Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಹಮದಾಬಾದ್ ಬಳಿಕ ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆ ವಿಮಾನ ಪತನ : ಓರ್ವ ಪೈಲಟ್ ಸಾವು!

09/07/2025 1:59 PM

BREAKING : ರಾಜ್ಯದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಬಂಧಿತ ಮೂವರು 6 ದಿನ ‘NIA’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

09/07/2025 1:52 PM

ಮನೆಯಲ್ಲಿ ‘ಜಿರಳೆ’ ಕಾಟ ಹೆಚ್ಚಗಿದ್ಯಾ.? ಜಸ್ಟ್ ಹೀಗೆ ಓಡಿಸಿ!

09/07/2025 1:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನರೇಂದ್ರ ಮೋದಿಯವರು ಒಬ್ಬ ಒಳ್ಳೆಯ ನಾಟಕಕಾರ, ಇವೆಂಟ್ ಮ್ಯಾನೇಜರ್ ಅಷ್ಟೇ: ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ
KARNATAKA

ನರೇಂದ್ರ ಮೋದಿಯವರು ಒಬ್ಬ ಒಳ್ಳೆಯ ನಾಟಕಕಾರ, ಇವೆಂಟ್ ಮ್ಯಾನೇಜರ್ ಅಷ್ಟೇ: ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ

By kannadanewsnow0703/05/2024 6:25 PM

ಕಾರವಾರ: ನರೇಂದ್ರ ಮೋದಿ ಒಬ್ಬ ಒಳ್ಳೆಯ ನಾಟಕಕಾರ. ಇವೆಂಟ್ ಮ್ಯಾನೇಜರ್ ಆಗಿದ್ದಾರೆ. ಉತ್ತರಕನ್ನಡ ಲೋಕಸಭಾ ಚುನಾವಣೆಯಲ್ಲಿ ಬದಲಾವಣೆಯ ಗಾಳಿ ಜೋರಾಗಿ ಬೀಸುತ್ತಿದೆ. ಹೊಸ ಬದಲಾವಣೆಗೆ ಉತ್ತಮ ಅವಕಾಶ ಒದಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.

ಇಂದು ಕುಮುಟಾದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.

ಪ್ರಧಾನಿ ಕುರ್ಚಿಯಲ್ಲಿ ಉಳಿಯಲು ಯೋಗ್ಯತೆ ಇಲ್ಲ : ಬಿಜೆಪಿ ಮಹಿಳೆಯರಿಗೆ ರಕ್ಷಣೆ ಕೊಡುತ್ತದೆ ಎಂದು ಹೇಳುವ ಮೋದಿಯವರ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಏನು ಮಾಡಿದ್ದಾರೆ ಎಂದು ಜಗಜ್ಜಾಹೀರಾಗಿದೆ. ಇದು ತಿಳಿದಿದ್ದರೂ ಕೂಡ ಹೊಂದಾಣಿಕೆ ಮಾಡಿಕೊಂಡು ಅತ್ಯಾಚಾರ ಮಾಡಿರುವ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಕೊಟ್ಟಿದ್ದೀರಲ್ಲಾ? ಇದೇನಾ ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡುವ ರೀತಿ ? ಅತ್ಯಾಚಾರಿಗಳಿಗೆ ರಕ್ಷಣೆ ಕೊಟ್ಟು, ಹೆಣ್ಣು ಮಕ್ಕಳಿಗೆ ಏನು ಸಂದೇಶ ನೀಡಿದ್ದೀರಿ ಎಂದು ಇಡೀ ರಾಜ್ಯದ ಜನ ಕೇಳುತ್ತಿದ್ದಾರೆ ಎಂದರು.

ಮೋದಿ ಬರೀ ಸುಳ್ಳು ಹೇಳುತ್ತಾರೆ. ಯಾವ ಭರವಸೆಗಳನ್ನು ಈಡೇರಿಸುವ ಪ್ರಯತ್ನ ಮಾಡಿಲ್ಲ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿಲ್ಲದ ಮೇಲೆ ಅವರು ಪ್ರಧಾನಿ ಕುರ್ಚಿಯಲ್ಲಿ ಉಳಿಯಲು ಯೋಗ್ಯತೆ ಇಲ್ಲ ಎನ್ನಬೇಕಾಗುತ್ತದೆ ಎಂದರು.

ಬಾರಿ ಬದಲಾವಣೆ ತೆರೆಯಲು ನಿಮಗೆ ಅವಕಾಶ ದೊರೆತಿದೆ :  ಹತ್ತು ವರ್ಷಗಳ ಕಾಲ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ಬಡವರಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಲಿಲ್ಲ. ಅವರ ಕಷ್ಟ ಸುಖ ಏನೆಂದು ಕೇಳಲಿಲ್ಲ. ಕರ್ನಾಟಕದಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೆ ಡಬಲ್ ಇಂಜಿನ್ ಸರ್ಕಾರವಾಗುತ್ತದೆ ಎಂದಿದ್ದರು. ಬಿಜೆಪಿ ಸರ್ಕಾರ 3 ವರ್ಷ ಹತ್ತು ತಿಂಗಳು ಲೂಟಿ ಮಾಡಿದ್ದು ಬಿಟ್ಟರೆ ಬಡವರು, ರೈತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಏನೂ ಕೆಲಸ ಮಾಡಲಿಲ್ಲ ಎಂದರು.

ನಮ್ಮ ಪಕ್ಷದ ಅಭ್ಯರ್ಥಿಗೆ ಈ ಬಾರಿ ಜನತೆ ಆಶೀರ್ವಾದ ಮಾಡುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಹಿಂದೆಲ್ಲಾ ಈ ಕ್ಷೇತ್ರದಿಂದ ಬಿಜೆಪಿಯನ್ನು ಗೆಲ್ಲಿಸಿದ್ದೀರಿ. ಒಮ್ಮೆ ಮಾರ್ಗರೇಟ್ ಆಳ್ವ ಅವರು ಸಂಸದರಾಗಿದ್ದರು. ಈ ಬಾರಿ ಬದಲಾವಣೆ ತೆರೆಯಲು ನಿಮಗೆ ಒಳ್ಳೆಯ ಅವಕಾಶ ದೊರೆತಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಬದಲಾವಣೆಗೆ ಕಾರಣರಾಗಿ ಎಂದರು.

40% ಸರ್ಕಾರದ ಆರೋಪಕ್ಕೆ ಮೋದಿ ಪ್ರತಿಕ್ರಿಯೆ ನೀಡಲಿಲ್ಲ: ಕರ್ನಾಟಕದಲ್ಲಿ ಲೂಟಿ ಹೊಡೆಯುವ ಗ್ಯಾಂಗ್ ಇದೆ ಎಂದು ನರೇಂದ್ರ ಮೋದಿ ಹೇಳುತ್ತಾರೆ . ಬಿಜೆಪಿ ಸರ್ಕಾರವನ್ನು ಗುತ್ತಿಗೆದಾರರ ಸಂಘ 40% ಸರ್ಕಾರ ಎಂದು ಆರೋಪಿಸಿದಾಗ ಮೋದಿಯವರು ಪ್ರತಿಕ್ರಿಯೆ ನೀಡಲಿಲ್ಲ. 40% ಸರ್ಕಾರ ಎಂದು ಜನ ಹೇಳುವಾಗಲೂ ಸುಮ್ಮನೆ ಸಹಿಸಿಕೊಂಡು ಇದ್ದಿರಿ. ಅದರ ಅರ್ಥ ಭ್ರಷ್ಟಾಚಾರವನ್ನು ಸಹಿಸಿಕೊಂಡಿರಿ. ಭ್ರಷ್ಟರನ್ನು ಸರ್ಕಾರಕ್ಕೆ ಸೇರ್ಪಡೆ ಗೊಳಿಸುತ್ತಿದ್ದೀರಿ ಎಂದು ವ್ಯಂಗ್ಯವಾಡಿದರು.‌

ಬಡವರ ಬದುಕು ದುಸ್ತರ ಮಾಡಿದರು : ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿದರು. ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡುವುದಾಗಿ ಹೇಳಿದರು, ಯಾವುದೂ ಕಡಿಮೆ ಆಗಲಿಲ್ಲ. ರೈತರ , ಬಡವರ ಜೀವನ ಅತ್ಯಂತ ಸುಲಭ ಮಾಡುತ್ತೇನೆ ಎಂದರು. ಇಲ್ಲಿಯವರೆಗೆ ಅದನ್ನು ಮಾಡಲಿಲ್ಲ ಎಂದರು. ಜನರನ್ನು ಭ್ರಮಾಲೋಕದಲ್ಲಿ ತೇಲಾಡುವಂತೆ ಮಾಡಿ ದೇಶದಲ್ಲಿ ಯಾವ ಭರವಸೆಯನ್ನೂ ಈಡೇರಿಸಲಿಲ್ಲ. ಭಾವನಾತ್ಮಕ ವಿಚಾರಗಳನ್ನು ಪ್ರಸ್ತಾಪ ಮಾಡಿ, ಭಾವನೆಗಳನ್ನು ಕೆರಳಿಸಿದರು. ಜನರ ಕಷ್ಟಗಳಿಗೆ ಪರಿಹಾರ ಕೊಡಲಿಲ್ಲ. ಹಾಗಾಗಿ ಬಡವರ ಬದುಕು ದುಸ್ತರವಾಯಿತು.

ಸುಳ್ಳು ಹೇಳಿ ಕಾಂಗ್ರೆಸ್ ಎಂದೂ ಮತ ಕೇಳುವುದಿಲ್ಲ : ರಾಜ್ಯದಲ್ಲಿ ಜನರ ಜೀವನ ಸುಧಾರಣೆ ಮಾಡುವ ಸಲುವಾಗಿ ಐದು ಗ್ಯಾರಂಟಿಗಳನ್ನು ಜಾರಿ ಮಾಡಲಾಯಿತು. ಶಕ್ತಿ ಯೋಜನೆಯಡಿ 200 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನ ಪ್ರಶಂಸಿದ್ದಾರೆ. ರಾಜ್ಯದ ಜನರಿಗೆ ಅಕ್ಕಿ ಪೂರೈಸಲು ಕೇಂದ್ರ ಒಪ್ಪದೇ, ರಾಜ್ಯದ ಬಡವರಿಗೆ ಅನ್ಯಾಯ ಮಾಡಿದರು. ಆದ್ದರಿಂದ ರಾಜ್ಯ ಸರ್ಕಾರ 5 ಕೆಜಿ ಅಕ್ಕಿಯ ಬದಲು 170 ರೂ. ನೀಡುತ್ತಿದೆ. 1.60 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಿಂದ ಲಾಭವಾಗಿದೆ. 1.20 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಜಾರಿ ಮಾಡಲಾಗಿದೆ. ನಿರುದ್ಯೋಗಿ ಯುವಜನತೆಗೆ ಯುವನಿಧಿ ಯೋಜನೆಯನ್ನು ನೀಡಲಾಗಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಸುಳ್ಳು ಹೇಳಿ ಮತ ಕೇಳುವ ಕೆಲಸವನ್ನು ಕಾಂಗ್ರೆಸ್ ಎಂದೂ ಮಾಡಿಲ್ಲ. ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕಾಗಿ ಜನರಿಗೆ ಕರೆ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ರಾಜ್ಯಪಾಲರಾದ ಶ್ರೀಮತಿ ಮಾರ್ಗರೇಟ್ ಆಳ್ವಾ, ಮಾಜಿ ಸಚಿವ ಆರ್. ವಿ . ದೇಶಪಾಂಡೆ, ಸಚಿವ ಮಾಂಕಾಳ ವೈದ್ಯ, ರಮಾನಾಥ್ ರೈ, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಶಾಸಕ ಭೀಮಣ್ಣ ನಾಯಕ್, ಸತೀಶ್ , ಮಾಜಿ ಶಾಸಕರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Narendra Modi is a good dramatist only an event manager: Siddaramaiah
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಬಂಧಿತ ಮೂವರು 6 ದಿನ ‘NIA’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

09/07/2025 1:52 PM2 Mins Read

ಮನೆಯಲ್ಲಿ ‘ಜಿರಳೆ’ ಕಾಟ ಹೆಚ್ಚಗಿದ್ಯಾ.? ಜಸ್ಟ್ ಹೀಗೆ ಓಡಿಸಿ!

09/07/2025 1:36 PM1 Min Read

BREAKING : ಬೆಂಗಳೂರಲ್ಲಿ ಶಾಪಿಂಗ್ ಹೋಗಿದ್ದಕ್ಕೆ, ಕಾಲಿನಿಂದ ಪತ್ನಿಯ ಕುತ್ತಿಗೆ ತುಳಿದು ಹತ್ಯೆಗೈದ ಪಾಪಿ ಪತಿ!

09/07/2025 12:56 PM1 Min Read
Recent News

BREAKING : ಅಹಮದಾಬಾದ್ ಬಳಿಕ ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆ ವಿಮಾನ ಪತನ : ಓರ್ವ ಪೈಲಟ್ ಸಾವು!

09/07/2025 1:59 PM

BREAKING : ರಾಜ್ಯದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಬಂಧಿತ ಮೂವರು 6 ದಿನ ‘NIA’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

09/07/2025 1:52 PM

ಮನೆಯಲ್ಲಿ ‘ಜಿರಳೆ’ ಕಾಟ ಹೆಚ್ಚಗಿದ್ಯಾ.? ಜಸ್ಟ್ ಹೀಗೆ ಓಡಿಸಿ!

09/07/2025 1:36 PM

BREAKING : ಯಾವುದೇ ಕಾರಣಕ್ಕೂ ಸಚಿವ ಸಂಪುಟ ಪುನರ್ ರಚನೆ ಇಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

09/07/2025 1:25 PM
State News
KARNATAKA

BREAKING : ರಾಜ್ಯದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಬಂಧಿತ ಮೂವರು 6 ದಿನ ‘NIA’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

By kannadanewsnow0509/07/2025 1:52 PM KARNATAKA 2 Mins Read

ಬೆಂಗಳೂರು : ಉಗ್ರ ಟಿ.ನಾಸಿರ್ ಗೆ ನೆರವು ನೀಡಿದ್ದ ಆರೋಪದ ಮೇಲೆ ಇಂದು NIA ಬೆಂಗಳೂರು ಸೇರಿ 5 ಕಡೆ…

ಮನೆಯಲ್ಲಿ ‘ಜಿರಳೆ’ ಕಾಟ ಹೆಚ್ಚಗಿದ್ಯಾ.? ಜಸ್ಟ್ ಹೀಗೆ ಓಡಿಸಿ!

09/07/2025 1:36 PM

BREAKING : ಬೆಂಗಳೂರಲ್ಲಿ ಶಾಪಿಂಗ್ ಹೋಗಿದ್ದಕ್ಕೆ, ಕಾಲಿನಿಂದ ಪತ್ನಿಯ ಕುತ್ತಿಗೆ ತುಳಿದು ಹತ್ಯೆಗೈದ ಪಾಪಿ ಪತಿ!

09/07/2025 12:56 PM

BREAKING : ಬೆಳಗಾವಿಯಲ್ಲಿ ಘೋರ ದುರಂತ : ಸಾಲದಿಂದ ಬೇಸತ್ತು, ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

09/07/2025 12:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.