ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನಿಗೆ ಮಧ್ಯಂತರ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಆಲಿಸಿದ ಸುಪ್ರೀಂ ಕೋರ್ಟ್ ಬುಧುವಾರಕ್ಕೆ ವಿಚಾರಣೆ ಮುಂದೂಡಿದೆ. ಈ ವೇಳೆ “ರಜಾಕಾಲದ ಪೀಠವು ತಡೆಯಾಜ್ಞೆ ಆದೇಶಗಳನ್ನ ಸಾಮಾನ್ಯವಾಗಿ ಕಾಯ್ದಿರಿಸಲಾಗುವುದಿಲ್ಲ ಮತ್ತು ಅದೇ ದಿನ ಘೋಷಿಸಲಾಗುತ್ತದೆ. ಆದ್ರೆ, ಈ ವಿಷಯದ ಬಗ್ಗೆ ಹೈಕೋರ್ಟ್ ಆದೇಶದ ಪ್ರಕಟಣೆಗಾಗಿ ಕಾಯಲು ಬಯಸುತ್ತೇನೆ ಎಂದು ನ್ಯಾಯಪೀಠ ಹೇಳಿದೆ.
ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ ಮತ್ತು ಎಸ್ವಿಎನ್ ಭಟ್ಟಿ ಅವರನ್ನೊಳಗೊಂಡ ನ್ಯಾಯಪೀಠವು “ಇದು ಅಸಾಮಾನ್ಯವಾಗಿದೆ” ಎಂದು ಅಭಿಪ್ರಾಯಪಟ್ಟಿದೆ.
ಅಂದ್ಹಾಗೆ, ಜಾರಿ ನಿರ್ದೇಶನಾಲಯದ ಮನವಿಯ ಬಗ್ಗೆ ತೀರ್ಪು ನೀಡುವವರೆಗೆ ಅರವಿಂದ್ ಕೇಜ್ರಿವಾಲ್ ಅವರ ಬಿಡುಗಡೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ ನಂತರ ಭಾನುವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ರಾಜ್ಯದ 16 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : ʻಯೆಲ್ಲೋ, ಆರೆಂಜ್ʼ ಅಲರ್ಟ್ ಘೋಷಣೆ | Karnataka Rain
BIG NEWS : ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ʻಫುಡ್ ಪಾರ್ಕ್ʼ ಸ್ಥಾಪಿಸುವಂತೆ ʻನಿಸ್ಸಿನ್ ಸಂಸ್ಥೆʼಗೆ ಆಹ್ವಾನ