Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಂದ್ರ ಸರ್ಕಾರದ ಅದ್ಭುತ ಯೋಜನೆ ; ನಿಮ್ಗೆ ಪ್ರತಿ ತಿಂಗಳು 5000 ರೂಪಾಯಿ ಲಭ್ಯ!

05/06/2025 8:38 AM

BREAKING : ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ : ಮಾಜಿ ಶಾಸಕ ಬ್ರಿಜ್ ಮೋಹನ್ ಸಿಂಗ್ ಅರೆಸ್ಟ್.!

05/06/2025 8:28 AM

BREAKING : ಬೆಂಗಳೂರಿನ `ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ಕಾಲ್ತುಳಿತ ದುರಂತ : ಅಘಾತಕಾರಿ ವಿಡಿಯೋ ವೈರಲ್ | WATCH VIDEO

05/06/2025 8:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಡೆಹರಾಡೂನ್: 8ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
INDIA

ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಡೆಹರಾಡೂನ್: 8ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

By kannadanewsnow0728/02/2024 12:15 PM

ನವದೆಹಲಿ: ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 2025ನೇ ಸಾಲಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2024 ರ ಜೂನ್ 01 ರಂದು ನಡೆಯಲಿದ್ದು, ಆಸಕ್ತರಿಂದ ಆರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು. ದಿನಾಂಕ 01-01-2025 ರಂತೆ 111/2 ವರ್ಷದಿಂದ 13 ವರ್ಷದೊಳಗಿರುವ ಅಂದರೆ (ದಿನಾಂಕ 02-01-2012 ರಿಂದ 01-07-2013 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಈ ಪರೀಕ್ಷೆಗೆ ಅರ್ಹರಿರುತ್ತಾರೆ. ಈ ಸಂಸ್ಥೆಯ ಮುಖ್ಯ ಗುರಿ ಯುವಕರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ದಗೊಳಿಸುವುದು ಹಾಗೂ ಸರ್ವ ರೀತಿಯ ವಿದ್ಯಾಭ್ಯಾಸ, ತರಬೇತಿ ನೀಡುವುದಾಗಿದೆ.

ಕಾಲೇಜಿನಲ್ಲಿ ವರ್ಷವೊಂದಕ್ಕೆ ವಿದ್ಯಾಭ್ಯಾಸದ ಶುಲ್ಕ ರೂ. 1,07,500/-ಗಳು (ಸಾಮಾನ್ಯ ವರ್ಗ) ಹಾಗೂ ರೂ. 93,900/- (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ) ಗಳಾಗಿರುತ್ತದೆ. ಇದು ಕಾಲಕಾಲಕ್ಕೆ ಹೆಚ್ಚಾಗಬಹುದು. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯು ಪ್ರವೇಶ ಸಮಯದಲ್ಲಿ ರೂ.30,000/- ಗಳನ್ನು ಭದ್ರತಾ ಠೇವಣಿ ನೀಡಬೇಕಾಗುತ್ತದೆ (incl in annual fee). ಮೊತ್ತವನ್ನು ವಿಧ್ಯಾರ್ಥಿಯು ಪಧವೀಧರನಾದ ಮತ್ತು ವಿಧ್ಯಾರ್ಥಿನಿಯು ಪಧವೀಧರರೆಯಾದ ಬಳಿಕ ಹಿಂತಿರುಗಿಸಲಾಗುವುದು.
*ಅರ್ಜಿ ನಮೂನೆ ಪಡೆಯುವ ವಿಧಾನ: ಪ್ರಾಸ್ಪೆಕ್ಟಸ್, ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ್, ಪಿನ್-248003 ಮೂಲಕ ಪಡೆಯಬಹುದು.

ಆನ್‍ಲೈನ್ ಪಾವತಿ: ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/- ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.555/- ಇದ್ದು, ಆನ್‍ಲೈನ್ ಪಾವತಿ ಮಾಡುವ ಮೂಲಕ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕಗಳನ್ನು ಸಹ ಪಡೆಯಬಹುದು. ವೆಬ್‍ಸೈಟ್ www.rimc.gov.in ಪಾವತಿ ಸ್ವೀಕರಿಸಿದ ನಂತರ ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕಗಳನ್ನು ಸ್ಪೀಡ್ ಪೋಸ್ಟ್ ಮೂಲಕ ರವಾನಿಸಲಾಗುತ್ತದೆ.
ಬೇಡಿಕೆ ಕರಡು ಕಳುಹಿಸುವ ವಿಧಾನ: ಪ್ರಾಸ್ಪೆಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತವನ್ನು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600/-ಗಳ ಬೇಡಿಕೆಯ ಕರಡು ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.555/-ಗಳ ಬೇಡಿಕೆಯ ಕರಡು ಕಳುಹಿಸಿ ಲಿಖಿತ ವಿನಂತಿಯ ಪರವಾಗಿ ಜಾತಿ ಪ್ರಮಾಣ ಪತ್ರದೊಂದಿಗೆ “THE COMMANDANT RIMC FUND” PAYABLE AT HDFC BANK, BALLUPUR CHOWK, DEHRADUN (BANK CODE. 1399), UTTARAKHAND ಈ ವಿಳಾಸಕ್ಕೆ ಕಳುಹಿಸಬಹುದು. ಪಿನ್ ಕೋಡ್ ಮತ್ತು ಸಂಪರ್ಕ ಸಂಖ್ಯೆಯೊಂದಿಗೆ ದೊಡ್ಡ ಅಕ್ಷರಗಳಲ್ಲಿ ಟೈಪ್ ಮಾಡಿ ಬರೆಯಬೇಕು. ಕಾನೂನು ಬಾಹಿರ ಅಥವಾ ಅಪೂರ್ಣ ವಿಳಾಸದಿಂದ ಉಂಟಾಗುವ ಪ್ರಾಸ್ಪೆಕ್ಟಸ್‍ನ ಸಾಗಾಣಿಕೆಯಲ್ಲಿ ಯಾವುದೇ ಅಂಚೆ ವಿಳಂಬ ಅಥವಾ ನಷ್ಟಕ್ಕೆ RIMS ಸಂಸ್ಥೆಯು ಜವಾಬ್ದಾರರಾಗಿರುವುದಿಲ್ಲ.
ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಏಪ್ರೀಲ್ 15 ರೊಳಗಾಗಿ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ಭವನ್, ನಂ, 58 ಫೀಲ್ಡ್ ಮಾರ್ಷಲ್ ಕೆ ಎಮ್ ಕಾರ್ಯಪ್ಪ ರಸ್ತೆ, ಬೆಂಗಳೂರು-25 ಇವರಿಗೆ ಸಲ್ಲಿಸಬೇಕು.

ಬೇಕಾದ ದಾಖಲೆಗಳು: ಮುನ್ಸಿಪಾಲಿಟಿ, ಗ್ರಾಮ ಪಂಚಾಯತ್ ಪ್ರಾಧಿಕಾರ ವತಿಯಿಂದ ಆಂಗ್ಲ ಭಾಷೆಯಲ್ಲಿ ಪಡೆದ ಅಭ್ಯರ್ಥಿಯ ಜನ್ಮ ಪ್ರಮಾಣ ಪತ್ರದ ಧೃಢೀಕೃತ ಪ್ರತಿ. 5 ಪಾಸಪೋರ್ಟ್ ಅಳತೆಯ ಭಾವಚಿತ್ರಗಳು (ಅರ್ಜಿಯಲ್ಲಿ ಅಂಟಿಸಿದ ಭಾವಚಿತ್ರವನ್ನು ಸೇರಿಸಿ). ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಸಕ್ಷಮ ಪ್ರಾಧಿಕಾರದಿಂದ ನೀಡಿದ ಜಾತಿ ಪ್ರಮಾಣ ಪತ್ರದ ದೃಡೀಕೃತ (ಪ್ರತಿ ಆಂಗ್ಲ ಭಾಷೆಯಲ್ಲಿ ಇರುವಂತೆ). ಪರೀಕ್ಷಾ ಪ್ರವೇಶ ಪತ್ರವನ್ನು ತ್ವರಿತ ಅಂಚೆದ್ವಾರ ರವಾನಿಸಲು ರೂ.42/- ರ ಅಂಚೆ ಚೀಟಿ ಲಗತ್ತಿದ ಸ್ವವಿಳಾಸ ಲಕೋಟೆ. ಮುಖ್ಯೋಪಾಧ್ಯಾಯರಿಂದ ಅಭ್ಯರ್ಥಿಯ ಜನ್ಮ ದಿನಾಂಕ ಮತ್ತು ಓದುತ್ತಿರುವ ತರಗತಿ ಬಗ್ಗೆ ಪಡೆದ ಪ್ರಮಾಣ ಪತ್ರದ ಮೂಲ ಪ್ರತಿ (ದೃಡೀಕರಿಸಿದ ಅಭ್ಯರ್ಥಿಯ ಭಾವ ಚಿತ್ರದೊಂದಿಗೆ). ಈ ರಾಜ್ಯದ ವಾಸಸ್ಥಾನ ದೃಡೀಕರಣ ಪತ್ರ ತಹಶೀಲ್ದಾರರಿಂದ ಪಡೆದಿರಬೇಕು.

Dehradun invites applications for entrance test for class 8 admissions National Indian Military College ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಡೆಹರಾಡೂನ್: 8ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ಕೇಂದ್ರ ಸರ್ಕಾರದ ಅದ್ಭುತ ಯೋಜನೆ ; ನಿಮ್ಗೆ ಪ್ರತಿ ತಿಂಗಳು 5000 ರೂಪಾಯಿ ಲಭ್ಯ!

05/06/2025 8:38 AM2 Mins Read

BREAKING : ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ : ಮಾಜಿ ಶಾಸಕ ಬ್ರಿಜ್ ಮೋಹನ್ ಸಿಂಗ್ ಅರೆಸ್ಟ್.!

05/06/2025 8:28 AM1 Min Read

BIG NEWS : ವಿಶ್ವದ ಅತ್ಯಂತ ಸಂತೋಷ ಭರಿತ ದೇಶ `ಫಿನ್ಲೆಂಡ್‌’ : ಭಾರತಕ್ಕೆ 126ನೇ ಸ್ಥಾನ | World’s Happiest Country

05/06/2025 8:11 AM1 Min Read
Recent News

ಕೇಂದ್ರ ಸರ್ಕಾರದ ಅದ್ಭುತ ಯೋಜನೆ ; ನಿಮ್ಗೆ ಪ್ರತಿ ತಿಂಗಳು 5000 ರೂಪಾಯಿ ಲಭ್ಯ!

05/06/2025 8:38 AM

BREAKING : ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ : ಮಾಜಿ ಶಾಸಕ ಬ್ರಿಜ್ ಮೋಹನ್ ಸಿಂಗ್ ಅರೆಸ್ಟ್.!

05/06/2025 8:28 AM

BREAKING : ಬೆಂಗಳೂರಿನ `ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ಕಾಲ್ತುಳಿತ ದುರಂತ : ಅಘಾತಕಾರಿ ವಿಡಿಯೋ ವೈರಲ್ | WATCH VIDEO

05/06/2025 8:23 AM

BIG NEWS : ವಿಶ್ವದ ಅತ್ಯಂತ ಸಂತೋಷ ಭರಿತ ದೇಶ `ಫಿನ್ಲೆಂಡ್‌’ : ಭಾರತಕ್ಕೆ 126ನೇ ಸ್ಥಾನ | World’s Happiest Country

05/06/2025 8:11 AM
State News
KARNATAKA

BREAKING : ಬೆಂಗಳೂರಿನ `ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ಕಾಲ್ತುಳಿತ ದುರಂತ : ಅಘಾತಕಾರಿ ವಿಡಿಯೋ ವೈರಲ್ | WATCH VIDEO

By kannadanewsnow5705/06/2025 8:23 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11…

BIG NEWS : ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಶೀಘ್ರವೇ `ಬಿ-ಖಾತಾ’ ಸಂಬಂಧ ಹೊಸ ಆದೇಶ.!

05/06/2025 7:55 AM

GOOD NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : ಇಂದಿರಾ ಕ್ಯಾಂಟೀನ್ ಗಳಲ್ಲಿ `ಮೊಟ್ಟೆ’ ವಿತರಣೆ.!

05/06/2025 7:49 AM

BREAKING : ಬೆಂಗಳೂರಿನ ‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ ದುರಂತ : ರಾಹುಲ್ ಗಾಂಧಿ ತೀವ್ರ ಸಂತಾಪ.!

05/06/2025 7:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.