Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

12/03/2026 9:32 PM

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM

ಪುರುಷರು ಮಾಡುವ ಈ 5 ಸಣ್ಣ ತಪ್ಪುಗಳೇ `ವಿಚ್ಛೇದನಕ್ಕೆ’ ಕಾರಣವಾಗಬಹುದು!

12/03/2026 9:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ
KARNATAKA

ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ

By kannadanewsnow0915/02/2026 9:08 PM

ಬೆಂಗಳೂರು: ಒಳ‌‌ ಮೀಸಲಾತಿ ವಿಚಾರದಲ್ಲಿ ನಮ್ಮ ಸರ್ಕಾರ‌ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್ .ಎಸ್.ತಂಗಡಗಿ ಅವರು ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ‌ ವತಿಯಿಂದ ನಯನ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀ ಸಂತ ಸೇವಾಲಾಲ್ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದಾವಣಗೆರೆಯ ಸೂರಗೊಂಡನಕೊಪ್ಪದಲ್ಲಿನ ಸೇವಾಲಾಲ್ ಜಯಂತಿ ವೇಳೆ ನಡೆದ ಘಟನೆಗೆ ವಿಷಾದ ವ್ಯಕ್ತಪಡಿಸಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಣ್ಣ ಸಮುದಾಯಗಳ ಬಗ್ಗೆ ಅಪಾರವಾದ ಕಾಳಜಿ ಇದೆ. ಈಗಾಗಲೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸಮಿಯೊಂದನ್ನು‌ ಮಾಡಿದ್ದು,‌ ಸಮಿತಿ‌ ಕಾರ್ಯನ್ಮೋಕವಾಗಿದೆ ಎಂದು ತಿಳಿಸಿದರು.‌

ನಾವು- ನೀವು ಒಂದೇ‌ ತಕ್ಕಡಿಯಲ್ಲಿದ್ದೇವೆ. ಯಾವುದೇ ಕಾರಣಕ್ಕೂ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಇದಕ್ಕೆ ಯಾರು ಹೆದರುವ ಅಗತ್ಯವಿಲ್ಲ ಎಂದರು.‌

ಪ್ರತಿಯೊಂದು ತಾಂಡಾ ಕಂದಾಯ ಗ್ರಾಮ:

ರಾಜ್ಯದಲ್ಲಿನ ಪ್ರತಿಯೊಂದು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿದ್ದು, ಈಗಾಗಲೇ ಆ ಕೆಲಸ ಪ್ರಾರಂಭಗೊಂಡಿದೆ. ಹತ್ತಾರು ವರ್ಷಗಳಿಂದ ವಾಸವಿರುವವರಿಗೆ ಹಕ್ಕು ಪತ್ರವನ್ನು ಕೂಡ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ರಾಯಚೂರಿನ ಆಶಾ ತಾಂಡದಲ್ಲಿನ ಪ್ರತಿಯೊಂದು ಮನೆಯಲ್ಲೂ ಡಿ ಗ್ರೂಪ್ ನಿಂದ ಹಿಡಿದು ಐಎಎಸ್ ಅಧಿಕಾರಿ ಮಟ್ಟದ ಅಧಿಕಾರಿ ಇರುವುದು ಈ ಸಮುದಾಯದ ಹೆಮ್ಮೆ. ಅದೇ ರೀತಿ ಪ್ರತಿಯೊಂದು ತಾಂಡಾವಾಗಬೇಕು ಎಂದರು.

ಹಿಂದುಳಿದ‌ ಸಮುದಾಯಗಳು ಶಿಕ್ಷಣ,‌ ಹೋರಾಟ ಮತ್ತು ಸಂಘಟನೆಯಾಗಬೇಕು ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದ್ದಾರೆ. ಯಾವುದೇ ಸಮುದಾಯದ ಅಭಿವೃದ್ಧಿಗೆ ಶಿಕ್ಷಣ ಬಹಳ ಮುಖ್ಯ. ಪ್ರತಿಯೊಂದು ಮನೆಯಲ್ಲಿ ಶಿಕ್ಷಣವಂತರಿರಬೇಕು ಎಂದು ಕಿವಿಮಾತು ಹೇಳಿದರು.

ಇನ್ನು ಸಾಧು- ಸಂತರ‌ ಸಾಲಿನಲ್ಲಿ‌ ಸೇವಾಲಾಲ್ ಅವರು ಅಗ್ರಪಂಕ್ತಿಯಲ್ಲಿ ನಿಲ್ಲುತ್ತಾರೆ. ಅಂದಿನ‌ ಕಾಲದಲ್ಲೇ ಸಮುದಾಯದ ಏಳ್ಗೆಗಾಗಿ ದುಡಿದ ಸೇವಾಲಾಲ್ ರು, ಜನತೆಗೆ ವ್ಯಸನ ಮುಕ್ತರಾಗಿ ಎಂದು ಬೋಧಿಸುತ್ತಾ, ಸತ್ಯ, ಅಹಿಂಸಡ, ತ್ಯಾಗ ಮನೋಭಾವದ ನೀತಿ ಮಾತುಗಳನ್ನು ಹೇಳಿದ್ದರು ಎಂದು ಸಚಿವರು ಮೆಲುಕು ಹಾಕಿದರು.

ಕೇಂದ್ರಕ್ಕೆ‌ ಶಿಫಾರಸ್ಸು:

ಬಂಜಾರ‌ ಭಾಷೆಯನ್ನು ದೇಶದ 8ನೇ ಅನುಚ್ಚೇದಕ್ಕೆ ಸೇರಿಸಬೇಕೆಂಬ ಸಮುದಾಯದ ಮುಖಂಡ‌ರ ಬೇಡಿಕೆಗೆ ಸ್ಪಂದಿಸಿದ ಸಚಿವರು, ಈ‌ ಹಿಂದೆ ಎರಡು ಬಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿತ್ತಾದರೂ ಕೇಂದ್ರ ಸರ್ಕಾರ ಶಿಫಾರಸ್ಸನ್ನು ತಿರಸ್ಕಾರ ಮಾಡಿದೆ. ಮತ್ತೊಮ್ಮೆ ಬಂಜಾರ ಭಾಷೆಯನ್ನು ಸಂವಿಧಾನದ 8ನೇ ಅನುಚ್ಛೇದಕ್ಕೆ‌ ಸೇರಿಸಲು ಸರ್ಕಾರದಿಂದ ಶಿಫಾರಸ್ಸು ಮಾಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.‌

ಕಾರ್ಯಕ್ರಮದಲ್ಲಿ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ್ ಚವ್ಹಾಣ್, ಜಾನಪದ ವಿದ್ವಾಂಸ ಡಾ.ಯು.ಎಂ.ರವಿ, ವೃತ್ತಿ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ್ ಕರ್ಕೋಳ, ಸಮುದಾಯದ ಮುಖಂಡ ಅನಂತ್ ನಾಯಕ್, ಇಲಾಖೆ ನಿರ್ದೇಶಕಿ ಕೆ.ಎಂ.ಗಾಯಿತ್ರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ, ಮನನೊಂದು ಬಾಲಕಿ ಆತ್ಮಹತ್ಯೆ

ಶಾಸಕ ಭೈರತಿ ಬಸವರಾಜ್ ಮನೆಗೆ ವಿಜಯೇಂದ್ರ ಭೇಟಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದ ಬಿಜೆಪಿ ರಾಜ್ಯಾಧ್ಯಕ್ಷ

Share. Facebook Twitter LinkedIn WhatsApp Email

Related Posts

vidhana soudha

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

12/03/2026 9:32 PM1 Min Read

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM1 Min Read

ಪುರುಷರು ಮಾಡುವ ಈ 5 ಸಣ್ಣ ತಪ್ಪುಗಳೇ `ವಿಚ್ಛೇದನಕ್ಕೆ’ ಕಾರಣವಾಗಬಹುದು!

12/03/2026 9:27 PM2 Mins Read
Recent News
vidhana soudha

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

12/03/2026 9:32 PM

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM

ಪುರುಷರು ಮಾಡುವ ಈ 5 ಸಣ್ಣ ತಪ್ಪುಗಳೇ `ವಿಚ್ಛೇದನಕ್ಕೆ’ ಕಾರಣವಾಗಬಹುದು!

12/03/2026 9:27 PM

AI ಜೊತೆ ಶೃಂಗಾರ : ಅಶ್ಲೀಲತೆಗೆ ದಾಸರಾಗುತ್ತಿದ್ದಾರೆ ಯುವ ಜನತೆ : ಸಮೀಕ್ಷೆಯಲ್ಲಿ ಅಘಾತಕಾರಿ ಮಾಹಿತಿ ಬಹಿರಂಗ !

12/03/2026 9:19 PM
State News
vidhana soudha KARNATAKA

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

By kannadanewsnow0912/03/2026 9:32 PM KARNATAKA 1 Min Read

ಬೆಂಗಳೂರು: ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿ ಉತ್ತಮ ನಡತೆ ತೋರಿದ ಒಟ್ಟು 31 ಜೀವಾವಧಿ ಶಿಕ್ಷಾ ಬಂದಿಗಳನ್ನು ಅವಧಿಪೂರ್ವವಾಗಿ ಬಿಡುಗಡೆಗೊಳಿಸಿ…

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM

ಪುರುಷರು ಮಾಡುವ ಈ 5 ಸಣ್ಣ ತಪ್ಪುಗಳೇ `ವಿಚ್ಛೇದನಕ್ಕೆ’ ಕಾರಣವಾಗಬಹುದು!

12/03/2026 9:27 PM

AI ಜೊತೆ ಶೃಂಗಾರ : ಅಶ್ಲೀಲತೆಗೆ ದಾಸರಾಗುತ್ತಿದ್ದಾರೆ ಯುವ ಜನತೆ : ಸಮೀಕ್ಷೆಯಲ್ಲಿ ಅಘಾತಕಾರಿ ಮಾಹಿತಿ ಬಹಿರಂಗ !

12/03/2026 9:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.