Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಯಡಮನೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಶಾಸಕರಿಂದಲೇ ರೈತರಿಗೆ ದ್ರೋಹ: ಮಲ್ಲಿಕಾರ್ಜುನ ಹಕ್ರೆ ವಾಗ್ಧಾಳಿ

17/02/2026 9:06 PM

BREAKING: ರಾಜ್ಯದ ಎಲ್ಲಾ ‘ರಕ್ತ ಕೇಂದ್ರ’ಗಳು NABH ಅಥವಾ NQAS ಮಾನ್ಯತೆ ಪಡೆಯುವುದು ಕಡ್ಡಾಯ: ಆರೋಗ್ಯ ಇಲಾಖೆ ಆದೇಶ

17/02/2026 8:50 PM

ಶಿಕ್ಷಣ ಕ್ಷೇತ್ರಕ್ಕೆ ಸಿಎಸ್ಆರ್ ನಿಧಿ ಸ್ವಾಗತಾರ್ಹ: ಮದ್ದೂರು ಶಾಸಕ ಕೆ.ಎಂ.ಉದಯ್

17/02/2026 8:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಂದಿ, ಭೀಮಾ, ಕೃಷ್ಣಾ ಸಕ್ಕರೆ ಕಾರ್ಖಾನೆಗಳಿಗೆ ಹಣಕಾಸು ನೆರವು: ಸಚಿವ ಎಂ.ಬಿ ಪಾಟೀಲ್
KARNATAKA

ನಂದಿ, ಭೀಮಾ, ಕೃಷ್ಣಾ ಸಕ್ಕರೆ ಕಾರ್ಖಾನೆಗಳಿಗೆ ಹಣಕಾಸು ನೆರವು: ಸಚಿವ ಎಂ.ಬಿ ಪಾಟೀಲ್

By kannadanewsnow0905/05/2025 5:19 PM

ಬೆಂಗಳೂರು: ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿರುವ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ, ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ಇಂಡಿ ತಾಲ್ಲೂಕಿನ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಅಗತ್ಯವಿರುವ ಆರ್ಥಿಕ ನೆರವನ್ನು ಹೇಗೆ ಒದಗಿಸಬೇಕು ಎನ್ನುವ ಬಗ್ಗೆ ಸರಿಯಾದ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಯವರು ಹಣಕಾಸು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಒದಗಿಸಬೇಕಾದ ನೆರವು ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಭಾಗವಹಿಸಿದ್ದರು.

ಬಳಿಕ ಮಾತನಾಡಿದ ಸಚಿವರು, ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕ ನೆರವು ಬೇಕಾಗಿದೆ. ಅವಧಿ ಸಾಲ, ರೈತರಿಗೆ ಮಾಡಬೇಕಾದ ಹಣ ಪಾವತಿ, ಕಬ್ಬಿನ ಕಟಾವು, ಸಾಗಣೆ, ಸಕ್ಕರೆ ಮತ್ತು ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆ ವೆಚ್ಚಗಳ ಭಾರ ವಿಪರೀತವಾಗಿದೆ. ಈ ಕಾರ್ಖಾನೆಗಳಿಗೆ ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ ಅಥವಾ ಬ್ಯಾಂಕ್ ಖಾತರಿ ಮೂಲಕ ಆರ್ಥಿಕ ಸಹಾಯ ದೊರಕಿಸಿ ಕೊಡಬೇಕೆಂದು ಸಭೆಯಲ್ಲಿ ಗಮನಕ್ಕೆ ತರಲಾಯಿತು. ಈ ಬಗ್ಗೆ ನಿಗಮದ ಜತೆಗೂ ಚರ್ಚಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದರು.

ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಗೆ 192 ಕೋಟಿ ರೂಪಾಯಿ ಮತ್ತು ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಗೆ 150 ಕೋಟಿ ರೂಪಾಯಿ ಹಾಗೂ ಭೀಮಾ ಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ 130 ಕೋಟಿ ರೂಪಾಯಿ ಬೇಕಾಗಿದೆ. ಇಷ್ಟು ನೆರವು ದೊರಕಿಸಿ‌ ಕೊಟ್ಟರೆ, ವಿದ್ಯುತ್ ಉತ್ಪಾದನೆಯಿಂದ ಬರುವ ಹಣವನ್ನು ಸಾಲದ ಕಡೆಗೇ ಪಾವತಿಸಲು ಕಾರ್ಖಾನೆಗಳು ಆಸಕ್ತಿ ಹೊಂದಿವೆ ಎಂದು ಅವರು ನುಡಿದಿದ್ದಾರೆ.

ಕೃಷ್ಣಾ ಕಾರ್ಖಾನೆಯು 27 ಮೆಗಾವ್ಯಾಟ್ ಮತ್ತು ನಂದಿ ಕಾರ್ಖಾನೆಯು 37 ಮೆಗಾವ್ಯಾಟ್ ಸಾಮರ್ಥ್ಯದ ಸಹವಿದ್ಯುತ್ (ಕೋಜೆನ್) ಘಟಕ ಸ್ಥಾಪಿಸುವ ಆಸಕ್ತಿ ಹೊಂದಿವೆ. ಜೊತೆಗೆ ಕೃಷ್ಣಾ ಹಾಗೂ ಭೀಮಾ ಕಾರ್ಖಾನೆಯು ಎಥೆನಾಲ್ ಉತ್ಪಾದನಾ ಘಟಕವನ್ನೂ ಸ್ಥಾಪಿಸಲು ಮುಂದಾಗಿದೆ. ಸಹಕಾರಿ ತತ್ತ್ವದ ಮೇಲೆ ನಡೆಯುತ್ತಿರುವ ಈ ಕಾರ್ಖಾನೆಗಳ ಪುನಶ್ಚೇತನ ಸಮರ್ಪಕವಾಗಿ ನಡೆಯಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸಂಬಂಧ ಸಕ್ಕರೆ ಆಯುಕ್ತರು ಮತ್ತು ಎನ್.ಸಿ.ಡಿ.ಸಿ. ಅಧಿಕಾರಿಗಳ ಜತೆ ಸಮಗ್ರವಾಗಿ ಚರ್ಚಿಸಿ, ಸಮರ್ಪಕ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಈ ಎರಡೂ ಕಾರ್ಖಾನೆಗಳಿಗೆ ಸರಕಾರದ ಕಡೆಯಿಂದ ಸಕಾಲಿಕ ನೆರವು ಸಿಗುವಂತೆ ಮಾಡಲು ಎಲ್ಲ ಪ್ರಯತ್ನಗಳನ್ನೂ ಮಾಡಲಾಗುವುದು ಎಂದು ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಭೆಯಲ್ಲಿ ಸಚಿವರಾದ ಎಚ್ ಕೆ ಪಾಟೀಲ್, ಶಿವಾನಂದ ಪಾಟೀಲ್, ಎಚ್ ಸಿ ಮಹದೇವಪ್ಪ, ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ, ಬೀಳಗಿ ಶಾಸಕ ಜೆ ಟಿ ಪಾಟೀಲ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಹಣಕಾಸು ಇಲಾಖೆಯ ಕಾರ್ಯದರ್ಶಿ ಪಿ ಸಿ ಜಾಫರ್, ನಂದಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಕುಮಾರ ದೇಸಾಯಿ ಜೈನಾಪುರ, ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ರಾಜಗೋಪಾಲ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ವಿಶ್ವಮಾನವ ಎಕ್ಸ್ ಪ್ರೆಸ್ ಪುನರಾರಂಭ: ಹೀಗಿದೆ ಇತರ ರೈಲುಗಳ ಬದಲಾದ ವೇಳಾಪಟ್ಟಿ

BREAKING: ಭಾರತ-ಪಾಕ್ ಉದ್ವಿಗ್ನತೆಯ ನಡುವೆ 2ನೇ ಬಾರಿಗೆ ಫತಾಹ್ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕಿಸ್ತಾನ!

Share. Facebook Twitter LinkedIn WhatsApp Email

Related Posts

ಸಾಗರದ ಯಡಮನೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಶಾಸಕರಿಂದಲೇ ರೈತರಿಗೆ ದ್ರೋಹ: ಮಲ್ಲಿಕಾರ್ಜುನ ಹಕ್ರೆ ವಾಗ್ಧಾಳಿ

17/02/2026 9:06 PM2 Mins Read

BREAKING: ರಾಜ್ಯದ ಎಲ್ಲಾ ‘ರಕ್ತ ಕೇಂದ್ರ’ಗಳು NABH ಅಥವಾ NQAS ಮಾನ್ಯತೆ ಪಡೆಯುವುದು ಕಡ್ಡಾಯ: ಆರೋಗ್ಯ ಇಲಾಖೆ ಆದೇಶ

17/02/2026 8:50 PM2 Mins Read

ಶಿಕ್ಷಣ ಕ್ಷೇತ್ರಕ್ಕೆ ಸಿಎಸ್ಆರ್ ನಿಧಿ ಸ್ವಾಗತಾರ್ಹ: ಮದ್ದೂರು ಶಾಸಕ ಕೆ.ಎಂ.ಉದಯ್

17/02/2026 8:36 PM1 Min Read
Recent News

ಸಾಗರದ ಯಡಮನೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಶಾಸಕರಿಂದಲೇ ರೈತರಿಗೆ ದ್ರೋಹ: ಮಲ್ಲಿಕಾರ್ಜುನ ಹಕ್ರೆ ವಾಗ್ಧಾಳಿ

17/02/2026 9:06 PM

BREAKING: ರಾಜ್ಯದ ಎಲ್ಲಾ ‘ರಕ್ತ ಕೇಂದ್ರ’ಗಳು NABH ಅಥವಾ NQAS ಮಾನ್ಯತೆ ಪಡೆಯುವುದು ಕಡ್ಡಾಯ: ಆರೋಗ್ಯ ಇಲಾಖೆ ಆದೇಶ

17/02/2026 8:50 PM

ಶಿಕ್ಷಣ ಕ್ಷೇತ್ರಕ್ಕೆ ಸಿಎಸ್ಆರ್ ನಿಧಿ ಸ್ವಾಗತಾರ್ಹ: ಮದ್ದೂರು ಶಾಸಕ ಕೆ.ಎಂ.ಉದಯ್

17/02/2026 8:36 PM

ನೀರಾವರಿ ಯೋಜನೆಗಳಿಗೆ ಅಗತ್ಯ ಸಹಕಾರ ನೀಡಿ: ಮದ್ದೂರು ಶಾಸಕ ಕೆ.ಎಂ.ಉದಯ್

17/02/2026 8:34 PM
State News
KARNATAKA

ಸಾಗರದ ಯಡಮನೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಶಾಸಕರಿಂದಲೇ ರೈತರಿಗೆ ದ್ರೋಹ: ಮಲ್ಲಿಕಾರ್ಜುನ ಹಕ್ರೆ ವಾಗ್ಧಾಳಿ

By kannadanewsnow0917/02/2026 9:06 PM KARNATAKA 2 Mins Read

ಶಿವಮೊಗ್ಗ : ಸಾಗರ ತಾಲೂಕಿನ ಯಡಮನೆ ರೈತರನ್ನು ಒಕ್ಕಲೆಬ್ಬಿಸುವ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ರೈತರಿಗೆ ದ್ರೋಹ ಬಗೆದಿದ್ದಾರೆ…

BREAKING: ರಾಜ್ಯದ ಎಲ್ಲಾ ‘ರಕ್ತ ಕೇಂದ್ರ’ಗಳು NABH ಅಥವಾ NQAS ಮಾನ್ಯತೆ ಪಡೆಯುವುದು ಕಡ್ಡಾಯ: ಆರೋಗ್ಯ ಇಲಾಖೆ ಆದೇಶ

17/02/2026 8:50 PM

ಶಿಕ್ಷಣ ಕ್ಷೇತ್ರಕ್ಕೆ ಸಿಎಸ್ಆರ್ ನಿಧಿ ಸ್ವಾಗತಾರ್ಹ: ಮದ್ದೂರು ಶಾಸಕ ಕೆ.ಎಂ.ಉದಯ್

17/02/2026 8:36 PM

ನೀರಾವರಿ ಯೋಜನೆಗಳಿಗೆ ಅಗತ್ಯ ಸಹಕಾರ ನೀಡಿ: ಮದ್ದೂರು ಶಾಸಕ ಕೆ.ಎಂ.ಉದಯ್

17/02/2026 8:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.