Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸಚಿವ ಕೆ.ಎನ್ ರಾಜಣ್ಣ ‘ಹನಿಟ್ರ್ಯಾಪ್’ ಆರೋಪ ನಿರಾಧಾರ : ಸರ್ಕಾರಕ್ಕೆ ವರದಿ ಸಲ್ಲಿಸಿದ ‘CID

31/07/2025 6:06 AM

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಹೆತ್ತ ತಾಯಿಯನ್ನೇ ಕೊಂದು ಶವ ಸುಟ್ಟು ಹಾಕಿ, ಪಕ್ಕದಲ್ಲಿ ಮಲಗಿದ ಪಾಪಿ ಮಗ!

31/07/2025 6:04 AM

BREAKING : ಬೆಂಗಳೂರಲ್ಲಿ ಮಗುವಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆಗೆ ಯತ್ನ : ಮಗು ಸಾವು, ಮಹಿಳೆ ಬಚಾವ್!

31/07/2025 5:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: HDK ಛೇಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ಖಾಲಿ ಮಾತು ಬೇಡ, ಮೊದಲು ದುಡ್ಡು ಕೊಡಿಸಲಿ: HDK ಛೇಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0909/07/2025 3:47 PM

ನವದೆಹಲಿ: “ಮೊದಲು ದುಡ್ಡು ಕೊಡಿಸಲಿ, ಕೇವಲ ಖಾಲಿ ಮಾತನಾಡುವುದು ಬೇಡ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಛೇಡಿಸಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಟನಲ್ ರಸ್ತೆ ವಿಚಾರವಾಗಿ ನಿತಿನ್ ಗಡ್ಕರಿ ಅವರನ್ನು ಕುಮಾರಸ್ವಾಮಿ ಅವರು ಭೇಟಿಯಾಗಿ ಚರ್ಚೆ ನಡೆಸಿರೋದು ಕ್ರೆಡಿಟ್ ವಾರ್ ಆಗುತ್ತಿದೆಯೇ ಎಂದು ಮಾಧ್ಯಮದವರು ಕೇಳಿದಾಗ ಅವರು ಹೀಗೆ ಪ್ರತಿಕ್ರಿಯಿಸಿದರು.

“ಕುಮಾರಸ್ವಾಮಿ ಅವರ ಸಲಹೆ ಮತ್ತು ನಿಮ್ಮ ಸಲಹೆಯನ್ನೂ ನಾನು ಸ್ವೀಕಾರ ಮಾಡುತ್ತೇನೆ” ಎಂದರು.

ಸಂಪುಟ ಬದಲಾವಣೆಗಾಗಿ ಮುಖ್ಯಮಂತ್ರಿ ದೆಹಲಿ ಭೇಟಿ ನೀಡಿದ್ದಾರೆಯೇ ಎಂದು ಕೇಳಿದಾಗ, “ಸದ್ಯಕ್ಕೆ ಸಂಚಿವ ಸಂಪುಟ ಬದಲಾವಣೆ ಕುರಿತು ಯಾವುದೇ ಚರ್ಚೆಯಿಲ್ಲ. ನಾವು ಬಂದಿರುವುದು ಅಭಿವೃದ್ದಿ ವಿಚಾರಗಳನ್ನು ಚರ್ಚೆ ನಡೆಸಲು. ಬೆಂಗಳೂರಿನಲ್ಲಿ ಒಂದಷ್ಟು ರಸ್ತೆಗಳನ್ನು ಅಗಲೀಕರಣ ಮಾಡಬೇಕಿದೆ. ಇದಕ್ಕೆ ರಕ್ಷಣಾ ಇಲಾಖೆ ಭೂಮಿಗಳ ಅವಶ್ಯಕತೆಯಿದೆ. ಈ ಕಾರಣಕ್ಕೆ ಹಾಗೂ ದಸರಾ ವೇಳೆ ಚುಟುಕು ಏರ್ ಶೋ ನಡೆಸಲು ರಕ್ಷಣಾ ಸಚಿವರನ್ನು ಭೇಟಿ ಮಾಡುವುದಕ್ಕಾಗಿ ಬಂದಿದ್ದೇವೆ” ಎಂದು ಹೇಳಿದರು.

ನಾಲ್ಕು ಎಂಎಲ್ ಸಿ ಸ್ಥಾನಗಳ ನಾಮನಿರ್ದೇಶನ ಯಾವಾಗ ಎಂದು ಕೇಳಿದಾಗ, “ವಿಧಾನಸಭಾ ಅಧಿವೇಶನದ ಮುಂಚಿತವಾಗಿ ಮುಗಿಯುತ್ತದೆ ಎಂದು ಹೇಳಿದರು. ಮಾಧ್ಯಮದವರಿಗೂ ಒಂದು ಸ್ಥಾನ ನೀಡಲಾಗುವುದು” ಎಂದು ಹೇಳಿದರು.

ನೀವು ಸೋನಿಯಾ ಗಾಂಧಿ ಹಾಗೂ ಇತರೆ ಹಿರಿಯ ನಾಯಕರನ್ನು ಭೇಟಿಯಾಗಿದ್ದೀರಾ ಎಂದು ಕೇಳಿದಾಗ, “ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿಲ್ಲ. ಹಿರಿಯ ನಾಯಕರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ನೀಡದಿದ್ದರೆ ಯಾರನ್ನೂ ಭೇಟಿಯಾಗಲು ಆಗುವುದಿಲ್ಲ. ರಾಹುಲ್ ಗಾಂಧಿ ಅವರು ಪಾಟ್ನಾಗೆ ತೆರಳಿದ್ದಾರೆ” ಎಂದು ತಿಳಿಸಿದರು.

ಬೀದರ್ ನ ಸಣ್ಣ ನೀರಾವರಿ ಇಲಾಖೆಯ ಎಫ್ ಡಿಎ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಹರಿಬಿಟ್ಟಿರುವ ಬಗ್ಗೆ ಕೇಳಿದಾಗ, “ಈ ವಿಚಾರ ನನಗೆ ತಿಳಿದಿಲ್ಲ. ಮಾಹಿತಿ ತಿಳಿದು ಮಾತನಾಡುತ್ತೇನೆ” ಎಂದರು.

ಪಾಟ್ನಾದಲ್ಲಿ ರಾಹುಲ್ ಗಾಂಧಿ ಅವರ ಪ್ರತಿಭಟನೆಯನ್ನು ತಡೆದಿರುವ ಬಗ್ಗೆ ಕೇಳಿದಾಗ, “ವಿರೋಧ ಪಕ್ಷಗಳ ದನಿಯನ್ನು ಅಡಗಿಸುವುದೇ ಈ ಸರ್ಕಾರದ ಕೆಲಸ. ರಾಹುಲ್ ಗಾಂಧಿ ಅವರು ಮತದಾರರ ಹಕ್ಕುಗಳನ್ನು ರಕ್ಷಿಸಲು ಹೋಗಿದ್ದಾರೆ” ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಭಾಷಾ ಸಂಘರ್ಷದ ಬಗ್ಗೆ ಕೇಳಿದಾಗ, “ಇದು ಆಯಾ ರಾಜ್ಯಕ್ಕೆ ಸಂಬಂಧಪಟ್ಟ ವಿಚಾರ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾವು ಕನ್ನಡ ಮತ್ತು ಇಂಗ್ಲಿಷ್ ಗೆ ಪ್ರಾಮುಖ್ಯತೆ ನೀಡುತ್ತೇವೆ” ಎಂದು ಹೇಳಿದರು.

ಕನ್ನಡ ಪರೀಕ್ಷೆ ಅಂಕಗಳನ್ನು 125 ರಿಂದ 100 ಕ್ಕೆ ಇಳಿಸಿರುವ ಬಗ್ಗೆ ಬಿಜೆಪಿ ಹಾಗೂ ಕೇಂದ್ರ ಸಚಿವ ಸೋಮಣ್ಣ ಅವರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ನನ್ನ ಇಲಾಖೆಯ ಬಗ್ಗೆ ನನಗೆ ಪ್ರಶ್ನೆ ಕೇಳಿದರೆ ಉತ್ತರ ಹೇಳಬಹುದು” ಎಂದರು.

ಟನಲ್ ರಸ್ತೆ ವಿಚಾರವಾಗಿ ಕೇಳಿದಾಗ, “ಇದಕ್ಕೆ ಎರಡು- ಮೂರು ದಿನದಲ್ಲಿ ಗ್ಲೋಬಲ್ ಟೆಂಡರ್ ಕರೆಯಲಾಗುವುದು. ಟೋಲ್ ಇಲ್ಲದೇ ರಸ್ತೆ ಮಾಡಲು ಸಾಧ್ಯವಿಲ್ಲ. ಏರ್ ಪೋರ್ಟ್, ಮೈಸೂರು ರಸ್ತೆ, ನೈಸ್ ರಸ್ತೆಗಳಲ್ಲಿ ಟೋಲ್ ಇದೆಯಲ್ಲಾ” ಎಂದರು.

ಸುರ್ಜೇವಾಲ ಅವರ ಕರ್ನಾಟಕ ಭೇಟಿಯ ಬಗ್ಗೆ ಕೇಳಿದಾಗ, “ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಪಕ್ಷ ಸಂಘಟನಾ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಜಿಲ್ಲಾ ಅಧ್ಯಕ್ಷರನ್ನು ಕರೆಸಿ ಸಭೆ ನಡೆಸಲಾಗಿದೆ. ರಾಜ್ಯದಾದ್ಯಂತ 100 ಕಾಂಗ್ರೆಸ್ ಕಚೇರಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಮಾಧ್ಯಮಗಳು ಹೇಳಿದಂತೆ ಯಾವುದೇ ರಾಜಕೀಯ ವಿಚಾರ ಇಲ್ಲಿಲ್ಲ. ಕೇವಲ ಸಂಘಟನೆ ವಿಚಾರ” ಎಂದು ಹೇಳಿದರು.

ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ: DKS

BREAKING: ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರಿಗೆ 6 ದಿನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

Share. Facebook Twitter LinkedIn WhatsApp Email

Related Posts

BIG NEWS : ಸಚಿವ ಕೆ.ಎನ್ ರಾಜಣ್ಣ ‘ಹನಿಟ್ರ್ಯಾಪ್’ ಆರೋಪ ನಿರಾಧಾರ : ಸರ್ಕಾರಕ್ಕೆ ವರದಿ ಸಲ್ಲಿಸಿದ ‘CID

31/07/2025 6:06 AM1 Min Read

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಹೆತ್ತ ತಾಯಿಯನ್ನೇ ಕೊಂದು ಶವ ಸುಟ್ಟು ಹಾಕಿ, ಪಕ್ಕದಲ್ಲಿ ಮಲಗಿದ ಪಾಪಿ ಮಗ!

31/07/2025 6:04 AM1 Min Read

BREAKING : ಬೆಂಗಳೂರಲ್ಲಿ ಮಗುವಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆಗೆ ಯತ್ನ : ಮಗು ಸಾವು, ಮಹಿಳೆ ಬಚಾವ್!

31/07/2025 5:39 AM1 Min Read
Recent News

BIG NEWS : ಸಚಿವ ಕೆ.ಎನ್ ರಾಜಣ್ಣ ‘ಹನಿಟ್ರ್ಯಾಪ್’ ಆರೋಪ ನಿರಾಧಾರ : ಸರ್ಕಾರಕ್ಕೆ ವರದಿ ಸಲ್ಲಿಸಿದ ‘CID

31/07/2025 6:06 AM

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಹೆತ್ತ ತಾಯಿಯನ್ನೇ ಕೊಂದು ಶವ ಸುಟ್ಟು ಹಾಕಿ, ಪಕ್ಕದಲ್ಲಿ ಮಲಗಿದ ಪಾಪಿ ಮಗ!

31/07/2025 6:04 AM

BREAKING : ಬೆಂಗಳೂರಲ್ಲಿ ಮಗುವಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆಗೆ ಯತ್ನ : ಮಗು ಸಾವು, ಮಹಿಳೆ ಬಚಾವ್!

31/07/2025 5:39 AM

Rain Alert : ಇಂದು ರಾಜ್ಯದ ಈ 3 ಜಿಲ್ಲೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

31/07/2025 5:34 AM
State News
KARNATAKA

BIG NEWS : ಸಚಿವ ಕೆ.ಎನ್ ರಾಜಣ್ಣ ‘ಹನಿಟ್ರ್ಯಾಪ್’ ಆರೋಪ ನಿರಾಧಾರ : ಸರ್ಕಾರಕ್ಕೆ ವರದಿ ಸಲ್ಲಿಸಿದ ‘CID

By kannadanewsnow0531/07/2025 6:06 AM KARNATAKA 1 Min Read

ಬೆಂಗಳೂರು : ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂಬ ರಾಜ್ಯ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಆರೋಪ ನಿರಾಧಾರವಾಗಿದೆ.…

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಹೆತ್ತ ತಾಯಿಯನ್ನೇ ಕೊಂದು ಶವ ಸುಟ್ಟು ಹಾಕಿ, ಪಕ್ಕದಲ್ಲಿ ಮಲಗಿದ ಪಾಪಿ ಮಗ!

31/07/2025 6:04 AM

BREAKING : ಬೆಂಗಳೂರಲ್ಲಿ ಮಗುವಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆಗೆ ಯತ್ನ : ಮಗು ಸಾವು, ಮಹಿಳೆ ಬಚಾವ್!

31/07/2025 5:39 AM

Rain Alert : ಇಂದು ರಾಜ್ಯದ ಈ 3 ಜಿಲ್ಲೆಗಳಲ್ಲಿ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

31/07/2025 5:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.