Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ವಿಧಾನ ಪರಿಷತ್ ಗೆ ಕಾಂಗ್ರೆಸ್ ನಿಂದ ನಾಲ್ವರ ನಾಮನಿರ್ದೇಶನ.!

08/06/2025 10:05 AM

ಬೆಂಗಳೂರಿನಿಂದ ದೆಹಲಿಗೆ ಕಿಡ್ನಿ, ಕಾರ್ನಿಯಾವನ್ನು ಏರ್ ಲಿಫ್ಟ್ ಮಾಡಿದ IAF

08/06/2025 9:59 AM

BREAKING : ತೆರಿಗೆದಾರರೇ ಗಮನಿಸಿ : 3 ವರ್ಷದಿಂದ `GST’ ಸಲ್ಲಿಸದವರಿಗೆ ಜೂನ್ 30ರವರೆಗೆ ಅವಕಾಶ | GST Returns

08/06/2025 9:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡೆಹರಾಡೂನಿನ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ 8ನೇ ತರಗತಿ ದಾಖಲಾತಿಗೆ ಅರ್ಜಿ ಆಹ್ವಾನ
KARNATAKA

ಡೆಹರಾಡೂನಿನ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ 8ನೇ ತರಗತಿ ದಾಖಲಾತಿಗೆ ಅರ್ಜಿ ಆಹ್ವಾನ

By kannadanewsnow0920/01/2025 6:16 PM

ಬಳ್ಳಾರಿ: ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 2026ನೇ ಸಾಲಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2025 ರ ಜೂನ್ 01 ರಂದು ನಡೆಯಲಿದ್ದು, ಆಸಕ್ತರಿಂದ ಆರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು ಹಾಗೂ ದಿನಾಂಕ 01-01-2026 ರಂತೆ 111/2 ವರ್ಷದಿಂದ 13 ವರ್ಷದೊಳಗಿರಯವ ಅಂದರೆ (ದಿನಾಂಕ 02-01-2013 ರಿಂದ 01-07-2014 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಅರ್ಹರಿರುತ್ತಾರೆ.

ಈ ಸಂಸ್ಥೆಯ ಮುಖ್ಯ ಗುರಿ ಯುವಕರನ್ನು ದೇಶದ ಸಶಸ್ತç ಪಡೆಗೆ ಸೇರಲು ಸಿದ್ದಗೊಳಿಸುವುದು ಹಾಗೂ ಈ ನಿಟ್ಟಿನಲ್ಲಿ ಸರ್ವ ರೀತಿಯ ವಿದ್ಯಾಭ್ಯಾಸ/ತರಬೇತಿ ನೀಡುವುದು.

ಕಾಲೇಜಿನಲ್ಲಿ ವರ್ಷವೊಂದಕ್ಕೆ ವಿದ್ಯಾಭ್ಯಾಸದ ಶುಲ್ಕ ರೂ. 98,650/-ಗಳು (ಸಾಮಾನ್ಯ ವರ್ಗ) ಹಾಗೂ ರೂ. 81,850/-(ಎಸ್‌ಟಿ/ಎಸ್‌ಟಿ) ಗಳಾಗಿರುತ್ತದೆ. ಇದು ಕಾಲಕಾಲಕ್ಕೆ ಹೆಚ್ಚಾಗಬಹುದು. ವಿಧ್ಯಾರ್ಥಿ ಮತ್ತು ವಿಧ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ 50,000/- ಗಳನ್ನು ಭದ್ರತಾ ಠೇವಣಿ ನೀಡಬೇಕಾಗುತ್ತದೆ. ಮೊತ್ತವನ್ನು ವಿದ್ಯಾರ್ಥಿಯು ಪದವೀಧರನಾದ ಮತ್ತು ವಿದ್ಯಾರ್ಥಿನಿಯು ಪದವೀಧರರೆಯಾದ ಬಳಿಕ ಹಿಂತಿರುಗಿಸಲಾಗುವುದು.

ಅರ್ಜಿ ನಮೂನೆ ಪಡೆಯುವ ವಿಧಾನ

ಪ್ರಾಸ್ಪೆಕ್ಟಸ್, ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್-248003 ಮೂಲಕ ಪಡೆಯಬಹುದು.

ಆನ್‌ಲೈನ್ ಪಾವತಿ

ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/- ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.555/- ಇದ್ದು, ಆನ್‌ಲೈನ್ ಪಾವತಿ ಮಾಡುವ ಮೂಲಕ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕಗಳನ್ನು ಸಹ ಪಡೆಯಬಹುದು.

ವೆಬ್‌ಸೈಟ್ www.rimc.gov.in ಪಾವತಿ ಸ್ವೀಕರಿಸಿದ ನಂತರ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳನ್ನು ಸ್ಪೀಡ್ ಪೋಸ್ಟ್ ಮೂಲಕ ರವಾನಿಸಲಾಗುತ್ತದೆ.

ಬೇಡಿಕೆ ಕರಡು ಕಳುಹಿಸುವ ವಿಧಾನ:

ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತವನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/-ಗಳ ಬೇಡಿಕೆಯ ಕರಡು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.555/-ಗಳ ಬೇಡಿಕೆಯ ಕರಡು ಕಳುಹಿಸಿ ಲಿಖಿತ ವಿನಂತಿಯ ಪರವಾಗಿ ಜಾತಿ ಪ್ರಮಾಣ ಪತ್ರದೊಂದಿಗೆ “THE COMMANDANT RIMC FUND” PAYABLE AT HDFC BANK, BALLUPUR CHOWK, DEHRADUN (BANK CODE. 1399), UTTARAKHAND ಈ ವಿಳಾಸಕ್ಕೆ ಕಳುಹಿಸಬಹುದು. ಪಿನ್ ಕೋಡ್ ಮತ್ತು ಸಂಪರ್ಕ ಸಂಖ್ಯೆಯೊAದಿಗೆ ದೊಡ್ಡ ಅಕ್ಷರಗಳಲ್ಲಿ ಟೈಪ್ ಮಾಡಿ ಬರೆಯಬೇಕು. ಕಾನೂನು ಬಾಹಿರ ಅಥವಾ ಅಪೂರ್ಣ ವಿಳಾಸದಿಂದ ಉಂಟಾಗುವ ಪ್ರಾಸ್ಪೆಕ್ಟಸ್‌ನ ಸಾಗಾಣಿಕೆಯಲ್ಲಿ ಯಾವುದೇ ಅಂಚೆ ವಿಳಂಬ ಅಥವಾ ನಷ್ಟಕ್ಕೆ ಖIಒS ಸಂಸ್ಥೆಯು ಜವಾಬ್ದಾರರಾಗಿರುವುದಿಲ್ಲ.

ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಮಾರ್ಚ್ 31 ರೊಳಗಾಗಿ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ಭವನ್, ನಂ, 58 ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು-25 ಇವರಿಗೆ ಸಲ್ಲಿಸಬೇಕು.

ಬೇಕಾದ ದಾಖಲೆಗಳು

ಮುನ್ಸಿಪಾಲಿಟಿ, ಗ್ರಾಮ ಪಂಚಾಯತ್ ಪ್ರಾಧಿಕಾರ ವತಿಯಿಂದ ಆಂಗ್ಲ ಭಾಷೆಯಲ್ಲಿ ಪಡೆದ ಅಭ್ಯರ್ಥಿಯ ಜನ್ಮ ಪ್ರಮಾಣ ಪತ್ರದ ಧೃಢೀಕೃತ ಪ್ರತಿ. 5 ಪಾಸಪೋರ್ಟ್ ಅಳತೆಯ ಭಾವಚಿತ್ರಗಳು (ಅರ್ಜಿಯಲ್ಲಿ ಅಂಟಿಸಿದ ಭಾವಚಿತ್ರವನ್ನು ಸೇರಿಸಿ). ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಸಕ್ಷಮ ಪ್ರಾಧಿಕಾರದಿಂದ ನೀಡಿದ ಜಾತಿ ಪ್ರಮಾಣ ಪತ್ರದ ದೃಡೀಕೃತ (ಪ್ರತಿ ಆಂಗ್ಲ ಭಾಷೆಯಲ್ಲಿ ಇರುವಂತೆ). ಪರೀಕ್ಷಾ ಪ್ರವೇಶ ಪತ್ರವನ್ನು ತ್ವರಿತ ಅಂಚೆದ್ವಾರ ರವಾನಿಸಲು ರೂ.42/- ರ ಅಂಚೆ ಚೀಟಿ ಲಗತ್ತಿದ ಸ್ವವಿಳಾಸ ಲಕೋಟೆ.

ಮುಖ್ಯೋಪಾಧ್ಯಾಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ ಮತ್ತು ಓದುತ್ತಿರುವ ತರಗತಿ ಬಗ್ಗೆ ಪಡೆದ ಪ್ರಮಾಣ ಪತ್ರದ ಮೂಲ ಪ್ರತಿ (ದೃಡೀಕರಿಸಿದ ಅಭ್ಯರ್ಥಿಯ ಭಾವ ಚಿತ್ರದೊಂದಿಗೆ). ಈ ರಾಜ್ಯದ ವಾಸಸ್ಥಾನ ದೃಡೀಕರಣ ಪತ್ರ ತಹಶೀಲ್ದಾರರಿಂದ ಪಡೆದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಅಥವಾ ದೂ.0836-2440176ಗೆ ಸಂಪರ್ಕಿಸಬಹುದು ಎಂದು ಧಾರವಾಡ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಜನತೆ ಗಮನಕ್ಕೆ: ಜ.21ರ ನಾಳೆ ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ನೀವು ‘ತೊದಲುವಿಕೆ ಸಮಸ್ಯೆ’ಯಿಂದ ಬಳಲುತ್ತಿದ್ದೀರಾ.? ಈ ಉಚಿತ ಕಾರ್ಯಾಗಾಲದಲ್ಲಿ ಭಾಗವಹಿಸಿ, ತೊಂದ್ರೆ ಕ್ಲಿಯರ್

Share. Facebook Twitter LinkedIn WhatsApp Email

Related Posts

BIG NEWS : ವಿಧಾನ ಪರಿಷತ್ ಗೆ ಕಾಂಗ್ರೆಸ್ ನಿಂದ ನಾಲ್ವರ ನಾಮನಿರ್ದೇಶನ.!

08/06/2025 10:05 AM1 Min Read

BREAKING : ತಡರಾತ್ರಿ ಭಾರೀ ಸ್ಪೋಟದ ಶಬ್ದಕ್ಕೆ ಬೆಚ್ಚಿ ಬಿದ್ದ ಜಗಳೂರು ಪಟ್ಟಣದ ಜನ.!

08/06/2025 9:34 AM1 Min Read

ನೀವು ಕಟ್ಟಬೇಕಾಗಿರುವಂತ ಸ್ವಂತ ಮನೆಯ ಕೆಲಸ ನಿಂತು ಹೋಗಿದೆಯಾ? ಇದು ಮತ್ತೇ ಕಟ್ಟುವ ಅಸೆ ನೆರೆವೇರಿಸುವ ಭೂ ವರಾಹ ಸ್ವಾಮಿ

08/06/2025 9:19 AM3 Mins Read
Recent News

BIG NEWS : ವಿಧಾನ ಪರಿಷತ್ ಗೆ ಕಾಂಗ್ರೆಸ್ ನಿಂದ ನಾಲ್ವರ ನಾಮನಿರ್ದೇಶನ.!

08/06/2025 10:05 AM

ಬೆಂಗಳೂರಿನಿಂದ ದೆಹಲಿಗೆ ಕಿಡ್ನಿ, ಕಾರ್ನಿಯಾವನ್ನು ಏರ್ ಲಿಫ್ಟ್ ಮಾಡಿದ IAF

08/06/2025 9:59 AM

BREAKING : ತೆರಿಗೆದಾರರೇ ಗಮನಿಸಿ : 3 ವರ್ಷದಿಂದ `GST’ ಸಲ್ಲಿಸದವರಿಗೆ ಜೂನ್ 30ರವರೆಗೆ ಅವಕಾಶ | GST Returns

08/06/2025 9:52 AM

BIG NEWS : 17 ವರ್ಷಗಳ ಯೋಜನೆ, ವಿನ್ಯಾಸ ಮತ್ತು ಕಠಿಣ ಪರಿಶ್ರಮ : `ಚೆನಾಬ್ ಸೇತುವೆ’ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಾಧವಿ ಲತಾ ಯಾರು ಗೊತ್ತಾ?

08/06/2025 9:45 AM
State News
KARNATAKA

BIG NEWS : ವಿಧಾನ ಪರಿಷತ್ ಗೆ ಕಾಂಗ್ರೆಸ್ ನಿಂದ ನಾಲ್ವರ ನಾಮನಿರ್ದೇಶನ.!

By kannadanewsnow5708/06/2025 10:05 AM KARNATAKA 1 Min Read

ಬೆಂಗಳೂರು: ವಿಧಾನ ಪರಿಷತ್ತಿಗೆ ಸಿಎಂ ಸಿದ್ದರಾಮಯ್ಯ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಸೇರಿ ಪಕ್ಷದ ನಾಲ್ವರನ್ನು ಕಾಂಗ್ರೆಸ್…

BREAKING : ತಡರಾತ್ರಿ ಭಾರೀ ಸ್ಪೋಟದ ಶಬ್ದಕ್ಕೆ ಬೆಚ್ಚಿ ಬಿದ್ದ ಜಗಳೂರು ಪಟ್ಟಣದ ಜನ.!

08/06/2025 9:34 AM

ನೀವು ಕಟ್ಟಬೇಕಾಗಿರುವಂತ ಸ್ವಂತ ಮನೆಯ ಕೆಲಸ ನಿಂತು ಹೋಗಿದೆಯಾ? ಇದು ಮತ್ತೇ ಕಟ್ಟುವ ಅಸೆ ನೆರೆವೇರಿಸುವ ಭೂ ವರಾಹ ಸ್ವಾಮಿ

08/06/2025 9:19 AM

GOOD NEWS : ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಆಹ್ವಾನ.!

08/06/2025 8:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.