ಬೆಂಗಳೂರು : ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ, ಮಹಿಳೆಯರೆಲ್ಲರೂ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿ ಎಂದು ರಾಜ್ಯದ ಜನತೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕರೆ ನೀಡಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ, ಮಹಿಳೆಯರೆಲ್ಲರೂ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. 200 ಯೂನಿಟ್ ಒಳಗೆ ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ. ಕಾಂಗ್ರೆಸ್ ಕುತಂತ್ರ ರಾಜಕಾರಣ ಮಾಡುತ್ತಿದೆ ಎಂದರು.
ಕಾಂಗ್ರೆಸ್ಸಿಗರು 40 ಕ್ಷೇತ್ರದ ಹೆಚ್ಚು ಕಡೆ ಕೂಪನ್ ಹಂಚಿದ್ದಾರೆ. ಅಮಾಯಕ ಜನರಿಗೆ 5 ಸಾವಿರ ಕೂಪನ್ ಹಂಚಿದ್ದಾರೆ. ಬಿಜೆಪಿ ವಿರುದ್ಧ 40 % ಕಮಿಷನ್ ಆರೋಪ ಮಾಡಿದ್ದೀರಾ ನೀವು..ನೀವು ಇದಕ್ಕೆ ಎಷ್ಟು ಕಮಿಷನ್ ಪಡೆದಿದ್ದೀರಾ..? ಎಂದು ಪ್ರಶ್ನಿಸಿದ್ದಾರೆ. ಚುನಾವಣೆಗೂ ಮುನ್ನ ನಿನಗೂ ಫ್ರೀ..ನನಗೂ ಫ್ರೀ ಎಂದಿದ್ದರು. ಈಗ ಕಾಂಗ್ರೆಸ್ ನಾಯಕರು ಮೋಸದ ರಾಜಕಾರಣ ಮಾಡುತ್ತಿದ್ದಾರೆ. ಮೊದಲು ಕೊಟ್ಟ ಭರವಸೆ ಈಡೇರಿಸಲಿ ಎಂದರು. ಇದೇ ಸಿಎಂ ಸಿದ್ದರಾಮಯ್ಯ ನನಗೂ ಫ್ರೀ..ನಿನಗೂ ಫ್ರೀ ಎಂದಿದ್ದರು.ಮೊದಲ ಸಂಪುಟದಲ್ಲೇ ಎಲ್ಲಾ ಗ್ಯಾರೆಂಟಿ ಜಾರಿ ಎಂದಿದ್ದರು. ಕುತಂತ್ರದ ರಾಜಕಾರಣ ನಡೆಸಿ ಜನರನ್ನು ವಂಚಿಸಲಾಗಿದೆ ಎಂದು ಹೆಚ್ಡಿಕೆ ಕಿಡಿಕಾರಿದರು.
ಕರೆಂಟ್ ಬಿಲ್ ಕಟ್ಟಿ ಸಿದ್ದರಾಮಯ್ಯ, ಡಿಕೆಶಿಗೆ ಅವಮಾನ ಮಾಡಬೇಡಿ : R. ಅಶೋಕ್ ಟಾಂಗ್
ಬೆಂಗಳೂರು : ಕಾಂಗ್ರೆಸ್ ಘೋಷಣೆ ಮಾಡಿದಂತೆ ಯಾರೂ ಕರೆಂಟ್ ಬಿಲ್ ಕಟ್ಟಬೇಡಿ, ಕರೆಂಟ್ ಬಿಲ್ ಕಟ್ಟಿ ಸಿದ್ದರಾಮಯ್ಯ, ಡಿಕೆಶಿಗೆ ಅವಮಾನ ಮಾಡಬೇಡಿ ಎಂದು ಮಾಜಿ ಸಚಿವ ಅಶೋಕ್ ಟಾಂಗ್ ನೀಡಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ವಾಗ್ಧಾಳಿ ನಡೆಸಿದ ಮಾಜಿ ಸಚಿವ ಅಶೋಕ್ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿದೆ. ಐದು ಉಚಿತ ಗ್ಯಾರಂಟಿಗಳನ್ನು ಕೊಡುತ್ತಿದೆ. ದಯವಿಟ್ಟು ಕಾಂಗ್ರೆಸ್ನವರು ಹೇಳಿದ್ದನ್ನು ಜನರು ಫಾಲೋ ಮಾಡಬೇಕು. ಕಾಂಗ್ರೆಸ್ ಘೋಷಣೆ ಮಾಡಿದಂತೆ ಯಾರೂ ಕರೆಂಟ್ ಬಿಲ್ ಕಟ್ಟಬೇಡಿ, ಕರೆಂಟ್ ಬಿಲ್ ಕಟ್ಟಿ ಸಿದ್ದರಾಮಯ್ಯ, ಡಿಕೆಶಿಗೆ ಅವಮಾನ ಮಾಡಬೇಡಿ ಎಂದು ಮಾಜಿ ಸಚಿವ ಅಶೋಕ್ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಸೈಲೆಂಟ್, ಡಿಸಿಎಂ ಡಿಕೆ ಶಿವಕುಮಾರ್ ವೈಲೆಂಟ್ ಆಗಿದ್ದಾರೆ ಮಾಜಿ ಸಚಿವ ಅಶೋಕ್ ವಾಗ್ಧಾಳಿ ನಡೆಸಿದರು.‘ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಸೈಲೆಂಟ್, ಡಿಸಿಎಂ ಡಿಕೆ ಶಿವಕುಮಾರ್ ವೈಲೆಂಟ್ ಆಗಿದ್ದಾರೆ. ಡಿಕೆಶಿ ಸಭೆಯಲ್ಲಿ ಪೊಲೀಸರಿಗೆ ಧಮ್ಕಿ ಹಾಕಿದ್ದಾರೆ ಎಂದು ಕಿಡಿಕಾರಿದರು. ಸಿಎಂ ಗಿಂತ ಮುಂಚೆ ಡಿಸಿಎಂ ಡಿಕೆಶಿಯೇ ಎಲ್ಲದಕ್ಕೂ ಮಾತನಾಡುತ್ತಾರೆ’ ಎಂದು ವಾಗ್ಧಾಳಿ ನಡೆಸಿದರು. ಸುಳ್ಳು ಭರವಸೆ ನೀಡಿ ಕಾಂಗ್ರೆಸ್ ಸರ್ಕಾರ ಜನರನ್ನು ಮೋಡಿ ಮಾಡಿದೆ, ರಾಹುಲ್, ಪ್ರಿಯಾಂಕಾ ಬಂದು ಗ್ಯಾರೆಂಟಿ ಘೋಷಣೆ ಮಾಡಿದರು. ಗ್ಯಾರೆಂಟಿ ಕಾರ್ಡ್ ಗೆ ಸಿದ್ದರಾಮಯ್ಯ. ಡಿಕೆಶಿ ಸಹಿ ಮಾಡಿದರು. ದಾರಿಯಲ್ಲಿ ಹೋಗುವರಿಗೂ ಗ್ಯಾರೆಂಟಿ ಕಾರ್ಡ್ ನೀಡಿದ್ದರು. ಆದರೆ ಈಗ ದಾರಿಯಲ್ಲಿ ಹೋಗುವವರಿಗೆ ಗ್ಯಾರೆಂಟಿ ಕಾರ್ಡ್ ಕೊಡೋಕೆ ಆಗುತ್ತಾ ಎಂದು ಡಿಕೆಶಿ ಹೇಳುತ್ತಿದ್ದಾರೆ ಎಂದು ಮಾಜಿ ಸಚಿವ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ.