Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : ‘ಬಾಪೂಜಿ ಸೇವಾ ಕೇಂದ್ರ’ದಲ್ಲಿ ಸಿಗಲಿದೆ ಈ ಎಲ್ಲಾ ಸೇವೆಗಳು

11/12/2025 5:22 AM

ಸಾರ್ವಜನಿಕರೇ ಗಮನಿಸಿ : ಡಿ.31ರೊಳಗೆ ತಪ್ಪದೇ ಈ 5 ಪ್ರಮುಖ ಕೆಲಸಗಳನ್ನು ಮುಗಿಸಿಕೊಳ್ಳಿ.!

11/12/2025 5:20 AM

BIG NEWS : ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ‘ಸ್ಮರಣಿಕೆ, ಟ್ರೋಫಿ’ ನಿಷೇಧ : ಸರ್ಕಾರ ಮಹತ್ವದ ಆದೇಶ

11/12/2025 5:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಿಎಂ ಹುದ್ದೆ’ ಬಗ್ಗೆ ಗೊಂದಲವೇನೂ ಇಲ್ಲ: ಸಚಿವ ಎಂ.ಬಿ ಪಾಟೀಲ್
KARNATAKA

‘ಸಿಎಂ ಹುದ್ದೆ’ ಬಗ್ಗೆ ಗೊಂದಲವೇನೂ ಇಲ್ಲ: ಸಚಿವ ಎಂ.ಬಿ ಪಾಟೀಲ್

By kannadanewsnow0914/01/2025 4:40 PM

ಬೆಂಗಳೂರು: ಸಿದ್ಧರಾಮಯ್ಯ ಮುಖ್ಯಮಂತ್ರಿಗಳಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಆ ಹುದ್ದೆ ಖಾಲಿ ಇಲ್ಲ ಎಂದು ನಾನು ಹೇಳಿದ್ದೇನೆ. ಅದು ವಾಸ್ತವ. ಏನಿದೆಯೋ ಅದನ್ನು ಹೇಳಿದ್ದೇನಷ್ಟೆ. ಸಿಎಂ ಸ್ಥಾನದ ಬಗ್ಗೆ ಕಾಂಗ್ರೆಸ್ಸಿನಲ್ಲಿ ಯಾವ ಗೊಂದಲವೂ ಇಲ್ಲ. ನಾವೆಲ್ಲರೂ ಚೆನ್ನಾಗಿಯೇ ಇದ್ದೇವೆ. ಗೊಂದಲವಿರುವುದು ಸುದ್ದಿ ಮಾಧ್ಯಮಗಳಲ್ಲಿ ಮಾತ್ರ ಎಂದು ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಮುಖ್ಯಮಂತ್ರಿಗಳನ್ನು ಮಂಗಳವಾರ ಅವರ ನಿವಾಸದಲ್ಲಿ ಭೇಟಿ ಮಾಡಿ, ಸಂಕ್ರಾಂತಿಯ ಶುಭಾಶಯ ತಿಳಿಸಿದ ನಂತರ ಮಾತನಾಡಿದ ಅವರು, ಇವತ್ತಿನ ಭೇಟಿಯಲ್ಲಿ ಯಾವ ರಾಜಕೀಯವೂ ಚರ್ಚೆಯಾಗಿಲ್ಲ ಎಂದರು.

ಸಿಎಂ ಬದಲಾವಣೆ, ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ, ಜಾತಿಗಣತಿ ವರದಿ ಇತ್ಯಾದಿ ಯಾವ ಸಮಸ್ಯೆಗಳೂ ಪಕ್ಷದಲ್ಲಿ ಇಲ್ಲ. ಇವೆಲ್ಲವೂಗಳ ಬಗ್ಗೆಯೂ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳಲಿದೆ. ಸೋಮವಾರ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಕೂಡ ಸುರ್ಜೇವಾಲಾ ಇದನ್ನೇ ಸ್ಪಷ್ಟವಾಗಿ ಹೇಳಿದ್ದಾರೆ. ಪರಮೇಶ್ವರ್‌, ರಾಜಣ್ಣ ಕಾರಣಾಂತರಗಳಿಂದ ಸಭಗೆ ಬಂದಿರಲಿಲ್ಲವಷ್ಟೆ ಎಂದು ಅವರು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಜಕಾರಣ ಕುರಿತು ಡಿ.ಕೆ.ಶಿವಕುಮಾರ್‌ ಮತ್ತು ಸತೀಶ್‌ ಜಾರಕಿಜೊಳಿ ಮಧ್ಯೆ ಯಾವ ಜಗಳವೂ ಆಗಿಲ್ಲ. ಎಲ್ಲರೂ ಕೂಡಿಯೇ ಪಕ್ಷದ ಕಚೇರಿ ನಿರ್ಮಿಸಿದ್ದಾರೆ ಎಂದೇ ಹೇಳಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜಾತಿಗಣತಿ ವರದಿಯನ್ನು ನಾನು ಯಾವತ್ತೂ ವಿರೋಧಿಸಿಲ್ಲ. ಆದರೆ, ಯಾವ ಸಮುದಾಯಕ್ಕೂ ಅನ್ಯಾಯವಾಗದಂತೆ ನೋಡಿಕೊಳ್ಳಬೇಕೆಂದು ಹೇಳುತ್ತ ಬಂದಿದ್ದೇನೆ. ಏಕೆಂದರೆ, ಲಿಂಗಾಯತರಲ್ಲೇ ಬೇರೆಬೇರೆ ಉಪಪಂಗಡಗಳು ಬೇರೆಬೇರೆ ರೀತಿ ನಮೂದಿಸಿದೆ. ಇಷ್ಟಕ್ಕೂ ವರದಿಯಲ್ಲೇನಿದೆ ಎಂದು ಯಾರೂ ನೋಡಿಲ್ಲ. ಆದರೆ, ವೀರಶೈವ ಮಹಾಸಭಾದವರು ವರದಿಯನ್ನು ವಿರೋಧಿಸುತ್ತಿದ್ದರೆ ಅಂತಹ ಹಕ್ಕು ಅದಕ್ಕಿದೆ. ಸುರ್ಜೇವಾಲಾ ಕೂಡ ಯಾವೊಂದು ಸಮುದಾಯಕ್ಕೂ ನೋವಾಗದಂತೆ ನಾವು ನಡೆದುಕೊಳ್ಳಬೇಕು ಎಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ನಾನು ಕಣ್ಣಿಟ್ಟಿಲ್ಲ. ಕೈಗಾರಿಕಾ ಸಚಿವನಾಗಿ ನಾನು ನನ್ನ ಕೆಲಸವನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ. ರಾಜಕೀಯದಲ್ಲಿ ನನಗೆ ಸಹಜವಾದ ಆಸೆ ಇದೆಯೇ ವಿನಾ ದುರಾಸೆಯಂತೂ ಇಲ್ಲ ಎಂದು ಪಾಟೀಲ ಸ್ಪಷ್ಟಪಡಿಸಿದ್ದಾರೆ.

ಗುತ್ತಿಗೆದಾರರ 30 ಸಾವಿರ ಕೋಟಿ ರೂ. ಬಿಲ್‌ ಪಾವತಿ ನನೆಗುದಿಗೆ ಬೀಳಲು ಹಿಂದಿನ ಬಿಜೆಪಿ ಸರಕಾರವೇ ಕಾರಣ. ಅವರು ಯಾವ ಅನುಮತಿಯೂ ಇಲ್ಲದೆ 2 ಲಕ್ಷ ಕೋಟಿ ರೂ. ಮೊತ್ತದ ಗುತ್ತಿಗೆ ಕಾಮಗಾರಿ ಶುರು ಮಾಡಿದ್ದರು. ಹೀಗಾಗಿ 35 ಸಾವಿರ ಕೋಟಿ ರೂ. ಪಾವತಿಯೇ ಆಗಿರಲಿಲ್ಲ. ಆ ಹೊರೆ ನಮ್ಮ ಸರಕಾರದ ಮೇಲೆ ಬಿತ್ತು ಎಂದು ಅವರು ವಿವರಿಸಿದ್ದಾರೆ.

BIG NEWS: ಸಂಕ್ರಾಂತಿ ವೇಳೆಗೆ ತೊಂದರೆ ಆಗುತ್ತೆ: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ಗೆ ಮೊದಲೇ ತಿಳಿಸಿದ್ದ ‘ಜ್ಯೋತಿಷಿ ಪುಂಡಲೀಕ ಶಾಸ್ತ್ರಿ’

‘ಸ್ವರ್ಣ ಪ್ರಾಶನ’ ಮಕ್ಕಳ ಸದೃಢ ಆರೋಗ್ಯಕ್ಕೆ ಸಹಕಾರಿಯೇ? ಇಲ್ಲಿದೆ ಸಂಪೂರ್ಣ ಮಾಹಿತಿ | Swarna Bindu Prashana

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : ‘ಬಾಪೂಜಿ ಸೇವಾ ಕೇಂದ್ರ’ದಲ್ಲಿ ಸಿಗಲಿದೆ ಈ ಎಲ್ಲಾ ಸೇವೆಗಳು

11/12/2025 5:22 AM2 Mins Read

BIG NEWS : ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ‘ಸ್ಮರಣಿಕೆ, ಟ್ರೋಫಿ’ ನಿಷೇಧ : ಸರ್ಕಾರ ಮಹತ್ವದ ಆದೇಶ

11/12/2025 5:05 AM3 Mins Read

BREAKING: ರೌಡಿ ಶೀಟರ್ ಪೊಲೀಸ್ ಠಾಣೆಗೆ ಕರೆಸಲು SMS, ವಾಟ್ಸಾಪ್ ಮಾಡುವುದು ಕಡ್ಡಾಯ: ಹೈಕೋರ್ಟ್ ಮಹತ್ವದ ಆದೇಶ

10/12/2025 9:27 PM1 Min Read
Recent News

GOOD NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : ‘ಬಾಪೂಜಿ ಸೇವಾ ಕೇಂದ್ರ’ದಲ್ಲಿ ಸಿಗಲಿದೆ ಈ ಎಲ್ಲಾ ಸೇವೆಗಳು

11/12/2025 5:22 AM

ಸಾರ್ವಜನಿಕರೇ ಗಮನಿಸಿ : ಡಿ.31ರೊಳಗೆ ತಪ್ಪದೇ ಈ 5 ಪ್ರಮುಖ ಕೆಲಸಗಳನ್ನು ಮುಗಿಸಿಕೊಳ್ಳಿ.!

11/12/2025 5:20 AM

BIG NEWS : ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ‘ಸ್ಮರಣಿಕೆ, ಟ್ರೋಫಿ’ ನಿಷೇಧ : ಸರ್ಕಾರ ಮಹತ್ವದ ಆದೇಶ

11/12/2025 5:05 AM

ಭಾರತದಲ್ಲಿ ವಾಯು ಮಾಲಿನ್ಯದಿಂದಾಗಿ ವರ್ಷಕ್ಕೆ 15 ಲಕ್ಷ ಮಂದಿ ಸಾವನ್ನಪ್ಪುತ್ತಾರೆ ; ವರದಿ

10/12/2025 10:12 PM
State News
KARNATAKA

GOOD NEWS : ರಾಜ್ಯದ ಜನತೆಗೆ ಗುಡ್ ನ್ಯೂಸ್ : ‘ಬಾಪೂಜಿ ಸೇವಾ ಕೇಂದ್ರ’ದಲ್ಲಿ ಸಿಗಲಿದೆ ಈ ಎಲ್ಲಾ ಸೇವೆಗಳು

By kannadanewsnow5711/12/2025 5:22 AM KARNATAKA 2 Mins Read

ಬೆಂಗಳೂರು : ರಾಜ್ಯದ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು…

BIG NEWS : ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮಗಳಲ್ಲಿ ‘ಸ್ಮರಣಿಕೆ, ಟ್ರೋಫಿ’ ನಿಷೇಧ : ಸರ್ಕಾರ ಮಹತ್ವದ ಆದೇಶ

11/12/2025 5:05 AM

BREAKING: ರೌಡಿ ಶೀಟರ್ ಪೊಲೀಸ್ ಠಾಣೆಗೆ ಕರೆಸಲು SMS, ವಾಟ್ಸಾಪ್ ಮಾಡುವುದು ಕಡ್ಡಾಯ: ಹೈಕೋರ್ಟ್ ಮಹತ್ವದ ಆದೇಶ

10/12/2025 9:27 PM

ದ್ವೇಷ ಭಾಷಣ ಕೇಸಲ್ಲಿ ‘RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್’ಗೆ ನಿರೀಕ್ಷಣಾ ಜಾಮೀನು ಮಂಜೂರು

10/12/2025 9:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.