Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವೈದ್ಯರ ಪ್ರಿಸ್ಕ್ರಿಪ್ಷನ್ ಇದ್ದರೆ ಮಾತ್ರ ‘ಕೆಮ್ಮಿನ ಸಿರಪ್’ ; ಕೇಂದ್ರ ಸರ್ಕಾರ ಮಹತ್ವದ ಯೋಜನೆ

18/11/2025 3:51 PM

ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ

18/11/2025 3:49 PM

BREAKING : ಶೌಚಾಲಯಕ್ಕೆ ಹೋಗುವ ಮಾರ್ಗದಲ್ಲಿ ಹೆರಿಗೆ : ಹಾವೇರಿಯಲ್ಲಿ ಸಿಬ್ಬಂದಿ, ವೈದ್ಯರ ಎಡವಟ್ಟಿಗೆ ನವಜಾತ ಶಿಶು ಬಲಿ!

18/11/2025 3:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನರೇಂದ್ರ ಮೋದಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಸಿಎಂ ಸಿದ್ದರಾಮಯ್ಯ
KARNATAKA

ನರೇಂದ್ರ ಮೋದಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು: ಸಿಎಂ ಸಿದ್ದರಾಮಯ್ಯ

By kannadanewsnow0727/04/2024 1:38 PM

ಕಲಬುರಗಿ: ನರೇಂದ್ರ ಮೋದಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಸುಳ್ಳನ್ನೇ ಮಾರುಕಟ್ಟೆ ಮಾಡಿಕೊಂಡಿದ್ದಾರೆ. ಅಪ್ರಸ್ತುತ ವಿಷಯಗಳನ್ನು ಹೇಳುವುದು, ಜನರ ಭಾವನೆಗಳನ್ನು ಕೆರಳಿಸುವುದು, ಧ್ರುವೀಕರಣ ಮಾಡುವ ಮೂಲಕ ಅವರ ಘನತೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಇದರಿಂದ ನಮಗೇನೂ ಹಾನಿಯಿಲ್ಲ. ಜನರು ಸುಳ್ಳ ಹೇಳಿದರೆ ಅರ್ಥ ಮಾಡಿಕೊಳ್ಳುವ ಶಕ್ತಿ ಹೊಂದಿದ್ದಾರೆ ಅಂಥ ಹೇಳಿದರು.

ಅವರು ಇಂದು ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಮೀಸಲಾತಿ ಮತ್ತು ಮಂಗಳಸೂತ್ರದ ವಿಷಯದಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಇನ್ನೂ ಕ್ರಮ ಕೈಗೊಂಡಿಲ್ಲ. ಅವರಿಗೆ ನೋಟೀಸು ಕೊಟ್ಟಿದ್ದಾರೆ. ನಾವು ಕ್ರಮ ಕೈಗೊಳ್ಳುವ ಬಗ್ಗೆ ನಿರೀಕ್ಷೆಯಲ್ಲಿದ್ದಾರೆ. ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಬೇರೆ ವಿಚಾರದಲ್ಲಿ ಮೋದಿಯವರಿಗೂ ನೋಟೀಸು ನೀಡಿದ್ದಾರೆ ಎಂದು ತಿಳಿಸಿದರು.

ನಾವು ಸ್ಪಷ್ಟವಾಗಿ ಜನರಿಗೆ ನಾವು ಏನು ಮಾಡಿದ್ದೇವೆ ಎಂದು ಪ್ರಸ್ತಾಪ ಮಾಡಿದ್ದೇವೆ. ಕೇಂದ್ರ ಸರ್ಕಾರ ಏನು ಹೇಳಿದ್ದರು, ಏನು ಮಾಡಿದ್ದಾರೆ ಎಂಬುದನ್ನೆಲ್ಲ ಹೇಳಿದ್ದೇವೆ. ಜನರು ನೀಡುವ ತೀರ್ಪು ಅಂತಿಮ. ನಮ್ಮ ಐದು ಗ್ಯಾರಂಟಿಗಳು ಮತ್ತೆ ನುಡಿದಂತೆ ನಡೆದಿರುವುದು ಜನರ ಮೇಲೆ ಪರಿಣಾಮವಾಗಿದೆ. ಮತ್ತು ಕಾಂಗ್ರೆಸ್‌ ಬಗ್ಗೆ ವಿಶ್ವಾಸ, ನಂಬಿಕೆ ಬಂದಿದೆ ಎಂಬ ವಿಶ್ವಾಸ ನನ್ನದು ಎಂದು ತಿಳಿಸಿದರು.

ಜನ ತಮ್ಮ ವಿವೇಚನೆಯ ಮೇರೆಗೆ ತೀರ್ಪು ಕೊಡುತ್ತಾರೆ. ನಮ್ಮ ಮಾತುಗಳನ್ನೂ ಗಮನಕ್ಕೆ ತೆಗೆದುಕೊಳ್ಳುತ್ತಾರೆ, ಜನರನ್ನು ದಡ್ಡರೆಂದು ನಾವು ತಿಳಿದುಕೊಂಡರೆ, ನಾವೇ ದಡ್ಡರು. ಅವರು ಬುದ್ಧಿವಂತರು ಹಾಗೂ ರಾಜಕೀಯವಾಗಿ ಪ್ರಬುದ್ಧರಿದ್ದಾರೆ. ಎಲ್ಲ ಕಾಲದಲ್ಲೂ ನೋಡಿ, ಜನರು ಬಹಳ ಬುದ್ಧಿವಂತಿಕೆಯಿಂದ ಮತ ಚಲಾಯಿಸಿದ್ದಾರೆ ಎಂದು ನುಡಿದರು.

ಅಭ್ಯರ್ಥಿಯ ಮೇಲೆ ಮತ್ತೊಬ್ಬ ಅಭ್ಯರ್ಥಿಯೇ ಪ್ರಭಾವ ಬೀರಿರಬಹುದು. ಅದಕ್ಕಾಗಿಯೇ ಪಕ್ಷದ ಅಭ್ಯರ್ಥಿ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಕರ್ನಾಟಕದ ಬಗ್ಗೆ ಅವರಿಗೆ ಜ್ಞಾನ ಇದೆಯೋ ಇಲ್ಲವೋ ಗೊತ್ತಿಲ್ಲ. ಇಲ್ಲಿನ ವಿಚಾರಗಳನ್ನು ತಿಳಿದುಕೊಂಡಿದ್ದಾರೋ ಇಲ್ಲವೋ ಅನ್ನೋದು ಕೂಡ ಗೊತ್ತಿಲ್ಲ. ನನಗೂ ಡಿ.ಕೆ. ಶಿವಕುಮಾರ್‌ ಅವರಿಗೂ ಶೀತಲ ಸಮರ ಇಲ್ಲ ಎಂದು ಸ್ಪಷ್ಟಪಡಿಸಿದರು. ಅವರು ಅಸ್ಸಾಂ ಮುಖ್ಯಮಂತ್ರಿ. ಈ ದೇಶದ ಪ್ರಧಾನ ಮಂತ್ರಿಯೂ ಅಲ್ಲ, ಕರ್ನಾಟಕದ ವಿರೋಧ ಪಕ್ಷದ ನಾಯಕರೂ ಅಲ್ಲ, ಬಿಜೆಪಿ ಅಧ್ಯಕ್ಷರೂ ಅಲ್ಲ ಎಂದು ತಿಳಿಸಿದರು.
ಚುನಾವಣಾ ಅಕ್ರಮ: ಯಾರೇ ಆದರೂ ಕ್ರಮ ಕೈಗೊಳ್ಳಿ

ಕಾಂಗ್ರೆಸ್‌ ಪಕ್ಷಕ್ಕೆ ಸೇರಿದೆಯೆನ್ನಲಾದ ಎರಡು ಕೋಟಿ ಹಣ ಸಿಕ್ಕಿದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ನನಗೆ ಈ ಬಗ್ಗೆ ತಿಳಿದಿಲ್ಲ. ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿ ಎಂದರು. ಜೊತೆಗೆ ಬಿಜೆಪಿಯ ಡಾ. ಸುಧಾಕರ್‌ ಅವರಿಗೆ ಸೇರಿದ 4.8 ಕೋಟಿ ರೂ. ದೊರೆತಿದ್ದು, ಮಹಜರು ನಡೆದು, ಎಫ್.ಐ.ಆರ್. ಅಗಿದೆಯಲ್ಲ. ಅದಕ್ಕೆ ಏನು ಹೇಳುತ್ತೀರಿ? ಯಾರೇ ಅಕ್ರಮ ಮಾಡಿದರೂ ಕ್ರಮ ಕೈಗೊಳ್ಳಬೇಕು ಎಂದು ಪ್ರಶ್ನಿಸಿದರು.

Narendra Modi is good at lying: Siddaramaiah
Share. Facebook Twitter LinkedIn WhatsApp Email

Related Posts

ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ

18/11/2025 3:49 PM2 Mins Read

BREAKING : ಶೌಚಾಲಯಕ್ಕೆ ಹೋಗುವ ಮಾರ್ಗದಲ್ಲಿ ಹೆರಿಗೆ : ಹಾವೇರಿಯಲ್ಲಿ ಸಿಬ್ಬಂದಿ, ವೈದ್ಯರ ಎಡವಟ್ಟಿಗೆ ನವಜಾತ ಶಿಶು ಬಲಿ!

18/11/2025 3:43 PM1 Min Read

BIG NEWS : ಸಂಪುಟ ಪುನಾರಚನೆ ವೇಳೆ ನನಗೆ ಸಚಿವ ಸ್ಥಾನ ಬೇಕೇ ಬೇಕು : ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಆಗ್ರಹ

18/11/2025 3:31 PM1 Min Read
Recent News

BREAKING : ವೈದ್ಯರ ಪ್ರಿಸ್ಕ್ರಿಪ್ಷನ್ ಇದ್ದರೆ ಮಾತ್ರ ‘ಕೆಮ್ಮಿನ ಸಿರಪ್’ ; ಕೇಂದ್ರ ಸರ್ಕಾರ ಮಹತ್ವದ ಯೋಜನೆ

18/11/2025 3:51 PM

ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ

18/11/2025 3:49 PM

BREAKING : ಶೌಚಾಲಯಕ್ಕೆ ಹೋಗುವ ಮಾರ್ಗದಲ್ಲಿ ಹೆರಿಗೆ : ಹಾವೇರಿಯಲ್ಲಿ ಸಿಬ್ಬಂದಿ, ವೈದ್ಯರ ಎಡವಟ್ಟಿಗೆ ನವಜಾತ ಶಿಶು ಬಲಿ!

18/11/2025 3:43 PM

Good News ; ‘ಆಲ್ಝೈಮರ್’ ಔಷಧ ‘ಡೊನಾನೆಮ್ಯಾಬ್’ಗೆ ಭಾರತ ಅನುಮೋದನೆ

18/11/2025 3:33 PM
State News
KARNATAKA

ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ

By kannadanewsnow0918/11/2025 3:49 PM KARNATAKA 2 Mins Read

ಬೆಂಗಳೂರು: ಪ್ರಿಯಾಂಕ್ ಖರ್ಗೆಯವರು ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮರಾಗಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿಸಿದ್ದಾರೆ. ಮಲ್ಲೇಶ್ವರದ…

BREAKING : ಶೌಚಾಲಯಕ್ಕೆ ಹೋಗುವ ಮಾರ್ಗದಲ್ಲಿ ಹೆರಿಗೆ : ಹಾವೇರಿಯಲ್ಲಿ ಸಿಬ್ಬಂದಿ, ವೈದ್ಯರ ಎಡವಟ್ಟಿಗೆ ನವಜಾತ ಶಿಶು ಬಲಿ!

18/11/2025 3:43 PM

BIG NEWS : ಸಂಪುಟ ಪುನಾರಚನೆ ವೇಳೆ ನನಗೆ ಸಚಿವ ಸ್ಥಾನ ಬೇಕೇ ಬೇಕು : ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಆಗ್ರಹ

18/11/2025 3:31 PM

‘ಬೆಂಗಳೂರು ಟೆಕ್‌ ಸಮ್ಮಿಟ್‌’ನಲ್ಲಿ ಕ್ವಾಂಟಮ್‌ ಟೆಕ್ನಾಲಜಿ ರೌಂಡ್‌ಟೇಬಲ್‌: ಸಚಿವ ಎನ್‌ ಎಸ್‌ ಭೋಸರಾಜು

18/11/2025 3:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.