಾಳಿ ಸಾಧ್ಯತೆ : ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಪ್ರಕಟಣೆ.!

12/05/2025 7:16 AM1 Min Read

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು.!

12/05/2025 7:09 AM1 Min Read
Recent News

ALERT : ಪಾಕಿಸ್ತಾನದಿಂದ ಸೈಬರ್ ದಾಳಿ ಸಾಧ್ಯತೆ : ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರಿಂದ ಎಚ್ಚರಿಕೆ ಸಂದೇಶ| WATCH VIDEO

12/05/2025 8:50 AM

BIG NEWS : `ಆಪರೇಷನ್ ಸಿಂಧೂರ್’ ಮೂಲಕ 72 ಗಂಟೆಗಳಲ್ಲಿ ಪಾಕಿಸ್ತಾನದ 40 ಸೈನಿಕರ ಹತ್ಯೆ, 9 ಉಗ್ರ ನೆಲೆಗಳು ನಾಶ.!

12/05/2025 8:41 AM

ಉದ್ಯೋಗವಾರ್ತೆ : ‘IDBI’ ಬ್ಯಾಂಕ್ ನಲ್ಲಿ 675 ಹುದ್ದೆಗಳಿಗೆ ಅರ್ಜಿ ಆಹ್ವಾನ | IDBI Bank Recruitment 2025

12/05/2025 8:37 AM

BIG NEWS : `ಆಪರೇಷನ್ ಸಿಂಧೂರ್ ಮೂಲಕ ಭಾರತ ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿದೆ : `DGMO’ ಪತ್ರಿಕಾಗೋಷ್ಠಿಯ 15 ಪ್ರಮುಖ ಅಂಶಗಳು ಹೀಗಿವೆ | Operation Sindoor

12/05/2025 8:29 AM
State News
KARNATAKA

ALERT : ಪಾಕಿಸ್ತಾನದಿಂದ ಸೈಬರ್ ದಾಳಿ ಸಾಧ್ಯತೆ : ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರಿಂದ ಎಚ್ಚರಿಕೆ ಸಂದೇಶ| WATCH VIDEO

By kannadanewsnow5712/05/2025 8:50 AM KARNATAKA 1 Min Read

ಬೆಂಗಳೂರು : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಪಾಕ್ ಸೈಬರ್ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್…

ALERT : ಪಾಕಿಸ್ತಾನದಿಂದ ಸೈಬರ್ ದಾಳಿ ಸಾಧ್ಯತೆ : ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಪ್ರಕಟಣೆ.!

12/05/2025 7:16 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು.!

12/05/2025 7:09 AM

BREAKING : ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ `ರಾಕೇಶ್ ಪೂಜಾರಿ’ ನಿಧನ | Rakesh Poojary passes away

12/05/2025 6:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.