Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು & ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್‌ ರೈಲು ಆರಂಭಕ್ಕೆ ಹೆಚ್‌.ಡಿ.ಕುಮಾರಸ್ವಾಮಿ ಮನವಿ

23/12/2025 4:56 PM

BIG NEWS : ಕೊಡಗಿನಲ್ಲಿ ಅರಣ್ಯ ಸಿಬ್ಬಂದಿಯಿಂದಲೇ ಮರಗಳ್ಳತನ : ಓರ್ವ ಅರೆಸ್ಟ್, RRT ಸಿಬ್ಬಂದಿ ಸೇರಿ 6 ಜನರ ವಿರುದ್ಧ ‘FIR’

23/12/2025 4:53 PM

BREAKING : ದೆಹಲಿಯ ಬಾಂಗ್ಲಾ ರಾಯಭಾರ ಕಚೇರಿ ಹೊರಗೆ ಪ್ರತಿಭಟನೆ ; ಭಾರತದ ರಾಯಭಾರಿ ಜೊತೆ ಬಾಂಗ್ಲಾ ಮೀಟಿಂಗ್

23/12/2025 4:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನ ಬಗ್ಗೆ ಎಷ್ಟೇ ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ: ಸಿಎಂ ಸಿದ್ಧರಾಮಯ್ಯ
KARNATAKA

ನನ್ನ ಬಗ್ಗೆ ಎಷ್ಟೇ ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ: ಸಿಎಂ ಸಿದ್ಧರಾಮಯ್ಯ

By kannadanewsnow0901/07/2025 2:25 PM

ಬೆಂಗಳೂರು: ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ. ಯಾವುದೇ ಚಾನಲ್ ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ “ಪತ್ರಿಕಾ ದಿನಾಚರಣೆ-2025” ಹಾಗೂ “ನಿಜ ಸುದ್ದಿಗಾಗಿ ಸಮರ” ಸಂವಾದವನ್ನು ಉದ್ಘಾಟಿಸಿ, ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಸಂಜೀವಿನಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು.

ಮಾಧ್ಯಮ ಸ್ವತಂತ್ರವಾಗಿ, ನಿರ್ಭೀತಿಯಿಂದ ಸುದ್ದಿ ಮಾಡಬೇಕು ಎನ್ನುವುದರಲ್ಲಿ ನಂಬಿಕೆ ಇಟ್ಟುಕೊಂಡಿರುವವನು ನಾನು. ಜವಾಹರಲಾಲ್ ನೆಹರೂ ಅವರೂ ಇದನ್ನೇ ನಂಬಿದ್ದರು ಮತ್ತು ಪಾಲಿಸಿದ್ದರು. ಯಾವುದೇ ಚಾನಲ್ ಗಳು ನನ್ನ ಬಗ್ಗೆ ಎಷ್ಟು ಸುಳ್ಳು ಹೇಳಿದರೂ ನಾನು ಯಾರಿಗೂ ಫೋನ್ ಕೂಡ ಮಾಡುವುದಿಲ್ಲ ಎಂದರು.

ನನ್ನ ಕಾರಿನ ಮೇಲೆ ಕಾಗೆ ಕೂತಿದ್ದನ್ನು ಚರ್ಚೆ ನಡೆಸಿ ಮೂಢನಂಬಿಕೆ ಬಿತ್ತುವುದನ್ನು ಪತ್ರಿಕಾವೃತ್ತಿ ಎಂದು ಕರೆಯಬೇಕಾ ? ಜನರನ್ನು ಮೌಡ್ಯಕ್ಕೆ ತಳ್ಳುವುದು ಪತ್ರಿಕಾ ವೃತ್ತಿಯಾ ಎಂದು ಪ್ರಶ್ನಿಸಿದರು.

ನಾನು ಇವತ್ತು ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಆರೋಗ್ಯ ಸಂಜೀವಿನಿ ಉದ್ಘಾಟಿಸಿ ಪತ್ರಕರ್ತರಿಗೆ ಅನುಕೂಲ ಒದಗಿಸಿದ್ದೇವೆ. ನಮ್ಮ ಪರವಾಗಿ ಬರೆಯಲಿ ಎನ್ನುವ ಕಾರಣದಿಂದ ಜಾರಿ ಮಾಡಿರುವುದಲ್ಲ. ಸತ್ಯ ಬರೆಯಿರಿ, ಜನರ ಪರವಾಗಿ, ಪ್ರಜಾಪ್ರಭುತ್ವದ ಪರವಾಗಿ ಇರಿ ಎಂದು ಕರೆ ನೀಡಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಭಾಷಣದ ಹೈಲೈಟ್ಸ್

*ಸ್ವಾತಂತ್ರ್ಯಪೂರ್ವದಲ್ಲಿ ಜನರನ್ನು ಎಚ್ಚರಿಸುವ, ಸ್ವಾತಂತ್ರ್ಯ ಹೋರಾಟದ ಪರವಾಗಿ ಪತ್ರಿಕೆಗಳು ಕೆಲಸ ಮಾಡಿದ್ದವು.

*ಸಂವಿಧಾನದ ಮೌಲ್ಯಗಳು ಮತ್ತು ಸತ್ಯವನ್ನು ಮರೆಮಾಚುವ ಕೆಲಸ ಆಗಬಾರದು.

*ಎಲ್ಲ ಜನರಿಗೂ ಸಮಾನ ಅವಕಾಶ ಮತ್ತು ಜಾತಿ-ವರ್ಗ ರಹಿತ ಸಮಾಜ ಸೃಷ್ಟಿಯಾಗಬೇಕು ಎನ್ನುವುದು ಸಂವಿಧಾನದ ಮೌಲ್ಯ. ಇದನ್ನು ಎತ್ತಿ ಹಿಡಿಯುವುದು ಪತ್ರಿಕಾ ವೃತ್ತಿಯ ಜವಾಬ್ದಾರಿ.

*ದ್ವೇಷದ, ಪ್ರೀತಿಯಿಲ್ಲದ ಸಮಾಜ ಸೃಷ್ಟಿಸುವ ಪ್ರಯತ್ನಕ್ಕೆ ಮಾಧ್ಯಮಗಳು ಬೆಂಬಲಿಸಬಾರದು.

*ನನ್ನ ಮಾತುಗಳನ್ನು ಕೇವಲ ಪಕ್ಷದ ಚೌಕಟ್ಟಿನಲ್ಲಿ ಮಾತ್ರ ನೋಡದೆ ಸಮಾಜ ಮುಖಿಯಾಗಿ ಕೂಡ ನೋಡಬೇಕು.

SHOCKING: ಚೆನ್ನಾಗಿ ಓದಿಕೋಳ್ಳುವಂತೆ ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹ*ತ್ಯೆಗೆ ಶರಣು

SHOCKING: ಕರ್ನಾಟಕದಲ್ಲಿ ಐದೂವರೆ ವರ್ಷದಲ್ಲಿ ’82 ಹುಲಿ’ಗಳು ಸಾವು

Share. Facebook Twitter LinkedIn WhatsApp Email

Related Posts

ಬೆಂಗಳೂರು & ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್‌ ರೈಲು ಆರಂಭಕ್ಕೆ ಹೆಚ್‌.ಡಿ.ಕುಮಾರಸ್ವಾಮಿ ಮನವಿ

23/12/2025 4:56 PM2 Mins Read

BIG NEWS : ಕೊಡಗಿನಲ್ಲಿ ಅರಣ್ಯ ಸಿಬ್ಬಂದಿಯಿಂದಲೇ ಮರಗಳ್ಳತನ : ಓರ್ವ ಅರೆಸ್ಟ್, RRT ಸಿಬ್ಬಂದಿ ಸೇರಿ 6 ಜನರ ವಿರುದ್ಧ ‘FIR’

23/12/2025 4:53 PM1 Min Read

ಸಾಗರದ ಮಾರಿಕಾಂಬ ಜಾತ್ರೆಯನ್ನು ಎಲ್ಲರ ಸೇರಿ ಅರ್ಥಪೂರ್ಣವಾಗಿ ಆಚರಿಸೋಣ: ಶಾಸಕ ಗೋಪಾಲಕೃಷ್ಣ ಬೇಳೂರು

23/12/2025 4:24 PM1 Min Read
Recent News

ಬೆಂಗಳೂರು & ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್‌ ರೈಲು ಆರಂಭಕ್ಕೆ ಹೆಚ್‌.ಡಿ.ಕುಮಾರಸ್ವಾಮಿ ಮನವಿ

23/12/2025 4:56 PM

BIG NEWS : ಕೊಡಗಿನಲ್ಲಿ ಅರಣ್ಯ ಸಿಬ್ಬಂದಿಯಿಂದಲೇ ಮರಗಳ್ಳತನ : ಓರ್ವ ಅರೆಸ್ಟ್, RRT ಸಿಬ್ಬಂದಿ ಸೇರಿ 6 ಜನರ ವಿರುದ್ಧ ‘FIR’

23/12/2025 4:53 PM

BREAKING : ದೆಹಲಿಯ ಬಾಂಗ್ಲಾ ರಾಯಭಾರ ಕಚೇರಿ ಹೊರಗೆ ಪ್ರತಿಭಟನೆ ; ಭಾರತದ ರಾಯಭಾರಿ ಜೊತೆ ಬಾಂಗ್ಲಾ ಮೀಟಿಂಗ್

23/12/2025 4:50 PM

Alert : ‘ಗೂಗಲ್ ಕ್ರೋಮ್’ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ ; ಕಡ್ಡಾಯವಾಗಿ ನೀವಿದನ್ನ ಮಾಡ್ಲೇಬೇಕು!

23/12/2025 4:42 PM
State News
KARNATAKA

ಬೆಂಗಳೂರು & ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್‌ ರೈಲು ಆರಂಭಕ್ಕೆ ಹೆಚ್‌.ಡಿ.ಕುಮಾರಸ್ವಾಮಿ ಮನವಿ

By kannadanewsnow0923/12/2025 4:56 PM KARNATAKA 2 Mins Read

ನವದೆಹಲಿ : ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

BIG NEWS : ಕೊಡಗಿನಲ್ಲಿ ಅರಣ್ಯ ಸಿಬ್ಬಂದಿಯಿಂದಲೇ ಮರಗಳ್ಳತನ : ಓರ್ವ ಅರೆಸ್ಟ್, RRT ಸಿಬ್ಬಂದಿ ಸೇರಿ 6 ಜನರ ವಿರುದ್ಧ ‘FIR’

23/12/2025 4:53 PM

ಸಾಗರದ ಮಾರಿಕಾಂಬ ಜಾತ್ರೆಯನ್ನು ಎಲ್ಲರ ಸೇರಿ ಅರ್ಥಪೂರ್ಣವಾಗಿ ಆಚರಿಸೋಣ: ಶಾಸಕ ಗೋಪಾಲಕೃಷ್ಣ ಬೇಳೂರು

23/12/2025 4:24 PM

BREAKING : ಸಿಎಂ ಸಿದ್ದರಾಮಯ್ಯ ಪತ್ನಿಗೆ ಮುಡಾದಿಂದ ಸೈಟ್ ಹಂಚಿಕೆ ಪ್ರಕರಣ : ಜ.5ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

23/12/2025 4:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.