ಬೆಳಗಾವಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡಲೇಬೇಕು ಎಂದು ವಿಪಕ್ಷಗಳು ಪಟ್ಟು ಹಿಡಿದಿವೆ. ಈ ಕುರಿತಂತೆ ಸಚಿವ ಸತೀಶ್ ಜಾರಕಿಹೊಳಿಯವರು ಲೋಕಾಯುಕ್ತ, ಇಡಿ ಅಷ್ಟೇ ಅಲ್ಲ ಸಿಬಿಐ ತನಿಖೆ ಆದರೂ ಕೂಡ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಬರಲ್ಲ ಎಂದು ಸ್ಪಷ್ಟಪಡಿಸಿದರು.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಕಚೇರಿ ಹಾಗೂ ಅದಕ್ಕೆ ಸಂಬಂಧಿಸಿದ ಜಾಗಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಇಡಿ ಇಡಿ ದಾಳಿಗೂ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೂ ಏನೂ ಸಂಬಂಧವಿಲ್ಲ.ಇಡಿ ದಾಳಿಗೂ ಸಿಎಂ ಸಿದ್ದರಾಮಯ್ಯ ಅವರಿಗೂ ಯಾವುದೇ ಸಂಬಂಧವಿಲ್ಲ. ಇಡಿ ಅಧಿಕಾರಿಗಳು ಸಿಎಂ ನಿವಾಸದ ಮೇಲೆ ದಾಳಿ ನಡೆಸಿಲ್ಲ ಎಂದರು.
ಇನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ದಾಖಲೆ ನಾಶ ಮಾಡಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿ, ಎಚ್.ಡಿ.ಕುಮಾರಸ್ವಾಮಿ ಹೇಳಿರುವುದು ಸಾಬೀತಾಗಲಿ. ಹಾಗೇನಾದರೂ ನಡೆದಿದ್ದರೆ, ಅದು ತನಿಖೆಯಿಂದ ಹೊರಬರುತ್ತೆ. ಇಡಿ ಅಧಿಕಾರಿಗಳ ತನಿಖೆ ಆಗುವವರೆಗೂ ಕಾದು ನೋಡಬೇಕು ಯಾವುದಕ್ಕೂ ಅವಸರ ಪಡುವ ಅವಶ್ಯಕತೆ ಇಲ್ಲ ಎಂದರು.