ಬೆಂಗಳೂರು : ರಾಜ್ಯದಲ್ಲಿ ಕೆಎಂಎಫ್ ನಂದಿನಿ ಹಾಲಿ ದರ ಪ್ರತಿ ಲೀಟರ್‌ ಗೆ 2.10 ರೂ ಹೆಚ್ಚಳ ಮಾಡಲಾಗಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಂದಿನ ಹಾಲಿನ ದರವನ್ನು ರಾಜ್ಯ ಸರ್ಕಾರ ಏರಿಕೆ ಮಾಡಿಲ್ಲ. ಹಾಲಿನ ದರವನ್ನು ಏರಿಕೆ ಮಾಡುವುದು ಕೆಎಂಎಫ್‌. ದರ ಏರಿಕೆ ಕುರಿತು ಕೆ.ಎಂ. ಎಫ್. ತೀರ್ಮಾನಿಸುತ್ತದೆ. ನೆರೆಯ ರಾಜ್ಯಗಳ ದರಕ್ಕೆ ಅನುಗುಣವಾಗಿ ಏರಿಕೆ ಮಾಡಲು ತೀರ್ಮಾನಿಸಿರಬಹುದು. ಈ ಬಗ್ಗೆ ಕೂಡಲೇ ಮಾಹಿತಿ ಪಡೆಯುವುದಾಗಿ ಹೇಳಿದ್ದಾರೆ.

ಮಂಡ್ಯದಲ್ಲಿ ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್‌ 20 ರಿಂದ ಮೂರು ದಿನಗಳವರೆಗೆ ನಡೆಸಲು ನಿರ್ಧರಿಸಲಾಗಿದೆ. ಬರದ ಹಿನ್ನೆಲೆಯಲ್ಲಿ ಕಳೆದ ವರ್ಷ ಮಂಡ್ಯದಲ್ಲಿ ನಡೆಯಬೇಕಿದ್ದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತು ಮುಂದೂಡಿತ್ತು. ಇದೀಗ ಡಿಸೆಂಬರ್‌ 20 ರಿಂದ ಮೂರು ದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ

Share.
Exit mobile version