ರಾಮನಗರ :  ಯುವಜನರಿಗೆ ಉದ್ಯೋಗ ನೀಡಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸುವುದೇ ಪಂಚರತ್ನ ಕಾರ್ಯಕ್ರಮದ ಪ್ರಮುಖ ಉದ್ದೇಶ ಎಂದು ನಟ ಹಾಗೂ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು. 

ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 30 ಹಾಸಿಗೆಯ ಹೈಟೆಕ್ ಆಸ್ಪತ್ರೆ ನಿರ್ಮಾಣ ಮಾಡುತ್ತೇವೆ, ಯುವಜನರಿಗೆ ಉದ್ಯೋಗ ನೀಡಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸುತ್ತೇವೆ, ಪ್ರತಿ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸಿ ಯುವಜನರಿಗೆ ಕೆಲಸ ನೀಡುತ್ತೇವೆ. ಇದು ಪಂಚರತ್ನ ಕಾರ್ಯಕ್ರಮದ ಪ್ರಮುಖ ಉದ್ದೇಶ ಎಂದು ನಟ ಹಾಗೂ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

14 ದಿನಕ್ಕೆ ಕಾಲಿಟ್ಟಿರುವ ಪಂಚರತ್ನ ರಥಯಾತ್ರೆಗೆ ಎಲ್ಲೆಡೆ ಜನರಿಂದ ಅಭೂತಪೂರ್ವ ಸ್ವಾಗತ ದೊರಕುತ್ತಿದೆ,  ಮಾಜಿ ಸಿಎಂ ಕುಮಾರಸ್ವಾಮಿ ಆರಂಭಿಸಿರುವ ಹೋರಾಟಕ್ಕೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ನಿಖಿಲ್ ಹೇಳಿದರು.

Viral Video : ಬಾಯಲ್ಲಿ ‘ಹುಕ್ಕಾ’ ಹಿಡಿದು ವೇದಿಕೆಯಲ್ಲೇ ಈ ಕೆಲಸ ಮಾಡಿದ ವಧು-ವರರು, ಅತಿಥಿಗಳಿಗೆ ಶಾಕ್.!

ಬಿ.ಎಸ್ ಯಡಿಯೂರಪ್ಪ ಭೇಟಿಯಾದ ಕಟೀಲ್…ಏನೆಲ್ಲಾ ಆಯಿತು ಚರ್ಚೆ..?

Share.
Exit mobile version