ಹಾಸನ : ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು ಈಗಾಗಲೇ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ. ಶಿರೂರು ಗುಡ್ಡ ಕುಸಿತದಲ್ಲಿ ಹಲವರು ಮೃತಪಟ್ಟಿದ್ದು, ಇದೀಗ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎತ್ತಿನಹಳ್ಳದ ಬಳಿ ಏಕಾಏಕಿ ಗುಡ್ಡ ಕುಸಿದಿದೆ.
ಹಾಗಾಗಿ ಇದೀಗ ಮತ್ತೆ ಶಿರಾಡಿ ಘಾಟ್ ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚಾರ ಸ್ಥಗಿತವಾಗಿದೆ.ಪರಿಣಾಮ ಒಂದು ಗಂಟೆಯಿಂದಲೂ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ಮಣ್ಣು ತೆರವು ಮಾಡುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಜು.18 ರಂದು ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದಿತ್ತು, ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಿಂದ ಬಚಾವ್ ಆಗಿದ್ದರು. ಬಳಿಕ ಗುಡ್ಡ ಕುಸಿತದಿಂದ ಶಿರಾಡಿಘಾಟ್ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು.ಮರುದಿನ ಜು.19 ರಂದು ಶಿರಾಡಿ ಘಾಟ್ ಸಂಚಾರ ಬಂದ್ ಆದೇಶವನ್ನು ಜಿಲ್ಲಾಡಳಿತ ಹಿಂಪಡೆದು ಸಂಚಾರಕ್ಕೆ ಅನುವುಮಾಡಿಕೊಟ್ಟಿತ್ತು.