Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪಾಕ್ ಹೈಕಮಿಷನ್ ಅಧಿಕಾರಿಗೆ ‘ಪರ್ಸನಾ ನಾನ್ ಗ್ರಾಟಾ’ ಘೋಷಿಸಿದ ಭಾರತ: 24 ಗಂಟೆಗಳಲ್ಲಿ ದೇಶ ತೊರೆಯಲು ಆದೇಶ

13/05/2025 8:53 PM

BREAKING : ಹಾವೇರಿಯಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು!

13/05/2025 8:50 PM

ಚಿಪ್ ಒಳಗೊಂಡ ‘ಇ-ಪಾಸ್ ಪೋರ್ಟ್ ಸೇವೆ’ ಆರಂಭಿಸಿದ ಭಾರತ | India E-Passport

13/05/2025 8:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರಾಹುಲ್ ಗಾಂಧಿ’ ವಿರುದ್ಧ ಸಿಡೆದೆದ್ದ ‘ಛಲವಾಧಿ ನಾರಾಯಣಸ್ವಾಮಿ’: ‘ಕಾಂಗ್ರೆಸ್’ ವಿರುದ್ಧ ಹೋರಾಟಕ್ಕೆ ಜನರಿಗೆ ಕರೆ
KARNATAKA

‘ರಾಹುಲ್ ಗಾಂಧಿ’ ವಿರುದ್ಧ ಸಿಡೆದೆದ್ದ ‘ಛಲವಾಧಿ ನಾರಾಯಣಸ್ವಾಮಿ’: ‘ಕಾಂಗ್ರೆಸ್’ ವಿರುದ್ಧ ಹೋರಾಟಕ್ಕೆ ಜನರಿಗೆ ಕರೆ

By kannadanewsnow0911/09/2024 4:32 PM

ಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಅಮೆರಿಕದಲ್ಲಿದ್ದು ಮೀಸಲಾತಿ ರದ್ದು ಮಾಡುವ ಹೇಳಿಕೆ ಕೊಟ್ಟಿದ್ದಾರೆ. ಅವರ ಹೇಳಿಕೆಯಿಂದ ದೇಶಾದ್ಯಂತ ವಿರೋಧ ಪಕ್ಷಗಳು, ದಲಿತ ಸಮುದಾಯಗಳು ಕುಪಿತಗೊಂಡಿವೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು.

ವಿಧಾನಸೌಧದ 1ನೇ ಮಹಡಿ, ಕೊಠಡಿ ಸಂಖ್ಯೆ 155ರಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರು ಈಗ ರಾಹುಲ್ ಅವರ ಹೇಳಿಕೆಗೆ ಉತ್ತರ ಕೊಡಲಾಗದೆ ತೇಪೆ ಹಾಕುವ ಕೆಲಸ ಮಾಡುತ್ತಿದ್ದಾರೆ. ದೇಶದ ಪ್ರಥಮ ಪ್ರಧಾನಿ ನೆಹರೂ ಅವರು ಆ ಕಾಲದಲ್ಲೇ ಇದನ್ನು ಹೇಳಿದ್ದರು. ಮೀಸಲಾತಿ ಸರಿಯಾದ ಕ್ರಮ ಅಲ್ಲ; ಇದೊಂದು ಅನಿಷ್ಟ. ಇದರಿಂದ ದೇಶ ಉದ್ಧಾರವಾಗದು. ಇದರ ಬಗ್ಗೆ ನನಗೆ ಒಲವಿಲ್ಲ ಎಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು ಎಂದು ವಿವರಿಸಿದರು. ಈ ಪತ್ರದ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಕೂಡ ಸದನದಲ್ಲಿ ಪ್ರಸ್ತಾಪ ಮಾಡಿ ಪತ್ರ ಪ್ರದರ್ಶನ ಮಾಡಿದ್ದರು ಎಂದರು.

ಮೀಸಲಾತಿ ವಿಚಾರದಲ್ಲಿ ನೆಹರೂ ಅವರ ಮನೋಭಾವವನ್ನೇ ರಾಹುಲ್ ಅವರೂ ಪ್ರಸ್ತಾಪ ಮಾಡಿದ್ದಾರೆ. ಕಾಂಗ್ರೆಸ್ ದಲಿತ ವಿರೋಧಿ. ಕಾಂಗ್ರೆಸ್ಸಿಗರು ಹೇಳೋದೊಂದು ಮಾಡೋದೊಂದು. ಮೀಸಲಾತಿಗೆ ವಿರುದ್ಧವಾಗಿಯೇ ಇದ್ದಾರೆ. ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಇವರು ಓಲೈಕೆ ಮಾಡಿ ಈ ರೀತಿ ಮಾಡುತ್ತಿದ್ದರು ಎಂದು ಟೀಕಿಸಿದರು.

ಕರ್ನಾಟಕದಲ್ಲಿ ದಲಿತರ ಹಣವನ್ನು ಬೇರೆಡೆಗೆ ವರ್ಗಾಯಿಸಿದ್ದಾರೆ. ದಲಿತರ ಹಣ ಲೂಟಿ ಮಾಡಿದ್ದು ದೊಡ್ಡ ಸುದ್ದಿಯಾಗಿ ಇವತ್ತು ಜನರ ಮಧ್ಯದಲ್ಲಿದೆ ಎಂದು ವಿಶ್ಲೇಷಿಸಿದರು. ಕಾಂಗ್ರೆಸ್ಸಿನ ದಲಿತ ವಿರೋಧಿ, ಮೀಸಲಾತಿ ವಿರೋಧಿ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳಿ ಎಂದು ಜನರಲ್ಲಿ ಮನವಿ ಮಾಡಿದರು.

ರಾಹುಲ್ ಗಾಂಧಿಯವರಿಗೆ ಸರಿಯಾದ ಪಾಠ ಕಲಿಸಬೇಕಿದೆ. ಈ ಕಾಂಗ್ರೆಸ್ಸಿಗೂ ಬುದ್ಧಿ ಕಲಿಸಬೇಕಾಗಿದೆ ಎಂದ ಅವರು, ರಾಹುಲ್ ಗಾಂಧಿಯವರು ಮಾನಸಿಕ ಅಸ್ವಸ್ಥರಂತೆ ಭಾರತ ದೇಶದ ಮಾನಹಾನಿ ಮಾಡುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆಗಿಂದಾಗ್ಗೆ ಭಾರತ ದೇಶದ ಮಾನಹಾನಿ ಮಾಡುವುದನ್ನು ನಾವು ಗಮನಿಸುತ್ತಿದ್ದೇವೆ ಎಂದು ಹೇಳಿದರು.

ಈ ದೇಶದ ಮಣ್ಣಿನಿಂದ ಹೊರಗಡೆ ಹೋದ ತಕ್ಷಣ ಭಾರತವನ್ನು ಅಪಮಾನ ಮಾಡುತ್ತ ಇರುತ್ತಾರೆ. ಇವತ್ತೂ ಅದನ್ನು ಮುಂದುವರೆಸಿದ್ದಾರೆ. ನಾವು ಈ ದೇಶವನ್ನು ತಾಯಿಗೆ ಹೋಲಿಸಿ ಭಾರತ್ ಮಾತಾ ಕೀ ಜೈ ಎನ್ನುತ್ತೇವೆ. ಭಾರತಾಂಬೆಯ ಕುರಿತ ರಾಹುಲ್ ಅವರ ಹೇಳಿಕೆ ಪೀಡಕ ಎಂದರೆ, ಸ್ಯಾಡಿಸ್ಟ್ ಮನೋಭಾವದಿಂದ ಕೂಡಿದೆ ಎಂದು ಟೀಕಿಸಿದರು. ತಾಯಿಯನ್ನು ವಿವಸ್ತ್ರಗೊಳಿಸುವಂಥ ಮಾತು ಅವರದು ಎಂದು ಆಕ್ಷೇಪಿಸಿದರು. ಈ ಮಾತು ಹೇಳಲು ನೋವಾಗುತ್ತದೆ ಎಂದರು.

ಇವರು ವಿರೋಧ ಪಕ್ಷದ ನಾಯಕರಾಗಲು ಯೋಗ್ಯರೇ? ಇವರಿಗೆ ಎಂಥ ಪಾಠ ಕಲಿಸಬೇಕು ಎಂದು ಪ್ರಶ್ನಿಸಿದರು. 2014, 2029ರಲ್ಲಿ ಅಧಿಕೃತ ವಿಪಕ್ಷ ಸ್ಥಾನ ಇರದ ಕಾರಣ ರಾಹುಲ್ ಅವರು ವಿಪಕ್ಷ ನಾಯಕರಾಗಲಿಲ್ಲ. ಈ ಬಾರಿ ಅಧಿಕೃತ ವಿಪಕ್ಷ ಸ್ಥಾನ ಸಿಕ್ಕಿದಾಗ ಬೇರೆಲ್ಲರನ್ನೂ ಬದಿಗೆ ಸರಿಸಿ ವಿಪಕ್ಷ ನಾಯಕರಾಗಿದ್ದಾರೆ. ಆದರೆ, ಅವರು ಈ ಸ್ಥಾನಕ್ಕೆ ಅರ್ಹರಲ್ಲ ಎಂದು ತಿಳಿಸಿದರು.

ವಿದೇಶಕ್ಕೆ ಹೋಗಿ ದೇಶದ ಅಪಮಾನ ಮಾಡುವುದು, ಕೆಟ್ಟದಾಗಿ ನಡೆದುಕೊಳ್ಳುವುದು ಎಷ್ಟು ಸರಿ ಎಂದು ಕೇಳಿದರು. ವಿಪಕ್ಷ ನಾಯಕನಾಗಿ ದೇಶದೊಳಗಡೆ ತಪ್ಪುಗಳನ್ನು ಹೇಳಬೇಕಿತ್ತು. ನೀವು ಹೊರದೇಶದಲ್ಲಿ ಭಾರತದ ಅವಮಾನ ಮಾಡುವುದು ಸರಿಯೇ ಎಂದು ಕೇಳಿದರು.

ಮೀಸಲಾತಿ ಯಾವ ಕಾರಣಕ್ಕೆ ಬಂದಿದೆ? ಬಡತನ ಎಂದರೇನು ಎಂಬುದು ನಿಮಗೆ ಗೊತ್ತಿದೆಯೇ? ಎಂದು ಕೇಳಿದ ಅವರು, ನೀವೆಲ್ಲರೂ ಶ್ರೀಮಂತಿಕೆಯಿಂದ ಮೆರೆಯುತ್ತಿದ್ದೀರಿ. ಬಡವರ ಬಗ್ಗೆ ಚಿಂತನೆ ಬಿಟ್ಟು, ಅವರ ಶ್ರೇಯೋಭಿವೃದ್ಧಿ ಬಯಸುವುದು ಬಿಟ್ಟು ಮೀಸಲಾತಿ ತೆಗೆಯುವುದಾದರೆ ನಿಮ್ಮ ಕಾಂಗ್ರೆಸ್ ಪಕ್ಷವು ಈ ದೇಶದಿಂದಲೇ ಹೋಗಲಿದೆ ಎಂದು ವಿಶ್ವಾಸದಿಂದ ನುಡಿದರು. ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ನಾವು ಜನರನ್ನು ಸಜ್ಜುಗೊಳಿಸುತ್ತೇವೆ ಎಂದು ಪ್ರಕಟಿಸಿದರು.

ಗುಲ್ಬರ್ಗದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಎಲ್ಲ ಕೆಟ್ಟ ಪರಂಪರೆಯ ಕಥೆಗಳೂ ಅಲ್ಲಿಂದ ಆರಂಭ ಆಗುತ್ತಿವೆ. ಜೊತೆಗೆ ನಿನ್ನೆ ಹನಿಟ್ರ್ಯಾಪ್ ಒಂದು ಕೇಳಿಬಂದಿದೆ. ಈಗ 6 ಜನರನ್ನು ಬಂಧಿಸಿದ್ದು, ಇದರ ಹಿಂದೆ ಬಹಳ ಜನರಿದ್ದಾರೆ. ಪ್ರಿಯಾಂಕ್ ಖರ್ಗೆಗೆ ಕೆಟ್ಟ ಹೆಸರು ಬಾರದಂತೆ ಶರಣಾಗತಿ ಆಗುತ್ತಿರುವುದಾಗಿ ಹೇಳುತ್ತಿದ್ದಾರೆ. ನಾವ್ಯಾರೂ ಪ್ರಿಯಾಂಕ್ ಖರ್ಗೆಯವರ ಹೆಸರು ಹೇಳಿಲ್ಲ. ಆದರೆ, ನೀವ್ಯಾಕೆ ಅವರ ಹೆಸರು ಹೇಳುತ್ತೀರಿ? ಏನಿದೆ ಇದರ ಹಿಂದೆ? ಎಂದು ಕೇಳಿದರು.

ಇದರ ಹಿಂದೆ ಏನೋ ಇದ್ದಂತೆ ಅನಿಸುತ್ತಿದೆ ಎಂದರು. ಎಸ್‍ಐಟಿಗೆ ಕೊಟ್ಟರೆ ಇರಬೇಕಾದವರ ಹೆಸರು ಇರುವುದಿಲ್ಲ. ಆದ್ದರಿಂದ ಇದನ್ನು ಸಿಬಿಐಗೆ ಕೊಡಬೇಕೆಂದು ಎಲ್ಲರಿಗೂ ಅನಿಸುವಂತಾಗಿದೆ. ಸರಕಾರ ಇದನ್ನು ಸಿಬಿಐ ತನಿಖೆಗೆ ಕೊಡಬೇಕೆಂದು ಒತ್ತಾಯಿಸಿದರು.

ವಿಧಾನಪರಿಷತ್ ಸದಸ್ಯ ಕೇಶವ್ ಪ್ರಸಾದ್ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ರಾಜ್ಯದ ಮಹಿಳೆಯರ ಗಮನಕ್ಕೆ: ಪ್ರೋತ್ಸಾಹಧನ, ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

BREAKING: ಪ್ರೀತಿಸಿದ ಯುವತಿಗೆ ಬ್ಲ್ಯಾಕ್ ಮೇಲ್: ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ದೂರು ದಾಖಲು | Serial Actor Varun Aaradhya

ಕೇಂದ್ರ ಸರ್ಕಾರದಿಂದ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ ಸೌಲಭ್ಯ : ಈ ದಾಖಲೆಗಳಿದ್ರೆ ಕೂಡಲೇ ಅರ್ಜಿ ಸಲ್ಲಿಸಿ!

Share. Facebook Twitter LinkedIn WhatsApp Email

Related Posts

BREAKING : ಹಾವೇರಿಯಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು!

13/05/2025 8:50 PM1 Min Read

BREAKING : ರಾಜ್ಯದಲ್ಲಿ ಇಂದು ಒಂದೇ ದಿನ ಸಿಡಿಲಿಗೆ 8 ಜನರು ಬಲಿ!

13/05/2025 8:33 PM2 Mins Read

ಈ ಐದು ನಿಯಮ ಪಾಲಿಸಿದರೆ ನಿಮ್ಮ ಆದಾಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ

13/05/2025 8:27 PM3 Mins Read
Recent News

BREAKING: ಪಾಕ್ ಹೈಕಮಿಷನ್ ಅಧಿಕಾರಿಗೆ ‘ಪರ್ಸನಾ ನಾನ್ ಗ್ರಾಟಾ’ ಘೋಷಿಸಿದ ಭಾರತ: 24 ಗಂಟೆಗಳಲ್ಲಿ ದೇಶ ತೊರೆಯಲು ಆದೇಶ

13/05/2025 8:53 PM

BREAKING : ಹಾವೇರಿಯಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು!

13/05/2025 8:50 PM

ಚಿಪ್ ಒಳಗೊಂಡ ‘ಇ-ಪಾಸ್ ಪೋರ್ಟ್ ಸೇವೆ’ ಆರಂಭಿಸಿದ ಭಾರತ | India E-Passport

13/05/2025 8:41 PM

ಬೃಹತ್‌ ಕೈಗಾರಿಕೆ, ಉಕ್ಕು ಸಚಿವಾಲಯ ಪ್ರಗತಿ ಪರಿಶೀಲನೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ

13/05/2025 8:35 PM
State News
KARNATAKA

BREAKING : ಹಾವೇರಿಯಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು!

By kannadanewsnow0513/05/2025 8:50 PM KARNATAKA 1 Min Read

ಹಾವೇರಿ : ಹಾವೇರಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಕೆರೆಯಲ್ಲಿ ಈಜಲು ತೆರಳಿದ್ದಂತ ಇಬ್ಬರು ಯುವಕರು ನೀರಲ್ಲಿ ಮುಳುಗಿ ಧಾರುಣವಾಗಿ ಸಾವನ್ನಪ್ಪಿರುವಂತ…

BREAKING : ರಾಜ್ಯದಲ್ಲಿ ಇಂದು ಒಂದೇ ದಿನ ಸಿಡಿಲಿಗೆ 8 ಜನರು ಬಲಿ!

13/05/2025 8:33 PM

ಈ ಐದು ನಿಯಮ ಪಾಲಿಸಿದರೆ ನಿಮ್ಮ ಆದಾಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ

13/05/2025 8:27 PM

ಮನೆ ಬದಲಿಸಿದ್ದೀರಾ.? ಆ ಮನೆಗೂ ಗೃಹಜ್ಯೋತಿ ಸೌಲಭ್ಯ ಪಡೆಯಲು ಅವಕಾಶವಿದೆ, ಜಸ್ಟ್ ಹೀಗೆ ಮಾಡಿ | Gruha Jyothi Scheme

13/05/2025 7:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.