ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರರಂಗದಲ್ಲಿ ದರ್ಶನ್ ದೊಡ್ಡ ನಟನಾಗಿದ್ದಾನೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆಯೇ ವಿನಹಃ ಅಪರಾಧಿ ಎಂಬುದಾಗಿ ಕೋರ್ಟ್ ತೀರ್ಪು ನೀಡಿಲ್ಲ. ಈ ಹಿನ್ನಲೆಯಲ್ಲಿ ಸದ್ಯಕ್ಕೆ ಅವರನ್ನು ಸ್ಯಾಂಡಲ್ ವುಡ್ ನಿಂದ ನಿಷೇಧ ಮಾಡುವ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಅಂತ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್ ಸ್ಪಷ್ಟ ಪಡಿಸಿದ್ದಾರೆ.
ಇಂದು ವಾಣಿಜ್ಯ ಮಂಡಳಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದರ್ಶನ್ ಸ್ಯಾಂಡಲ್ ವುಡ್ ಚಿತ್ರರಂಗದ ದೊಡ್ಡ ನಟ. ಅವರ ವಿರುದ್ಧದ ಈಗ ಆರೋಪ ಮಾತ್ರವೇ ಕೇಳಿ ಬಂದಿದೆ. ತನಿಖೆ ನಡೆಯುತ್ತಿದೆ. ಅದರಲ್ಲಿ ಅಪರಾಧಿ ಎಂಬುದಾಗಿ ಸಾಭೀತಾದ್ರೇ, ಚಿತ್ರರಂಗದ ಅಂಗ ಸಂಸ್ಥೆಗಳು ಎಲ್ಲವೂ ಸೇರಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ವಾಣಿಜ್ಯ ಮಂಡಳಿ ಖಂಡಿಸುತ್ತದೆ. ಈ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಬೇಕು ಅಂತಲೂ ಆಗ್ರಹಿಸುತ್ತದೆ. ನಾಳೆ ರೇಣುಕಾಸ್ವಾಮಿ ಮನೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಎಲ್ಲರೂ ತೆರಳಿ, ಅವರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲಿದ್ದೇವೆ ಎಂದು ತಿಳಿಸಿದರು.
Nagpur Blast:: ನಾಗ್ಪುರದ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 6 ಕಾರ್ಮಿಕರು ಸಾವು