Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಹಾರ್ಟ್ ಅಟ್ಯಾಕ್ ನಿಂದ ಮಲಗಿದ್ದಲ್ಲೇ ರೈತ ಸಾವು.!

27/07/2025 9:37 AM

`Gpay-PhonePe’ ಬಳಕೆದಾರರೇ ಗಮನಿಸಿ : ಆಗಸ್ಟ್ 1 ರಿಂದ ಬದಲಾಗಲಿವೆ `UPI’ ನಿಯಮಗಳು | UPI New Rules

27/07/2025 9:18 AM

Shocking: 9 ಗಂಟೆಗಿಂತ ಹೆಚ್ಚು ನಿದ್ರೆ ಮಾಡುವವರಿಗೆ ಈ ಅಪಾಯ ತಪ್ಪಿದ್ದಲ್ಲ !

27/07/2025 9:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ‘ಇ-ಖಾತಾ’ ಮಾಡಿಸಿಕೊಳ್ಳಲು ಯಾವುದೇ ಡೆಡ್ ಲೈನ್ ಇಲ್ಲ: ಸಚಿವ ಕೃಷ್ಣಭೈರೇಗೌಡ ಸ್ಪಷ್ಟನೆ
KARNATAKA

BIG NEWS: ರಾಜ್ಯದಲ್ಲಿ ‘ಇ-ಖಾತಾ’ ಮಾಡಿಸಿಕೊಳ್ಳಲು ಯಾವುದೇ ಡೆಡ್ ಲೈನ್ ಇಲ್ಲ: ಸಚಿವ ಕೃಷ್ಣಭೈರೇಗೌಡ ಸ್ಪಷ್ಟನೆ

By kannadanewsnow0907/10/2024 6:59 PM

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ-ಖಾತಾ ಮಾಡಿಸಿಕೊಳ್ಳಲು ಯಾವುದೇ ಡೆಡ್ ಲೈನ್ ಇಲ್ಲ. ಹೀಗಾಗಿ ಸಾರ್ವಜನಿಕರು ಗಾಬರಿಯಾಗುವ ಅಥವಾ ಆತುರಪಡುವ ಅಗತ್ಯ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟನೆ ನೀಡಿದ್ದಾರೆ.

ಇ-ಖಾತಾ ಬಗೆಗಿನ ಗೊಂದಲಗಳ ಬಗ್ಗೆ ಸೋಮವಾರ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಬೆನ್ನಿಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, “ಬಿಬಿಎಂಪಿ ವ್ಯಾಪ್ತಿಯ ಕೆಲವು ಭಾಗದಲ್ಲಿ ಮಧ್ಯವರ್ತಿಗಳು ಇ-ಖಾತಾ ಗೆ ಸರ್ಕಾರ ಸಮಯ ನಿಗಧಿ ಮಾಡಿದೆ ಎಂದು ಜನರಲ್ಲಿ ಗೊಂದಲ ಸೃಷ್ಟಿಸಿ, ಇ-ಖಾತೆ ಮಾಡಿಸಿಕೊಡುವುದಾಗಿ ಜನರನ್ನು ಸುಲಿಗೆ ಮಾಡಿರುವ ಘಟನೆ ಗಮನಕ್ಕೆ ಬಂದಿದೆ.

ಆದರೆ, ಆಸ್ತಿ ಮಾಲೀಕರು ಇ-ಖಾತಾ ಮಾಡಿಸಿಕೊಳ್ಳಲು ಸರ್ಕಾರ ಯಾವುದೇ ಸಮಯ ನಿಗದಿ ಮಾಡಿಲ್ಲ. ಹೀಗಾಗಿ ಸಾರ್ವಜನಿರಕರು ಗಾಬರಿಗೊಳಗಾಗದೆ, ಆತುರಪಡದೆ ತಮ್ಮ ಸಮಯ ನೋಡಿಕೊಂಡು ಇ-ಖಾತಾ ಮಾಡಿಸಿಕೊಳ್ಳಬಹುದು. ಊಹಾಪೋಹಗಳಿಗೆ ಕಿವಿಕೊಟ್ಟು ಆತಂಕಕ್ಕೆ ಒಳಗಾಗಬೇಡಿ” ಎಂದು ಹೇಳುವ ಮೂಲಕ ಗೊಂದಲಕ್ಕೆ ತೆರೆ ಎಳೆದರು.

“ನಕಲಿ ನೋಂದಣಿ ಪ್ರಕರಣಗಳನ್ನು ತಡೆಯೊಡ್ಡುವ ಸಲುವಾಗಿಯೇ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಆದರೆ, ಇ-ಖಾತಾ ಪಡೆಯಲು ಆತುರ ಬೇಕಿಲ್ಲ. ನಿವೇಶನಗಳನ್ನು ಮಾರುವ ಅಥವಾ ಕೊಳ್ಳುವ ಪ್ರಕ್ರಿಯೆಯಲ್ಲಿ ಮಾತ್ರ ಇ-ಖಾತಾ ಕಡ್ಡಾಯ ಮಾಡಲಾಗಿದೆ. ಅಲ್ಲದೆ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ ಪಾಲಿಕೆಯ ವಿಶೇಷ ಆಯುಕ್ತರ ಜೊತೆ ಚರ್ಚಿಸಿ ಇ-ಖಾತಾ ಪ್ರಕ್ರಿಯೆಯನ್ನೂ ಸರಳೀಕರಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲು ಸೂಕ್ತ ಕ್ರಮ ಜರುಗಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಮಧ್ಯವರ್ತಿಗಳ ಹಾವಳಿ-ನಕಲಿ ನೋಂದಣಿಗೆ ಶಾಶ್ವತ ಪರಿಹಾರ

ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಹಾಗೂ ನಕಲಿ ನೋಂದಣಿಗಳನ್ನು ತಪ್ಪಿಸಿ, ಆಸ್ತಿ ಮಾಲೀಕರ ಮಾಲೀಕತ್ವವನ್ನು ರಕ್ಷಿಸಲು ಇ-ಖಾತಾ ವ್ಯವಸ್ಥೆ ಶಾಶ್ವತ ಪರಿಹಾರ ನೀಡಲಿದೆ ಎಂದರು.

ಮುಂದುವರೆದು, “ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿರುವುದು ನಿಜ. ಆದರೆ, ಆಸ್ತಿ ಮಾಲೀಕರು ಒಂದು ಬಾರಿ ಇ-ಖಾತಾ ಮಾಡಿಸಿಕೊಂಡರೆ ಯಾವ ಮಧ್ಯವರ್ತಿಗಳ ಮುಲಾಜಿಲ್ಲದೆ ಬದುಕಬಹುದು. ಸಾರ್ವಜನಿಕರ ಅನುಕೂಲಕ್ಕಾಗಿಯೇ ಹಲವು ಸವಾಲುಗಳ ನಡುವೆಯೂ ಈ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಇದು ನಕಲಿ ನೋಂದಣಿಗಳನ್ನು ತಡೆಯುವುದಕ್ಕೂ ಇದು ಸಹಕಾರಿಯಾಗಲಿದೆ.

ಇ-ಖಾತಾ ವ್ಯವಸ್ಥೆಯನ್ನು ಒಂದು ಬಾರಿ ಅನುಷ್ಠಾನ ಮಾಡಿದರೆ, ಇಡೀ ದೇಶದಲ್ಲಿ ಅತ್ಯುತ್ತಮ ಮಾದರಿ ಖಾತಾ ವ್ಯವಸ್ಥೆಯನ್ನು ನೀಡಿದಂತಾಗುತ್ತದೆ. ಸಣ್ಣ ಪುಟ್ಟ ಗೊಂದಲಗಳಿಗೆ ವಾರದಲ್ಲಿ ತೆರೆ ಬೀಳಲಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು.

JOB ALERT: ಕನ್ನಡಿಗರಿಗೆ ಸಿಹಿಸುದ್ದಿ: ರೈಲ್ವೆ ಇಲಾಖೆಯ 12 ಲಕ್ಷ ಹುದ್ದೆಗಳ ಭರ್ತಿಗೆ ಅಧಿಸೂಚನೆ, ಕನ್ನಡದಲ್ಲೇ ಪರೀಕ್ಷೆ

ಜಾತಿಗಣತಿ ವರದಿ ಇಟ್ಟುಕೊಂಡು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ: HDK ಸವಾಲು

ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ: 34,863 ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ | Karnataka Government Jobs

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಹಾರ್ಟ್ ಅಟ್ಯಾಕ್ ನಿಂದ ಮಲಗಿದ್ದಲ್ಲೇ ರೈತ ಸಾವು.!

27/07/2025 9:37 AM1 Min Read

ALERT : ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ವಿಷಪೂರಿತ `ನಕಲಿ ಆಲೂಗಡ್ಡೆ’ : ಇದನ್ನು ಜಸ್ಟ್ ಹೀಗೆ ಗುರುತಿಸಿ.!

27/07/2025 9:14 AM2 Mins Read

ALERT : ಪ್ರತಿದಿನ `ಮಾಂಸಹಾರ’ ಸೇವನೆಯಿಂದ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!

27/07/2025 9:04 AM2 Mins Read
Recent News

BREAKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಹಾರ್ಟ್ ಅಟ್ಯಾಕ್ ನಿಂದ ಮಲಗಿದ್ದಲ್ಲೇ ರೈತ ಸಾವು.!

27/07/2025 9:37 AM

`Gpay-PhonePe’ ಬಳಕೆದಾರರೇ ಗಮನಿಸಿ : ಆಗಸ್ಟ್ 1 ರಿಂದ ಬದಲಾಗಲಿವೆ `UPI’ ನಿಯಮಗಳು | UPI New Rules

27/07/2025 9:18 AM

Shocking: 9 ಗಂಟೆಗಿಂತ ಹೆಚ್ಚು ನಿದ್ರೆ ಮಾಡುವವರಿಗೆ ಈ ಅಪಾಯ ತಪ್ಪಿದ್ದಲ್ಲ !

27/07/2025 9:18 AM

ALERT : ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ವಿಷಪೂರಿತ `ನಕಲಿ ಆಲೂಗಡ್ಡೆ’ : ಇದನ್ನು ಜಸ್ಟ್ ಹೀಗೆ ಗುರುತಿಸಿ.!

27/07/2025 9:14 AM
State News
KARNATAKA

BREAKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಹಾರ್ಟ್ ಅಟ್ಯಾಕ್ ನಿಂದ ಮಲಗಿದ್ದಲ್ಲೇ ರೈತ ಸಾವು.!

By kannadanewsnow5727/07/2025 9:37 AM KARNATAKA 1 Min Read

ಬಾಗಲಕೋಟೆ : ರಾಜ್ಯದಲ್ಲಿ ಹೃದಯಾಘಾತದ ಸರಣಿ ಸಾವು ಮುಂದುವರೆದಿದ್ದು, ಮಲಗಿದ್ದಲ್ಲೇ ರೈತರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.…

ALERT : ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ವಿಷಪೂರಿತ `ನಕಲಿ ಆಲೂಗಡ್ಡೆ’ : ಇದನ್ನು ಜಸ್ಟ್ ಹೀಗೆ ಗುರುತಿಸಿ.!

27/07/2025 9:14 AM

ALERT : ಪ್ರತಿದಿನ `ಮಾಂಸಹಾರ’ ಸೇವನೆಯಿಂದ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!

27/07/2025 9:04 AM

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಪಂ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ

27/07/2025 8:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.