ಹುಬ್ಬಳ್ಳಿ : ನೇಹಾ ಹಿರೇಮಠ ಕೊಲೆ ಕೆಸ್ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಹುಬ್ಬಳ್ಳಿ ನಗರದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ಆಗ್ರಹಿಸಿದರು. ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ನೇಹಾ ಹತ್ಯೆ ಕೇಸನ್ನು ಸಿಬಿಐ ತನಿಖೆಗೆ ವಹಿಸಿ ರಾಜ್ಯ ಪೊಲೀಸರು ಅಸಮರ್ಥರಿದ್ದು ಹೀಗಾಗಿ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಆಗ್ರಹಿಸಿದರು.
ಇಡೀ ದೇಶವೇ ನೇಹಾ ಹಿರೇಮಠ ಕುಟುಂಬದ ಪರ ಇದೆ.ಸಿಎಂ ಹಾಗೂ ಗೃಹ ಸಚಿವರ ಹೇಳಿಕೆ ಪ್ರಕರಣದ ಹಾದಿಯನ್ನು ತಪ್ಪಿಸುತ್ತಿದೆ. ಕರ್ನಾಟಕದ ಜನತೆ ಇದನ್ನು ಕ್ಷಮಿಸುವುದಿಲ್ಲ. ಸಿಎಂ ಗೃಹ ಸಚಿವರ ಹೇಳಿಕೆ ತನಿಖೆ ಮೇಲೆ ಪರಿಣಾಮ ಬೀರುತ್ತದೆ.ನೇಹಾ ಹಿರೇಮಠ ತಂದೆಗೂ ರಾಜ್ಯ ಸರ್ಕಾರದ ಮೇಲೆ ಭರವಸೆ ಇಲ್ಲ. ಹಾಗಾಗಿ ತನಿಖೆಯನ್ನು ಸಿಬಿಐಗೆ ವಹಿಸಲು ನಿರಂಜನ ಹಿರೇಮಠ ಸಹ ಮನವಿ ಮಾಡಿದ್ದಾರೆ. ರಾಜ್ಯ ಪೊಲೀಸರು ಅಸಮರ್ಥರಿದ್ದಾರೆ ಹಾಗಾಗಿ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಆಗ್ರಹಿಸಿದರು.
INDIA ಒಕ್ಕೂಟದ ಬಗ್ಗೆ ಲೇವಡಿ
ಇನ್ನೂ ಇಂಡಿಯಾ ಒಕ್ಕೂಟದ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡ ಲೇವಡಿ ಮಾಡಿದ್ದು, ಇಂಡಿಯಾ ಒಕೂಟದ ಕೆಲವರು ಜೈಲಿನಲ್ಲಿ ಇದ್ದರೆ. ಕೆಲವ್ರು ಬೇಲ್ ಮೇಲೆ ಹೊರಗಡೆ ಇದ್ದಾರೆ. ಎಂದು ಇಂಡಿಯಾ ಕೂಡ ಮೈತ್ರಿಕೂಟ ಕುರಿತು ಬಿಜೆಪಿ ಅಧ್ಯಕ್ಷ ಜೆಪಿ ನಡ್ದ ಲೇವಡಿ ಮಾಡಿದರು.ಇದು ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಂಕಲ್ಪದ ಚುನಾವಣೆ ಹೇಗೆ ದೇಶವನ್ನು ಅಭಿವೃದ್ಧಿ ಮಾಡಬೇಕೆಂದು ತಿಳಿಯುವ ಚುನಾವಣೆಯಾಗಿದೆ ಕಳೆದ ಹತ್ತು ವರ್ಷಗಳಲ್ಲಿ ರಾಜಕೀಯ ನೀತಿ ಬದಲಾಗಿದೆ ಪ್ರಧಾನಿ ಮೋದಿ ಅವರ ಗ್ಯಾರಂಟಿ ಪೂರ್ಣಗೊಳ್ಳುತ್ತದೆ ಎನ್ನುವಂತಾಗಿದೆ