Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿತ್ರದುರ್ಗದ ‘ಹಿರಿಯ ಪತ್ರಕರ್ತ ಡಿ.ಕುಮಾರಸ್ವಾಮಿ’ ಅವರಿಗೆ ‘ಕರ್ನಾಟಕ ಮಾಧ್ಯಮ ಅಕಾಡೆಮಿ’ ಪ್ರಶಸ್ತಿ

09/01/2026 9:53 PM

2024-25ನೇ ಸಾಲಿನ KAS ಪರೀಕ್ಷಾ ಪೂರ್ವ ತರಬೇತಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

09/01/2026 9:35 PM

ಸಾಗರದ ಮಾರಿಕಾಂಬ ಜಾತ್ರೆಗೆ ಭರ್ಜರಿ ಸಿದ್ಧತೆ: ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಪೋಸ್ಟರ್, ಕ್ಯಾಲೆಂಡರ್ ಬಿಡುಗಡೆ

09/01/2026 9:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉತ್ತರ- ದಕ್ಷಿಣ ಕರ್ನಾಟಕ ಲಿಂಗಾಯತರ ಸಂಘಟನೆ ಅಗತ್ಯ: ಎಂ ಬಿ ಪಾಟೀಲ
KARNATAKA

ಉತ್ತರ- ದಕ್ಷಿಣ ಕರ್ನಾಟಕ ಲಿಂಗಾಯತರ ಸಂಘಟನೆ ಅಗತ್ಯ: ಎಂ ಬಿ ಪಾಟೀಲ

By kannadanewsnow0909/06/2024 6:02 PM

ಮೈಸೂರು: ಈಗ ಉತ್ತರ ಮತ್ತು ದಕ್ಷಿಣ ಕರ್ನಾಟಕ- ಎರಡೂ ಪ್ರಾದೇಶಿಕ ಭಾಗಗಳ ಸಮಸ್ತ ಲಿಂಗಾಯತರ ಸಂಬಂಧ ಮತ್ತು ಸಂಪರ್ಕ ಗಾಢವಾಗಬೇಕಾದ ಅಗತ್ಯವಿದೆ. ಇದು ಸಾಧ್ಯವಾದರೆ ಲಿಂಗಾಯತ ಸಮುದಾಯದ ಸಂಘಟನೆ ಮತ್ತಷ್ಟು ವ್ಯವಸ್ಥಿತವಾಗಿ ಆಗಲಿದೆ ಎಂದು ಸಮುದಾಯದ ಹಿರಿಯ ಮುಖಂಡರೂ ಆದ ಭಾರೀ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಭಾನುವಾರ ಹೇಳಿದ್ದಾರೆ.

ಮೈಸೂರಿನ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘಸಂಸ್ಥೆಗಳು ಮತ್ತು ಬಸವ ಬಳಗಗಳ ಒಕ್ಕೂಟ ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉತ್ತರ‌ ಮತ್ತು ದಕ್ಷಿಣ ಕರ್ನಾಟಕದ ಲಿಂಗಾಯತರು ಒಟ್ಟಾಗುವುದರ ಜತೆಗೆ, ಎಲ್ಲ ಉಪ ಪಂಗಡಗಳನ್ನೂ ಒಂದು ಮಾಡಿ ಸಮನ್ವಯ ಸಾಧಿಸಬೇಕು. ಅನೇಕ ಉಪ ಪಂಗಡಗಳು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಈ ನ್ಯೂನತೆಯನ್ನು ಸರಿಪಡಿಸುವ ಕೆಲಸ ಮೊದಲು ಆಗಬೇಕಾಗಿದೆ. ರಾಜ್ಯದ ದಕ್ಷಿಣ ಭಾಗದಲ್ಲಿ ಸಿದ್ಧಗಂಗೆ ಮತ್ತು ಸುತ್ತೂರು ಮಠಗಳು ಅಪಾರ ಕೆಲಸ ಮಾಡಿವೆ. ಈಗ ಸಂಘಟನೆಯ ದೃಷ್ಟಿಯಿಂದ ಉತ್ತರ ಭಾಗದವರು ದಕ್ಷಿಣ ಭಾಗದವರಿಗೆ ಸ್ಪಂದಿಸುವ ಕೆಲಸ ಮಾಡಲಿದ್ದೇವೆ. ಜತೆಗೆ ಸಮುದಾಯದ ನ್ಯಾಯಯುತ ಬೇಡಿಕೆಗಳಿಗೆ ಸರಕಾರದ ಬೆಂಬಲವೂ ಇರಲಿದೆ ಎಂದು ಅವರು ನುಡಿದರು.

ನಾವು ನಮ್ಮ ಧರ್ಮವನ್ನು ಪ್ರೀತಿಸಬೇಕು. ಜೊತೆಗೆ ಉಳಿದ ಧರ್ಮಗಳನ್ನು ಗೌರವಿಸಬೇಕು. ಹಿಂದಿನ ಸಲ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಇದ್ದಾಗ ಸರಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯ ಮಾಡಿದೆವು. ಈ ಬಾರಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆವು ಎಂದು ಅವರು ಹೇಳಿದರು.

ಲಿಂಗಾಯತ ಸಮುದಾಯವನ್ನು ಒಗ್ಗೂಡಿಸಿದ ಕೀರ್ತಿ ಶಿರಸಂಗಿಯ ಲಿಂಗರಾಜ ದೇಸಾಯಿ ಅವರಿಗೆ ಸಲ್ಲುತ್ತದೆ. ಅವರು ವೀರಶೈವ -ಲಿಂಗಾಯತ ಮಹಾಸಭೆ ಹುಟ್ಟು ಹಾಕಿದರು. ಹರ್ಡೀಕರ್ ಮಂಜಪ್ಪನವರು ಬಸವ ಜಯಂತಿಗೆ ಒಂದು ಅರ್ಥಪೂರ್ಣ ರೂಪ ಕೊಟ್ಟರು. ಫ.ಗು.ಹಳಕಟ್ಟಿ ಅವರು ಒಟ್ಟು 700ಕ್ಕೂ ಹೆಚ್ಚು ವಚನಕಾರರನ್ನು ಗುರುತಿಸಿದರು. ಸಂಸ್ಕೃತಮಯವಾಗಿದ್ದ ಕನ್ನಡಕ್ಕೆ ಇಲ್ಲಿನ ಸಹಜ ರೂಪ ಕೊಟ್ಟ ಕೀರ್ತಿ ವಚನಕಾರರಿಗೆ ಸಲ್ಲುತ್ತದೆ ಎಂದು ಅವರು ವಿವರಿಸಿದರು.

ಬಸವಣ್ಣನವರಿಗೆ ವಿಶ್ವಗುರುವಿನ ಸ್ಥಾನವಿದೆ. ಹನ್ನೆರಡನೇ ಶತಮಾನದಲ್ಲಿ ಅನುಭವ ಮಂಟಪ ಕಟ್ಟಿದ ಹಿರಿಮೆ ಅವರದಾಗಿದೆ. ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದ ಅವರ ತತ್ವಾದರ್ಶಗಳನ್ನು ಪಸರಿಸಲು ಸಮುದಾಯದ ಸಂಘಟನೆ ಬೇಕಾಗಿದೆ ಎಂದು ಪಾಟೀಲ ಆಶಿಸಿದರು.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಚಿವರಾದ ಡಾ.ಎಚ್. ಸಿ ಮಹದೇವಪ್ಪ, ವೆಂಕಟೇಶ, ಶಾಸಕರಾದ ಡಾ.ಯತೀಂದ್ರ, ವಿನಯ ಕುಲಕರ್ಣಿ ದೇವನೂರಿನ ಶ್ರೀ ಮಹಾಂತ ಸ್ವಾಮೀಜಿ ಮುಂತಾದವರು ಭಾಗವಹಿಸಿದ್ದರು.

ಬಸವ ಜಯಂತಿ ಕಾರ್ಯಕ್ರಮ ಸಮಿತಿ ಅಧ್ಯಕ್ಷ ಪ್ರದೀಪ್ ಕುಮಾರ್ ಸ್ವಾಗತಿಸಿದರು.

ಭಾರತದ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗಳ ಸಂಬಳ ಎಷ್ಟು? ಇಲ್ಲಿದೆ ಮಾಹಿತಿ

Modi 3.0: ‘ಕೇಂದ್ರ ಸಚಿವ’ರಾಗಿ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ‘ಮೋದಿ’ಗೆ ಧನ್ಯವಾದ ಅರ್ಪಿಸಿದ ‘HD ಕುಮಾರಸ್ವಾಮಿ’

Share. Facebook Twitter LinkedIn WhatsApp Email

Related Posts

ಚಿತ್ರದುರ್ಗದ ‘ಹಿರಿಯ ಪತ್ರಕರ್ತ ಡಿ.ಕುಮಾರಸ್ವಾಮಿ’ ಅವರಿಗೆ ‘ಕರ್ನಾಟಕ ಮಾಧ್ಯಮ ಅಕಾಡೆಮಿ’ ಪ್ರಶಸ್ತಿ

09/01/2026 9:53 PM2 Mins Read

2024-25ನೇ ಸಾಲಿನ KAS ಪರೀಕ್ಷಾ ಪೂರ್ವ ತರಬೇತಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

09/01/2026 9:35 PM1 Min Read

ಸಾಗರದ ಮಾರಿಕಾಂಬ ಜಾತ್ರೆಗೆ ಭರ್ಜರಿ ಸಿದ್ಧತೆ: ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಪೋಸ್ಟರ್, ಕ್ಯಾಲೆಂಡರ್ ಬಿಡುಗಡೆ

09/01/2026 9:20 PM1 Min Read
Recent News

ಚಿತ್ರದುರ್ಗದ ‘ಹಿರಿಯ ಪತ್ರಕರ್ತ ಡಿ.ಕುಮಾರಸ್ವಾಮಿ’ ಅವರಿಗೆ ‘ಕರ್ನಾಟಕ ಮಾಧ್ಯಮ ಅಕಾಡೆಮಿ’ ಪ್ರಶಸ್ತಿ

09/01/2026 9:53 PM

2024-25ನೇ ಸಾಲಿನ KAS ಪರೀಕ್ಷಾ ಪೂರ್ವ ತರಬೇತಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

09/01/2026 9:35 PM

ಸಾಗರದ ಮಾರಿಕಾಂಬ ಜಾತ್ರೆಗೆ ಭರ್ಜರಿ ಸಿದ್ಧತೆ: ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಪೋಸ್ಟರ್, ಕ್ಯಾಲೆಂಡರ್ ಬಿಡುಗಡೆ

09/01/2026 9:20 PM

ರಾತ್ರಿ ಸಮಯದಲ್ಲಿ ಮಾತ್ರ ತೆರೆದಿರುವ ಈ ದೇವಸ್ಥಾನಕ್ಕೆ ಭೇಟಿ ನೀಡಿದರೆ ನಿಮ್ಮ ಜೀವನದಲ್ಲಿನ ಕತ್ತಲು ಬೆಳಕಾಗುತ್ತೆ

09/01/2026 8:37 PM
State News
KARNATAKA

ಚಿತ್ರದುರ್ಗದ ‘ಹಿರಿಯ ಪತ್ರಕರ್ತ ಡಿ.ಕುಮಾರಸ್ವಾಮಿ’ ಅವರಿಗೆ ‘ಕರ್ನಾಟಕ ಮಾಧ್ಯಮ ಅಕಾಡೆಮಿ’ ಪ್ರಶಸ್ತಿ

By kannadanewsnow0909/01/2026 9:53 PM KARNATAKA 2 Mins Read

ಚಿತ್ರದುರ್ಗ: ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. 2025ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿಯು ಚಿತ್ರದುರ್ಗದ ಹಿರಿಯ…

2024-25ನೇ ಸಾಲಿನ KAS ಪರೀಕ್ಷಾ ಪೂರ್ವ ತರಬೇತಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

09/01/2026 9:35 PM

ಸಾಗರದ ಮಾರಿಕಾಂಬ ಜಾತ್ರೆಗೆ ಭರ್ಜರಿ ಸಿದ್ಧತೆ: ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಪೋಸ್ಟರ್, ಕ್ಯಾಲೆಂಡರ್ ಬಿಡುಗಡೆ

09/01/2026 9:20 PM

ರಾತ್ರಿ ಸಮಯದಲ್ಲಿ ಮಾತ್ರ ತೆರೆದಿರುವ ಈ ದೇವಸ್ಥಾನಕ್ಕೆ ಭೇಟಿ ನೀಡಿದರೆ ನಿಮ್ಮ ಜೀವನದಲ್ಲಿನ ಕತ್ತಲು ಬೆಳಕಾಗುತ್ತೆ

09/01/2026 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.