Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲು ಪ್ರಯಾಣಿಕರ ಗಮನಕ್ಕೆ: ಎಷ್ಟು ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬಹುದು? ಇಲ್ಲಿದೆ ಹೊಸ ನಿಯಮ!

ಪ್ರಧಾನಿ ಮೋದಿಗೆ ವಿಶ್ವಸಂಸ್ಥೆಯ ಅತ್ಯುನ್ನತ ‘ಅಗ್ರಿಕೋಲಾ ಮೆಡಲ್’ ಗೌರವ: ‘ಇದನ್ನು ಭಾರತದ ಅನ್ನದಾತರಿಗೆ ಸಮರ್ಪಿಸುತ್ತೇನೆ’ ಎಂದ PM

​’ಧುರಂಧರ್ 2′ ಚಿತ್ರದಿಂದ ಭಾರತೀಯ ಏಜೆಂಟರ ಸುರಕ್ಷತೆಗೆ ಧಕ್ಕೆ?: ಕೇಂದ್ರಕ್ಕೆ ಪರಿಶೀಲಿಸಲು ದೆಹಲಿ ಹೈಕೋರ್ಟ್ ಸೂಚನೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್, ಇಂದಿರಾಗಾಂಧಿ ಜಾರಿಗೆ ತಂದ ಯೋಜನೆಗಳನ್ನು ನಿಲ್ಲಿಸಲು, ಯಾರಿಂದಲೂ ಸಾಧ್ಯವಿಲ್ಲ: DKS
KARNATAKA

ಕಾಂಗ್ರೆಸ್, ಇಂದಿರಾಗಾಂಧಿ ಜಾರಿಗೆ ತಂದ ಯೋಜನೆಗಳನ್ನು ನಿಲ್ಲಿಸಲು, ಯಾರಿಂದಲೂ ಸಾಧ್ಯವಿಲ್ಲ: DKS

By ವಸಂತ ಬಿ ಈಶ್ವರಗೆರೆ

ಬೆಂಗಳೂರು : “ಕಾಂಗ್ರೆಸ್ ಸರ್ಕಾರ ಹಾಗೂ ಇಂದಿರಾ ಗಾಂಧಿ ಅವರು ಜಾರಿಗೆ ತಂದಿರುವ ಉಳುವವನೆ ಭೂಮಿಯ ಒಡೆಯ, ಪಿಂಚಣಿ, ಮಧ್ಯಾಹ್ನದ ಬಿಸಿಯೂಟ, ಪಡಿತರ ವ್ಯವಸ್ಥೆ ಸೇರಿದಂತೆ ಅನೇಕ ಯೋಜನೆಗಳನ್ನು ಯಾರಿಂದಲೂ ಹಾಗೂ ಯಾವುದೇ ಸರ್ಕಾರಗಳಿಂದಲೂ ನಿಲ್ಲಿಸಲು ಸಾಧ್ಯವಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆಯಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು.

“ಜವಹಾರ್ ಲಾಲ್ ನೆಹರು ಅವರಿಂದ ಹಿಡಿದು ಮನಮೋಹನ್ ಸಿಂಗ್ ಅವರ ಕಾಲದ ತನಕ ಕಾಂಗ್ರೆಸ್ ಸರ್ಕಾರಗಳು ಜಾರಿಗೆ ತಂದ ಒಂದೇ ಒಂದು ಯೋಜನೆಗಳನ್ನು ನಿಲ್ಲಿಸುವ ಶಕ್ತಿ, ಧೈರ್ಯ ಯಾರಿಗೂ ಬರಲಿಲ್ಲ” ಎಂದರು.

ಬ್ಯಾಂಕ್ ರಾಷ್ಟ್ರೀಕರಣದಿಂದ ದೇಶ ಆರ್ಥಿಕವಾಗಿ ಸಬಲ

ಚನ್ನಪಟ್ಟಣದ ಉಪಚುನಾವಣಾ ಸಭೆಯಲ್ಲಿ ಮಾತನಾಡುವಾಗ ಹಿರಿಯ ಮಹಿಳೆಯೊಬ್ಬರು ಇಂದಿರಾಗಾಂಧಿ ಅವರ ಪಿಂಚಣಿ ಯೋಜನೆಯನ್ನು ನೆನಪಿಸಿಕೊಂಡು ʼಮೊದಲಿಗೆ 40 ರೂಪಾಯಿ ಕೊಡುತ್ತಿದ್ದರುʼ ಎಂದು ತುಂಬಿದ ಸಭೆಯಲ್ಲಿ ಹೇಳಿದರು. ಜನರು ಅವರನ್ನು ಅನೇಕ ಜನಪರ ಯೋಜನೆಗಳಿಗಾಗಿ ಈಗಲೂ ನೆನಪಿಸಿಕೊಳ್ಳುತ್ತಾರೆ. ಬ್ಯಾಂಕ್ ರಾಷ್ಟ್ರೀಕರಣದಿಂದ ದೇಶ ಆರ್ಥಿಕವಾಗಿ ಸಬಲವಾಯಿತು. ನೆಹರು ಅವರ ಕುಟುಂಬ ಹಾಗೂ ಕಾಂಗ್ರೆಸ್ ಪಕ್ಷ ಈ ದೇಶವನ್ನು ಒಗ್ಗಟ್ಟಾಗಿ ಇಟ್ಟಿದೆ” ಎಂದರು.

“ಬಡವರಿಗೆ ಭೂಮಿ ನೀಡಿದ ಕಾಂಗ್ರೆಸ್

“ಭಾರತ್ ಜೋಡೋ ಯಾತ್ರೆ ಸಂದರ್ಭ ಮೊಣಕಾಲ್ಮೂರು ಬಳಿ ಟೀ ಕುಡಿಯಲು ಬಿಡುವು ತೆಗೆದುಕೊಂಡಾಗ ಅಜ್ಜಿಯೊಬ್ಬರು ಕೈಯಲ್ಲಿ ಸೌತೆಕಾಯಿ ಹಿಡಿದುಕೊಂಡು ನಿಂತಿದ್ದರು. ಆಗ ರಾಹುಲ್ ಗಾಂಧಿ ಅವರು ಗಮನಿಸಿ ಕೇಳಿದಾಗ, ʼನಿಮ್ಮ ಅಜ್ಜಿ ಇಂದಿರಮ್ಮ ಕೊಟ್ಟ ಭೂಮಿಯಲ್ಲಿ ಇದನ್ನು ಬೆಳೆದಿದ್ದೇವೆʼ ಎಂದು ಅದನ್ನು ರಾಹುಲ್ ಗಾಂಧಿ ಅವರಿಗೆ ನೀಡಿದರು. ಇದು ಉಳುವವನಿಗೆ ಭೂಮಿ ಕಾರ್ಯಕ್ರಮದ ಫಲ” ಎಂದರು.

ಇಂದಿರಾ ಗಾಂಧಿ ಅವರ ಯುಗದಲ್ಲಿ ಬದುಕಿರುವುದು ಪುಣ್ಯ

“ಇಂದಿರಾ ಗಾಂಧಿ ಅವರ ಯುಗದಲ್ಲಿ ನಾವು ಬದುಕಿದ್ದೇವೆ ಎಂಬುದೇ ನಮ್ಮ ಪುಣ್ಯ. ಈ ದೇಶದ ಉಕ್ಕಿನ ಮಹಿಳೆಯನ್ನು ಯಾರೂ ಸಹ ಮರೆಯಲು ಸಾಧ್ಯವಿಲ್ಲ. ಅವರ ಪ್ರತಿಯೊಂದು ಕಾರ್ಯಕ್ರಮ, ದಿಟ್ಟ ಹೆಜ್ಜೆ, ಹೋರಾಟ, ಧೈರ್ಯ, ನಾಯಕತ್ವ ಹಾಗೂ ತ್ಯಾಗ ಹಾಗೂ ಈ ದೇಶ ಭವಿಷ್ಯಕ್ಕೆ ನೆಹರು ಅವರ ಕುಟುಂಬ ನೀಡಿದ ಮಾರ್ಗದರ್ಶನವನ್ನು ದೇಶದ ಜನರು ಮರೆಯಲು ಸಾಧ್ಯವಿಲ್ಲ” ಎಂದರು.

ಇಂದಿರಾ ಗಾಂಧಿ ಅವರ ಸ್ಪೂರ್ತಿದಾಯಕ ನುಡಿಮುತ್ತುಗಳನ್ನು ಉಲ್ಲೇಖಿಸಿದ ಡಿಸಿಎಂ

“ಅಧಿಕಾರ ಎಂದರೆ ಪ್ರತಿಯೊಬ್ಬ ಮಾನವನ ಪ್ರಗತಿ. ನನ್ನ ತಂದೆ ನೆಹರು ಅವರು ರಾಜಕೀಯದ ಪವಾಡ ಪುರುಷ ಇರಬಹುದು ಆದರೆ ರಾಜಕೀಯದಲ್ಲಿ ನನ್ನ ದಾರಿಯೇ ಬೇರೆ. ಚುನಾವಣೆಯಲ್ಲಿ ಸೋಲುವುದು, ಗೆಲ್ಲುವುದು ಮುಖ್ಯವಲ್ಲ. ಈ ದೇಶವನ್ನು ಗಟ್ಟಿಗೊಳಿಸುವುದು ಮುಖ್ಯ. ಜನರು ತಮ್ಮ ಕರ್ತವ್ಯಗಳನ್ನು ಮರೆತುಬಿಡುತ್ತಾರೆ ಆದರೆ ತಮ್ಮ ಹಕ್ಕುಗಳನ್ನು ನೆನಪಿಸಿಕೊಳ್ಳುತ್ತಾರೆ. ಪ್ರಜೆಗಳು ಅವರ ಕರ್ತವ್ಯ ಹಾಗೂ ಹಕ್ಕುಗಳನ್ನು ನಾವು ನೆನಪಿಸಬೇಕು. ಅಧಿಕಾರ ಎಂದರೆ ಪ್ರತಿ ಮಾನವನ ಪ್ರಗತಿ” ಎಂದು ಇಂದಿರಾ ಗಾಂಧಿ ಅವರ ಸ್ಪೂರ್ತಿದಾಯಕ ನುಡಿಮುತ್ತುಗಳನ್ನು ಭಾಷಣದ ಮಧ್ಯೆ ಡಿಸಿಎಂ ಉಲ್ಲೇಖಿಸಿದರು.

ಮತ್ತೆ ಅಧಿಕಾರಕ್ಕೆ ಬರಲು ತಂತ್ರ, ಒಗ್ಗಟ್ಟು, ಯೋಜನೆಗಳಿಗೆ

“ರಾಜ್ಯದ ಜನರಿಗೆ ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿ ಹೊಸ ಯೋಜನೆಗಳನ್ನು ನೀಡುತ್ತದೆ. ಮತ್ತೆ ಈ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ನಮ್ಮ ಬಳಿ ತಂತ್ರ, ಮಂತ್ರ, ಒಗ್ಗಟ್ಟು, ನಾಯಕತ್ವ ಹಾಗೂ ಶಕ್ತಿಯಿದೆ. ಕಾರ್ಯಕರ್ತರು ಆಶಾಭಾವನೆ ಮತ್ತು ಒಗ್ಗಟ್ಟಿನಿಂದ ನಮ್ಮ ಜೊತೆ ಇದ್ದರೆ ಸಾಕು” ಎಂದು ಹೇಳಿದರು.

“ಸೋನಿಯಾ ಗಾಂಧಿ ಅವರು ಇಂದಿರಾ ಗಾಂಧಿ ಅವರ ನುಡಿಮುತ್ತುಗಳನ್ನು ಸಂಗ್ರಹಿಸಿರುವ ಪುಸ್ತಕದ ಹಕ್ಕುಸ್ವಾಮ್ಯ ರಾಹುಲ್ ಗಾಂಧಿ ಅವರ ಬಳಿ ಇರುವ ಕಾರಣಕ್ಕೆ ಬೇಗ ಲೋಕಾರ್ಪಣೆಗೊಳಿಸಲು ಸಾಧ್ಯವಾಗುತ್ತಿಲ್ಲ. ಆದಷ್ಟು ಬೇಗ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಅನುಮತಿ ಪಡೆಯಲಾಗುವುದು. ಮಹಾತ್ಮ ಗಾಂಧಿ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡ 100 ವರ್ಷಗಳ ನೆನಪಿನ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಗುವುದು” ಎಂದು ಹೇಳಿದರು.

ಇಂದಿರಾ ಗಾಂಧಿ ಸಿನಿಮಾ ಥಿಯೇಟರ್ ಪ್ರಾರಂಭ ಮಾಡಿದೆ

“ನಾವು ದೆಹಲಿಗೆ ಯುವ ಕಾಂಗ್ರೆಸ್ ಸಮ್ಮೇಳನಕ್ಕೆ ತೆರಳುವ ವೇಳೆ ನಿಂತುಬಿಟ್ಟಿತು. ಇಂದಿರಾಗಾಂಧಿ ಅವರ ಹತ್ಯೆಯಾಗಿದೆ ಎನ್ನುವ ಸುದ್ದಿ ಬಂದ ಕಾರಣಕ್ಕೆ ರೈಲು ದೊಡ್ಡಬಳ್ಳಾಪುರದ ಹತ್ತಿರ ನಿಂತು ಬಿಟ್ಟಿತು. ಬೆಂಗಳೂರಿನಲ್ಲಿ ಗಲಭೆಯೆದ್ದ ಕಾರಣಕ್ಕೆ ಒಂದಷ್ಟು ಜನರನ್ನು ಜೈಲಿಗೆ ಹಾಕಲಾಯಿತು. ನಾನು ಇದೇ ವೇಳೆ ಜಿಲ್ಲಾಧಿಕಾರಿಗಳಾಗಿದ್ದ ಪುಟ್ಟಣಪ್ಪ ಅವರ ಬಳಿ ಸಿನಿಮಾ ಥಿಯೇಟರ್ ಪ್ರಾರಂಭ ಮಾಡುವುದಕ್ಕೆ ಅನುಮತಿ ಕೇಳಿದೆ. ಅವರು ಯಾವ ಹೆಸರನ್ನು ಇಟ್ಟಿದ್ದೀಯಾ ಎಂದು ಕೇಳಿದರು. ನಾನು ʼಇಂದಿರಾಗಾಂಧಿʼ ಅವರ ಹೆಸರನ್ನು ಇಡುತ್ತೇನೆ ಎಂದು ಹೇಳಿದ ತಕ್ಷಣ ಸಹಿ ಹಾಕಿದರು. ಕೆಪಿಸಿಸಿ ಹಿಂಭಾಗದ ನೂತನ ಕಟ್ಟಡಕ್ಕೆ ನಾಮಕರಣ ಮಾಡುವ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಿದೆ ಅವರು ʼಇಂದಿರಾ ಗಾಂಧಿ ಭವನʼ ಎಂದು ಸೂಚಿಸಿದರು. ನಂತರ ಸಭಾಂಗಣಕ್ಕೆ ʼಭಾರತ್ ಜೋಡೋ ಭವನʼ ಎಂದು ಹೆಸರಿಟ್ಟೆವು” ಎಂದರು.

ನಮ್ಮ ಸರ್ಕಾರದಿಂದ ಬಡವರಿಗೆ ತೊಂದರೆಯಾಗುವುದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಕಾಂಗ್ರೆಸ್ ನಲ್ಲೂ ‘ಕಿಂಡರ್ ಗಾರ್ಡನ್’ ಪದ್ಧತಿ ಇದೆ : ಸಚಿವ ಸ್ಥಾನದ ಕುರಿತು ಶಾಸಕ ನರೇಂದ್ರ ಸ್ವಾಮಿ ಅಸಮಾಧಾನ

Share. Facebook Twitter LinkedIn WhatsApp Email

Related Posts

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

2 Mins Read

ಜಲಮೂಲ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

2 Mins Read

ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

2 Mins Read
Recent News

ರೈಲು ಪ್ರಯಾಣಿಕರ ಗಮನಕ್ಕೆ: ಎಷ್ಟು ದಿನಗಳ ಮುಂಚಿತವಾಗಿ ಟಿಕೆಟ್ ಬುಕ್ ಮಾಡಬಹುದು? ಇಲ್ಲಿದೆ ಹೊಸ ನಿಯಮ!

ಪ್ರಧಾನಿ ಮೋದಿಗೆ ವಿಶ್ವಸಂಸ್ಥೆಯ ಅತ್ಯುನ್ನತ ‘ಅಗ್ರಿಕೋಲಾ ಮೆಡಲ್’ ಗೌರವ: ‘ಇದನ್ನು ಭಾರತದ ಅನ್ನದಾತರಿಗೆ ಸಮರ್ಪಿಸುತ್ತೇನೆ’ ಎಂದ PM

​’ಧುರಂಧರ್ 2′ ಚಿತ್ರದಿಂದ ಭಾರತೀಯ ಏಜೆಂಟರ ಸುರಕ್ಷತೆಗೆ ಧಕ್ಕೆ?: ಕೇಂದ್ರಕ್ಕೆ ಪರಿಶೀಲಿಸಲು ದೆಹಲಿ ಹೈಕೋರ್ಟ್ ಸೂಚನೆ!

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

State News
KARNATAKA

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ದಿನಬೆಳಗಾದರೆ ಸಾಕು, ಕೇಳಿಬರುತ್ತಿರುವ ಕಹಿ ಸುದ್ದಿಗಳೆಂದರೆ ಅನಿರೀಕ್ಷಿತ ಮತ್ತು ಅಕಾಲಿಕ ಹೃದಯಾಘಾತದ ಸಾವುಗಳು. ನಿನ್ನೆ ದಿಲೀಪ್…

ಜಲಮೂಲ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.