Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶೇ.50ರಷ್ಟು ಟ್ರಂಪ್ ಸುಂಕದ ಹೊಡೆತ: ಸೆನ್ಸೆಕ್ಸ್ 500 ಅಂಕಗಳ ಕುಸಿತ | Share Market

07/08/2025 12:50 PM

SHOCKING : ತುಮಕೂರಲ್ಲಿ 3 ಕಿಮೀ ರಸ್ತೆಯುದ್ದಕ್ಕೂ ಅಪರಿಚಿತ ಶವದ ತುಂಡುಗಳು ಪತ್ತೆ : ಬೆಚ್ಚಿ ಬಿದ್ದ ಜನತೆ!

07/08/2025 12:42 PM

SHOCKING : ಪ್ಯಾಂಟ್ ಜೇಬಿನಲ್ಲಿ `ಮೊಬೈಲ್’ ಇಟ್ಟುಕೊಳ್ಳುವುದರಿಂದ `ಪುರುಷರಲ್ಲಿ ಬಂಜೆತನ’ ಬರಬಹುದು : ಅಧ್ಯಯನ

07/08/2025 12:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಹೊಸ ಕಲಿಕಾ ಯೋಜನೆಗೆ ಚಿಂತನೆ: ಸಚಿವ ಎನ್‌ ಎಸ್‌ ಭೋಸರಾಜು
KARNATAKA

ಸರಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಹೊಸ ಕಲಿಕಾ ಯೋಜನೆಗೆ ಚಿಂತನೆ: ಸಚಿವ ಎನ್‌ ಎಸ್‌ ಭೋಸರಾಜು

By kannadanewsnow0928/02/2025 4:08 PM

ಬೆಂಗಳೂರು: ಇಂದಿನ ಪೀಳಿಗೆಯ ವಿದ್ಯಾರ್ಥಿಗಳನ್ನು ಎಐ ಮತ್ತು ಮೆಷಿನ್‌ ಲರ್ನಿಂಗ್‌ ನಂತಹ ಕ್ಷೇತ್ರಗಳಲ್ಲಿ ಸಾಧನೆಗೆ ಪ್ರೇರೇಪಿಸುವಂತಹ ಕೌಶಲ್ಯಗಳನ್ನ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ಸರಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಹಾಗೂ ಚಟುವಟಿಕೆಯ ಮೂಲಕ ಕಲಿಕೆಗೆ ಅನುವು ಮಾಡಿಕೊಡುವ ಯೋಜನೆಯನ್ನು ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ಇಂದು ಜವಾಹರ್‌ಲಾಲ್‌ ನೆಹರು ತಾರಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ, ” ರಾಷ್ಟ್ರೀಯ ವಿಜ್ಞಾನ ದಿನ” ಮತ್ತು ಬೆಂಗಳೂರು ಸ್ಮಾರ್ಟ್‌ ಸಿಟಿ ಲಿಮಿಟೆಡ್‌ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಯು ಆರ್‌ ಭವನದ ಉದ್ಘಾಟನಾ ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಈ ವಿಷಯ ತಿಳಿಸಿದರು.

ದೇಶ ಹಾಗೂ ರಾಜ್ಯಗಳ ಪ್ರಗತಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆ ಅಪಾರವಾಗಿದೆ. ಪ್ರತಿವರ್ಷ ಫೆಬ್ರವರಿ 28 ರಂದು ಸರ್‌ ಸಿ.ವಿ ರಾಮನ್‌ ಅವರ “ರಾಮನ್‌ ಪರಿಣಾಮ” ಆವಿಷ್ಕಾರದ ಸ್ಮರಣಾರ್ಥವಾಗಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಗುತ್ತದೆ. ವಿಜ್ಞಾನವನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ದು – ಜನರನ್ನು ವಿಜ್ಞಾನದ ಕಡೆಗೆ ಕರೆದೊಯ್ಯುವುದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌ ಅವರ ದೂರದೃಷ್ಟಿಯಾಗಿದೆ. ಕಳೆದ ಎರಡು ವರ್ಷಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮೂಲಕ ಸೃಜನಶೀಲತೆ, ಸುಸ್ಥಿರತೆ ಮತ್ತು ವೈಜ್ಞಾನಿಕತೆಯನ್ನು ಸಾರುವಂತಹ ಹಲವಾರು ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದರು.

ಕರ್ನಾಟಕ ರಾಜ್ಯವನ್ನು ಸಂಶೋಧನೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಇದಕ್ಕೆ ನಮ್ಮ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಬಹಳಷ್ಟು ಸಹಕಾರ ನೀಡುತ್ತಿದ್ದಾರೆ. ಸಂಶೋದನೆ ಮತ್ತು ಅಭಿವೃದ್ದಿಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ರಿಸರ್ಚ್‌ ಫೌಂಡೇಶನ್‌ ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಖಗೋಳಶಾಸ್ತ್ರದ ಬಗ್ಗೆ ಆಸಕ್ತಿ ಬೆಳೆಸಲು ಕಳೆದ ಬಜೆಟ್‌ನಲ್ಲಿ ಟೆಲಿಸ್ಕೋಪ್‌ ವಿತರಿಸಲು ಅಗತ್ಯ ಅನುದಾನ ನೀಡಲಾಗಿತ್ತು. ಇಂದು ವಸತಿ ಶಾಲೆಗಳಿಗೆ ಟೆಲಿಸ್ಕೋಪ್‌ ಕೂಡಾ ಹಸ್ತಾಂತರಿಸಲಾಗುತ್ತಿದೆ.

ವಿದ್ಯಾರ್ಥಿಗಳು ಪರಿಣಾಮಕಾರಿಯಾಗಿ ಕಲಿಯುವ ನಿಟ್ಟಿನಲ್ಲಿ ಪಾಠದ ಜೊತೆಯಲ್ಲೇ ಹೆಚ್ಚಿನದ್ದನ್ನು ಮಾಡುವುದು ಅಗತ್ಯ. ವಿದ್ಯಾರ್ಥಿಗಳು ಹೆಚ್ಚಿನದ್ದನ್ನ ಓದುವಂತೆ, ಬರೆಯುವಂತೆ, ಸಂಶೋಧಿಸುವಂತೆ, ಪ್ರಾಯೋಗಿಕವಾಗಿ ಚರ್ಚಿಸುವಂತೆ, ಸಮಸ್ಯೆಗಳನ್ನು ಪರಿಹರಿಸುವಂತೆ ಪ್ರೇರೇಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಕನ್ನಡ ಮಾಧ್ಯಮದಲ್ಲಿ ಪ್ರಯೋಗಶೀಲತೆಗೆ ಅನುವು ಮಾಡಿಕೊಡುವಂತಹ ಹೊಸ ಯೋಜನೆ ರೂಪಿಸುವ ನಿಟ್ಟಿನಲ್ಲಿ ನಮ್ಮ ಇಲಾಖೆ ಚಿಂತನೆ ನಡೆಸುತ್ತಿದೆ. ವಿಜ್ಞಾನ, ತಂತ್ರಜ್ಞಾನ, ರೊಬೊಟಿಕ್ಸ್‌, ಪರಿಸರ ಮತ್ತು ಪರಿಸರ ವಿಜ್ಞಾನ, ಖಗೋಳಶಾಸ್ತ್ರ ಮತ್ತು ಗಣಿತದ ಪರಿಕಲ್ಪನೆಯನ್ನು ಚೆನ್ನಾಗಿ ಅರ್ಥಮಾಢಿಕೊಳ್ಳಲು ಉಪಕರಣಗಳು ಮತ್ತು ಸಲಕರಣೆಗಳೊಂದಿಗೆ ಕೆಲಸ ಮಾಡಲು ವಿದ್ಯಾರ್ಥಿಗಳಿಗೆ ಅವಕಾಶ ನೀಡುವುದು ನಮ್ಮ ಉದ್ದೇಶವಾಗಿದೆ. ಈ ಮೂಲಕ ನಮ್ಮ ವಿದ್ಯಾರ್ಥಿಗಳು ಎಐ ಮತ್ತು ಮೆಷಿನ್‌ ಲರ್ನಿಂಗ್‌ ನಂತಹ ಕ್ಷೇತ್ರಗಳಲ್ಲೂ ಸಾಧನೆ ಮಾಡುವ ನಿಟ್ಟಿನಲ್ಲಿ ಪ್ರೇರೇಪಿಸುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಅವರು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್‌ ಮಾನ್ಯ ಸಭಾಪತಿಗಳಾದ ಬಸವರಾಜ ಶಿವಲಿಂಗಪ್ಪ ಹೊರಟ್ಟಿ, ಕರ್ನಾಟಕ ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರಾದ ಯು.ಟಿ ಖಾದರ್‌, ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್‌ ಕಿರಣ್‌ ಕುಮಾರ್‌, ಸಚಿವರಾದ ಕೃಷ್ಣ ಭೈರೇಗೌಡ, ಪ್ರಿಯಾಂಕಾ ಖರ್ಗೆ, ಎಂ.ಸಿ ಸುಧಾಕರ್‌ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಂಗ್ರೆಸ್ ಪಕ್ಷದವರಿಗೆ ‘ವಿಕಸಿತ ಭಾರತ’ ಸಹಿಸಿಕೊಳ್ಳಲು ಆಗುತ್ತಿಲ್ಲ: ಸಂಸದ ಬಸವರಾಜ ಬಮ್ಮಾಯಿ

BREAKING: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಪೋಟ: ಐವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

Share. Facebook Twitter LinkedIn WhatsApp Email

Related Posts

SHOCKING : ತುಮಕೂರಲ್ಲಿ 3 ಕಿಮೀ ರಸ್ತೆಯುದ್ದಕ್ಕೂ ಅಪರಿಚಿತ ಶವದ ತುಂಡುಗಳು ಪತ್ತೆ : ಬೆಚ್ಚಿ ಬಿದ್ದ ಜನತೆ!

07/08/2025 12:42 PM1 Min Read

ಆ.10 ರಂದು ಕರ್ನಾಟಕದ 11 ನೇ ವಂದೇ ಭಾರತ್ ಅನ್ನು ಪ್ರಧಾನಿ ಮೋದಿ ಉದ್ಘಾಟನೆ | Vande bharat

07/08/2025 12:36 PM1 Min Read

ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ ವಿಚಾರ ವರದಿ ನೀಡಲು ಸೂಚನೆ ನೀಡಲಾಗಿದೆ : ಗೃಹ ಸಚಿವ ಜಿ.ಪರಮೇಶ್ವರ್

07/08/2025 12:21 PM2 Mins Read
Recent News

ಶೇ.50ರಷ್ಟು ಟ್ರಂಪ್ ಸುಂಕದ ಹೊಡೆತ: ಸೆನ್ಸೆಕ್ಸ್ 500 ಅಂಕಗಳ ಕುಸಿತ | Share Market

07/08/2025 12:50 PM

SHOCKING : ತುಮಕೂರಲ್ಲಿ 3 ಕಿಮೀ ರಸ್ತೆಯುದ್ದಕ್ಕೂ ಅಪರಿಚಿತ ಶವದ ತುಂಡುಗಳು ಪತ್ತೆ : ಬೆಚ್ಚಿ ಬಿದ್ದ ಜನತೆ!

07/08/2025 12:42 PM

SHOCKING : ಪ್ಯಾಂಟ್ ಜೇಬಿನಲ್ಲಿ `ಮೊಬೈಲ್’ ಇಟ್ಟುಕೊಳ್ಳುವುದರಿಂದ `ಪುರುಷರಲ್ಲಿ ಬಂಜೆತನ’ ಬರಬಹುದು : ಅಧ್ಯಯನ

07/08/2025 12:41 PM

ಆ.10 ರಂದು ಕರ್ನಾಟಕದ 11 ನೇ ವಂದೇ ಭಾರತ್ ಅನ್ನು ಪ್ರಧಾನಿ ಮೋದಿ ಉದ್ಘಾಟನೆ | Vande bharat

07/08/2025 12:36 PM
State News
KARNATAKA

SHOCKING : ತುಮಕೂರಲ್ಲಿ 3 ಕಿಮೀ ರಸ್ತೆಯುದ್ದಕ್ಕೂ ಅಪರಿಚಿತ ಶವದ ತುಂಡುಗಳು ಪತ್ತೆ : ಬೆಚ್ಚಿ ಬಿದ್ದ ಜನತೆ!

By kannadanewsnow0507/08/2025 12:42 PM KARNATAKA 1 Min Read

ತುಮಕೂರು : ತುಮಕೂರು ಜಿಲ್ಲೆಯಲ್ಲಿ ಅಪರಿಚಿತ ಶವದ ತುಂಡುಗಳು ಆತಂಕ ಸೃಷ್ಟಿಸಿವೆ. ರಸ್ತೆ ಯುದ್ಧಕ್ಕೂ ಕವರ್ ಗಳಲ್ಲಿ ಶವದ ತುಂಡುಗಳು…

ಆ.10 ರಂದು ಕರ್ನಾಟಕದ 11 ನೇ ವಂದೇ ಭಾರತ್ ಅನ್ನು ಪ್ರಧಾನಿ ಮೋದಿ ಉದ್ಘಾಟನೆ | Vande bharat

07/08/2025 12:36 PM

ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ ವಿಚಾರ ವರದಿ ನೀಡಲು ಸೂಚನೆ ನೀಡಲಾಗಿದೆ : ಗೃಹ ಸಚಿವ ಜಿ.ಪರಮೇಶ್ವರ್

07/08/2025 12:21 PM

BIG NEWS : ವಿಜಯಪುರದಲ್ಲಿ ಘೋರ ಘಟನೆ : ವಾಚ್ ವಿಚಾರಕ್ಕೆ ಹಲ್ಲೆಗೊಳಗಾಗಿದ್ದ 5ನೇ ತರಗತಿ ವಿದ್ಯಾರ್ಥಿ ಸಾವು!

07/08/2025 12:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.