Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಳೆಯಲ್ಲಿ ಆಟವಾಡಲು ಹೋಗ್ತೀನಿ ಎಂದಿದ್ದಕ್ಕೆ 10 ವರ್ಷದ ಸ್ವಂತ ಮಗನನ್ನೇ ಇರಿದು ಕೊಂದ ಪಾಪಿ ತಂದೆ

30/06/2025 9:45 PM

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM

ಹೃದಯ ವಿದ್ರಾವಕ ದುರಂತ ; ಕಡಲೆಕಾಯಿ ಕುದಿಸುತ್ತಿದ್ದ ಪಾತ್ರೆಗೆ ಬಿದ್ದು 1 ವರ್ಷದ ಮಗು ದುರ್ಮರಣ

30/06/2025 9:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಕ್ಸಲರು ಶರಣಾದುದಲ್ಲ, ಸರಕಾರವೇ ನಕ್ಸಲರಿಗೆ ಶರಣಾಗಿದೆ: ಛಲವಾದಿ ನಾರಾಯಣಸ್ವಾಮಿ
KARNATAKA

ನಕ್ಸಲರು ಶರಣಾದುದಲ್ಲ, ಸರಕಾರವೇ ನಕ್ಸಲರಿಗೆ ಶರಣಾಗಿದೆ: ಛಲವಾದಿ ನಾರಾಯಣಸ್ವಾಮಿ

By kannadanewsnow0911/01/2025 5:27 PM

ಚಿತ್ರದುರ್ಗ: ನಕ್ಸಲರು ಶರಣಾದುದಲ್ಲ; ಸರಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.

ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. 20-25 ವರ್ಷಗಳಿಂದ ಯಾರಿಗೂ ಸಿಗದೇ ಇರುವವರು ಇವತ್ತು ನಿಮ್ಮ ಕೈಗೆ ಹೇಗೆ ಸಿಕ್ಕಿದರು? ವಿಕ್ರಂ ಗೌಡ ಸಾವಾದ ತಕ್ಷಣ ಉಳಿದವರೆಲ್ಲರಿಗೆ ಭಯ ಬಂತೇ? ಇದರ ಹಿಂದೆ ಒಂದು ಪಿತೂರಿ ಇದೆ ಎಂದು ಆರೋಪಿಸಿದರು.

ನಕ್ಸಲರು ಬರಿಗೈಯಲ್ಲಿ ಬಂದಿದ್ದಾರೆ. ಶಸ್ತ್ರಾಸ್ತ್ರಗಳು ಎಲ್ಲಿ ಹೋದವು? ಇವರು ಇಷ್ಟೇನಾ? ಇನ್ನೂ ಇದ್ದಾರಾ? ಅಥವಾ ಶಸ್ತ್ರಾಸ್ತ್ರಗಳನ್ನು ಅವರಿಗೆ ಕೊಟ್ಟು ಬಂದಿದ್ದಾರಾ?- ಈ ಥರ ಎಲ್ಲ ಪ್ರಶ್ನೆಗಳಿವೆ ಎಂದು ತಿಳಿಸಿದರು. ಕೋರ್ಟ್ ಅಥವಾ ಪೊಲೀಸರ ಮುಂದೆ ಅವರನ್ನು ಶರಣಾಗಲು ಸೂಚಿಸಬೇಕಿತ್ತು. ಮುಖ್ಯಮಂತ್ರಿಗಳ ಮುಂದೆ ಶರಣಾಗತಿ ಮಾಡಲು ಅವರಿಗೂ ಇವರಿಗೂ ಸಂಬಂಧ ಇತ್ತೇ ಎಂದು ಕೇಳಿದರು.

ಈ ಸರಕಾರ ಸಂಪೂರ್ಣವಾಗಿ ಭ್ರಷ್ಟರ ರಕ್ಷಣೆ ಮಾಡುತ್ತಿದೆ. ಭ್ರಷ್ಟಾಚಾರದಲ್ಲಿ ಇವರೂ ಇದ್ದಾರೆ. ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ; ನಾನು ಮುಖ್ಯಮಂತ್ರಿನಾ ನೀನಾ ಎಂಬ ಪರಿಸ್ಥಿತಿ ರಾಜ್ಯದ್ದು ಎಂದು ಆರೋಪಿಸಿದರು. ಯಾರೂ ಊಟಕ್ಕೂ ಒಟ್ಟಿಗೆ ಸೇರಬಾರದೆಂಬ ಬ್ರಿಟಿಷರು ಒಡೆದಾಳುವ ನೀತಿ ಕಾಂಗ್ರೆಸ್ಸಿನದು ಎಂದು ಟೀಕಿಸಿದರು.

ದಲಿತ ಮಾಫಿಯ, ದಲಿತ ವಿರೋಧಿ ಮಾಫಿಯ

ಇಲ್ಲೊಂದು ದಲಿತ ಮಾಫಿಯ, ದಲಿತ ವಿರೋಧಿತನ ಇದೆ. ಖರ್ಗೆಯವರ ಕುಟುಂಬ, ಕೆ.ಎಚ್.ಮುನಿಯಪ್ಪ ಅವರ ಕುಟುಂಬ, ಎಚ್.ಸಿ.ಮಹದೇವಪ್ಪ ಅವರ ಕುಟುಂಬ- ಈ ಫ್ಯಾಮಿಲಿಗಳೇ ಇಡೀ ಕಾಂಗ್ರೆಸ್ಸನ್ನು ಆಳುತ್ತಿವೆ. ಇದರಲ್ಲಿ ಬೇರೆಯವರಿಗೆ ಅವಕಾಶವೇ ಇಲ್ಲ; ಇದುವೇ ದಲಿತ ಮಾಫಿಯ ಎಂದು ಛಲವಾದಿ ನಾರಾಯಣಸ್ವಾಮಿ ಅವರು ವಿಶ್ಲೇಷಿಸಿದರು.

ದಲಿತರು ಸಿಎಂ ಆಗಬಾರದು; ಈ 3 ಕುಟುಂಬ ಬಿಟ್ಟು ಬೇರೆ ಯಾರೂ ಅಧಿಕಾರ ಪಡೆಯಬಾರದೆಂಬ ನೀತಿ ಇದೆ. ಒಂದು ದಲಿತ ಮಾಫಿಯ, ಇನ್ನೊಂದು ದಲಿತ ವಿರೋಧಿ ಮಾಫಿಯ ಎಂದು ತಿಳಿಸಿದರು. ಕಾಂಗ್ರೆಸ್ ನಾಶವಾಗುವ ಪರಿಸ್ಥಿತಿಗೆ ಬಂದಿದೆ. ಇಲ್ಲಿ ದಲಿತರಿಗೆ ಬೆಲೆಯೂ ಇಲ್ಲ ಎಂದರು.

ಕಾಂಗ್ರೆಸ್ ಪಕ್ಷದ ಸರಕಾರವು ಗ್ಯಾರಂಟಿಗಳನ್ನು ಕೊಟ್ಟಿದೆ. ಪರಿಶಿಷ್ಟ ಜಾತಿ- ವರ್ಗಗಳಿಗೆ ಪ್ರತ್ಯೇಕ ನಿಧಿಯನ್ನೂ ಕೊಟ್ಟಿದೆ. ಭಿಕ್ಷುಕನಿಗೆ ಕೈತುಂಬ ಚಿಲ್ರೆ ಕಾಸು ತಂದು ತಟ್ಟೆಗೆ ಹಾಕಿದರೆ ದಡದಡ ಸದ್ದಾಗುತ್ತದೆ. ಅವನು ಖುಷಿಯಾಗುತ್ತಾನೆ. ಪಕ್ಕದಲ್ಲಿ ಹಾಕಿದ್ದ ನೋಟುಗಳನ್ನು ಕದ್ದೊಯ್ಯುತ್ತಾರೆ. ಈ ಸರಕಾರವೂ ಹಾಗೇ; ಚಿಲ್ರೆ ಕಾಸನ್ನು ಸದ್ದು ಬರುವಂತೆ ಕೊಡುತ್ತದೆ. 25 ಸಾವಿರ ಕೋಟಿಯನ್ನು ಹಾಗೇ ಎತ್ಕೊಂಡು ಬಿಟ್ರಲ್ಲಾ ಎಂದು ಪ್ರಶ್ನಿಸಿದರು. ಸಿಎಂ ಸೇರಿ ಈ ಸರಕಾರದ ಎಲ್ಲರೂ ಕಳ್ಳರೇ ಎಂದು ಟೀಕಿಸಿದರು.

ಗುತ್ತಿಗೆದಾರ ಸಚಿನ್ ಪಾಂಚಾಳ್ ಕೇಸನ್ನು ಸಿಬಿಐಗೇ ಕೊಡಬೇಕು ಎಂದ ಅವರು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಆದ ಡೆತ್ ನೋಟನ್ನು ಪರೀಕ್ಷೆಗೆ ಓದುವವರ ರೀತಿ ಪೊಲೀಸರು ಓದುತ್ತಿದ್ದರು ಎಂದು ಆಕ್ಷೇಪಿಸಿದರು. ಇದರ ಹಿಂದೆ ಏನು ಪಿತೂರಿ ಇದೆ ಎಂದು ಗೊತ್ತಾಗಬೇಕಲ್ಲವೇ ಎಂದು ಕೇಳಿದರು. ಪ್ರಾಣತ್ಯಾಗ ಸುಲಭವಾಗಿ ಆಗುವ ಕೆಲಸವಲ್ಲ ಎಂಬುದನ್ನು ಪ್ರಿಯಾಂಕ್ ಖರ್ಗೆಯವರೇ ಬಹಳ ಸಲ ಹೇಳಿದ್ದಾರೆ. ಅವರಿಗೆ ಇದು ಅನ್ವಯ ಆಗುವುದಿಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಅವರಲ್ಲಿ ಕಲ್ಮಶ ಇಲ್ಲದಿದ್ದರೆ ಸಿಬಿಐಗೆ ಕೊಡಿ ಎನ್ನಬೇಕಿತ್ತು ಎಂದು ಸವಾಲು ಹಾಕಿದರು.

ಪ್ರಿಯಾಂಕ್ ಅನುಯಾಯಿಗಳು 15 ದಿನ ಎಲ್ಲಿ ಹೋಗಿದ್ದರು? ಬಿಜೆಪಿಯ 25 ಸಾವಿರ ಜನ ನಿಮ್ಮ ಮನೆಗೆ ಮುತ್ತಿಗೆ ಹಾಕಲು ಬಂದಿದ್ದರು. ಈಗಲೂ ಸಿಕ್ಕಿರುವುದು 5 ಜನ ಆರೋಪಿಗಳು. ಇನ್ನುಳಿದವರು ಎಲ್ಲಿ ಹೋದರು? ಎಂದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಣದ ಅವ್ಯವಹಾರ ಆಗಿತ್ತು. ನಾವು ಕೇಳಿದಾಗ ಅಷ್ಟಲ್ಲ; 87 ಕೋಟಿ ಎಂದಿದ್ದರು. ನುಂಗಿದ್ದು ಗ್ಯಾರಂಟಿ ಎಂದು ಮುಖ್ಯಮಂತ್ರಿಗಳೇ ಒಪ್ಪಿದ್ದಾರೆ; ಪ್ರಾಣತ್ಯಾಗ ಮಾಡಿದ ಚಂದ್ರಶೇಖರ್, ಮಂತ್ರಿಗಳು ಮತ್ತು ಚಯರ್‍ಮನ್ ಕಾರಣ ಎಂದಿದ್ದರು. ಎಸ್‍ಐಟಿಗೆ ಕೊಟ್ಟಾಗ ಆ ಎರಡು ಹೆಸರು ಬರಲಿಲ್ಲ. ಅವರನ್ನು ಕೈಬಿಟ್ಟಿದ್ದೇಕೆ ಎಂದು ಆಕ್ಷೇಪಿಸಿದರು.

ಪರಶುರಾಮ್ ಆತ್ಮಹತ್ಯೆ ಕೇಸನ್ನು ಸಿಐಡಿಗೆ ಕೊಟ್ಟಿದ್ದೀರಿ. ಇವತ್ತಿನವರೆಗೂ ಏನೂ ಆಗಿಲ್ಲ; ಎಂಎಲ್‍ಎ ಚನ್ನಾರೆಡ್ಡಿ ಕೇಸನ್ನು ಏನು ಮಾಡಿದಿರಿ? ಜಾತಿ ನಿಂದನೆ, ಆತ್ಮಹತ್ಯೆ ಕೇಸಿನಲ್ಲಿ ಹೆಸರಿದ್ದರೂ ಚನ್ನಾರೆಡ್ಡಿ, ಅವರ ಮಗನನ್ನು ಇವತ್ತಿನವರೆಗೂ ಬಂಧಿಸಲಿಲ್ಲವೇಕೆ ಎಂದು ಕೇಳಿದರು. ಪಕ್ಷದವರು ತಪ್ಪು ಮಾಡಿದರೆ ಅವರ ರಕ್ಷಣೆಗೆ ನಿಮ್ಮ ಸರಕಾರ ನಿಲ್ಲುತ್ತಿದೆ ಎಂದು ಆರೋಪಿಸಿದರು. ಬಿಜೆಪಿಯ ಶಾಸಕ ಸಿ.ಟಿ.ರವಿಯವರನ್ನು ಅರ್ಧ ಗಂಟೆಯಲ್ಲೇ ಬಂಧಿಸಿದ್ದೀರಿ; ಕೋರ್ಟಿಗೂ ಹಾಜರುಪಡಿಸದೆ ಕಬ್ಬಿನಗದ್ದೆ ಮತ್ತಿತರ ಕಡೆ ಸುತ್ತಿಸಿದ್ದೀರಿ ಎಂದು ಟೀಕಿಸಿದರು.

ಬೆಂಗಳೂರಲ್ಲಿ ತೆರಿಗೆ ಬಾಕಿ ಉಳಿಸಿಕೊಂಡ 830 ವಸತಿಯೇತರ ಕಟ್ಟಡಗಳಿಗೆ ‘BBMP’ ಬೀಗ ಮುದ್ರೆ

BREAKING : 11 ಮಂದಿ `DYSP’ (ಸಿವಿಲ್) ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ | DYSP Transfer

Share. Facebook Twitter LinkedIn WhatsApp Email

Related Posts

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM2 Mins Read

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM1 Min Read

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM1 Min Read
Recent News

ಮಳೆಯಲ್ಲಿ ಆಟವಾಡಲು ಹೋಗ್ತೀನಿ ಎಂದಿದ್ದಕ್ಕೆ 10 ವರ್ಷದ ಸ್ವಂತ ಮಗನನ್ನೇ ಇರಿದು ಕೊಂದ ಪಾಪಿ ತಂದೆ

30/06/2025 9:45 PM

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM

ಹೃದಯ ವಿದ್ರಾವಕ ದುರಂತ ; ಕಡಲೆಕಾಯಿ ಕುದಿಸುತ್ತಿದ್ದ ಪಾತ್ರೆಗೆ ಬಿದ್ದು 1 ವರ್ಷದ ಮಗು ದುರ್ಮರಣ

30/06/2025 9:28 PM

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM
State News
KARNATAKA

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

By kannadanewsnow0930/06/2025 9:35 PM KARNATAKA 2 Mins Read

ಶಿವಮೊಗ್ಗ: ಸಿನಿಮಾಗಳು ಕೇವಲ ದೃಶ್ಯ ಕಥಾನಕಗಳಲ್ಲ. ಅವು ಜೀವನದ ಸಣ್ಣ ತುಣುಕುಗಳು. ದೃಶ್ಯ, ಧ್ವನಿ, ಸಂಗೀತ, ಪಾತ್ರ ಮತ್ತು ದೃಶ್ಯ…

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM

SHOCKING: ಹಾಸನದಲ್ಲಿ ಆಟೋ ಚಲಾವಣೆ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ಇಂದು ಒಂದೇ ದಿನ ನಾಲ್ವರು ಬಲಿ

30/06/2025 8:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.