Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ITI ಪ್ರವೇಶಕ್ಕೆ ಅರ್ಜಿ ಆಹ್ವಾನ: ಮೇ.28 ಲಾಸ್ಟ್ ಡೇಟ್

13/05/2025 9:39 PM

ಈ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

13/05/2025 9:31 PM

ಪಾಕಿಸ್ತಾನ ಭಯೋತ್ಪಾದಕರ ನಾಡು ಎಂಬುದು ಸಾಬೀತು: ಛಲವಾದಿ ನಾರಾಯಣಸ್ವಾಮಿ

13/05/2025 9:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಲ್ಲಿಗೆ ಪಯಣ ಯಾವುದೋ ದಾರಿ: ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆಗೊಳಿಸಿದರು ಡಾ.ಮಂಜುನಾಥ್!
FILM

ಎಲ್ಲಿಗೆ ಪಯಣ ಯಾವುದೋ ದಾರಿ: ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆಗೊಳಿಸಿದರು ಡಾ.ಮಂಜುನಾಥ್!

By kannadanewsnow0721/10/2024 8:40 AM
Dr. Manjunath releases lyrical video song Where to go somewhere!

ಕೆಎನ್‌ಎನ್‌ಡಿಜಿಟಲ್ ಡೆಸ್ಕ್‌: ಅಭಿಮನ್ಯು ಕಾಶಿನಾಥ್ ನಾಯಕನಾಗಿ ನಟಿಸಿರುವ `ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರ ಇದೇ ಅಕ್ಟೋಬರ್ 25ರಂದು ಬಿಡುಗಡೆಗೊಳ್ಳಲಿದೆ. ಇತ್ತೀಚೆಗಷ್ಟೇ ಈ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿತ್ತು. ಅದಕ್ಕೆ ಭರಪೂರ ಮೆಚ್ಚುಗೆ ಮೂಡಿಕೊಳ್ಳುತ್ತಲೇ, ಸಂಸದ, ಖ್ಯಾತ ವೈದ್ಯ ಡಾ.ಮಂಜುನಾಥ್ ಈ ಚಿತ್ರದ `ನೀನಿರು ಸಾಕು’ ಎಂಬ ಲಿರಿಕಲ್ ವೀಡಿಯೋ ಸಾಂಗ್ ಅನ್ನು ಬಿಡುಗಡೆಗೊಳಿಸಿದ್ದಾರೆ. ನಟ, ನಿರ್ದೇಶಕ ಕಾಶಿನಾಥ್ ಅವರನ್ನು ನೆನೆಸಿಕೊಳ್ಳುತ್ತಲೇ, ಅವರ ಪುತ್ರ ಅಭಿಮನ್ಯು ಕಾಶೀನಾಥ್ ರಿಗೆ ಶುಭ ಕೋರಿದ್ದಾರೆ.

ಅಂತ್ಯಂತ ಸಂತಸದಿಂದ ಈ ಲಿರಿಕಲ್ ವೀಡಿಯೋ ಸಾಂಗ್ ಅನ್ನು ಡಾಕ್ಟರ್ ಮಂಜುನಾಥ್ ಬಿಡುಗಡೆಗೊಳಿಸಿದ್ದಾರೆ. `ಕಾಶೀನಾಥ್ ಅವರು ನಟನಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗ ಹಾಗೂ ಸಿನಿಮಾ ಪ್ರೇಮಿಗಳಿಗೆಲ್ಲ ಚಿರಪರಿಚಿತರು. ವಿಶಿಷ್ಟ ಪ್ರತಿಭೆಯಿಂದಲೇ ಪ್ರಸಿದ್ಧಿ ಪಡೆದವರು. ಅವರ ಪುತ್ರ ಅಭಿಮನ್ಯು ಕಾಶಿನಾಥ್ ನಾಯಕನಾಗಿ ನಟಿಸಿರುವ ಎಲ್ಲಿಗೆ ಪಯಣ ಯಾವುದೋ ದಾರಿ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಈ ಚಿತ್ರವನ್ನು ಎಲ್ಲರೂ ಚಿತ್ರಮಂದಿರಗಳಲ್ಲಿ ನೋಡುವ ಮೂಲಕ ಬೆಂಬಲಿಸಬೇಕಿದೆ. ಕಾಶೀನಾಥ್ ಎಂಬ ಹೆಸರೇ ಒಂದು ಬ್ರ್ಯಾಂಡ್ ಇದ್ದಂತೆ. ಅವರ ಮಗ ಅಭಿಮನ್ಯು ಕೂಡಾ ಅದೇ ಎತ್ತರಕ್ಕೇರಲಿ’ ಎಂದು ಹಾರೈಸುತ್ತಾ, ಡಾ.ಮಂಜುನಾಥ್ ಅವರು ಒಂದಿಡೀ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಅರೆ ಏನಿದು ಕರೆದಂತಿದೆ ಮರೆಯಿಂದ ನೀ ನನ್ನನೇ… ಅಂತ ಶುರುವಾಗುವ ಈ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಒದಗಿಸಿದ್ದಾರೆ. ವಾಸುಕಿ ವೈಭವ್ ಹಾಗೂ ಶ್ರೀಲಕ್ಷ್ಮಿ ಬೆಳ್ಮಣ್ಣು ಕಂಠಸಿರಿಯಲ್ಲಿ ಮೂಡಿ ಬಂದಿರುವ ಈ ಮೆಲೋಡಿಯಸ್ ಸಾಂಗಿಗೆ ಪ್ರಣವ್ ರಾವ್ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಶೇಷವೆಂದರೆ, ಕಿಚ್ಚಾ ಸುದೀಪ್ ಈ ಸಿನಿಮಾಕ್ಕಾಗಿ ಒಂದು ಹಾಡನ್ನು ಹಾಡಿದ್ದಾರೆ. ಕಿರಣ್ ಎಸ್ ಸೂರ್ಯ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಸೂಕ್ಷ್ಮ ಕಥಾನಕವನ್ನೊಳಗೊಂಡಿದೆ. ಈಗಾಗಲೇ ಲಾಂಚ್ ಆಗಿರುವ ಟೀಸರ್ ಮತ್ತು ಟ್ರೈಲರ್ ಮೂಲಕ ಒಟ್ಟಾರೆ ಚಿತ್ರದ ಝಲಕ್ಕುಗಳು ಪ್ರೇಕ್ಷಕರ ಮುಂದೆ ಅನಾವರಣಗೊಂಡಿವೆ.

ಸುದರ್ಶನ್ ಆರ್ಟ್ಸ್ ಬ್ಯಾನರಿನಡಿಯಲ್ಲಿ ಜತಿನ್ ಪಟೇಲ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕಿರಣ್ ಎಸ್ ಸೂರ್ಯ ನಿರ್ದೇಶನ ಮಾಡಿದ್ದಾರೆ. ಅಭಿಮನ್ಯು ಕಾಶಿನಾಥ್, ಸ್ಫೂರ್ತಿ ಉಡಿಮನೆ ನಾಯಕ ನಾಯಕಿಯರಾಗಿ ನಟಿಸಿದ್ದಾರೆ. ವಿಜಯಶ್ರೀ ಕಲ್ಬುರ್ಗಿ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಲರಾಜ್ವಾಡಿ, ಶೋಭನ್, ಪ್ರದೀಪ್, ರಮೇಶ್ ನಾಯಕ್, ರಿನಿ ಮುಂತಾದವರ ತಾರಾಗಣವಿದೆ. ಸತ್ಯ ರಾಮ್ ಛಾಯಾಗ್ರಹಣ, ಗಣೇಶ್ ನಿರ್ಚಲ್ ಸಂಕಲನ, ಪ್ರಮೋದ್ ಮರವಂತೆ, ಕಿರಣ್ ಎಸ್ ಸೂರ್ಯ ಸಾಹಿತ್ಯ, ಜೀವನ್ ನೃತ್ಯ ನಿರ್ದೇಶನ, ಚಂದ್ರು ಸಾಹಸ ನಿರ್ದೇಶನ, ಪ್ರಣವ್ ರಾವ್ ಸಂಗೀತ ನಿರ್ದೇಶನದೊಂದಿಗೆ ಈ ಚಿತ್ರ ಮೂಡಿ ಬಂದಿದೆ.

 

 

Neeniru Saaku Lyrical | Ellige Payana Yavudo Daari |AbhhimanyuuKashinath |Pramod| |PranavRao|Kiren S
Share. Facebook Twitter LinkedIn WhatsApp Email

Related Posts

ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ- ಮೊದಲ ಮಗುವಿನ ನಿರೀಕ್ಷೆಯಲ್ಲಿ ವರುಣ್ ತೇಜ್ ದಂಪತಿ

06/05/2025 4:33 PM2 Mins Read

ಖ್ಯಾತ ಮಲಯಾಳಂ ನಟ ವಿಷ್ಣು ಪ್ರಸಾದ್ ಇನ್ನಿಲ್ಲ | Actor Vishnu Prasad No More

02/05/2025 3:26 PM1 Min Read

BREAKING : ಸಿಂಧೂ ನೀರನ್ನು ತಡೆದರೆ ತಕ್ಕ ಉತ್ತರ ನೀಡಬೇಕಾಗುತ್ತದೆ : ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿಕೆ

26/04/2025 11:44 AM1 Min Read
Recent News

ITI ಪ್ರವೇಶಕ್ಕೆ ಅರ್ಜಿ ಆಹ್ವಾನ: ಮೇ.28 ಲಾಸ್ಟ್ ಡೇಟ್

13/05/2025 9:39 PM

ಈ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

13/05/2025 9:31 PM

ಪಾಕಿಸ್ತಾನ ಭಯೋತ್ಪಾದಕರ ನಾಡು ಎಂಬುದು ಸಾಬೀತು: ಛಲವಾದಿ ನಾರಾಯಣಸ್ವಾಮಿ

13/05/2025 9:27 PM

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಬಾಲಕರು ಅರೆಸ್ಟ್!

13/05/2025 9:21 PM
State News
KARNATAKA

ITI ಪ್ರವೇಶಕ್ಕೆ ಅರ್ಜಿ ಆಹ್ವಾನ: ಮೇ.28 ಲಾಸ್ಟ್ ಡೇಟ್

By kannadanewsnow0913/05/2025 9:39 PM KARNATAKA 1 Min Read

ಚಿತ್ರದುರ್ಗ : ಚಳ್ಳಕೆರೆ ನಗರದ ಪಾವಗಡ ರಸ್ತೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನ ಪ್ರವೇಶಾತಿಗೆ ಇಎಂ, ಫಿಟ್ಟರ್, ವೆಲ್ಡರ್,…

ಈ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

13/05/2025 9:31 PM

ಪಾಕಿಸ್ತಾನ ಭಯೋತ್ಪಾದಕರ ನಾಡು ಎಂಬುದು ಸಾಬೀತು: ಛಲವಾದಿ ನಾರಾಯಣಸ್ವಾಮಿ

13/05/2025 9:27 PM

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಬಾಲಕರು ಅರೆಸ್ಟ್!

13/05/2025 9:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.