Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಕ್ರೇನ್ ಮೇಲೆ 400 ಡ್ರೋನ್, 40 ಕ್ಷಿಪಣಿ ದಾಳಿ ನಡೆಸಿದ ರಷ್ಯಾ | Russia-Ukraine war

07/06/2025 6:44 AM

ಚಿಲಿಯಲ್ಲಿ 6.4 ತೀವ್ರತೆಯ ಭೂಕಂಪ | Earthquake

07/06/2025 6:41 AM

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

07/06/2025 6:39 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತಮಿಳುನಾಡಿಗೆ ‘ಕಾವೇರಿ ನೀರು’ ಬಿಟ್ಟಿಲ್ಲ – ‘ಡಿಸಿಎಂ ಡಿ.ಕೆ ಶಿವಕುಮಾರ್’ ಸ್ಪಷ್ಟನೆ
KARNATAKA

ತಮಿಳುನಾಡಿಗೆ ‘ಕಾವೇರಿ ನೀರು’ ಬಿಟ್ಟಿಲ್ಲ – ‘ಡಿಸಿಎಂ ಡಿ.ಕೆ ಶಿವಕುಮಾರ್’ ಸ್ಪಷ್ಟನೆ

By kannadanewsnow0911/03/2024 2:13 PM

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿಲ್ಲ. ಇದೆಲ್ಲ ಸುಳ್ಳು ಆರೋಪವಾಗಿದೆ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಮಗೂ ನೀರಿನ ವಿಚಾರದಲ್ಲಿ ಜವಾಬ್ದಾರಿ ಇದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಇಂದು ತಮಿಳುನಾಡಿಗೆ ನೀರು ಬಿಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ತಮಿಳುನಾಡಿಗೆ ನೀರು ಬಿಟ್ಟಿರುವ ಆರೋಪ ಸುಳ್ಳು. ತಮಿಳುನಾಡಿಗೆ ಈ ಸಂದರ್ಭದಲ್ಲಿ ನೀರು ಬಿಡುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಬಿಟ್ಟಿಲ್ಲ, ಬಿಡುವುದೂ ಇಲ್ಲ. ತಮಿಳುನಾಡಿಗೆ ಹೋಗುವ ಪ್ರತಿಯೊಂದು ನೀರಿನ ಲೆಕ್ಕ ದಾಖಲಾಗಿರುತ್ತದೆ. ನಾವು ಬಿಜೆಪಿಯವರಂತೆ ಮೂರ್ಖರಲ್ಲ. ನಾವು ನೀರಿನ ವಿಚಾರದಲ್ಲಿ ಜವಾಬ್ದಾರಿ ಹೊಂದಿದ್ದೇವೆ. ಕಾವೇರಿ ಭಾಗದ ರೈತರನ್ನು ನಾವು ಈ ಹಿಂದೆಯೂ ಕಾಪಾಡಿದಿದ್ದೇವೆ. ಈಗಲೂ ಕಾಪಾಡುತ್ತಿದ್ದೇವೆ. ತಮಿಳುನಾಡು ನೀರು ಕೇಳುತ್ತಿಲ್ಲದಿರುವಾಗ ನಾವು ಯಾಕೆ ಅವರಿಗೆ ನೀರನ್ನು ಬಿಡೋಣ? ಕುಡಿಯುವ ನೀರಿನ ಪೂರೈಕೆ ನಮ್ಮ ಸರ್ಕಾರದ ಮೊದಲ ಆದ್ಯತೆ. ಶಿವ ಡ್ಯಾಂ ನಲ್ಲಿ ನೀರಿನ ಮಟ್ಟ 2 ಅಡಿ ಕಡಿಮೆ ಇದ್ದ ಕಾರಣ ಬೆಂಗಳೂರಿಗೆ ಪೂರೈಸಲು ನೀರನ್ನು ಪಂಪ್ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಈ ಕೊರತೆಯನ್ನು ತುಂಬಲು ಬಿಡಬ್ಲ್ಯೂಎಸ್ಎಸ್ ಬಿ ಮನವಿ ಮೇರೆಗೆ ಕೆಆರ್ ಎಸ್ ನಿಂದ ನೀರು ಹರಿಸಿದ್ದೇವೆಯೇ ಹೊರತು, ತಮಿಳುನಾಡಿಗೆ ನೀರು ಹರಿಸಿಲ್ಲ ಎಂದರು.

ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಗೆ ಮೇಕೆದಾಟು ಯೊಜನೆಯೊಂದೇ ಶಾಶ್ವತ ಪರಿಹಾರವಾಗಿದೆ. ಆದರೆ ಸದ್ಯದ ಮಟ್ಟಿಗೆ ನೀರಿನ ಅಭಾವ ನೀಗಿಸಲು ಹಾಲಿ ಇರುವ ಕೊಳವೆ ಬಾವಿಗಳನ್ನು ಮರು ಕೊರೆಯುವುದು, ಹೊಸ ಕೊಳವೆ ಬಾವಿ ಕೊರೆಯಲು ತೀರ್ಮಾನಿಸಿದ್ದೇವೆ. ಕೈಗಾರಿಕೆ, ಕಟ್ಟಡ ನಿರ್ಮಾಣ ಸೇರಿದಂತೆ ಎಲ್ಲರಿಗೂ ನೀರು ಪೂರೈಸುತ್ತೇವೆ. ಇದ್ಕಾಗಿ ಆನೇಕಲ್ ಹಾಗೂ ಬೆಂಗಳೂರು ದಕ್ಷಿಣ ಭಾಗದ ಹಳ್ಳಿಗಳ ರೈತರ ಜತೆಗೂ ಒಪ್ಪಂದ ಮಾಡಿಕೊಂಡು ಅವರ ಕೊಳವೆ ಬಾವಿ ಬಳಸಿಕೊಳ್ಳಲಾಗುವುದು. ಕೆಲವು ಬುದ್ಧಿವಂತರು ಸ್ನಾನಕ್ಕೂ ನೀರಿಲ್ಲ ಎಂದು ಟ್ವೀಟ್ ಮಾಡುತ್ತಾರೆ. ಈ ಮಧ್ಯೆ ವಾರ್ಡ್, ವಲಯ ಮಟ್ಟದಲ್ಲಿ ಕಾಲ್ ಸೆಂಟರ್ ಗಳನ್ನು ನಿರ್ಮಾಣ ಮಾಡಿದ್ದೇವೆ. ಬೆಂಗಳೂರಿನ ಇತಿಹಾಸದಲ್ಲೇ ಇಷ್ಟು ಪರಿಣಾಮಕಾರಿಯಾದ ವ್ಯವಸ್ಥೆಯನ್ನು ಯಾವ ಸರ್ಕಾರವೂ ಮಾಡಿರಲಿಲ್ಲ ಎಂದು ತಿಳಿಸಿದರು.

ಮಾಧ್ಯಮಗಳು ತೋರಿಸುತ್ತಾರೆ ಎಂದು ಬಿಜೆಪಿಯವರು ನೀರಿನ ಹಾಹಾಕಾರ ಸೃಷ್ಟಿಸುತ್ತಿದ್ದಾರೆ. ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ಅನುದಾನ ಇಟ್ಟಿದ್ದ ಬಿಜೆಪಿ ಸರ್ಕಾರ ಅದನ್ನು ಹಿಂಪಡೆದಿದ್ದು ಯಾಕೆ? ಕೇಂದ್ರ ಸರ್ಕಾರದ ಬಳಿ ಎಲ್ಲಾ ಸಂಸದರು ಹೋಗಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿದರೆ ಸಮಸ್ಯೆ ಬಗೆಹರಿಯುತ್ತದೆ. ನಾವು ತಮಿಳುನಾಡಿಗೆ ಬಿಡುಗಡೆ ಮಾಡುವ ನೀರನ್ನು ಬಿಡುತ್ತೇವೆ. ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರುವುದು ನಮ್ಮ ವಿರುದ್ಧವಲ್ಲ, ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು. ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುಮತಿ ಕೊಡಿಸಲಿ ಎಂದರು.

ನಮ್ಮ ಸರ್ಕಾರಕ್ಕೆ ಬದ್ಧತೆ ಇರುವ ಕಾರಣ ಮೇಕೆದಾಟು ಯೋಜನೆ ಜಾರಿಗೆ ಅರಣ್ಯ ಪ್ರದೇಶದಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಾಗ ಗುರುತಿಸಲಾಗಿದೆ. ಬದ್ಧತೆ ಇರುವ ಕಾರಣಕ್ಕೆ ನಾವು ಪೂರ್ವಭಾವಿ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ. ಈ ಯೋಜನೆಗಳನ್ನು ಮಾಡಲೇಬೇಕು ಅಂತಲೇ ನಾನು ನೀರಾವರಿ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ ಎಂದರು.

‘ಹಳೆಯ ತಂತ್ರ, ಎಂದಿಗೂ ರಹಸ್ಯವಲ್ಲ’: ಬಿಜೆಪಿ ಸಂಸದರ ‘ಸಂವಿಧಾನ ಬದಲಾವಣೆ’ ಹೇಳಿಕೆಗೆ ಚಿದಂಬರಂ ತಿರುಗೇಟು

BIG Alert: ನೀವು ‘ಗೋಬಿ ಮಂಚೂರಿ’ ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಿದ್ದೀರಾ.? ಹಾಗಿದ್ದರೇ ಇಲ್ಲಿದೆ ‘ಶಾಕಿಂಗ್ ನ್ಯೂಸ್’

Share. Facebook Twitter LinkedIn WhatsApp Email

Related Posts

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

07/06/2025 6:39 AM4 Mins Read

BIG NEWS : ರಾಜ್ಯದಲ್ಲಿ ಜೂನ್ 12ಕ್ಕೆ `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ಸರ್ಕಾರದಿಂದ ಮಹತ್ವದ ಆದೇಶ.!

07/06/2025 6:29 AM1 Min Read
vidhana soudha

BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/06/2025 6:20 AM2 Mins Read
Recent News

ಉಕ್ರೇನ್ ಮೇಲೆ 400 ಡ್ರೋನ್, 40 ಕ್ಷಿಪಣಿ ದಾಳಿ ನಡೆಸಿದ ರಷ್ಯಾ | Russia-Ukraine war

07/06/2025 6:44 AM

ಚಿಲಿಯಲ್ಲಿ 6.4 ತೀವ್ರತೆಯ ಭೂಕಂಪ | Earthquake

07/06/2025 6:41 AM

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

07/06/2025 6:39 AM

‘SBI’ ಗ್ರಾಹಕರೇ ಗಮನಿಸಿ ; ಈ ನಂಬರ್ ಸೇವ್ ಮಾಡ್ಕೊಳ್ಳಿ, ಇನ್ಮುಂದೆ ಈ ಸಂಖ್ಯೆ ಕರೆ ಮಾತ್ರ ಸ್ವೀಕರಿಸಿ!

07/06/2025 6:35 AM
State News
KARNATAKA

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

By kannadanewsnow5707/06/2025 6:39 AM KARNATAKA 4 Mins Read

ನವದೆಹಲಿ : ಜೂನ್ 2025 ರ ಆರಂಭವು ಭಾರತದ ಕೋಟ್ಯಂತರ ಬಡ ಮತ್ತು ನಿರ್ಗತಿಕ ಕುಟುಂಬಗಳಿಗೆ ಹೊಸ ಭರವಸೆಯನ್ನು ತರುತ್ತಿದೆ.…

BIG NEWS : ರಾಜ್ಯದಲ್ಲಿ ಜೂನ್ 12ಕ್ಕೆ `ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ : ಸರ್ಕಾರದಿಂದ ಮಹತ್ವದ ಆದೇಶ.!

07/06/2025 6:29 AM
vidhana soudha

BIG NEWS : ರಾಜ್ಯ ಸರ್ಕಾರದಿಂದ ‘ಒಕ್ಕಲಿಗ ಸಮುದಾಯದವರಿಗೆ’ ಗುಡ್ ನ್ಯೂಸ್ : ‘ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

07/06/2025 6:20 AM

ರಾಜ್ಯದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

07/06/2025 6:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.