Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶಿವಮೊದಲ್ಲಿ ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ತಾಯಿ-ಮಗು ದುರ್ಮರಣ!

22/05/2025 9:15 PM

BIG NEWS: ರಾಜ್ಯದಲ್ಲಿ ಕೋವಿಡ್ ಬಗ್ಗೆ ಭಯಪಡಬೇಕಾದ ಪರಿಸ್ಥಿತಿಯಿಲ್ಲ: ಸಚಿವ ದಿನೇಶ್ ಗುಂಡೂರಾವ್

22/05/2025 9:05 PM

ತಾಲ್ಲೂಕಿಗೆ ಕೆಟ್ಟ ಹೆಸರು ತರುವ ವ್ಯವಸ್ಥೆಯನ್ನು ನಾನು ಸಹಿಸುವುದಿಲ್ಲ: ಅಧಿಕಾರಿಗಳಿಗೆ ಗೋಪಾಲಕೃಷ್ಣ ಬೇಳೂರು ವಾರ್ನಿಂಗ್

22/05/2025 8:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉತ್ತರ- ದಕ್ಷಿಣ ಕರ್ನಾಟಕ ಲಿಂಗಾಯತರ ಸಂಘಟನೆ ಅಗತ್ಯ: ಎಂ ಬಿ ಪಾಟೀಲ
KARNATAKA

ಉತ್ತರ- ದಕ್ಷಿಣ ಕರ್ನಾಟಕ ಲಿಂಗಾಯತರ ಸಂಘಟನೆ ಅಗತ್ಯ: ಎಂ ಬಿ ಪಾಟೀಲ

By kannadanewsnow0909/06/2024 6:02 PM

ಮೈಸೂರು: ಈಗ ಉತ್ತರ ಮತ್ತು ದಕ್ಷಿಣ ಕರ್ನಾಟಕ- ಎರಡೂ ಪ್ರಾದೇಶಿಕ ಭಾಗಗಳ ಸಮಸ್ತ ಲಿಂಗಾಯತರ ಸಂಬಂಧ ಮತ್ತು ಸಂಪರ್ಕ ಗಾಢವಾಗಬೇಕಾದ ಅಗತ್ಯವಿದೆ. ಇದು ಸಾಧ್ಯವಾದರೆ ಲಿಂಗಾಯತ ಸಮುದಾಯದ ಸಂಘಟನೆ ಮತ್ತಷ್ಟು ವ್ಯವಸ್ಥಿತವಾಗಿ ಆಗಲಿದೆ ಎಂದು ಸಮುದಾಯದ ಹಿರಿಯ ಮುಖಂಡರೂ ಆದ ಭಾರೀ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಭಾನುವಾರ ಹೇಳಿದ್ದಾರೆ.

ಮೈಸೂರಿನ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘಸಂಸ್ಥೆಗಳು ಮತ್ತು ಬಸವ ಬಳಗಗಳ ಒಕ್ಕೂಟ ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉತ್ತರ‌ ಮತ್ತು ದಕ್ಷಿಣ ಕರ್ನಾಟಕದ ಲಿಂಗಾಯತರು ಒಟ್ಟಾಗುವುದರ ಜತೆಗೆ, ಎಲ್ಲ ಉಪ ಪಂಗಡಗಳನ್ನೂ ಒಂದು ಮಾಡಿ ಸಮನ್ವಯ ಸಾಧಿಸಬೇಕು. ಅನೇಕ ಉಪ ಪಂಗಡಗಳು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಈ ನ್ಯೂನತೆಯನ್ನು ಸರಿಪಡಿಸುವ ಕೆಲಸ ಮೊದಲು ಆಗಬೇಕಾಗಿದೆ. ರಾಜ್ಯದ ದಕ್ಷಿಣ ಭಾಗದಲ್ಲಿ ಸಿದ್ಧಗಂಗೆ ಮತ್ತು ಸುತ್ತೂರು ಮಠಗಳು ಅಪಾರ ಕೆಲಸ ಮಾಡಿವೆ. ಈಗ ಸಂಘಟನೆಯ ದೃಷ್ಟಿಯಿಂದ ಉತ್ತರ ಭಾಗದವರು ದಕ್ಷಿಣ ಭಾಗದವರಿಗೆ ಸ್ಪಂದಿಸುವ ಕೆಲಸ ಮಾಡಲಿದ್ದೇವೆ. ಜತೆಗೆ ಸಮುದಾಯದ ನ್ಯಾಯಯುತ ಬೇಡಿಕೆಗಳಿಗೆ ಸರಕಾರದ ಬೆಂಬಲವೂ ಇರಲಿದೆ ಎಂದು ಅವರು ನುಡಿದರು.

ನಾವು ನಮ್ಮ ಧರ್ಮವನ್ನು ಪ್ರೀತಿಸಬೇಕು. ಜೊತೆಗೆ ಉಳಿದ ಧರ್ಮಗಳನ್ನು ಗೌರವಿಸಬೇಕು. ಹಿಂದಿನ ಸಲ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಇದ್ದಾಗ ಸರಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯ ಮಾಡಿದೆವು. ಈ ಬಾರಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆವು ಎಂದು ಅವರು ಹೇಳಿದರು.

ಲಿಂಗಾಯತ ಸಮುದಾಯವನ್ನು ಒಗ್ಗೂಡಿಸಿದ ಕೀರ್ತಿ ಶಿರಸಂಗಿಯ ಲಿಂಗರಾಜ ದೇಸಾಯಿ ಅವರಿಗೆ ಸಲ್ಲುತ್ತದೆ. ಅವರು ವೀರಶೈವ -ಲಿಂಗಾಯತ ಮಹಾಸಭೆ ಹುಟ್ಟು ಹಾಕಿದರು. ಹರ್ಡೀಕರ್ ಮಂಜಪ್ಪನವರು ಬಸವ ಜಯಂತಿಗೆ ಒಂದು ಅರ್ಥಪೂರ್ಣ ರೂಪ ಕೊಟ್ಟರು. ಫ.ಗು.ಹಳಕಟ್ಟಿ ಅವರು ಒಟ್ಟು 700ಕ್ಕೂ ಹೆಚ್ಚು ವಚನಕಾರರನ್ನು ಗುರುತಿಸಿದರು. ಸಂಸ್ಕೃತಮಯವಾಗಿದ್ದ ಕನ್ನಡಕ್ಕೆ ಇಲ್ಲಿನ ಸಹಜ ರೂಪ ಕೊಟ್ಟ ಕೀರ್ತಿ ವಚನಕಾರರಿಗೆ ಸಲ್ಲುತ್ತದೆ ಎಂದು ಅವರು ವಿವರಿಸಿದರು.

ಬಸವಣ್ಣನವರಿಗೆ ವಿಶ್ವಗುರುವಿನ ಸ್ಥಾನವಿದೆ. ಹನ್ನೆರಡನೇ ಶತಮಾನದಲ್ಲಿ ಅನುಭವ ಮಂಟಪ ಕಟ್ಟಿದ ಹಿರಿಮೆ ಅವರದಾಗಿದೆ. ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದ ಅವರ ತತ್ವಾದರ್ಶಗಳನ್ನು ಪಸರಿಸಲು ಸಮುದಾಯದ ಸಂಘಟನೆ ಬೇಕಾಗಿದೆ ಎಂದು ಪಾಟೀಲ ಆಶಿಸಿದರು.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಚಿವರಾದ ಡಾ.ಎಚ್. ಸಿ ಮಹದೇವಪ್ಪ, ವೆಂಕಟೇಶ, ಶಾಸಕರಾದ ಡಾ.ಯತೀಂದ್ರ, ವಿನಯ ಕುಲಕರ್ಣಿ ದೇವನೂರಿನ ಶ್ರೀ ಮಹಾಂತ ಸ್ವಾಮೀಜಿ ಮುಂತಾದವರು ಭಾಗವಹಿಸಿದ್ದರು.

ಬಸವ ಜಯಂತಿ ಕಾರ್ಯಕ್ರಮ ಸಮಿತಿ ಅಧ್ಯಕ್ಷ ಪ್ರದೀಪ್ ಕುಮಾರ್ ಸ್ವಾಗತಿಸಿದರು.

ಭಾರತದ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗಳ ಸಂಬಳ ಎಷ್ಟು? ಇಲ್ಲಿದೆ ಮಾಹಿತಿ

Modi 3.0: ‘ಕೇಂದ್ರ ಸಚಿವ’ರಾಗಿ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ‘ಮೋದಿ’ಗೆ ಧನ್ಯವಾದ ಅರ್ಪಿಸಿದ ‘HD ಕುಮಾರಸ್ವಾಮಿ’

Share. Facebook Twitter LinkedIn WhatsApp Email

Related Posts

BREAKING : ಶಿವಮೊದಲ್ಲಿ ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ತಾಯಿ-ಮಗು ದುರ್ಮರಣ!

22/05/2025 9:15 PM1 Min Read

BIG NEWS: ರಾಜ್ಯದಲ್ಲಿ ಕೋವಿಡ್ ಬಗ್ಗೆ ಭಯಪಡಬೇಕಾದ ಪರಿಸ್ಥಿತಿಯಿಲ್ಲ: ಸಚಿವ ದಿನೇಶ್ ಗುಂಡೂರಾವ್

22/05/2025 9:05 PM1 Min Read

ತಾಲ್ಲೂಕಿಗೆ ಕೆಟ್ಟ ಹೆಸರು ತರುವ ವ್ಯವಸ್ಥೆಯನ್ನು ನಾನು ಸಹಿಸುವುದಿಲ್ಲ: ಅಧಿಕಾರಿಗಳಿಗೆ ಗೋಪಾಲಕೃಷ್ಣ ಬೇಳೂರು ವಾರ್ನಿಂಗ್

22/05/2025 8:56 PM2 Mins Read
Recent News

BREAKING : ಶಿವಮೊದಲ್ಲಿ ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ತಾಯಿ-ಮಗು ದುರ್ಮರಣ!

22/05/2025 9:15 PM

BIG NEWS: ರಾಜ್ಯದಲ್ಲಿ ಕೋವಿಡ್ ಬಗ್ಗೆ ಭಯಪಡಬೇಕಾದ ಪರಿಸ್ಥಿತಿಯಿಲ್ಲ: ಸಚಿವ ದಿನೇಶ್ ಗುಂಡೂರಾವ್

22/05/2025 9:05 PM

ತಾಲ್ಲೂಕಿಗೆ ಕೆಟ್ಟ ಹೆಸರು ತರುವ ವ್ಯವಸ್ಥೆಯನ್ನು ನಾನು ಸಹಿಸುವುದಿಲ್ಲ: ಅಧಿಕಾರಿಗಳಿಗೆ ಗೋಪಾಲಕೃಷ್ಣ ಬೇಳೂರು ವಾರ್ನಿಂಗ್

22/05/2025 8:56 PM

BIG NEWS : ಯಜಮಾನಿಯರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ‘ಗೃಹಲಕ್ಷ್ಮಿ ಸಂಘ’ ರಚನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

22/05/2025 8:49 PM
State News
KARNATAKA

BREAKING : ಶಿವಮೊದಲ್ಲಿ ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾಗಿ ತಾಯಿ-ಮಗು ದುರ್ಮರಣ!

By kannadanewsnow0522/05/2025 9:15 PM KARNATAKA 1 Min Read

ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಗೆ ವೇಗವಾಗಿ ಬಂದು ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಮೇಲಿದ್ದ…

BIG NEWS: ರಾಜ್ಯದಲ್ಲಿ ಕೋವಿಡ್ ಬಗ್ಗೆ ಭಯಪಡಬೇಕಾದ ಪರಿಸ್ಥಿತಿಯಿಲ್ಲ: ಸಚಿವ ದಿನೇಶ್ ಗುಂಡೂರಾವ್

22/05/2025 9:05 PM

ತಾಲ್ಲೂಕಿಗೆ ಕೆಟ್ಟ ಹೆಸರು ತರುವ ವ್ಯವಸ್ಥೆಯನ್ನು ನಾನು ಸಹಿಸುವುದಿಲ್ಲ: ಅಧಿಕಾರಿಗಳಿಗೆ ಗೋಪಾಲಕೃಷ್ಣ ಬೇಳೂರು ವಾರ್ನಿಂಗ್

22/05/2025 8:56 PM

BIG NEWS : ಯಜಮಾನಿಯರನ್ನು ಆರ್ಥಿಕವಾಗಿ ಸದೃಢರನ್ನಾಗಿಸಲು ‘ಗೃಹಲಕ್ಷ್ಮಿ ಸಂಘ’ ರಚನೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

22/05/2025 8:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.