Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: `JEE ಮೇನ್ಸ್’ ಪರೀಕ್ಷೆ-2026ರ ವೇಳಾಪಟ್ಟಿ ಪ್ರಕಟ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | JEE Main 2026 Exam

20/10/2025 7:33 AM

Deepavali 2025 : `ಲಕ್ಷ್ಮಿ ಪೂಜೆ’ಯ ಮಹತ್ವ, ಶುಭ ಮುಹೂರ್ತ ತಿಳಿಯಿರಿ

20/10/2025 7:26 AM

ಪ್ರಯಾಣಿಕನ ಪವರ್ ಬ್ಯಾಂಕ್ ಗೆ ಬೆಂಕಿ : ದೆಹಲಿ-ದಿಮಾಪುರ ಇಂಡಿಗೋ ವಿಮಾನ ವಾಪಸ್

20/10/2025 7:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯಾರು ಏನೇ ಟೀಕೆ ಮಾಡಿಕೊಳ್ಳಲಿ, ನಾನಂತೂ ‘ಚನ್ನಪಟ್ಟಣ’ದ ಜನರ ಋಣ ತೀರಿಸುತ್ತೇನೆ: ಡಿ.ಕೆ ಶಿವಕುಮಾರ್
KARNATAKA

ಯಾರು ಏನೇ ಟೀಕೆ ಮಾಡಿಕೊಳ್ಳಲಿ, ನಾನಂತೂ ‘ಚನ್ನಪಟ್ಟಣ’ದ ಜನರ ಋಣ ತೀರಿಸುತ್ತೇನೆ: ಡಿ.ಕೆ ಶಿವಕುಮಾರ್

By kannadanewsnow0924/06/2024 7:01 PM

ಚನ್ನಪಟ್ಟಣ : “ಯಾರು ಏನೇ ಟೀಕೆ ಮಾಡಲಿ. ನಾನು ಚನ್ನಪಟ್ಟಣ ಕ್ಷೇತ್ರದ ಜನರ ಋಣ ತೀರಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕೋಡಂಬಳ್ಳಿ ಹಾಗೂ ಅಕ್ಕೂರು ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಸರ್ಕಾರದ ವತಿಯಿಂದ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಸೋಮವಾರ ಜನರ ಅಹವಾಲು ಸ್ವೀಕರಿಸಿ ಮಾತನಾಡಿದರು.

“ಇಲ್ಲಿ ಬಂದಿರುವ ಸಾವಿರಾರು ಜನ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಅರ್ಜಿ ಸಲ್ಲಿಸಲು ಮುಗಿ ಬೀಳುತ್ತಿರುವುದನ್ನು ನೋಡಿದರೆ, ಅವರ ಪರಿಸ್ಥಿತಿ ಅರ್ಥವಾಗುತ್ತದೆ. ನನ್ನ ಬಗ್ಗೆ ಯಾರು ಏನೇ ಟೀಕೆ ಮಾಡಲಿ, ನನಗೆ ಈ ಜನರ ಸಮಸ್ಯೆಗೆ ಪರಿಹಾರ ನೀಡುವುದಷ್ಟೇ ಮುಖ್ಯ ಎಂದರು.

ಈ ಹಿಂದೆ ನಾನು ಈ ಭಾಗದ ಶಾಸಕನಾಗಿದ್ದಾಗಲೂ ಅಧಿಕಾರಿಗಳನ್ನು ಹಳ್ಳಿಗಳಿಗೆ ಕರೆದುಕೊಂಡು ಹೋಗಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡುವ ಕೆಲಸ ಮಾಡುತ್ತಿದ್ದೆ. ಈಗಲೂ ಅದೇ ಕೆಲಸ ಮುಂದುವರಿಸುತ್ತಿದ್ದೇನೆ. ಈ ಹಿಂದೆ ಇದ್ದ ಜನಪ್ರತಿನಿಧಿಗಳು ಈ ಕೆಲಸ ಮಾಡಬಹುದಾಗಿತ್ತು. ಆದರೆ ಮಾಡಲಿಲ್ಲ. ಯಾಕೆ ಮಾಡಲಿಲ್ಲ ಎಂದು ನಾನು ಪ್ರಶ್ನೆ ಮಾಡುವುದಿಲ್ಲ. ಕೆಲ ದಿನಗಳ ಹಿಂದೆ ತಾಲ್ಲೂಕಿನ ಅಧಿಕಾರಿಗಳ ಸಭೆ ಮಾಡಿದೆ. ಆಗ ನನ್ನ ಗಮನಕ್ಕೆ ಒಂದಷ್ಟು ವಿಚಾರಗಳು ಬಂದವು ಎಂದರು.

ಕಳೆದ ಐದು ವರ್ಷಗಳಲ್ಲಿ ತಾಲ್ಲೂಕಿನ ಬಡವರಿಗೆ ಒಂದೇ ಒಂದು ನಿವೇಶನ ಹಂಚಿಕೆ ಮಾಡಿಲ್ಲ. ಯಾರೊಬ್ಬರಿಗೂ ಬಗರ್ ಹುಕಂ ಸಾಗುವಳಿ ಜಮೀನು ನೀಡಿಲ್ಲ. ಆಶ್ರಯ ಸಮಿತಿ ಸಭೆ ಕೂಡ ಮಾಡಿಲ್ಲ ಎಂಬ ವಿಚಾರ ತಿಳಿಯಿತು. ಈ ಹಿಂದೆ ಇದ್ದವರು ಯಾಕೆ ಮಾಡಲಿಲ್ಲ ಎಂದು ಈಗ ನಾನು ಪ್ರಶ್ನೆ ಮಾಡುವುದಿಲ್ಲ. ಬಡವರ ಬದುಕಲ್ಲಿ ಬದಲಾವಣೆ ತರಲಿಲ್ಲ ಎಂದರೆ ನಾವು ಜನಪ್ರತಿನಿಧಿಯಾಗಿ ಯಾಕೆ ಇರಬೇಕು? ಇಂತಹ ಕಾರ್ಯಕ್ರಮ ಮಾಡಿ ಜನರ ಕಷ್ಟ ಆಲಿಸಬೇಡಿ ಎಂದು ಅವರಿಗೆ ನಾವೇನಾದರೂ ಹೇಳಿದ್ದೆವಾ? ನೀವೇನಾದರೂ ಹೇಳಿದ್ದೀರಾ? ಎಂದು ಪ್ರಶ್ನಿಸಿದರು.

ಯಾರಿಗೆ ನಿವೇಶನವಿಲ್ಲ ಆಯಾ ಊರುಗಳಲ್ಲಿ ಸರ್ಕಾರ 2-3 ಎಕರೆ ಜಮೀನು ಖರೀದಿಸಿ ಲೇಔಟ್ ಮಾಡಿ ಬಡವರಿಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಬಿಸಿಲಮ್ಮ ದೇವಾಲಯದ ಆವರಣದಲ್ಲಿ ನಿಂತು ಹೇಳುತ್ತಿದ್ದೇನೆ. ಚನ್ನಪಟ್ಟಣದ ಬಡವರಿಗೆ ನಿವೇಶನ ನೀಡಲು 50 ಕೋಟಿ ಹಣ ತಂದು 50-100 ಎಕರೆ ಜಾಗದಲ್ಲಿ ಲೇಔಟ್ ಮಾಡುತ್ತೇವೆ. ಬಡವರಿಗೆ ಮನೆ ಕಟ್ಟಿಕೊಡಲಾಗುವುದು. ಮುಂದೆ ಇಲ್ಲಿ ನಮ್ಮ ಶಾಸಕರು ಆಯ್ಕೆಯಾಗುತ್ತಾರೆ ಕನಿಷ್ಠ 10 ಸಾವಿರ ಜನರಿಗೆ ನಿವೇಶನ ಹಂಚಿಕೆ ಮಾಡುತ್ತೇವೆ ಎಂದರು.

ಈ ತಾಲ್ಲೂಕಿನ 94% ಅಂದರೆ ಸುಮಾರು 64 ಸಾವಿರ ಬಡ ಕುಟುಂಬದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತಲುಪಿದೆ. ಇನ್ನು 7-8 % ಫಲಾನುಭವಿಗಳಿಗೆ ತಲುಪಬೇಕಿದೆ. ಅದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈ ಪಂಚಾಯ್ತಿಯ 12 ಸಾವಿರ ಕುಟುಂಬಗಳಿಗೆ ಅರ್ಜಿಯನ್ನು ತಲುಪಿಸಿದ್ದೇವೆ ಎಂದರು.

ನಮ್ಮನ್ನು ಸ್ಮರಿಸದಿದ್ದರೆ ಕುಮಾರಸ್ವಾಮಿ ರಾಜಕಾರಣ ನಡೆಯಲ್ಲ: ಡಿ.ಕೆ. ಸುರೇಶ್

ನಾನು ಅಧಿಕಾರಕ್ಕಾಗಿ ಚನ್ನಪಟ್ಟಣ ಬಿಟ್ಟು ಓಡಿ ಹೋಗುವವನಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

Share. Facebook Twitter LinkedIn WhatsApp Email

Related Posts

BREAKING: `JEE ಮೇನ್ಸ್’ ಪರೀಕ್ಷೆ-2026ರ ವೇಳಾಪಟ್ಟಿ ಪ್ರಕಟ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | JEE Main 2026 Exam

20/10/2025 7:33 AM2 Mins Read

Deepavali 2025 : `ಲಕ್ಷ್ಮಿ ಪೂಜೆ’ಯ ಮಹತ್ವ, ಶುಭ ಮುಹೂರ್ತ ತಿಳಿಯಿರಿ

20/10/2025 7:26 AM1 Min Read

GOOD NEWS : ರಾಜ್ಯದ ಮಹಿಳೆಯರಿಗೆ `ದೀಪಾವಳಿ ಗಿಫ್ಟ್’ : ‘ಗೃಹಲಕ್ಷ್ಮಿ ಸಹಕಾರ ಸಂಘ’ ಸ್ಥಾಪನೆಗೆ ಅನುಮತಿ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್.!

20/10/2025 7:12 AM1 Min Read
Recent News

BREAKING: `JEE ಮೇನ್ಸ್’ ಪರೀಕ್ಷೆ-2026ರ ವೇಳಾಪಟ್ಟಿ ಪ್ರಕಟ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | JEE Main 2026 Exam

20/10/2025 7:33 AM

Deepavali 2025 : `ಲಕ್ಷ್ಮಿ ಪೂಜೆ’ಯ ಮಹತ್ವ, ಶುಭ ಮುಹೂರ್ತ ತಿಳಿಯಿರಿ

20/10/2025 7:26 AM

ಪ್ರಯಾಣಿಕನ ಪವರ್ ಬ್ಯಾಂಕ್ ಗೆ ಬೆಂಕಿ : ದೆಹಲಿ-ದಿಮಾಪುರ ಇಂಡಿಗೋ ವಿಮಾನ ವಾಪಸ್

20/10/2025 7:25 AM

ಪ್ರಯಾಣಿಕನ ವೈದ್ಯಕೀಯ ತುರ್ತುಸ್ಥಿತಿ: ಸೌದಿ ವಿಮಾನ ತಿರುವನಂತಪುರಂದಲ್ಲಿ ಭೂ ಸ್ಪರ್ಶ

20/10/2025 7:15 AM
State News
KARNATAKA

BREAKING: `JEE ಮೇನ್ಸ್’ ಪರೀಕ್ಷೆ-2026ರ ವೇಳಾಪಟ್ಟಿ ಪ್ರಕಟ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | JEE Main 2026 Exam

By kannadanewsnow5720/10/2025 7:33 AM KARNATAKA 2 Mins Read

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಇಂದು ಜೆಇಇ ಮುಖ್ಯ ಸೆಷನ್ ಒಂದು ಮತ್ತು ಎರಡನೇ ಸೆಷನ್ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಿದೆ.…

Deepavali 2025 : `ಲಕ್ಷ್ಮಿ ಪೂಜೆ’ಯ ಮಹತ್ವ, ಶುಭ ಮುಹೂರ್ತ ತಿಳಿಯಿರಿ

20/10/2025 7:26 AM

GOOD NEWS : ರಾಜ್ಯದ ಮಹಿಳೆಯರಿಗೆ `ದೀಪಾವಳಿ ಗಿಫ್ಟ್’ : ‘ಗೃಹಲಕ್ಷ್ಮಿ ಸಹಕಾರ ಸಂಘ’ ಸ್ಥಾಪನೆಗೆ ಅನುಮತಿ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್.!

20/10/2025 7:12 AM

ದೀಪಾವಳಿ `ಪಟಾಕಿ’ ಅವಘಡಗಳಿಗೆ ಬೆಂಗಳೂರಿನ ಮಿಂಟೋ ಆಸ್ಪತ್ರೆ ಸಜ್ಜು : ದಿನದ 24 ಗಂಟೆ ಸೇವೆ.!

20/10/2025 7:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.