ಉತ್ತರ ಕನ್ನಡ: ಜಿಲ್ಲೆಯಲ್ಲಿ ಇಂದು ಮುಂಜಾನೆಯೇ ಎನ್ಐಎ ಅಧಿಕಾರಿಗಳು ದಾಳಿನಡೆಸಿದ್ದು, ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದಂತ ಶಂಕಿತ ವ್ಯಕ್ತಿಯನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆ 4.15ಕ್ಕೆ ದೆಹಲಿ, ಬೆಂಗಳೂರಿನ ಎನ್ಐಎ ತಂಡದ ಅಧಿಕಾರಗಳಿಂದ ( NIA Officer ) ಅಬ್ದುಲ್ ಮುಕ್ತದೀರ್ ಎಂಬಾತನ ನಿವಾಸದ ಮೇಲೆ ದಾಳಿಯನ್ನು ನಡೆಸಲಾಗಿದೆ.
ದೆಹಲಿಯ ನೂತನ ಪೊಲೀಸ್ ಕಮಿಷನರ್ ಆಗಿ ಸಂಜಯ್ ಅರೋರಾ ನೇಮಕ, ನಾಳೆ ಅಧಿಕಾರ ಸ್ವೀಕಾರ
ಇದೀಗ ಅಬ್ದುಲ್ ಮುಕ್ತದೀರ್ ಅನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿರೋದಾಗಿ ಮಾಹಿತಿ ತಿಳಿದು ಬಂದಿದೆ. ಈತ ಉಗ್ರ ಚಟುವಟಿಕೆಗೆ ನೇಮಕಗೊಳ್ಳೋದಕ್ಕಾಗಿ ಯುವಕರನ್ನು ಪ್ರೇರೇಪಣೆ ಮಾಡುತ್ತಿದ್ದ ಎಂಬುದಾಗಿ ತಿಳಿದು ಬಂದಿದೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸರ ಸಹಕಾರದಿಂದ ಅಬ್ದುಲ್ ಮುಕ್ತದೀರ್ ವಶಕ್ಕೆ ಎನ್ಐಎ ಪಡೆದಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.