ಚಿಕ್ಕಮಗಳೂರು: ಮದುವೆಯಾದ ತಿಂಗಳಿಗೆ ಹೆಂಡ್ತಿ ಬಿಟ್ಟು ಹೋದ ಕಾರಣ ಮನನೊಂದು ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ ಆತ್ಮಹತ್ಯೆ ಮಾಡಿಕೊಂಡಿರುವ ಘನೆ ಚಿಕ್ಕಮಗಳೂರಿನ ತೇಗೂರು ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನ್ನು ನೋದ್ ರಾಜ್ (24) ಎಂದು ಗುರುತಿಸಲಾಗಿದೆ. ಮೃತ ಯುವಕ ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರನಾಗಿದ್ದು, ಈತ ಮೃತ ಯುವಕ ಅದೇ ಊರಿನ ಯುವತಿಯೋರ್ವಳನ್ನು ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಮದುವೆಯಾದ ಕೆಲವೇ ದಿನಗಳಲ್ಲಿ ತವರು ಮನೆಗೆ ಹೋಗಿದ್ದಾಳೆ ಎನ್ನಲಾಗಿದೆ. ಈ ನಡುವೆ ಇದೇ ನೋವಿನಲ್ಲಿ ಕಾರ್ತಿಕ್ ನೇಣುಬಿಗಿದುಕೊಂಡಿದ್ದ. ಕೂಡಲೇ ಆತನನ್ನ ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ಕು ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.