Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೈಯಂತೆ ಕಾಣುವ ಈ ‘ಹಣ್ಣು’ ತಿನ್ನುವುದ್ರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ.?

30/06/2025 10:08 PM

ಮಳೆಯಲ್ಲಿ ಆಟವಾಡಲು ಹೋಗ್ತೀನಿ ಎಂದಿದ್ದಕ್ಕೆ 10 ವರ್ಷದ ಸ್ವಂತ ಮಗನನ್ನೇ ಇರಿದು ಕೊಂದ ಪಾಪಿ ತಂದೆ

30/06/2025 9:45 PM

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ನೇಹಾ ಹಿರೇಮಠ್ ಕೊಲೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸಲು ಪ್ರಯತ್ನ- CM ಸಿದ್ಧರಾಮಯ್ಯ
KARNATAKA

BIG NEWS: ನೇಹಾ ಹಿರೇಮಠ್ ಕೊಲೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸಲು ಪ್ರಯತ್ನ- CM ಸಿದ್ಧರಾಮಯ್ಯ

By kannadanewsnow0925/04/2024 9:25 PM

ಹುಬ್ಬಳ್ಳಿ : ನೇಹಾ ಹಿರೇಮಠ್ ಕೊಲೆ ಅತ್ಯಂತ ದುರದೃಷ್ಟಕರ ಘಟನೆ.ತ್ವರಿತ ವಿಚಾರಣೆಗಾಗಿ ಸಿಒಡಿ ಗೆ ಪ್ರಕರಣವನ್ನು ವಹಿಸಲಾಗಿದೆ. ಜೊತೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಿ. ಪ್ರತ್ಯೇಕ ವಿಚಾರಣೆ ಮಾಡಿ ಕೊಲೆ ಆರೋಪಿಗೆ ಆದಷ್ಟು ಕಠಿಣ ಶಿಕ್ಷೆ ಕೊಡಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಕೊಲೆಯದ ನೇಹಾ ಹಿರೇಮಠ್ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ನೊಂದ ಕುಟುಂಬ ವರ್ಗದವರಿಗೆ ಸಾಂತ್ವನ

ಬಿಜೆಪಿಯವರು ಸಿಬಿಐ ಗೆ ಪ್ರಕರಣ ವಹಿಸಲು ಆಗ್ರಹಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದೆ. ಯಾವುದಾದರೂ ಒಂದು ಪ್ರಕರಣವನ್ನು ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ಸಿಬಿಐ ಗೆ ಕೊಟ್ಟಿಲ್ಲ. ನನ್ನ ಅವಧಿಯಲ್ಲಿ ಅನೇಕ ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೇನೆ. ಇದರಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ರಾಜಕೀಯದ ಬಗ್ಗೆ ಇಲ್ಲಿ ಮಾತನಾಡುವುದು ಸೂಕ್ತವಲ್ಲ. ನೊಂದ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಲು ಬಂದಿದ್ದೇನೆ. ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದು, ಅವರೊಂದಿಗೆ ನಾವು ಇರುತ್ತೇವೆ ಎಂದರು. ನೇಹಾ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.

ಎಲ್ಲಾ ದೃಷ್ಟಿಯಿಂದಲೂ ತನಿಖೆ

ಫಯಾಜ್ ಗೆ ಕುಮ್ಮಕ್ಕು ಕೊಟ್ಟವರ ಬಂಧನವಾಗಬೇಕು ಹಾಗೂ ಕುಟುಂಬದವರಿಗೆ ಜೀವ ಬೆದರಿಕೆ ಇರುವುದರಿಂದ ರಕ್ಷಣೆ ನೀಡಬೇಕೆಂಬ ಕುಟುಂಬದವರ ಬೇಡಿಕೆ ಇರುವ ಬಗ್ಗೆ ಮಾತನಾಡಿ ಅಗತ್ಯ ಬಿದ್ದರೆ ರಕ್ಷಣೆ ಕೊಡುತ್ತೇವೆ. ಎಲ್ಲಾ ದೃಷ್ಟಿಯಿಂದಲೂ ತನಿಖೆ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದರು.

ತನಿಖೆ ಮಾಡಿ ಅಪರಾಧ ಪಟ್ಟಿ ಹಾಕಿದ ನಂತರ ವಿಚಾರಣೆ ಮಾಡಲಾಗುತ್ತದೆ. ಕಾಲೇಜ್ ಕ್ಯಾಂಪಸ್ ನಲ್ಲಿ ಭದ್ರತೆ ಬಗ್ಗೆ ಪ್ರತಿಕ್ರಿಯೆ ನೀಡಿ ನೇಹಾ ತಂದೆ ಹೇಳಿದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ನೇಹಾ ತಂದೆ ನಿರಂಜನ್ ಮಾತನಾಡಿ ನೇಹಾ ಕೊಲೆ ಊಹಿಸಿದ ರೀತಿಯಲ್ಲಿ ನಡೆದಿದ್ದು ಎಲ್ಲಾ ರಾಜಕೀಯ ಪಕ್ಷಗಳು ತೀವ್ರವಾಗಿ ಖಂಡಿಸಿದ್ದಾರೆ. ಹೋರಾಟ ಮಾಡಿದ್ದಾರೆ. ಈ ಹೋರಾಟದಿಂದ ನಮಗೂ ಶಕ್ತಿ ಬಂದಿದೆ. ರಾಜ್ಯದ ಎಲ್ಲೆಡೆಯಿಂದ ಬೆಂಬಲ ದೊರಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಹೆಚ್ .ಕೆ.ಪಾಟೀಲ್ , ಉಸ್ತುವಾರಿ ಸಚಿವ ಸಂತೋಷ್ ಲಾಡ್, ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿನೋದ್ ಆಸೂಟಿ ಸೇರಿದಂತೆ ಅನೇಕ ಮುಖಂಡರು, ಶಾಸಕರು ಬೆಂಬಲಿಸಿದ್ದಾರೆ.

ನೇಹಾ ಹತ್ಯೆಗೆ ನ್ಯಾಯ ದೊರಕಿಸಿಕೊಡಲು ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಡಿಸಿಎಂ ಡಿಕೆಶಿವಕುಮಾರ್ ಹಾಗೂ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ವಿವಿಧ ಸಂಘಸಂಸ್ಥೆಗಳ ವರದಿಗಳು ಹಾಗೂ ನಮ್ಮ ಬೇಡಿಕೆಗಳನ್ನು ಪರಿಶೀಲಿಸಿ, ನಾಲ್ಕನೇ ದಿನಕ್ಕೆ ತುರ್ತಾಗಿ ತನಿಖೆಗೆ ಆದೇಶವನ್ನು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಫಾಸ್ಟ್ ಟ್ರ್ಯಾಕ್ ವಿಶೇಷ ಕೋರ್ಟ್ ಸ್ಥಾಪಿಸಬೇಕೆಂಬ ನಮ್ಮ ಬೇಡಿಕೆಯನ್ನು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾನೂನು ಸಚಿವರು ಎಲ್ಲರೂ ಕೂಡಿ ನಡೆಸಿಕೊಟ್ಟಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದರು.

ಸಿಐಡಿ ತನಿಖೆಯನ್ನು ಈಗಾಗಲೇ ಪ್ರಾರಂಭ ಮಾಡಿದ್ದಾರೆ. ಈ ಸಾವಿನ ಪ್ರಕರಣದಲ್ಲಿ ನನ್ನ ಬೆನ್ನಿಗೆ ನಿಂತ ಎಲ್ಲರ ಪರವಾಗಿ ಈ ರೀತಿಯ ಪ್ರಕರಣಗಳ ಬಗ್ಗೆ ರಚಿಸಬೇಕಾದ ಕಾನೂನಿನ ಬೇಡಿಕೆಯನ್ನು ಈಡೇರಿಸುವಂತೆ ಕೋರುತ್ತಾ, ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಿದ್ದಕ್ಕಾಗಿ ಹಾಗೂ ಸಿಐಡಿಗೆ ವಹಿಸಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿಯಾಗಿರುವ ಸುರ್ಜೆವಾಲ ಅವರು ನನ್ನನ್ನು ಭೇಟಿ ಮಾಡಿ ಪ್ರಕರಣದ ಬಗ್ಗೆ ವಿವರ ಪಡೆದಿದ್ದು, 90 ದಿನದೊಳಗೆ ಅಥವಾ ಗರಿಷ್ಠ 120 ದಿನದೊಳಗೆ ನ್ಯಾಯ ಒದಗಿಸುವುದಾಗಿ ಅದರಲ್ಲಿಯೂ ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ. ಆರೋಪಿಗೆ ಗಲ್ಲು ಶಿಕ್ಷೆ ವಹಿಸುವ ಮೂಲಕ ಪ್ರಕರಣಕ್ಕೆ ನ್ಯಾಯ ಒದಗಿಸಬೇಕು ಎಂದು ಸಿಎಂ, ಡಿಸಿಎಂ ಹಾಗೂ ಇನ್ನಿತರ ಪ್ರಮುಖ ನಾಯಕರನ್ನು ಕೋರುವುದಾಗಿ ನೇಹಾ ತಂದೆ ನಿರಂಜನ್ ತಿಳಿಸಿದರು. ನನ್ನ ಮನೆಗೆ ವರಿಷ್ಠರು ಭೇಟಿ ನೀಡಿ ನನಗೆ ಸಾಂತ್ವನ ನೀಡಿ ಧೈರ್ಯ ತುಂಬಿದ್ದಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.

8000 ಕೋಟಿ ವೆಚ್ಚದ ‘ಶರಾವತಿ ಯೋಜನೆ ಟೆಂಡರ್’ಗೆ ಹೈಕೋರ್ಟ್ ಅಸ್ತು

BREAKING : ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಅಬಕಾರಿ ನೀತಿ ಹಗರಣದ ‘ಕಿಂಗ್ ಪಿನ್’ : ED

Share. Facebook Twitter LinkedIn WhatsApp Email

Related Posts

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM2 Mins Read

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM1 Min Read

BREAKING: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: 10 ದಿನಗಳಲ್ಲಿ ವರದಿ ನೀಡಲು ರಾಜ್ಯ ಸರ್ಕಾರ ಆದೇಶ

30/06/2025 8:46 PM1 Min Read
Recent News

ಕೈಯಂತೆ ಕಾಣುವ ಈ ‘ಹಣ್ಣು’ ತಿನ್ನುವುದ್ರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ.?

30/06/2025 10:08 PM

ಮಳೆಯಲ್ಲಿ ಆಟವಾಡಲು ಹೋಗ್ತೀನಿ ಎಂದಿದ್ದಕ್ಕೆ 10 ವರ್ಷದ ಸ್ವಂತ ಮಗನನ್ನೇ ಇರಿದು ಕೊಂದ ಪಾಪಿ ತಂದೆ

30/06/2025 9:45 PM

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM

ಹೃದಯ ವಿದ್ರಾವಕ ದುರಂತ ; ಕಡಲೆಕಾಯಿ ಕುದಿಸುತ್ತಿದ್ದ ಪಾತ್ರೆಗೆ ಬಿದ್ದು 1 ವರ್ಷದ ಮಗು ದುರ್ಮರಣ

30/06/2025 9:28 PM
State News
KARNATAKA

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

By kannadanewsnow0930/06/2025 9:35 PM KARNATAKA 2 Mins Read

ಶಿವಮೊಗ್ಗ: ಸಿನಿಮಾಗಳು ಕೇವಲ ದೃಶ್ಯ ಕಥಾನಕಗಳಲ್ಲ. ಅವು ಜೀವನದ ಸಣ್ಣ ತುಣುಕುಗಳು. ದೃಶ್ಯ, ಧ್ವನಿ, ಸಂಗೀತ, ಪಾತ್ರ ಮತ್ತು ದೃಶ್ಯ…

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM

BREAKING: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: 10 ದಿನಗಳಲ್ಲಿ ವರದಿ ನೀಡಲು ರಾಜ್ಯ ಸರ್ಕಾರ ಆದೇಶ

30/06/2025 8:46 PM

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.