ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಈಗಾಗಲೇ ಜೈಲುವಾಸ ಅನುಭವಿಸುತ್ತಿದ್ದಾರೆ. ವಾರದಲ್ಲಿ ಮೂರು ದಿನ ಮಾತ್ರ ಭೇಟಿಗೆ ಅವಕಾಶ ಇರುವ ಹಿನ್ನೆಲೆಯಲ್ಲಿ ಈಗಾಗಲೇ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮಗ ಇತ್ತೀಚಿಗೆ ಭೇಟಿ ನೀಡಿದ್ದರು. ಅದಾದ ಬಳಿಕ ವಿನೋದ್ ಪ್ರಭಾಕರ್ ಕೂಡ ಭೇಟಿ ನೀಡಿದ್ದರು. ಇಂದು ನಿರ್ದೇಶಕ ನಟ ಪ್ರೇಮ್ ಹಾಗೂ ಪತ್ನಿ ರಕ್ಷಿತಾ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನವರನ್ನು ಭೇಟಿಯಾದರು.

ದರ್ಶನ್‌ರನ್ನ ಭೇಟಿಯಾದ ಬಳಿಕ ಹೊರಬಂದ ರಕ್ಷಿತಾ ಭಾವುಕರಾಗಿದ್ದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 20 ದಿನಗಳಿಂದ ಆಗುತ್ತಿರುವುದನ್ನು ಮಾಧ್ಯಮಗಳಲ್ಲಿ ನೋಡುತ್ತಿದ್ದೇನೆ. ಇದು ದುರಾದೃಷ್ಟಕರ ಘಟನೆ. ಈ ಪ್ರಕರಣ ಆಗಿರುವುದರ ಬಗ್ಗೆ ಬೇಸರ ಖಂಡಿತಾ ಇದೆ. ನಾನು ಹೇಳೋದು ಇಷ್ಟೇ, ಯಾರೂ ಕೂಡ ಕಾನೂನಿಗಿಂತ ದೊಡ್ಡವರಲ್ಲ. ಎಲ್ಲರಿಗೂ ನ್ಯಾಯ ಸಿಗಲಿ ಎಂದು ಹೇಳಿದರು.

ನಂತರ ಪ್ರೇಮ್ ಅವರು ಮಾತನಾಡಿ, ನಟ ದರ್ಶನ್ ನನಗೆ ಹಾಗೂ ರಕ್ಷಿತಾಗೆ ಬಹಳ ಆತ್ಮೀಯ ಸ್ನೇಹಿತರು. ಎಲ್ಲದಕ್ಕಿಂತ ಹೆಚ್ಚಾಗಿ ಇಡೀ ಪ್ರಕರಣ ಈಗ ಕಾನೂನಿನ ಅಡಿಯಲ್ಲಿದೆ. ಕೋರ್ಟ್‌ನಲ್ಲಿ ಪ್ರಕರಣವಿದೆ. ಹಾಗಾಗಿ ನಾವೂ ಯಾರೂ ಇದರ ಬಗ್ಗೆ ಮಾತನಾಡೋಕೆ ಹೋಗಬಾರದು. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬೇಡಿಕೊಳ್ಳುತ್ತೇನೆ. ಕಾನೂನು ಪ್ರಕಾರ ಏನೆಲ್ಲಾ ಆಗಬೇಕೋ ಅದೆಲ್ಲವೂ ಆಗುತ್ತಿದೆ. ಅದರ ಮುಂದೆ ನಾವು ಯಾರೂ ಕೂಡ ದೊಡ್ಡವರಲ್ಲ ಎಂದರು.

Share.
Exit mobile version