ಹುಬ್ಬಳ್ಳಿ: ಜಿಲ್ಲೆಯಲ್ಲಿ ನಡೆದಿದ್ದಂತ ನೇಹಾ ಹಿರೇಮಠ ಹತ್ಯೆ ಹಿನ್ನಲೆಯಲ್ಲಿ ನಿನ್ನೆಯಷ್ಟೇ ಸಿಎಂ ಸಿದ್ಧರಾಮಯ್ಯ ನೇಹಾ ತಂದೆ ನಿರಂಜನ್ ಭೇಟಿಯಾಗಿ ಕುಟುಂಬಸ್ಥರಿಗೆ ಸಾತ್ವಾನ ಹೇಳಿದ್ದರು. ಅಲ್ಲದೇ ಬೆದರಿಕೆ ಇದ್ರೆ ಭದ್ರತೆ ಒದಗಿಸೋದಾಗಿಯೂ ತಿಳಿಸಿದ್ದರು. ಅದರಂತೆ ನೇಹಾ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.

ಹೌದು ನೇಹಾ ಹಿರೇಮಠ ಹತ್ಯೆ ನಡೆದ ಮೇಲೆ ನಮ್ಮ ಕುಟುಂಬಕ್ಕೆ ಬೆದರಿಕೆ ಇದೆ ಎಂದು ಸ್ವತ: ನೇಹಾ ತಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಳಿಯಲ್ಲಿ ನಿನ್ನೆ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಸರ್ಕಾರದಿಂದ ನೇಹಾ ಹಿರೇಮಠ ಅವರ ತಂದೆ ನಿರಂಜನ ಹಿರೇಮಠ ಮನೆಗೆ ಹಾಗೂ ಅವನಿಗೆ ಪೊಲೀಸ್ ಭದ್ರತೆಯನ್ನು ನೀಡಲಾಗಿದೆ.

ಅಂದಹಾಗೇ ಏಪ್ರಿಲ್.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಂತ ನೇಹಾ ಹಿರೇಮಠ ಅವರನ್ನು ಫಾಗಲ್ ಪ್ರೇಮಿ ಫಯಾಜ್ ಎಂಬಾತ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದನು. ಆ ಬಳಿಕ ಆತನನ್ನು ಬಂಧಿಸಲಾಗಿತ್ತು. ಅಲ್ಲದೇ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಜೊತೆಗೆ ಈ ಪ್ರಕರಣದ ತನಿಖೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆಗೂ ಆದೇಶಿಸಲಾಗಿದೆ.

‘SC, ST, OBC’ ಹಕ್ಕುಗಳನ್ನ ಕಸಿದುಕೊಳ್ಳಲು ಕಾಂಗ್ರೆಸ್ ಪಿತೂರಿ : ಪ್ರಧಾನಿ ಮೋದಿ

ಡಿಕೆಶಿ ರಾತ್ರೋರಾತ್ರಿ ಗಿಫ್ಟ್ ಕೂಪನ್, ಹಣ, ದೇವರ ಲಾಡು ಹಂಚಿದ್ದಾರೆ: HD ಕುಮಾರಸ್ವಾಮಿ ಗಂಭೀರ ಆರೋಪ

Share.
Exit mobile version