ಬೆಂಗಳೂರು: ಕೆ ಎಸ್ ಆರ್ ಟಿ ಸಿ ಗೆ ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ Governance now 11th PSU ರಾಷ್ಟ್ರೀಯ ಪ್ರಶಸ್ತಿ ಮತ್ತು PSU ನಾಯಕತ್ವ ಪ್ರಶಸ್ತಿ -2025 ಲಭಿಸಿದೆ.
ಈ ಬಗ್ಗೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನವದೆಹಲಿಯಲ್ಲಿ Governance Now ಅವರು ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿಗಮಕ್ಕೆ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯವಸ್ಥಾಪಕ ನಿರ್ದೇಶಕರು ಅನ್ಬುಕುಮಾರ್ ಭಾಆಸೇ, ಅವರಿಗೆ PSU ಆತ್ಮನಿರ್ಭರ್ ನಾಯಕತ್ವ ಪ್ರಶಸ್ತಿಯನ್ನುಸತೀಶ್ ಚಂದ್ರ ದುಬೆ, ಕಲ್ಲಿದ್ದಲು ಮತ್ತು ಗಣಿ ರಾಜ್ಯ ಸಚಿವರು, ಭಾರತ ಸರ್ಕಾರರವರು ಮತ್ತು ಸತ್ಯಪಾಲ್ ಸಿಂಗ್, ಮಾಜಿ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಮಾನವ ಸಂಪನ್ಮೂಲ, ಗ್ರಾಮೀಣಾಭಿವೃದ್ಧಿ, ಜಲಸಂಪನ್ಮೂಲ ಮತ್ತು ಗಂಗಾ ನದಿ ಕಾಯಕಲ್ಪ ಇಲಾಖೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ನಿಗಮದಲ್ಲಿ ಒಟ್ಟು 1314 ಬಸ್ಸುಗಳು ಪುನಶ್ಚೇತನಗೊಂಡಿದ್ದು, ಕರ್ನಾಟಕ ಸಾರಿಗೆ 1184 , ನಗರ ಸಾರಿಗೆ 115, ಐರಾವತ ಕ್ಲಬ್ ಕ್ಲಾಸ್ 15 ಬಸ್ಸುಗಳನ್ನು ಸಹ ಪುನಶ್ಚೇತನಗೊಳಿಸಲಾಗಿದೆ. ರೂ.250 ಕೋಟಿಗೂ ಹೆಚ್ಚು ಹಣ ನಿಗಮಕ್ಕೆ ಉಳಿತಾಯವಾಗಿದ್ದು, ಸದರಿ ಉಪಕ್ರಮವು ಆತ್ಮನಿರ್ಭರ್ ಭಾರತ್ ಪರಿಕಲ್ಪನೆಯಡಿ
ಸ್ವಾವಲಂಬನೆಯನ್ನು ಉತ್ತೇಜಿಸುವ ಯೋಜನೆಯು ಅತ್ಯುತ್ತಮವಾಗಿದೆ.
ಬಿ ಎಸ್ ನಾಗರಾಜ ಮೂರ್ತಿ, ಉಪಮುಖ್ಯ ಯಾಂತ್ರಿಕ ಅಭಿಯಂತರರು, ಕರಾರಸಾ ನಿಗಮ ಅವರು ಸಹ ಉಪಸ್ಥಿತರಿದ್ದರು.
ಮೇ.5ರಿಂದ ಸ್ಕೈಪ್ ಸ್ಥಗಿತ: ‘Skype’ನಿಂದ ‘Microsoft Teams’ಗೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ
BREAKING : ಚಿಕ್ಕಬಳ್ಳಾಪುರಲ್ಲಿ ಭೀಕರ ಮರ್ಡರ್ : ಕ್ಷುಲ್ಲಕ ಕಾರಣಕ್ಕೆ ಬಾರ್ ಸಪ್ಲೈಯರ್ ನನ್ನು ಕೊಂದ ದುಷ್ಕರ್ಮಿಗಳು